Homeಫ್ಯಾಕ್ಟ್‌ಚೆಕ್FACT CHECK | ಕುಂಭಮೇಳದಲ್ಲಿ ಸಾಧುವಿನ ವೇಷ ಧರಿಸಿ ಬಂಧಿತನಾದ ಮುಸ್ಲಿಂ ಯುವಕ ಎಂದು ಪ್ರತಿಪಾದಿಸುವ...

FACT CHECK | ಕುಂಭಮೇಳದಲ್ಲಿ ಸಾಧುವಿನ ವೇಷ ಧರಿಸಿ ಬಂಧಿತನಾದ ಮುಸ್ಲಿಂ ಯುವಕ ಎಂದು ಪ್ರತಿಪಾದಿಸುವ ಈ ಚಿತ್ರ AI ರಚಿತ!

- Advertisement -
- Advertisement -

ಸಾಧುವಿನ ವೇಷ ಧರಿಸಿದ್ದ ಆಯೂಬ್ ಖಾನ್ ಎಂಬ ಭಯೋತ್ಪಾದಕನನ್ನು ‘ಕುಂಭಮೇಳ – 2025’ ನಡೆಯುತ್ತಿರುವ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂಬ ಹೇಳಿಕೆಯಿರುವ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗುತ್ತಿದೆ. FACT CHECK Maha Kumbh Mela, Muslim youth arrested for dressing up as a saint, image created by AI,

ಈ ಚಿತ್ರದಲ್ಲಿ ಸಾಧುವಿನಂತೆ ವೇಷ ಧರಿಸಿದ ವ್ಯಕ್ತಿಯನ್ನು ಇಬ್ಬರು ಪೊಲೀಸರು ಬಂಧಿಸುತ್ತಿರುವ ಫೋಟೋ ಇದ್ದು, ಅದನ್ನು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ಗಳಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ. FACT CHECK

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಕೀವರ್ಡ್‌ಗಳನ್ನು ಬಳಸಿ ಸರ್ಚ್ ಮಾಡಿದಾಗ, ಅಯೂಬ್ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ ಎಂಬ ವರದಿಗಳು ಲಭ್ಯವಾಗಿವೆ. ಅವುಗಳನ್ನು ಇಲ್ಲಿ ನೋಡಬಹುದು.

FACT CHECK, ಮಹಾ ಕುಂಭಮೇಳ, ಸಾಧುವಿನ ವೇಷ ಧರಿಸಿ,  ಬಂಧಿತ, ಮುಸ್ಲಿಂ ಯುವಕ, ಚಿತ್ರ AI ರಚಿತ, Maha Kumbh Mela, Muslim youth arrested for dressing up as a saint, image created by AI,

ವರದಿಗಳ ಪ್ರಕರ, ಜನವರಿ 14, 2025 ರಂದು, ಬೆಳಗಿನ ಜಾವ 2 ಗಂಟೆ ಸುಮಾರಿಗೆ, ಮಹಾ ಕುಂಭಮೇಳದಲ್ಲಿ ಯತಿ ನರಸಿಂಹಾನಂದ ಗಿರಿ ಅವರ ಶಿಬಿರದ ಬಳಿ ಒಬ್ಬ ವ್ಯಕ್ತಿ ಅನುಮಾನಾಸ್ಪದವಾಗಿ ತಿರುಗಾಡುತ್ತಿರುವುದು ಕಂಡುಬಂದಿದೆ.

ಈ ವೇಳೆ ಯತಿ ನರಸಿಂಹಾನಂದರ ಕೆಲವು ಅನುಯಾಯಿಗಳು ಅವನನ್ನು ಹಿಡಿದು ಪ್ರಶ್ನಿಸಿದ್ದಾರೆ. ಆರಂಭದಲ್ಲಿ, ಅವನು ಯತಿ ನರಸಿಂಹಾನಂದರನ್ನು ಭೇಟಿಯಾಗಲು ಬಂದಿದ್ದೇನೆ ಎಂದು ಹೇಳಿಕೊಂಡು ತನ್ನನ್ನು ಆಯುಷ್ ಎಂದು ಪರಿಚಯಿಸಿಕೊಂಡಿದ್ದಾನೆ. ಆತನ ನಡವಳಿಕೆಯ ಬಗ್ಗೆ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸ್ ವಿಚಾರಣೆಯ ಸಮಯದಲ್ಲಿ, ಅವನ ನಿಜವಾದ ಹೆಸರು ಅಯೂಬ್ ಮತ್ತು ಅವನು ಮುಸ್ಲಿಂ ಎಂದು ತಿಳಿದುಬಂದಿದೆ.

