ಸಾಧುವಿನ ವೇಷ ಧರಿಸಿದ್ದ ಆಯೂಬ್ ಖಾನ್ ಎಂಬ ಭಯೋತ್ಪಾದಕನನ್ನು ‘ಕುಂಭಮೇಳ – 2025’ ನಡೆಯುತ್ತಿರುವ ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂಬ ಹೇಳಿಕೆಯಿರುವ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗುತ್ತಿದೆ. FACT CHECK Maha Kumbh Mela, Muslim youth arrested for dressing up as a saint, image created by AI,
ಈ ಚಿತ್ರದಲ್ಲಿ ಸಾಧುವಿನಂತೆ ವೇಷ ಧರಿಸಿದ ವ್ಯಕ್ತಿಯನ್ನು ಇಬ್ಬರು ಪೊಲೀಸರು ಬಂಧಿಸುತ್ತಿರುವ ಫೋಟೋ ಇದ್ದು, ಅದನ್ನು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್ಗಳಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ. FACT CHECK
ಫ್ಯಾಕ್ಟ್ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಕೀವರ್ಡ್ಗಳನ್ನು ಬಳಸಿ ಸರ್ಚ್ ಮಾಡಿದಾಗ, ಅಯೂಬ್ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ ಎಂಬ ವರದಿಗಳು ಲಭ್ಯವಾಗಿವೆ. ಅವುಗಳನ್ನು ಇಲ್ಲಿ ನೋಡಬಹುದು.

ವರದಿಗಳ ಪ್ರಕರ, ಜನವರಿ 14, 2025 ರಂದು, ಬೆಳಗಿನ ಜಾವ 2 ಗಂಟೆ ಸುಮಾರಿಗೆ, ಮಹಾ ಕುಂಭಮೇಳದಲ್ಲಿ ಯತಿ ನರಸಿಂಹಾನಂದ ಗಿರಿ ಅವರ ಶಿಬಿರದ ಬಳಿ ಒಬ್ಬ ವ್ಯಕ್ತಿ ಅನುಮಾನಾಸ್ಪದವಾಗಿ ತಿರುಗಾಡುತ್ತಿರುವುದು ಕಂಡುಬಂದಿದೆ.
ಈ ವೇಳೆ ಯತಿ ನರಸಿಂಹಾನಂದರ ಕೆಲವು ಅನುಯಾಯಿಗಳು ಅವನನ್ನು ಹಿಡಿದು ಪ್ರಶ್ನಿಸಿದ್ದಾರೆ. ಆರಂಭದಲ್ಲಿ, ಅವನು ಯತಿ ನರಸಿಂಹಾನಂದರನ್ನು ಭೇಟಿಯಾಗಲು ಬಂದಿದ್ದೇನೆ ಎಂದು ಹೇಳಿಕೊಂಡು ತನ್ನನ್ನು ಆಯುಷ್ ಎಂದು ಪರಿಚಯಿಸಿಕೊಂಡಿದ್ದಾನೆ. ಆತನ ನಡವಳಿಕೆಯ ಬಗ್ಗೆ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸ್ ವಿಚಾರಣೆಯ ಸಮಯದಲ್ಲಿ, ಅವನ ನಿಜವಾದ ಹೆಸರು ಅಯೂಬ್ ಮತ್ತು ಅವನು ಮುಸ್ಲಿಂ ಎಂದು ತಿಳಿದುಬಂದಿದೆ.
ಹಿಂದೂಸ್ತಾನ್ ಟೈಮ್ಸ್ ಮತ್ತು ಇಂಡಿಯಾ ಟಿವಿ ಪ್ರಕಟಿಸಿದ ವರದಿಗಳ ಪ್ರಕಾರ, ಅಯೂಬ್ ಅಲಿ ಉತ್ತರ ಪ್ರದೇಶದ ಎಟಾದ ಅಲಿಗಂಜ್ನವನು. ಅವನ ತಂದೆಯ ಹೆಸರು ಶಕೀರ್ ಅಲಿ, ಮತ್ತು ಅವನಿಗೆ ಯಾವುದೇ ಕ್ರಿಮಿನಲ್ ದಾಖಲೆಗಳಿಲ್ಲ. ಮಹಾ ಕುಂಭಮೇಳದ ಅಖಾರ ಪೊಲೀಸ್ ಠಾಣೆಯ ಉಸ್ತುವಾರಿ ಭಾಸ್ಕರ್ ಮಿಶ್ರಾ, ಅಯೂಬ್ ಅಲಿ ಎಟಾದವನಾಗಿದ್ದು, ಅವರನ್ನು ಎಸ್ಒಟಿ ಮತ್ತು ಎಸ್ಟಿಎಫ್ ವಿಚಾರಣೆ ನಡೆಸಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಘಟನೆಯ ಕುರಿತು ಹೆಚ್ಚಿನ ವಿವರಗಳಿಗಾಗಿ, ಆಯುಬ್ ಅಲಿಯನ್ನು ವಶಕ್ಕೆ ಪಡೆದಿದ್ದ ಮಹಾ ಕುಂಭಮೇಳದ ಅಖಾರ ಪೊಲೀಸ್ ಠಾಣೆಯ ಉಸ್ತುವಾರಿ ಭಾಸ್ಕರ್ ಮಿಶ್ರಾ ಅವರನ್ನು ಫ್ಯಾಕ್ಟ್ಲಿ ತಂಡ ಸಂಪರ್ಕಿಸಿದ್ದು, ಅವರು ಕೆಳಗಿನಂತೆ ಮಾಹಿತಿ ನೀಡಿದ್ದಾರೆ.
