Homeಫ್ಯಾಕ್ಟ್‌ಚೆಕ್FACT CHECK | ಕುಂಭಮೇಳದಲ್ಲಿ ಸಾಧುವಿನ ವೇಷ ಧರಿಸಿ ಬಂಧಿತನಾದ ಮುಸ್ಲಿಂ ಯುವಕ ಎಂದು ಪ್ರತಿಪಾದಿಸುವ...

FACT CHECK | ಕುಂಭಮೇಳದಲ್ಲಿ ಸಾಧುವಿನ ವೇಷ ಧರಿಸಿ ಬಂಧಿತನಾದ ಮುಸ್ಲಿಂ ಯುವಕ ಎಂದು ಪ್ರತಿಪಾದಿಸುವ ಈ ಚಿತ್ರ AI ರಚಿತ!

- Advertisement -
- Advertisement -

ಸಾಧುವಿನ ವೇಷ ಧರಿಸಿದ್ದ ಆಯೂಬ್ ಖಾನ್ ಎಂಬ ಭಯೋತ್ಪಾದಕನನ್ನು ‘ಕುಂಭಮೇಳ – 2025’ ನಡೆಯುತ್ತಿರುವ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂಬ ಹೇಳಿಕೆಯಿರುವ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗುತ್ತಿದೆ. FACT CHECK Maha Kumbh Mela, Muslim youth arrested for dressing up as a saint, image created by AI,

ಈ ಚಿತ್ರದಲ್ಲಿ ಸಾಧುವಿನಂತೆ ವೇಷ ಧರಿಸಿದ ವ್ಯಕ್ತಿಯನ್ನು ಇಬ್ಬರು ಪೊಲೀಸರು ಬಂಧಿಸುತ್ತಿರುವ ಫೋಟೋ ಇದ್ದು, ಅದನ್ನು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ಗಳಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ. FACT CHECK

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಕೀವರ್ಡ್‌ಗಳನ್ನು ಬಳಸಿ ಸರ್ಚ್ ಮಾಡಿದಾಗ, ಅಯೂಬ್ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ ಎಂಬ ವರದಿಗಳು ಲಭ್ಯವಾಗಿವೆ. ಅವುಗಳನ್ನು ಇಲ್ಲಿ ನೋಡಬಹುದು.

FACT CHECK, ಮಹಾ ಕುಂಭಮೇಳ, ಸಾಧುವಿನ ವೇಷ ಧರಿಸಿ,  ಬಂಧಿತ, ಮುಸ್ಲಿಂ ಯುವಕ, ಚಿತ್ರ AI ರಚಿತ, Maha Kumbh Mela, Muslim youth arrested for dressing up as a saint, image created by AI,

ವರದಿಗಳ ಪ್ರಕರ, ಜನವರಿ 14, 2025 ರಂದು, ಬೆಳಗಿನ ಜಾವ 2 ಗಂಟೆ ಸುಮಾರಿಗೆ, ಮಹಾ ಕುಂಭಮೇಳದಲ್ಲಿ ಯತಿ ನರಸಿಂಹಾನಂದ ಗಿರಿ ಅವರ ಶಿಬಿರದ ಬಳಿ ಒಬ್ಬ ವ್ಯಕ್ತಿ ಅನುಮಾನಾಸ್ಪದವಾಗಿ ತಿರುಗಾಡುತ್ತಿರುವುದು ಕಂಡುಬಂದಿದೆ.

ಈ ವೇಳೆ ಯತಿ ನರಸಿಂಹಾನಂದರ ಕೆಲವು ಅನುಯಾಯಿಗಳು ಅವನನ್ನು ಹಿಡಿದು ಪ್ರಶ್ನಿಸಿದ್ದಾರೆ. ಆರಂಭದಲ್ಲಿ, ಅವನು ಯತಿ ನರಸಿಂಹಾನಂದರನ್ನು ಭೇಟಿಯಾಗಲು ಬಂದಿದ್ದೇನೆ ಎಂದು ಹೇಳಿಕೊಂಡು ತನ್ನನ್ನು ಆಯುಷ್ ಎಂದು ಪರಿಚಯಿಸಿಕೊಂಡಿದ್ದಾನೆ. ಆತನ ನಡವಳಿಕೆಯ ಬಗ್ಗೆ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸ್ ವಿಚಾರಣೆಯ ಸಮಯದಲ್ಲಿ, ಅವನ ನಿಜವಾದ ಹೆಸರು ಅಯೂಬ್ ಮತ್ತು ಅವನು ಮುಸ್ಲಿಂ ಎಂದು ತಿಳಿದುಬಂದಿದೆ.

