Homeದಲಿತ್ ಫೈಲ್ಸ್ಫ್ಯಾಕ್ಟ್‌ಚೆಕ್ | ಮಹಾ ಕುಂಭಮೇಳ - 2025ರಲ್ಲಿ ಬಿಲ್‌ಗೇಟ್ಸ್‌ ಭಾಗವಹಿಸಿದ್ದು ನಿಜವೇ?

ಫ್ಯಾಕ್ಟ್‌ಚೆಕ್ | ಮಹಾ ಕುಂಭಮೇಳ – 2025ರಲ್ಲಿ ಬಿಲ್‌ಗೇಟ್ಸ್‌ ಭಾಗವಹಿಸಿದ್ದು ನಿಜವೇ?

- Advertisement -
- Advertisement -

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಜನವರಿ 13 ರಿಂದ ಆರಂಭವಾಗಿರುವ ಮಹಾ ಕುಂಭಮೇಳದಲ್ಲಿ ಮೈಕ್ರೋಸಾಫ್ಟ್‌ ಸಹ ಸಂಸ್ಥಾಪಕ ಬಿಲ್ ಗೇಟ್ಸ್‌ ಕೂಡಾ ಭಾಗಿಯಾಗಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊವೊಂದು ವೈರಲ್ ಆಗಿತ್ತಿದೆ. ಬಿಲ್‌ಗೇಟ್ಸ್‌ ಮಹಾ ಕುಂಭಮೇಳದಲ್ಲಿ

ವ್ಯಕ್ತಿಯೊಬ್ಬರು ಜನರ ಗುಂಪಿನ ನಡುವೆ ನಿಂತಿರುವ ವಿಡಿಯೊವನ್ನು ಹಲವಾರು ಜನರು ಇದು ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಲ್ಲಿ ಬಿಲ್‌ಗೇಟ್ಸ್ ಭಾಗವಹಿಸಿರುವ ವಿಡಿಯೊ ಎಂದು ಪ್ರತಿಪಾದಿಸಿ ಹಂಚಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2025ರ ಮಹಾ ಕುಂಭಮೇಳ ನಡೆಯುವ ಈ ಸಂದರ್ಭದಲ್ಲಿ ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ಮಂದಿರಕ್ಕೆ ಅವರು ಭೇಟಿ ನೀಡಿದ್ದಾರೆ ಎಂದು ಈ ವಿಡಿಯೊ ಹೇಳಿಕೊಳ್ಳುತ್ತವೆ. ಅವುಗಳನ್ನು (ಇಲ್ಲಿ, ಇಲ್ಲಿ ಮತ್ತು ಇಲ್ಲಿ) ನೋಡಬಹುದು. ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಈ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ. ಬಿಲ್‌ಗೇಟ್ಸ್‌ ಮಹಾ ಕುಂಭಮೇಳದಲ್ಲಿ

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿರುವಂತೆ ಸಾಫ್ಟ್‌ವೇರ್‌ನ ದಿಗ್ಗಜ ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸಿರುವುದು ನಿಜವೇ ಎಂದು ಪರಿಶೀಲಿಸಲು, ಸಂಬಂಧಿತ ಕೀವರ್ಡ್‌ಗಳನ್ನು ಬಳಸಿಕೊಂಡು ಗೂಗಲ್ ಸರ್ಚ್ ಮಾಡಿದಾಗ, ಬಿಲ್ ಗೇಟ್ಸ್‌ ಭೇಟಿಯನ್ನು ದೃಢೀಕರಿಸುವ ಯಾವುದೇ ವಿಶ್ವಾಸಾರ್ಹ ಮಾಧ್ಯಮ ವರದಿಗಳು ಲಭ್ಯವಾಗಿಲ್ಲ.

ಬಿಲ್ ಗೇಟ್ಸ್ ಅವರ ಸಾಮಾಜಿಕ ಮಾಧ್ಯಮಗಳ ಖಾತೆಗಳು ಕೂಡಾ ಮಹಾ ಕುಂಭಮೇಳಕ್ಕೆ ಭೇಟಿ ನೀಡಿದ ಬಗ್ಗೆ ಯಾವುದೇ ಮಾಹಿತಿಯನ್ನು ಉಲ್ಲೇಖಿಸಿಲ್ಲ.  ಫೆಬ್ರವರಿ 2024 ರಲ್ಲಿ ಬಿಲ್ ಗೇಟ್ಸ್‌ ಭಾರತಕ್ಕೆ ನೀಡಿದ್ದಾರೆ. ಅದರ ನಂತರ ಅವರು ಭಾರತಕ್ಕೆ ಬಂದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ವೈರಲ್ ಫೋಟೋವನ್ನು ಗೂಗಲ್‌ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಡಿಸೆಂಬರ್ 24, 2024 ರಂದು ‘ಗುಲ್ಲಕ್‘ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾದ ವಿಡಿಯೋ ಲಭ್ಯವಾಗಿದೆ.