ಹಿಂದೂಸ್ತಾನ್ ಟೈಮ್ಸ್‌ ಮತ್ತು ಇಂಡಿಯಾ ಟಿವಿ ಪ್ರಕಟಿಸಿದ ವರದಿಗಳ ಪ್ರಕಾರ, ಅಯೂಬ್ ಅಲಿ ಉತ್ತರ ಪ್ರದೇಶದ ಎಟಾದ ಅಲಿಗಂಜ್‌ನವನು. ಅವನ ತಂದೆಯ ಹೆಸರು ಶಕೀರ್ ಅಲಿ, ಮತ್ತು ಅವನಿಗೆ ಯಾವುದೇ ಕ್ರಿಮಿನಲ್ ದಾಖಲೆಗಳಿಲ್ಲ. ಮಹಾ ಕುಂಭಮೇಳದ ಅಖಾರ ಪೊಲೀಸ್ ಠಾಣೆಯ ಉಸ್ತುವಾರಿ ಭಾಸ್ಕರ್ ಮಿಶ್ರಾ, ಅಯೂಬ್ ಅಲಿ ಎಟಾದವನಾಗಿದ್ದು, ಅವರನ್ನು ಎಸ್‌ಒಟಿ ಮತ್ತು ಎಸ್‌ಟಿಎಫ್ ವಿಚಾರಣೆ ನಡೆಸಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಘಟನೆಯ ಕುರಿತು ಹೆಚ್ಚಿನ ವಿವರಗಳಿಗಾಗಿ, ಆಯುಬ್ ಅಲಿಯನ್ನು ವಶಕ್ಕೆ ಪಡೆದಿದ್ದ ಮಹಾ ಕುಂಭಮೇಳದ ಅಖಾರ ಪೊಲೀಸ್ ಠಾಣೆಯ ಉಸ್ತುವಾರಿ ಭಾಸ್ಕರ್ ಮಿಶ್ರಾ ಅವರನ್ನು ಫ್ಯಾಕ್ಟ್‌ಲಿ ತಂಡ ಸಂಪರ್ಕಿಸಿದ್ದು, ಅವರು ಕೆಳಗಿನಂತೆ ಮಾಹಿತಿ ನೀಡಿದ್ದಾರೆ.

“ಮಹಾ ಕುಂಭಮೇಳದಲ್ಲಿ ಬಂಧಿಸಲ್ಪಟ್ಟ ಅಯೂಬ್ ಅಲಿ ಭಯೋತ್ಪಾದಕನಲ್ಲ ಎಂದು ಎಸ್‌ಒಟಿ ಮತ್ತು ಎಟಿಎಸ್ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಅವರು ಉತ್ತರ ಪ್ರದೇಶದ ಇಟಾದಲ್ಲಿರುವ ಅಲಿಗಂಜ್‌ನವರು. ಅವರ ತಂದೆಯ ಹೆಸರು ಶಕೀರ್ ಅಲಿ. ಅವರಿಗೆ ಯಾವುದೇ ಕ್ರಿಮಿನಲ್ ದಾಖಲೆಗಳಿಲ್ಲ, ದಿನಗೂಲಿ ಕಾರ್ಮಿಕರಾಗಿರುವ ಅವರನ್ನು ಬಂಧಿಸಿದಾಗ ಸಂತನಂತೆ ವೇಷ ಧರಿಸಿರಲಿಲ್ಲ.” ಎಂದು ಅವರು ಹೇಳಿದ್ದಾರೆ. ಜೊತೆಗೆ, ಘಟನೆಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಅವರು ಉಲ್ಲೇಖಿಸಿದ್ದಾರೆ.

FACT CHECK, ಮಹಾ ಕುಂಭಮೇಳ, ಸಾಧುವಿನ ವೇಷ ಧರಿಸಿ,  ಬಂಧಿತ, ಮುಸ್ಲಿಂ ಯುವಕ, ಚಿತ್ರ AI ರಚಿತ, Maha Kumbh Mela, Muslim youth arrested for dressing up as a saint, image created by AI,

ಇದಲ್ಲದೆ, ಫೋಟೊವನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ವೈರಲ್ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ಫೋಟೋ AI-ರಚಿತವಾಗಿದೆ ಎಂದು ತೋರುತ್ತದೆ. ಇದನ್ನು ಪರಿಶೀಲಿಸಲು,  ಹೈವ್ ಮತ್ತು ವಾಸಿಟ್‌ಎಐನಂತಹ ಹಲವಾರು AI ಪತ್ತೆ ಸಾಧನಗಳನ್ನು ಬಳಸಿದಾಗ. ಹೈವ್‌ನ ಫಲಿತಾಂಶಗಳು ಶೇ 99.8% ವೈರಲ್ ಚಿತ್ರವು AI ನಿಂದ ರಚಿತವಾಗಿದೆ ಎಂದು ದೃಢಪಡಿಸಿದೆ.

FACT CHECK, ಮಹಾ ಕುಂಭಮೇಳ, ಸಾಧುವಿನ ವೇಷ ಧರಿಸಿ,  ಬಂಧಿತ, ಮುಸ್ಲಿಂ ಯುವಕ, ಚಿತ್ರ AI ರಚಿತ, Maha Kumbh Mela, Muslim youth arrested for dressing up as a saint, image created by AI,

ಒಟ್ಟಾರೆಯಾಗಿ ಹೇಳುವುದಾದರೆ, 2025 ರ ಮಹಾ ಕುಂಭಮೇಳದಲ್ಲಿ ಬಂಧಿಸಲ್ಪಟ್ಟ ಅಯೂಬ್ ಅಲಿ ಭಯೋತ್ಪಾದಕನಲ್ಲ ಮತ್ತು ಬಂಧನದ ಸಮಯದಲ್ಲಿ ಸಂತನ ವೇಷ ಧರಿಸಿರಲಿಲ್ಲ ಎಂದು ಉತ್ತರ ಪ್ರದೇಶ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

(This story was originally published by Factly, and republished by ನಾನುಗೌರಿ.ಕಾಂ as part of the Shakti Collective)

ಇದನ್ನೂಓದಿ:  ಎಲ್ಗರ್ ಪರಿಷತ್ ಪ್ರಕರಣ : ಆರು ವರ್ಷಗಳ ಬಳಿಕ ಜೈಲಿನಿಂದ ಹೊರಬಂದ ರೋನಾ ವಿಲ್ಸನ್, ಸುಧೀರ್ ಧಾವಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...