Homeದಲಿತ್ ಫೈಲ್ಸ್ಫ್ಯಾಕ್ಟ್‌ಚೆಕ್ | ಮಹಾ ಕುಂಭಮೇಳ - 2025ರಲ್ಲಿ ಬಿಲ್‌ಗೇಟ್ಸ್‌ ಭಾಗವಹಿಸಿದ್ದು ನಿಜವೇ?

ಫ್ಯಾಕ್ಟ್‌ಚೆಕ್ | ಮಹಾ ಕುಂಭಮೇಳ – 2025ರಲ್ಲಿ ಬಿಲ್‌ಗೇಟ್ಸ್‌ ಭಾಗವಹಿಸಿದ್ದು ನಿಜವೇ?

- Advertisement -
- Advertisement -

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಜನವರಿ 13 ರಿಂದ ಆರಂಭವಾಗಿರುವ ಮಹಾ ಕುಂಭಮೇಳದಲ್ಲಿ ಮೈಕ್ರೋಸಾಫ್ಟ್‌ ಸಹ ಸಂಸ್ಥಾಪಕ ಬಿಲ್ ಗೇಟ್ಸ್‌ ಕೂಡಾ ಭಾಗಿಯಾಗಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊವೊಂದು ವೈರಲ್ ಆಗಿತ್ತಿದೆ. ಬಿಲ್‌ಗೇಟ್ಸ್‌ ಮಹಾ ಕುಂಭಮೇಳದಲ್ಲಿ

ವ್ಯಕ್ತಿಯೊಬ್ಬರು ಜನರ ಗುಂಪಿನ ನಡುವೆ ನಿಂತಿರುವ ವಿಡಿಯೊವನ್ನು ಹಲವಾರು ಜನರು ಇದು ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಲ್ಲಿ ಬಿಲ್‌ಗೇಟ್ಸ್ ಭಾಗವಹಿಸಿರುವ ವಿಡಿಯೊ ಎಂದು ಪ್ರತಿಪಾದಿಸಿ ಹಂಚಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2025ರ ಮಹಾ ಕುಂಭಮೇಳ ನಡೆಯುವ ಈ ಸಂದರ್ಭದಲ್ಲಿ ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ಮಂದಿರಕ್ಕೆ ಅವರು ಭೇಟಿ ನೀಡಿದ್ದಾರೆ ಎಂದು ಈ ವಿಡಿಯೊ ಹೇಳಿಕೊಳ್ಳುತ್ತವೆ. ಅವುಗಳನ್ನು (ಇಲ್ಲಿ, ಇಲ್ಲಿ ಮತ್ತು ಇಲ್ಲಿ) ನೋಡಬಹುದು. ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಈ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ. ಬಿಲ್‌ಗೇಟ್ಸ್‌ ಮಹಾ ಕುಂಭಮೇಳದಲ್ಲಿ

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿರುವಂತೆ ಸಾಫ್ಟ್‌ವೇರ್‌ನ ದಿಗ್ಗಜ ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸಿರುವುದು ನಿಜವೇ ಎಂದು ಪರಿಶೀಲಿಸಲು, ಸಂಬಂಧಿತ ಕೀವರ್ಡ್‌ಗಳನ್ನು ಬಳಸಿಕೊಂಡು ಗೂಗಲ್ ಸರ್ಚ್ ಮಾಡಿದಾಗ, ಬಿಲ್ ಗೇಟ್ಸ್‌ ಭೇಟಿಯನ್ನು ದೃಢೀಕರಿಸುವ ಯಾವುದೇ ವಿಶ್ವಾಸಾರ್ಹ ಮಾಧ್ಯಮ ವರದಿಗಳು ಲಭ್ಯವಾಗಿಲ್ಲ.

ಬಿಲ್ ಗೇಟ್ಸ್ ಅವರ ಸಾಮಾಜಿಕ ಮಾಧ್ಯಮಗಳ ಖಾತೆಗಳು ಕೂಡಾ ಮಹಾ ಕುಂಭಮೇಳಕ್ಕೆ ಭೇಟಿ ನೀಡಿದ ಬಗ್ಗೆ ಯಾವುದೇ ಮಾಹಿತಿಯನ್ನು ಉಲ್ಲೇಖಿಸಿಲ್ಲ.  ಫೆಬ್ರವರಿ 2024 ರಲ್ಲಿ ಬಿಲ್ ಗೇಟ್ಸ್‌ ಭಾರತಕ್ಕೆ ನೀಡಿದ್ದಾರೆ. ಅದರ ನಂತರ ಅವರು ಭಾರತಕ್ಕೆ ಬಂದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ವೈರಲ್ ಫೋಟೋವನ್ನು ಗೂಗಲ್‌ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಡಿಸೆಂಬರ್ 24, 2024 ರಂದು ‘ಗುಲ್ಲಕ್‘ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾದ ವಿಡಿಯೋ ಲಭ್ಯವಾಗಿದೆ.

