Homeಫ್ಯಾಕ್ಟ್‌ಚೆಕ್FACT CHECK | ಕುಂಭಮೇಳದಲ್ಲಿ ಸಾಧುವಿನ ವೇಷ ಧರಿಸಿ ಬಂಧಿತನಾದ ಮುಸ್ಲಿಂ ಯುವಕ ಎಂದು ಪ್ರತಿಪಾದಿಸುವ...

FACT CHECK | ಕುಂಭಮೇಳದಲ್ಲಿ ಸಾಧುವಿನ ವೇಷ ಧರಿಸಿ ಬಂಧಿತನಾದ ಮುಸ್ಲಿಂ ಯುವಕ ಎಂದು ಪ್ರತಿಪಾದಿಸುವ ಈ ಚಿತ್ರ AI ರಚಿತ!

- Advertisement -
- Advertisement -

ಸಾಧುವಿನ ವೇಷ ಧರಿಸಿದ್ದ ಆಯೂಬ್ ಖಾನ್ ಎಂಬ ಭಯೋತ್ಪಾದಕನನ್ನು ‘ಕುಂಭಮೇಳ – 2025’ ನಡೆಯುತ್ತಿರುವ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂಬ ಹೇಳಿಕೆಯಿರುವ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗುತ್ತಿದೆ. FACT CHECK Maha Kumbh Mela, Muslim youth arrested for dressing up as a saint, image created by AI,

ಈ ಚಿತ್ರದಲ್ಲಿ ಸಾಧುವಿನಂತೆ ವೇಷ ಧರಿಸಿದ ವ್ಯಕ್ತಿಯನ್ನು ಇಬ್ಬರು ಪೊಲೀಸರು ಬಂಧಿಸುತ್ತಿರುವ ಫೋಟೋ ಇದ್ದು, ಅದನ್ನು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ಗಳಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ. FACT CHECK

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಕೀವರ್ಡ್‌ಗಳನ್ನು ಬಳಸಿ ಸರ್ಚ್ ಮಾಡಿದಾಗ, ಅಯೂಬ್ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ ಎಂಬ ವರದಿಗಳು ಲಭ್ಯವಾಗಿವೆ. ಅವುಗಳನ್ನು ಇಲ್ಲಿ ನೋಡಬಹುದು.

FACT CHECK, ಮಹಾ ಕುಂಭಮೇಳ, ಸಾಧುವಿನ ವೇಷ ಧರಿಸಿ,  ಬಂಧಿತ, ಮುಸ್ಲಿಂ ಯುವಕ, ಚಿತ್ರ AI ರಚಿತ, Maha Kumbh Mela, Muslim youth arrested for dressing up as a saint, image created by AI,

ವರದಿಗಳ ಪ್ರಕರ, ಜನವರಿ 14, 2025 ರಂದು, ಬೆಳಗಿನ ಜಾವ 2 ಗಂಟೆ ಸುಮಾರಿಗೆ, ಮಹಾ ಕುಂಭಮೇಳದಲ್ಲಿ ಯತಿ ನರಸಿಂಹಾನಂದ ಗಿರಿ ಅವರ ಶಿಬಿರದ ಬಳಿ ಒಬ್ಬ ವ್ಯಕ್ತಿ ಅನುಮಾನಾಸ್ಪದವಾಗಿ ತಿರುಗಾಡುತ್ತಿರುವುದು ಕಂಡುಬಂದಿದೆ.

ಈ ವೇಳೆ ಯತಿ ನರಸಿಂಹಾನಂದರ ಕೆಲವು ಅನುಯಾಯಿಗಳು ಅವನನ್ನು ಹಿಡಿದು ಪ್ರಶ್ನಿಸಿದ್ದಾರೆ. ಆರಂಭದಲ್ಲಿ, ಅವನು ಯತಿ ನರಸಿಂಹಾನಂದರನ್ನು ಭೇಟಿಯಾಗಲು ಬಂದಿದ್ದೇನೆ ಎಂದು ಹೇಳಿಕೊಂಡು ತನ್ನನ್ನು ಆಯುಷ್ ಎಂದು ಪರಿಚಯಿಸಿಕೊಂಡಿದ್ದಾನೆ. ಆತನ ನಡವಳಿಕೆಯ ಬಗ್ಗೆ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸ್ ವಿಚಾರಣೆಯ ಸಮಯದಲ್ಲಿ, ಅವನ ನಿಜವಾದ ಹೆಸರು ಅಯೂಬ್ ಮತ್ತು ಅವನು ಮುಸ್ಲಿಂ ಎಂದು ತಿಳಿದುಬಂದಿದೆ.