ಹಿಂದೂಸ್ತಾನ್ ಟೈಮ್ಸ್‌ ಮತ್ತು ಇಂಡಿಯಾ ಟಿವಿ ಪ್ರಕಟಿಸಿದ ವರದಿಗಳ ಪ್ರಕಾರ, ಅಯೂಬ್ ಅಲಿ ಉತ್ತರ ಪ್ರದೇಶದ ಎಟಾದ ಅಲಿಗಂಜ್‌ನವನು. ಅವನ ತಂದೆಯ ಹೆಸರು ಶಕೀರ್ ಅಲಿ, ಮತ್ತು ಅವನಿಗೆ ಯಾವುದೇ ಕ್ರಿಮಿನಲ್ ದಾಖಲೆಗಳಿಲ್ಲ. ಮಹಾ ಕುಂಭಮೇಳದ ಅಖಾರ ಪೊಲೀಸ್ ಠಾಣೆಯ ಉಸ್ತುವಾರಿ ಭಾಸ್ಕರ್ ಮಿಶ್ರಾ, ಅಯೂಬ್ ಅಲಿ ಎಟಾದವನಾಗಿದ್ದು, ಅವರನ್ನು ಎಸ್‌ಒಟಿ ಮತ್ತು ಎಸ್‌ಟಿಎಫ್ ವಿಚಾರಣೆ ನಡೆಸಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಘಟನೆಯ ಕುರಿತು ಹೆಚ್ಚಿನ ವಿವರಗಳಿಗಾಗಿ, ಆಯುಬ್ ಅಲಿಯನ್ನು ವಶಕ್ಕೆ ಪಡೆದಿದ್ದ ಮಹಾ ಕುಂಭಮೇಳದ ಅಖಾರ ಪೊಲೀಸ್ ಠಾಣೆಯ ಉಸ್ತುವಾರಿ ಭಾಸ್ಕರ್ ಮಿಶ್ರಾ ಅವರನ್ನು ಫ್ಯಾಕ್ಟ್‌ಲಿ ತಂಡ ಸಂಪರ್ಕಿಸಿದ್ದು, ಅವರು ಕೆಳಗಿನಂತೆ ಮಾಹಿತಿ ನೀಡಿದ್ದಾರೆ.

“ಮಹಾ ಕುಂಭಮೇಳದಲ್ಲಿ ಬಂಧಿಸಲ್ಪಟ್ಟ ಅಯೂಬ್ ಅಲಿ ಭಯೋತ್ಪಾದಕನಲ್ಲ ಎಂದು ಎಸ್‌ಒಟಿ ಮತ್ತು ಎಟಿಎಸ್ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಅವರು ಉತ್ತರ ಪ್ರದೇಶದ ಇಟಾದಲ್ಲಿರುವ ಅಲಿಗಂಜ್‌ನವರು. ಅವರ ತಂದೆಯ ಹೆಸರು ಶಕೀರ್ ಅಲಿ. ಅವರಿಗೆ ಯಾವುದೇ ಕ್ರಿಮಿನಲ್ ದಾಖಲೆಗಳಿಲ್ಲ, ದಿನಗೂಲಿ ಕಾರ್ಮಿಕರಾಗಿರುವ ಅವರನ್ನು ಬಂಧಿಸಿದಾಗ ಸಂತನಂತೆ ವೇಷ ಧರಿಸಿರಲಿಲ್ಲ.” ಎಂದು ಅವರು ಹೇಳಿದ್ದಾರೆ. ಜೊತೆಗೆ, ಘಟನೆಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಅವರು ಉಲ್ಲೇಖಿಸಿದ್ದಾರೆ.

FACT CHECK, ಮಹಾ ಕುಂಭಮೇಳ, ಸಾಧುವಿನ ವೇಷ ಧರಿಸಿ,  ಬಂಧಿತ, ಮುಸ್ಲಿಂ ಯುವಕ, ಚಿತ್ರ AI ರಚಿತ, Maha Kumbh Mela, Muslim youth arrested for dressing up as a saint, image created by AI,

ಇದಲ್ಲದೆ, ಫೋಟೊವನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ವೈರಲ್ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ಫೋಟೋ AI-ರಚಿತವಾಗಿದೆ ಎಂದು ತೋರುತ್ತದೆ. ಇದನ್ನು ಪರಿಶೀಲಿಸಲು,  ಹೈವ್ ಮತ್ತು ವಾಸಿಟ್‌ಎಐನಂತಹ ಹಲವಾರು AI ಪತ್ತೆ ಸಾಧನಗಳನ್ನು ಬಳಸಿದಾಗ. ಹೈವ್‌ನ ಫಲಿತಾಂಶಗಳು ಶೇ 99.8% ವೈರಲ್ ಚಿತ್ರವು AI ನಿಂದ ರಚಿತವಾಗಿದೆ ಎಂದು ದೃಢಪಡಿಸಿದೆ.

FACT CHECK, ಮಹಾ ಕುಂಭಮೇಳ, ಸಾಧುವಿನ ವೇಷ ಧರಿಸಿ,  ಬಂಧಿತ, ಮುಸ್ಲಿಂ ಯುವಕ, ಚಿತ್ರ AI ರಚಿತ, Maha Kumbh Mela, Muslim youth arrested for dressing up as a saint, image created by AI,

ಒಟ್ಟಾರೆಯಾಗಿ ಹೇಳುವುದಾದರೆ, 2025 ರ ಮಹಾ ಕುಂಭಮೇಳದಲ್ಲಿ ಬಂಧಿಸಲ್ಪಟ್ಟ ಅಯೂಬ್ ಅಲಿ ಭಯೋತ್ಪಾದಕನಲ್ಲ ಮತ್ತು ಬಂಧನದ ಸಮಯದಲ್ಲಿ ಸಂತನ ವೇಷ ಧರಿಸಿರಲಿಲ್ಲ ಎಂದು ಉತ್ತರ ಪ್ರದೇಶ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

(This story was originally published by Factly, and republished by ನಾನುಗೌರಿ.ಕಾಂ as part of the Shakti Collective)

ಇದನ್ನೂಓದಿ:  ಎಲ್ಗರ್ ಪರಿಷತ್ ಪ್ರಕರಣ : ಆರು ವರ್ಷಗಳ ಬಳಿಕ ಜೈಲಿನಿಂದ ಹೊರಬಂದ ರೋನಾ ವಿಲ್ಸನ್, ಸುಧೀರ್ ಧಾವಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...