Homeಫ್ಯಾಕ್ಟ್‌ಚೆಕ್FACT CHECK | ಕುಂಭಮೇಳದಲ್ಲಿ ಸಾಧುವಿನ ವೇಷ ಧರಿಸಿ ಬಂಧಿತನಾದ ಮುಸ್ಲಿಂ ಯುವಕ ಎಂದು ಪ್ರತಿಪಾದಿಸುವ...

FACT CHECK | ಕುಂಭಮೇಳದಲ್ಲಿ ಸಾಧುವಿನ ವೇಷ ಧರಿಸಿ ಬಂಧಿತನಾದ ಮುಸ್ಲಿಂ ಯುವಕ ಎಂದು ಪ್ರತಿಪಾದಿಸುವ ಈ ಚಿತ್ರ AI ರಚಿತ!

- Advertisement -
- Advertisement -

ಸಾಧುವಿನ ವೇಷ ಧರಿಸಿದ್ದ ಆಯೂಬ್ ಖಾನ್ ಎಂಬ ಭಯೋತ್ಪಾದಕನನ್ನು ‘ಕುಂಭಮೇಳ – 2025’ ನಡೆಯುತ್ತಿರುವ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂಬ ಹೇಳಿಕೆಯಿರುವ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗುತ್ತಿದೆ. FACT CHECK Maha Kumbh Mela, Muslim youth arrested for dressing up as a saint, image created by AI,

ಈ ಚಿತ್ರದಲ್ಲಿ ಸಾಧುವಿನಂತೆ ವೇಷ ಧರಿಸಿದ ವ್ಯಕ್ತಿಯನ್ನು ಇಬ್ಬರು ಪೊಲೀಸರು ಬಂಧಿಸುತ್ತಿರುವ ಫೋಟೋ ಇದ್ದು, ಅದನ್ನು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ಗಳಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ. FACT CHECK

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಕೀವರ್ಡ್‌ಗಳನ್ನು ಬಳಸಿ ಸರ್ಚ್ ಮಾಡಿದಾಗ, ಅಯೂಬ್ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ ಎಂಬ ವರದಿಗಳು ಲಭ್ಯವಾಗಿವೆ. ಅವುಗಳನ್ನು ಇಲ್ಲಿ ನೋಡಬಹುದು.

FACT CHECK, ಮಹಾ ಕುಂಭಮೇಳ, ಸಾಧುವಿನ ವೇಷ ಧರಿಸಿ,  ಬಂಧಿತ, ಮುಸ್ಲಿಂ ಯುವಕ, ಚಿತ್ರ AI ರಚಿತ, Maha Kumbh Mela, Muslim youth arrested for dressing up as a saint, image created by AI,

ವರದಿಗಳ ಪ್ರಕರ, ಜನವರಿ 14, 2025 ರಂದು, ಬೆಳಗಿನ ಜಾವ 2 ಗಂಟೆ ಸುಮಾರಿಗೆ, ಮಹಾ ಕುಂಭಮೇಳದಲ್ಲಿ ಯತಿ ನರಸಿಂಹಾನಂದ ಗಿರಿ ಅವರ ಶಿಬಿರದ ಬಳಿ ಒಬ್ಬ ವ್ಯಕ್ತಿ ಅನುಮಾನಾಸ್ಪದವಾಗಿ ತಿರುಗಾಡುತ್ತಿರುವುದು ಕಂಡುಬಂದಿದೆ.

ಈ ವೇಳೆ ಯತಿ ನರಸಿಂಹಾನಂದರ ಕೆಲವು ಅನುಯಾಯಿಗಳು ಅವನನ್ನು ಹಿಡಿದು ಪ್ರಶ್ನಿಸಿದ್ದಾರೆ. ಆರಂಭದಲ್ಲಿ, ಅವನು ಯತಿ ನರಸಿಂಹಾನಂದರನ್ನು ಭೇಟಿಯಾಗಲು ಬಂದಿದ್ದೇನೆ ಎಂದು ಹೇಳಿಕೊಂಡು ತನ್ನನ್ನು ಆಯುಷ್ ಎಂದು ಪರಿಚಯಿಸಿಕೊಂಡಿದ್ದಾನೆ. ಆತನ ನಡವಳಿಕೆಯ ಬಗ್ಗೆ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸ್ ವಿಚಾರಣೆಯ ಸಮಯದಲ್ಲಿ, ಅವನ ನಿಜವಾದ ಹೆಸರು ಅಯೂಬ್ ಮತ್ತು ಅವನು ಮುಸ್ಲಿಂ ಎಂದು ತಿಳಿದುಬಂದಿದೆ.

