Homeದಲಿತ್ ಫೈಲ್ಸ್ಫ್ಯಾಕ್ಟ್‌ಚೆಕ್ | ಮಹಾ ಕುಂಭಮೇಳ - 2025ರಲ್ಲಿ ಬಿಲ್‌ಗೇಟ್ಸ್‌ ಭಾಗವಹಿಸಿದ್ದು ನಿಜವೇ?

ಫ್ಯಾಕ್ಟ್‌ಚೆಕ್ | ಮಹಾ ಕುಂಭಮೇಳ – 2025ರಲ್ಲಿ ಬಿಲ್‌ಗೇಟ್ಸ್‌ ಭಾಗವಹಿಸಿದ್ದು ನಿಜವೇ?

- Advertisement -
- Advertisement -

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಜನವರಿ 13 ರಿಂದ ಆರಂಭವಾಗಿರುವ ಮಹಾ ಕುಂಭಮೇಳದಲ್ಲಿ ಮೈಕ್ರೋಸಾಫ್ಟ್‌ ಸಹ ಸಂಸ್ಥಾಪಕ ಬಿಲ್ ಗೇಟ್ಸ್‌ ಕೂಡಾ ಭಾಗಿಯಾಗಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊವೊಂದು ವೈರಲ್ ಆಗಿತ್ತಿದೆ. ಬಿಲ್‌ಗೇಟ್ಸ್‌ ಮಹಾ ಕುಂಭಮೇಳದಲ್ಲಿ

ವ್ಯಕ್ತಿಯೊಬ್ಬರು ಜನರ ಗುಂಪಿನ ನಡುವೆ ನಿಂತಿರುವ ವಿಡಿಯೊವನ್ನು ಹಲವಾರು ಜನರು ಇದು ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಲ್ಲಿ ಬಿಲ್‌ಗೇಟ್ಸ್ ಭಾಗವಹಿಸಿರುವ ವಿಡಿಯೊ ಎಂದು ಪ್ರತಿಪಾದಿಸಿ ಹಂಚಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2025ರ ಮಹಾ ಕುಂಭಮೇಳ ನಡೆಯುವ ಈ ಸಂದರ್ಭದಲ್ಲಿ ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ಮಂದಿರಕ್ಕೆ ಅವರು ಭೇಟಿ ನೀಡಿದ್ದಾರೆ ಎಂದು ಈ ವಿಡಿಯೊ ಹೇಳಿಕೊಳ್ಳುತ್ತವೆ. ಅವುಗಳನ್ನು (ಇಲ್ಲಿ, ಇಲ್ಲಿ ಮತ್ತು ಇಲ್ಲಿ) ನೋಡಬಹುದು. ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಈ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ. ಬಿಲ್‌ಗೇಟ್ಸ್‌ ಮಹಾ ಕುಂಭಮೇಳದಲ್ಲಿ

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿರುವಂತೆ ಸಾಫ್ಟ್‌ವೇರ್‌ನ ದಿಗ್ಗಜ ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸಿರುವುದು ನಿಜವೇ ಎಂದು ಪರಿಶೀಲಿಸಲು, ಸಂಬಂಧಿತ ಕೀವರ್ಡ್‌ಗಳನ್ನು ಬಳಸಿಕೊಂಡು ಗೂಗಲ್ ಸರ್ಚ್ ಮಾಡಿದಾಗ, ಬಿಲ್ ಗೇಟ್ಸ್‌ ಭೇಟಿಯನ್ನು ದೃಢೀಕರಿಸುವ ಯಾವುದೇ ವಿಶ್ವಾಸಾರ್ಹ ಮಾಧ್ಯಮ ವರದಿಗಳು ಲಭ್ಯವಾಗಿಲ್ಲ.

ಬಿಲ್ ಗೇಟ್ಸ್ ಅವರ ಸಾಮಾಜಿಕ ಮಾಧ್ಯಮಗಳ ಖಾತೆಗಳು ಕೂಡಾ ಮಹಾ ಕುಂಭಮೇಳಕ್ಕೆ ಭೇಟಿ ನೀಡಿದ ಬಗ್ಗೆ ಯಾವುದೇ ಮಾಹಿತಿಯನ್ನು ಉಲ್ಲೇಖಿಸಿಲ್ಲ.  ಫೆಬ್ರವರಿ 2024 ರಲ್ಲಿ ಬಿಲ್ ಗೇಟ್ಸ್‌ ಭಾರತಕ್ಕೆ ನೀಡಿದ್ದಾರೆ. ಅದರ ನಂತರ ಅವರು ಭಾರತಕ್ಕೆ ಬಂದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ವೈರಲ್ ಫೋಟೋವನ್ನು ಗೂಗಲ್‌ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಡಿಸೆಂಬರ್ 24, 2024 ರಂದು ‘ಗುಲ್ಲಕ್‘ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾದ ವಿಡಿಯೋ ಲಭ್ಯವಾಗಿದೆ.

