Homeಫ್ಯಾಕ್ಟ್‌ಚೆಕ್FACT CHECK | ಕುಂಭಮೇಳದಲ್ಲಿ ಸಾಧುವಿನ ವೇಷ ಧರಿಸಿ ಬಂಧಿತನಾದ ಮುಸ್ಲಿಂ ಯುವಕ ಎಂದು ಪ್ರತಿಪಾದಿಸುವ...

FACT CHECK | ಕುಂಭಮೇಳದಲ್ಲಿ ಸಾಧುವಿನ ವೇಷ ಧರಿಸಿ ಬಂಧಿತನಾದ ಮುಸ್ಲಿಂ ಯುವಕ ಎಂದು ಪ್ರತಿಪಾದಿಸುವ ಈ ಚಿತ್ರ AI ರಚಿತ!

- Advertisement -
- Advertisement -

ಸಾಧುವಿನ ವೇಷ ಧರಿಸಿದ್ದ ಆಯೂಬ್ ಖಾನ್ ಎಂಬ ಭಯೋತ್ಪಾದಕನನ್ನು ‘ಕುಂಭಮೇಳ – 2025’ ನಡೆಯುತ್ತಿರುವ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂಬ ಹೇಳಿಕೆಯಿರುವ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗುತ್ತಿದೆ. FACT CHECK Maha Kumbh Mela, Muslim youth arrested for dressing up as a saint, image created by AI,

ಈ ಚಿತ್ರದಲ್ಲಿ ಸಾಧುವಿನಂತೆ ವೇಷ ಧರಿಸಿದ ವ್ಯಕ್ತಿಯನ್ನು ಇಬ್ಬರು ಪೊಲೀಸರು ಬಂಧಿಸುತ್ತಿರುವ ಫೋಟೋ ಇದ್ದು, ಅದನ್ನು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ಗಳಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ. FACT CHECK

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಕೀವರ್ಡ್‌ಗಳನ್ನು ಬಳಸಿ ಸರ್ಚ್ ಮಾಡಿದಾಗ, ಅಯೂಬ್ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ ಎಂಬ ವರದಿಗಳು ಲಭ್ಯವಾಗಿವೆ. ಅವುಗಳನ್ನು ಇಲ್ಲಿ ನೋಡಬಹುದು.

FACT CHECK, ಮಹಾ ಕುಂಭಮೇಳ, ಸಾಧುವಿನ ವೇಷ ಧರಿಸಿ,  ಬಂಧಿತ, ಮುಸ್ಲಿಂ ಯುವಕ, ಚಿತ್ರ AI ರಚಿತ, Maha Kumbh Mela, Muslim youth arrested for dressing up as a saint, image created by AI,

ವರದಿಗಳ ಪ್ರಕರ, ಜನವರಿ 14, 2025 ರಂದು, ಬೆಳಗಿನ ಜಾವ 2 ಗಂಟೆ ಸುಮಾರಿಗೆ, ಮಹಾ ಕುಂಭಮೇಳದಲ್ಲಿ ಯತಿ ನರಸಿಂಹಾನಂದ ಗಿರಿ ಅವರ ಶಿಬಿರದ ಬಳಿ ಒಬ್ಬ ವ್ಯಕ್ತಿ ಅನುಮಾನಾಸ್ಪದವಾಗಿ ತಿರುಗಾಡುತ್ತಿರುವುದು ಕಂಡುಬಂದಿದೆ.

ಈ ವೇಳೆ ಯತಿ ನರಸಿಂಹಾನಂದರ ಕೆಲವು ಅನುಯಾಯಿಗಳು ಅವನನ್ನು ಹಿಡಿದು ಪ್ರಶ್ನಿಸಿದ್ದಾರೆ. ಆರಂಭದಲ್ಲಿ, ಅವನು ಯತಿ ನರಸಿಂಹಾನಂದರನ್ನು ಭೇಟಿಯಾಗಲು ಬಂದಿದ್ದೇನೆ ಎಂದು ಹೇಳಿಕೊಂಡು ತನ್ನನ್ನು ಆಯುಷ್ ಎಂದು ಪರಿಚಯಿಸಿಕೊಂಡಿದ್ದಾನೆ. ಆತನ ನಡವಳಿಕೆಯ ಬಗ್ಗೆ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸ್ ವಿಚಾರಣೆಯ ಸಮಯದಲ್ಲಿ, ಅವನ ನಿಜವಾದ ಹೆಸರು ಅಯೂಬ್ ಮತ್ತು ಅವನು ಮುಸ್ಲಿಂ ಎಂದು ತಿಳಿದುಬಂದಿದೆ.