ಹಿಂದೂಸ್ತಾನ್ ಟೈಮ್ಸ್‌ ಮತ್ತು ಇಂಡಿಯಾ ಟಿವಿ ಪ್ರಕಟಿಸಿದ ವರದಿಗಳ ಪ್ರಕಾರ, ಅಯೂಬ್ ಅಲಿ ಉತ್ತರ ಪ್ರದೇಶದ ಎಟಾದ ಅಲಿಗಂಜ್‌ನವನು. ಅವನ ತಂದೆಯ ಹೆಸರು ಶಕೀರ್ ಅಲಿ, ಮತ್ತು ಅವನಿಗೆ ಯಾವುದೇ ಕ್ರಿಮಿನಲ್ ದಾಖಲೆಗಳಿಲ್ಲ. ಮಹಾ ಕುಂಭಮೇಳದ ಅಖಾರ ಪೊಲೀಸ್ ಠಾಣೆಯ ಉಸ್ತುವಾರಿ ಭಾಸ್ಕರ್ ಮಿಶ್ರಾ, ಅಯೂಬ್ ಅಲಿ ಎಟಾದವನಾಗಿದ್ದು, ಅವರನ್ನು ಎಸ್‌ಒಟಿ ಮತ್ತು ಎಸ್‌ಟಿಎಫ್ ವಿಚಾರಣೆ ನಡೆಸಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಘಟನೆಯ ಕುರಿತು ಹೆಚ್ಚಿನ ವಿವರಗಳಿಗಾಗಿ, ಆಯುಬ್ ಅಲಿಯನ್ನು ವಶಕ್ಕೆ ಪಡೆದಿದ್ದ ಮಹಾ ಕುಂಭಮೇಳದ ಅಖಾರ ಪೊಲೀಸ್ ಠಾಣೆಯ ಉಸ್ತುವಾರಿ ಭಾಸ್ಕರ್ ಮಿಶ್ರಾ ಅವರನ್ನು ಫ್ಯಾಕ್ಟ್‌ಲಿ ತಂಡ ಸಂಪರ್ಕಿಸಿದ್ದು, ಅವರು ಕೆಳಗಿನಂತೆ ಮಾಹಿತಿ ನೀಡಿದ್ದಾರೆ.

“ಮಹಾ ಕುಂಭಮೇಳದಲ್ಲಿ ಬಂಧಿಸಲ್ಪಟ್ಟ ಅಯೂಬ್ ಅಲಿ ಭಯೋತ್ಪಾದಕನಲ್ಲ ಎಂದು ಎಸ್‌ಒಟಿ ಮತ್ತು ಎಟಿಎಸ್ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಅವರು ಉತ್ತರ ಪ್ರದೇಶದ ಇಟಾದಲ್ಲಿರುವ ಅಲಿಗಂಜ್‌ನವರು. ಅವರ ತಂದೆಯ ಹೆಸರು ಶಕೀರ್ ಅಲಿ. ಅವರಿಗೆ ಯಾವುದೇ ಕ್ರಿಮಿನಲ್ ದಾಖಲೆಗಳಿಲ್ಲ, ದಿನಗೂಲಿ ಕಾರ್ಮಿಕರಾಗಿರುವ ಅವರನ್ನು ಬಂಧಿಸಿದಾಗ ಸಂತನಂತೆ ವೇಷ ಧರಿಸಿರಲಿಲ್ಲ.” ಎಂದು ಅವರು ಹೇಳಿದ್ದಾರೆ. ಜೊತೆಗೆ, ಘಟನೆಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಅವರು ಉಲ್ಲೇಖಿಸಿದ್ದಾರೆ.

FACT CHECK, ಮಹಾ ಕುಂಭಮೇಳ, ಸಾಧುವಿನ ವೇಷ ಧರಿಸಿ,  ಬಂಧಿತ, ಮುಸ್ಲಿಂ ಯುವಕ, ಚಿತ್ರ AI ರಚಿತ, Maha Kumbh Mela, Muslim youth arrested for dressing up as a saint, image created by AI,

ಇದಲ್ಲದೆ, ಫೋಟೊವನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ವೈರಲ್ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ಫೋಟೋ AI-ರಚಿತವಾಗಿದೆ ಎಂದು ತೋರುತ್ತದೆ. ಇದನ್ನು ಪರಿಶೀಲಿಸಲು,  ಹೈವ್ ಮತ್ತು ವಾಸಿಟ್‌ಎಐನಂತಹ ಹಲವಾರು AI ಪತ್ತೆ ಸಾಧನಗಳನ್ನು ಬಳಸಿದಾಗ. ಹೈವ್‌ನ ಫಲಿತಾಂಶಗಳು ಶೇ 99.8% ವೈರಲ್ ಚಿತ್ರವು AI ನಿಂದ ರಚಿತವಾಗಿದೆ ಎಂದು ದೃಢಪಡಿಸಿದೆ.

FACT CHECK, ಮಹಾ ಕುಂಭಮೇಳ, ಸಾಧುವಿನ ವೇಷ ಧರಿಸಿ,  ಬಂಧಿತ, ಮುಸ್ಲಿಂ ಯುವಕ, ಚಿತ್ರ AI ರಚಿತ, Maha Kumbh Mela, Muslim youth arrested for dressing up as a saint, image created by AI,

ಒಟ್ಟಾರೆಯಾಗಿ ಹೇಳುವುದಾದರೆ, 2025 ರ ಮಹಾ ಕುಂಭಮೇಳದಲ್ಲಿ ಬಂಧಿಸಲ್ಪಟ್ಟ ಅಯೂಬ್ ಅಲಿ ಭಯೋತ್ಪಾದಕನಲ್ಲ ಮತ್ತು ಬಂಧನದ ಸಮಯದಲ್ಲಿ ಸಂತನ ವೇಷ ಧರಿಸಿರಲಿಲ್ಲ ಎಂದು ಉತ್ತರ ಪ್ರದೇಶ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

(This story was originally published by Factly, and republished by ನಾನುಗೌರಿ.ಕಾಂ as part of the Shakti Collective)

ಇದನ್ನೂಓದಿ:  ಎಲ್ಗರ್ ಪರಿಷತ್ ಪ್ರಕರಣ : ಆರು ವರ್ಷಗಳ ಬಳಿಕ ಜೈಲಿನಿಂದ ಹೊರಬಂದ ರೋನಾ ವಿಲ್ಸನ್, ಸುಧೀರ್ ಧಾವಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...