ವಿಡಿಯೋದ ವಿವರಣೆಯ ಪ್ರಕಾರ ವಾರಣಾಸಿಯಲ್ಲಿ ಬಿಲ್ ಗೇಟ್ಸ್‌ರನ್ನು ಹೋಲುವ ವ್ಯಕ್ತಿ ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ಇದೇ ಚಾನೆಲ್‌ನಲ್ಲಿ ಅದೇ ವ್ಯಕ್ತಿಯ ಮತ್ತೊಂದು ವಿಡಿಯೋವನ್ನು ಪೋಸ್ಟ್ ಮಾಡಲಾಗಿದ್ದು, ಅವರನ್ನು ವಾರಣಾಸಿಯ ಮಣಿಕರ್ಣಿಕಾ ಘಾಟ್‌ಗೆ ಭೇಟಿ ನೀಡಿದ “ನಕಲಿ ಬಿಲ್ ಗೇಟ್ಸ್” ಎಂದು ವಿಡಂಬನಾತ್ಮಕವಾಗಿ ಉಲ್ಲೇಖಿಸಿದೆ.

ವೈರಲ್ ವಿಡಿಯೋದಲ್ಲಿರುವ ವ್ಯಕ್ತಿ ದೋರದಿಂದ ನೋಡಿದಾಗ ಬಿಲ್‌ಗೇಟ್ಸ್‌ ಹೋಲಿಕೆಯನ್ನು ಹೊಂದಿರುವಂತೆ ಕಾಣುತ್ತಾರೆ. ಆದರೆ ಈ ವಿಡಿಯೊವನ್ನು ಹತ್ತಿರದಿಂದ ನೋಡಿದರೆ ಆ ವ್ಯಕ್ತಿಯ ಮುಖ ಚಹರೆ ಸ್ಪಷ್ಟವಾಗಿ ಅವರು ಬಿಲ್ ಗೇಟ್ಸ್‌ಅಲ್ಲ ಎಂಬುದು ಸ್ಪಷ್ಟವಾಗುತ್ತದೆ.

ಆಜ್ ತಕ್‌ನ ವರದಿಗಾರ ದೀಪಂಕರ್ ಯಾದವ್ ಅವರೊಂದಿಗೆ ಫ್ಯಾಕ್ಟ್‌ಲಿ ತಂಡ ಮಾತನಾಡಿದ್ದು, ಅವರು ನವೆಂಬರ್ 2024ರಲ್ಲಿ ವಾರಣಾಸಿಗೆ ಭೇಟಿ ನೀಡಿದಾಗ ಈ ವಿಡಿಯೋವನ್ನು ಚಿತ್ರೀಕರಿಸಿದ್ದಾರೆ ತಿಳಿಸಿದ್ದಾರೆ.

ಅವರು ಮಣಿಕರ್ಣಿಕಾ ಘಾಟ್‌ನಲ್ಲಿದ್ದಾಗ, ಘಾಟ್ ಬಳಿಯ ಬಾಲ್ಕನಿಯಲ್ಲಿ ನಿಂತಿದ್ದ ವಿದೇಶಿಯರ ಗುಂಪನ್ನು ನೋಡಿದರು. ಅವರಲ್ಲಿ ಒಬ್ಬರು ಬಿಲ್ ಗೇಟ್ಸ್ ಅವರನ್ನು ಹೋಲುತ್ತಿದ್ದಾರೆ ಎಂದು ಅವರು ಭಾವಿಸಿ ಮನರಂಜನೆಗಾಗಿ ವಿಡಿಯೋವನ್ನು ರೆಕಾರ್ಡ್‌ ಮಾಡಿ, ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿದ್ದಾರೆ ಎಂದು ಫ್ಯಾಕ್ಟ್‌ಲಿ ವರದಿ ಮಾಡಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಂಬಂಧವಿಲ್ಲದ ವಿದೇಶಿ ಪ್ರವಾಸಿಯ ಹಳೆಯ ವಿಡಿಯೋವನ್ನು ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ 2025 ರ ಮಹಾ ಕುಂಭಮೇಳದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

(ಫ್ಯಾಕ್ಟ್‌ಚೆಕ್‌ ಅನ್ನು ಮೂಲತಃ FACTLY ಪ್ರಕಟಿಸಿತ್ತು. ನಾನುಗೌರಿ.ಕಾಂ ಶಕ್ತಿ ಕಲೆಕ್ಟಿವ್‌ನ ಭಾಗವಾಗಿ ಇದನ್ನು ಮರುಪ್ರಕಟಿಸಿದೆ)

ಇದನ್ನೂಓದಿ:  ದೆಹಲಿ ಚುನಾವಣೆ | ಬಿಜೆಪಿ ಎಎಪಿಯನ್ನು ನಕಲು ಮಾಡಿದೆ – ಕೇಜ್ರಿವಾಲ್

ದೆಹಲಿ ಚುನಾವಣೆ | ಬಿಜೆಪಿ ಎಎಪಿಯನ್ನು ನಕಲು ಮಾಡಿದೆ – ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...