ವಿಡಿಯೋದ ವಿವರಣೆಯ ಪ್ರಕಾರ ವಾರಣಾಸಿಯಲ್ಲಿ ಬಿಲ್ ಗೇಟ್ಸ್‌ರನ್ನು ಹೋಲುವ ವ್ಯಕ್ತಿ ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ಇದೇ ಚಾನೆಲ್‌ನಲ್ಲಿ ಅದೇ ವ್ಯಕ್ತಿಯ ಮತ್ತೊಂದು ವಿಡಿಯೋವನ್ನು ಪೋಸ್ಟ್ ಮಾಡಲಾಗಿದ್ದು, ಅವರನ್ನು ವಾರಣಾಸಿಯ ಮಣಿಕರ್ಣಿಕಾ ಘಾಟ್‌ಗೆ ಭೇಟಿ ನೀಡಿದ “ನಕಲಿ ಬಿಲ್ ಗೇಟ್ಸ್” ಎಂದು ವಿಡಂಬನಾತ್ಮಕವಾಗಿ ಉಲ್ಲೇಖಿಸಿದೆ.

ವೈರಲ್ ವಿಡಿಯೋದಲ್ಲಿರುವ ವ್ಯಕ್ತಿ ದೋರದಿಂದ ನೋಡಿದಾಗ ಬಿಲ್‌ಗೇಟ್ಸ್‌ ಹೋಲಿಕೆಯನ್ನು ಹೊಂದಿರುವಂತೆ ಕಾಣುತ್ತಾರೆ. ಆದರೆ ಈ ವಿಡಿಯೊವನ್ನು ಹತ್ತಿರದಿಂದ ನೋಡಿದರೆ ಆ ವ್ಯಕ್ತಿಯ ಮುಖ ಚಹರೆ ಸ್ಪಷ್ಟವಾಗಿ ಅವರು ಬಿಲ್ ಗೇಟ್ಸ್‌ಅಲ್ಲ ಎಂಬುದು ಸ್ಪಷ್ಟವಾಗುತ್ತದೆ.

ಆಜ್ ತಕ್‌ನ ವರದಿಗಾರ ದೀಪಂಕರ್ ಯಾದವ್ ಅವರೊಂದಿಗೆ ಫ್ಯಾಕ್ಟ್‌ಲಿ ತಂಡ ಮಾತನಾಡಿದ್ದು, ಅವರು ನವೆಂಬರ್ 2024ರಲ್ಲಿ ವಾರಣಾಸಿಗೆ ಭೇಟಿ ನೀಡಿದಾಗ ಈ ವಿಡಿಯೋವನ್ನು ಚಿತ್ರೀಕರಿಸಿದ್ದಾರೆ ತಿಳಿಸಿದ್ದಾರೆ.

ಅವರು ಮಣಿಕರ್ಣಿಕಾ ಘಾಟ್‌ನಲ್ಲಿದ್ದಾಗ, ಘಾಟ್ ಬಳಿಯ ಬಾಲ್ಕನಿಯಲ್ಲಿ ನಿಂತಿದ್ದ ವಿದೇಶಿಯರ ಗುಂಪನ್ನು ನೋಡಿದರು. ಅವರಲ್ಲಿ ಒಬ್ಬರು ಬಿಲ್ ಗೇಟ್ಸ್ ಅವರನ್ನು ಹೋಲುತ್ತಿದ್ದಾರೆ ಎಂದು ಅವರು ಭಾವಿಸಿ ಮನರಂಜನೆಗಾಗಿ ವಿಡಿಯೋವನ್ನು ರೆಕಾರ್ಡ್‌ ಮಾಡಿ, ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿದ್ದಾರೆ ಎಂದು ಫ್ಯಾಕ್ಟ್‌ಲಿ ವರದಿ ಮಾಡಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಂಬಂಧವಿಲ್ಲದ ವಿದೇಶಿ ಪ್ರವಾಸಿಯ ಹಳೆಯ ವಿಡಿಯೋವನ್ನು ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ 2025 ರ ಮಹಾ ಕುಂಭಮೇಳದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

(ಫ್ಯಾಕ್ಟ್‌ಚೆಕ್‌ ಅನ್ನು ಮೂಲತಃ FACTLY ಪ್ರಕಟಿಸಿತ್ತು. ನಾನುಗೌರಿ.ಕಾಂ ಶಕ್ತಿ ಕಲೆಕ್ಟಿವ್‌ನ ಭಾಗವಾಗಿ ಇದನ್ನು ಮರುಪ್ರಕಟಿಸಿದೆ)

ಇದನ್ನೂಓದಿ:  ದೆಹಲಿ ಚುನಾವಣೆ | ಬಿಜೆಪಿ ಎಎಪಿಯನ್ನು ನಕಲು ಮಾಡಿದೆ – ಕೇಜ್ರಿವಾಲ್

ದೆಹಲಿ ಚುನಾವಣೆ | ಬಿಜೆಪಿ ಎಎಪಿಯನ್ನು ನಕಲು ಮಾಡಿದೆ – ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...