ಹಿಂದೂಸ್ತಾನ್ ಟೈಮ್ಸ್‌ ಮತ್ತು ಇಂಡಿಯಾ ಟಿವಿ ಪ್ರಕಟಿಸಿದ ವರದಿಗಳ ಪ್ರಕಾರ, ಅಯೂಬ್ ಅಲಿ ಉತ್ತರ ಪ್ರದೇಶದ ಎಟಾದ ಅಲಿಗಂಜ್‌ನವನು. ಅವನ ತಂದೆಯ ಹೆಸರು ಶಕೀರ್ ಅಲಿ, ಮತ್ತು ಅವನಿಗೆ ಯಾವುದೇ ಕ್ರಿಮಿನಲ್ ದಾಖಲೆಗಳಿಲ್ಲ. ಮಹಾ ಕುಂಭಮೇಳದ ಅಖಾರ ಪೊಲೀಸ್ ಠಾಣೆಯ ಉಸ್ತುವಾರಿ ಭಾಸ್ಕರ್ ಮಿಶ್ರಾ, ಅಯೂಬ್ ಅಲಿ ಎಟಾದವನಾಗಿದ್ದು, ಅವರನ್ನು ಎಸ್‌ಒಟಿ ಮತ್ತು ಎಸ್‌ಟಿಎಫ್ ವಿಚಾರಣೆ ನಡೆಸಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಘಟನೆಯ ಕುರಿತು ಹೆಚ್ಚಿನ ವಿವರಗಳಿಗಾಗಿ, ಆಯುಬ್ ಅಲಿಯನ್ನು ವಶಕ್ಕೆ ಪಡೆದಿದ್ದ ಮಹಾ ಕುಂಭಮೇಳದ ಅಖಾರ ಪೊಲೀಸ್ ಠಾಣೆಯ ಉಸ್ತುವಾರಿ ಭಾಸ್ಕರ್ ಮಿಶ್ರಾ ಅವರನ್ನು ಫ್ಯಾಕ್ಟ್‌ಲಿ ತಂಡ ಸಂಪರ್ಕಿಸಿದ್ದು, ಅವರು ಕೆಳಗಿನಂತೆ ಮಾಹಿತಿ ನೀಡಿದ್ದಾರೆ.

“ಮಹಾ ಕುಂಭಮೇಳದಲ್ಲಿ ಬಂಧಿಸಲ್ಪಟ್ಟ ಅಯೂಬ್ ಅಲಿ ಭಯೋತ್ಪಾದಕನಲ್ಲ ಎಂದು ಎಸ್‌ಒಟಿ ಮತ್ತು ಎಟಿಎಸ್ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಅವರು ಉತ್ತರ ಪ್ರದೇಶದ ಇಟಾದಲ್ಲಿರುವ ಅಲಿಗಂಜ್‌ನವರು. ಅವರ ತಂದೆಯ ಹೆಸರು ಶಕೀರ್ ಅಲಿ. ಅವರಿಗೆ ಯಾವುದೇ ಕ್ರಿಮಿನಲ್ ದಾಖಲೆಗಳಿಲ್ಲ, ದಿನಗೂಲಿ ಕಾರ್ಮಿಕರಾಗಿರುವ ಅವರನ್ನು ಬಂಧಿಸಿದಾಗ ಸಂತನಂತೆ ವೇಷ ಧರಿಸಿರಲಿಲ್ಲ.” ಎಂದು ಅವರು ಹೇಳಿದ್ದಾರೆ. ಜೊತೆಗೆ, ಘಟನೆಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಅವರು ಉಲ್ಲೇಖಿಸಿದ್ದಾರೆ.

FACT CHECK, ಮಹಾ ಕುಂಭಮೇಳ, ಸಾಧುವಿನ ವೇಷ ಧರಿಸಿ,  ಬಂಧಿತ, ಮುಸ್ಲಿಂ ಯುವಕ, ಚಿತ್ರ AI ರಚಿತ, Maha Kumbh Mela, Muslim youth arrested for dressing up as a saint, image created by AI,

ಇದಲ್ಲದೆ, ಫೋಟೊವನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ವೈರಲ್ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ಫೋಟೋ AI-ರಚಿತವಾಗಿದೆ ಎಂದು ತೋರುತ್ತದೆ. ಇದನ್ನು ಪರಿಶೀಲಿಸಲು,  ಹೈವ್ ಮತ್ತು ವಾಸಿಟ್‌ಎಐನಂತಹ ಹಲವಾರು AI ಪತ್ತೆ ಸಾಧನಗಳನ್ನು ಬಳಸಿದಾಗ. ಹೈವ್‌ನ ಫಲಿತಾಂಶಗಳು ಶೇ 99.8% ವೈರಲ್ ಚಿತ್ರವು AI ನಿಂದ ರಚಿತವಾಗಿದೆ ಎಂದು ದೃಢಪಡಿಸಿದೆ.

FACT CHECK, ಮಹಾ ಕುಂಭಮೇಳ, ಸಾಧುವಿನ ವೇಷ ಧರಿಸಿ,  ಬಂಧಿತ, ಮುಸ್ಲಿಂ ಯುವಕ, ಚಿತ್ರ AI ರಚಿತ, Maha Kumbh Mela, Muslim youth arrested for dressing up as a saint, image created by AI,

ಒಟ್ಟಾರೆಯಾಗಿ ಹೇಳುವುದಾದರೆ, 2025 ರ ಮಹಾ ಕುಂಭಮೇಳದಲ್ಲಿ ಬಂಧಿಸಲ್ಪಟ್ಟ ಅಯೂಬ್ ಅಲಿ ಭಯೋತ್ಪಾದಕನಲ್ಲ ಮತ್ತು ಬಂಧನದ ಸಮಯದಲ್ಲಿ ಸಂತನ ವೇಷ ಧರಿಸಿರಲಿಲ್ಲ ಎಂದು ಉತ್ತರ ಪ್ರದೇಶ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

(This story was originally published by Factly, and republished by ನಾನುಗೌರಿ.ಕಾಂ as part of the Shakti Collective)

ಇದನ್ನೂಓದಿ:  ಎಲ್ಗರ್ ಪರಿಷತ್ ಪ್ರಕರಣ : ಆರು ವರ್ಷಗಳ ಬಳಿಕ ಜೈಲಿನಿಂದ ಹೊರಬಂದ ರೋನಾ ವಿಲ್ಸನ್, ಸುಧೀರ್ ಧಾವಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...