“ಮಹಾ ಕುಂಭಮೇಳದಲ್ಲಿ ಬಂಧಿಸಲ್ಪಟ್ಟ ಅಯೂಬ್ ಅಲಿ ಭಯೋತ್ಪಾದಕನಲ್ಲ ಎಂದು ಎಸ್ಒಟಿ ಮತ್ತು ಎಟಿಎಸ್ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಅವರು ಉತ್ತರ ಪ್ರದೇಶದ ಇಟಾದಲ್ಲಿರುವ ಅಲಿಗಂಜ್ನವರು. ಅವರ ತಂದೆಯ ಹೆಸರು ಶಕೀರ್ ಅಲಿ. ಅವರಿಗೆ ಯಾವುದೇ ಕ್ರಿಮಿನಲ್ ದಾಖಲೆಗಳಿಲ್ಲ, ದಿನಗೂಲಿ ಕಾರ್ಮಿಕರಾಗಿರುವ ಅವರನ್ನು ಬಂಧಿಸಿದಾಗ ಸಂತನಂತೆ ವೇಷ ಧರಿಸಿರಲಿಲ್ಲ.” ಎಂದು ಅವರು ಹೇಳಿದ್ದಾರೆ. ಜೊತೆಗೆ, ಘಟನೆಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಅವರು ಉಲ್ಲೇಖಿಸಿದ್ದಾರೆ.

ಇದಲ್ಲದೆ, ಫೋಟೊವನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ವೈರಲ್ ಪೋಸ್ಟ್ನಲ್ಲಿ ಹಂಚಿಕೊಳ್ಳಲಾದ ಫೋಟೋ AI-ರಚಿತವಾಗಿದೆ ಎಂದು ತೋರುತ್ತದೆ. ಇದನ್ನು ಪರಿಶೀಲಿಸಲು, ಹೈವ್ ಮತ್ತು ವಾಸಿಟ್ಎಐನಂತಹ ಹಲವಾರು AI ಪತ್ತೆ ಸಾಧನಗಳನ್ನು ಬಳಸಿದಾಗ. ಹೈವ್ನ ಫಲಿತಾಂಶಗಳು ಶೇ 99.8% ವೈರಲ್ ಚಿತ್ರವು AI ನಿಂದ ರಚಿತವಾಗಿದೆ ಎಂದು ದೃಢಪಡಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ, 2025 ರ ಮಹಾ ಕುಂಭಮೇಳದಲ್ಲಿ ಬಂಧಿಸಲ್ಪಟ್ಟ ಅಯೂಬ್ ಅಲಿ ಭಯೋತ್ಪಾದಕನಲ್ಲ ಮತ್ತು ಬಂಧನದ ಸಮಯದಲ್ಲಿ ಸಂತನ ವೇಷ ಧರಿಸಿರಲಿಲ್ಲ ಎಂದು ಉತ್ತರ ಪ್ರದೇಶ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
(This story was originally published by Factly, and republished by ನಾನುಗೌರಿ.ಕಾಂ as part of the Shakti Collective)
ಇದನ್ನೂಓದಿ: ಎಲ್ಗರ್ ಪರಿಷತ್ ಪ್ರಕರಣ : ಆರು ವರ್ಷಗಳ ಬಳಿಕ ಜೈಲಿನಿಂದ ಹೊರಬಂದ ರೋನಾ ವಿಲ್ಸನ್, ಸುಧೀರ್ ಧಾವಳೆ