ವಿಡಿಯೋದ ವಿವರಣೆಯ ಪ್ರಕಾರ ವಾರಣಾಸಿಯಲ್ಲಿ ಬಿಲ್ ಗೇಟ್ಸ್‌ರನ್ನು ಹೋಲುವ ವ್ಯಕ್ತಿ ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ಇದೇ ಚಾನೆಲ್‌ನಲ್ಲಿ ಅದೇ ವ್ಯಕ್ತಿಯ ಮತ್ತೊಂದು ವಿಡಿಯೋವನ್ನು ಪೋಸ್ಟ್ ಮಾಡಲಾಗಿದ್ದು, ಅವರನ್ನು ವಾರಣಾಸಿಯ ಮಣಿಕರ್ಣಿಕಾ ಘಾಟ್‌ಗೆ ಭೇಟಿ ನೀಡಿದ “ನಕಲಿ ಬಿಲ್ ಗೇಟ್ಸ್” ಎಂದು ವಿಡಂಬನಾತ್ಮಕವಾಗಿ ಉಲ್ಲೇಖಿಸಿದೆ.

ವೈರಲ್ ವಿಡಿಯೋದಲ್ಲಿರುವ ವ್ಯಕ್ತಿ ದೋರದಿಂದ ನೋಡಿದಾಗ ಬಿಲ್‌ಗೇಟ್ಸ್‌ ಹೋಲಿಕೆಯನ್ನು ಹೊಂದಿರುವಂತೆ ಕಾಣುತ್ತಾರೆ. ಆದರೆ ಈ ವಿಡಿಯೊವನ್ನು ಹತ್ತಿರದಿಂದ ನೋಡಿದರೆ ಆ ವ್ಯಕ್ತಿಯ ಮುಖ ಚಹರೆ ಸ್ಪಷ್ಟವಾಗಿ ಅವರು ಬಿಲ್ ಗೇಟ್ಸ್‌ಅಲ್ಲ ಎಂಬುದು ಸ್ಪಷ್ಟವಾಗುತ್ತದೆ.

ಆಜ್ ತಕ್‌ನ ವರದಿಗಾರ ದೀಪಂಕರ್ ಯಾದವ್ ಅವರೊಂದಿಗೆ ಫ್ಯಾಕ್ಟ್‌ಲಿ ತಂಡ ಮಾತನಾಡಿದ್ದು, ಅವರು ನವೆಂಬರ್ 2024ರಲ್ಲಿ ವಾರಣಾಸಿಗೆ ಭೇಟಿ ನೀಡಿದಾಗ ಈ ವಿಡಿಯೋವನ್ನು ಚಿತ್ರೀಕರಿಸಿದ್ದಾರೆ ತಿಳಿಸಿದ್ದಾರೆ.

ಅವರು ಮಣಿಕರ್ಣಿಕಾ ಘಾಟ್‌ನಲ್ಲಿದ್ದಾಗ, ಘಾಟ್ ಬಳಿಯ ಬಾಲ್ಕನಿಯಲ್ಲಿ ನಿಂತಿದ್ದ ವಿದೇಶಿಯರ ಗುಂಪನ್ನು ನೋಡಿದರು. ಅವರಲ್ಲಿ ಒಬ್ಬರು ಬಿಲ್ ಗೇಟ್ಸ್ ಅವರನ್ನು ಹೋಲುತ್ತಿದ್ದಾರೆ ಎಂದು ಅವರು ಭಾವಿಸಿ ಮನರಂಜನೆಗಾಗಿ ವಿಡಿಯೋವನ್ನು ರೆಕಾರ್ಡ್‌ ಮಾಡಿ, ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿದ್ದಾರೆ ಎಂದು ಫ್ಯಾಕ್ಟ್‌ಲಿ ವರದಿ ಮಾಡಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಂಬಂಧವಿಲ್ಲದ ವಿದೇಶಿ ಪ್ರವಾಸಿಯ ಹಳೆಯ ವಿಡಿಯೋವನ್ನು ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ 2025 ರ ಮಹಾ ಕುಂಭಮೇಳದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

(ಫ್ಯಾಕ್ಟ್‌ಚೆಕ್‌ ಅನ್ನು ಮೂಲತಃ FACTLY ಪ್ರಕಟಿಸಿತ್ತು. ನಾನುಗೌರಿ.ಕಾಂ ಶಕ್ತಿ ಕಲೆಕ್ಟಿವ್‌ನ ಭಾಗವಾಗಿ ಇದನ್ನು ಮರುಪ್ರಕಟಿಸಿದೆ)

ಇದನ್ನೂಓದಿ:  ದೆಹಲಿ ಚುನಾವಣೆ | ಬಿಜೆಪಿ ಎಎಪಿಯನ್ನು ನಕಲು ಮಾಡಿದೆ – ಕೇಜ್ರಿವಾಲ್

ದೆಹಲಿ ಚುನಾವಣೆ | ಬಿಜೆಪಿ ಎಎಪಿಯನ್ನು ನಕಲು ಮಾಡಿದೆ – ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...