ಹಿಂದೂಸ್ತಾನ್ ಟೈಮ್ಸ್‌ ಮತ್ತು ಇಂಡಿಯಾ ಟಿವಿ ಪ್ರಕಟಿಸಿದ ವರದಿಗಳ ಪ್ರಕಾರ, ಅಯೂಬ್ ಅಲಿ ಉತ್ತರ ಪ್ರದೇಶದ ಎಟಾದ ಅಲಿಗಂಜ್‌ನವನು. ಅವನ ತಂದೆಯ ಹೆಸರು ಶಕೀರ್ ಅಲಿ, ಮತ್ತು ಅವನಿಗೆ ಯಾವುದೇ ಕ್ರಿಮಿನಲ್ ದಾಖಲೆಗಳಿಲ್ಲ. ಮಹಾ ಕುಂಭಮೇಳದ ಅಖಾರ ಪೊಲೀಸ್ ಠಾಣೆಯ ಉಸ್ತುವಾರಿ ಭಾಸ್ಕರ್ ಮಿಶ್ರಾ, ಅಯೂಬ್ ಅಲಿ ಎಟಾದವನಾಗಿದ್ದು, ಅವರನ್ನು ಎಸ್‌ಒಟಿ ಮತ್ತು ಎಸ್‌ಟಿಎಫ್ ವಿಚಾರಣೆ ನಡೆಸಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಘಟನೆಯ ಕುರಿತು ಹೆಚ್ಚಿನ ವಿವರಗಳಿಗಾಗಿ, ಆಯುಬ್ ಅಲಿಯನ್ನು ವಶಕ್ಕೆ ಪಡೆದಿದ್ದ ಮಹಾ ಕುಂಭಮೇಳದ ಅಖಾರ ಪೊಲೀಸ್ ಠಾಣೆಯ ಉಸ್ತುವಾರಿ ಭಾಸ್ಕರ್ ಮಿಶ್ರಾ ಅವರನ್ನು ಫ್ಯಾಕ್ಟ್‌ಲಿ ತಂಡ ಸಂಪರ್ಕಿಸಿದ್ದು, ಅವರು ಕೆಳಗಿನಂತೆ ಮಾಹಿತಿ ನೀಡಿದ್ದಾರೆ.

“ಮಹಾ ಕುಂಭಮೇಳದಲ್ಲಿ ಬಂಧಿಸಲ್ಪಟ್ಟ ಅಯೂಬ್ ಅಲಿ ಭಯೋತ್ಪಾದಕನಲ್ಲ ಎಂದು ಎಸ್‌ಒಟಿ ಮತ್ತು ಎಟಿಎಸ್ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಅವರು ಉತ್ತರ ಪ್ರದೇಶದ ಇಟಾದಲ್ಲಿರುವ ಅಲಿಗಂಜ್‌ನವರು. ಅವರ ತಂದೆಯ ಹೆಸರು ಶಕೀರ್ ಅಲಿ. ಅವರಿಗೆ ಯಾವುದೇ ಕ್ರಿಮಿನಲ್ ದಾಖಲೆಗಳಿಲ್ಲ, ದಿನಗೂಲಿ ಕಾರ್ಮಿಕರಾಗಿರುವ ಅವರನ್ನು ಬಂಧಿಸಿದಾಗ ಸಂತನಂತೆ ವೇಷ ಧರಿಸಿರಲಿಲ್ಲ.” ಎಂದು ಅವರು ಹೇಳಿದ್ದಾರೆ. ಜೊತೆಗೆ, ಘಟನೆಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಅವರು ಉಲ್ಲೇಖಿಸಿದ್ದಾರೆ.

FACT CHECK, ಮಹಾ ಕುಂಭಮೇಳ, ಸಾಧುವಿನ ವೇಷ ಧರಿಸಿ,  ಬಂಧಿತ, ಮುಸ್ಲಿಂ ಯುವಕ, ಚಿತ್ರ AI ರಚಿತ, Maha Kumbh Mela, Muslim youth arrested for dressing up as a saint, image created by AI,

ಇದಲ್ಲದೆ, ಫೋಟೊವನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ವೈರಲ್ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ಫೋಟೋ AI-ರಚಿತವಾಗಿದೆ ಎಂದು ತೋರುತ್ತದೆ. ಇದನ್ನು ಪರಿಶೀಲಿಸಲು,  ಹೈವ್ ಮತ್ತು ವಾಸಿಟ್‌ಎಐನಂತಹ ಹಲವಾರು AI ಪತ್ತೆ ಸಾಧನಗಳನ್ನು ಬಳಸಿದಾಗ. ಹೈವ್‌ನ ಫಲಿತಾಂಶಗಳು ಶೇ 99.8% ವೈರಲ್ ಚಿತ್ರವು AI ನಿಂದ ರಚಿತವಾಗಿದೆ ಎಂದು ದೃಢಪಡಿಸಿದೆ.

FACT CHECK, ಮಹಾ ಕುಂಭಮೇಳ, ಸಾಧುವಿನ ವೇಷ ಧರಿಸಿ,  ಬಂಧಿತ, ಮುಸ್ಲಿಂ ಯುವಕ, ಚಿತ್ರ AI ರಚಿತ, Maha Kumbh Mela, Muslim youth arrested for dressing up as a saint, image created by AI,

ಒಟ್ಟಾರೆಯಾಗಿ ಹೇಳುವುದಾದರೆ, 2025 ರ ಮಹಾ ಕುಂಭಮೇಳದಲ್ಲಿ ಬಂಧಿಸಲ್ಪಟ್ಟ ಅಯೂಬ್ ಅಲಿ ಭಯೋತ್ಪಾದಕನಲ್ಲ ಮತ್ತು ಬಂಧನದ ಸಮಯದಲ್ಲಿ ಸಂತನ ವೇಷ ಧರಿಸಿರಲಿಲ್ಲ ಎಂದು ಉತ್ತರ ಪ್ರದೇಶ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

(This story was originally published by Factly, and republished by ನಾನುಗೌರಿ.ಕಾಂ as part of the Shakti Collective)

ಇದನ್ನೂಓದಿ:  ಎಲ್ಗರ್ ಪರಿಷತ್ ಪ್ರಕರಣ : ಆರು ವರ್ಷಗಳ ಬಳಿಕ ಜೈಲಿನಿಂದ ಹೊರಬಂದ ರೋನಾ ವಿಲ್ಸನ್, ಸುಧೀರ್ ಧಾವಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....