Homeಫ್ಯಾಕ್ಟ್‌ಚೆಕ್FACT CHECK | ಕುಂಭಮೇಳದಲ್ಲಿ ಸಾಧುವಿನ ವೇಷ ಧರಿಸಿ ಬಂಧಿತನಾದ ಮುಸ್ಲಿಂ ಯುವಕ ಎಂದು ಪ್ರತಿಪಾದಿಸುವ...

FACT CHECK | ಕುಂಭಮೇಳದಲ್ಲಿ ಸಾಧುವಿನ ವೇಷ ಧರಿಸಿ ಬಂಧಿತನಾದ ಮುಸ್ಲಿಂ ಯುವಕ ಎಂದು ಪ್ರತಿಪಾದಿಸುವ ಈ ಚಿತ್ರ AI ರಚಿತ!

- Advertisement -
- Advertisement -

ಸಾಧುವಿನ ವೇಷ ಧರಿಸಿದ್ದ ಆಯೂಬ್ ಖಾನ್ ಎಂಬ ಭಯೋತ್ಪಾದಕನನ್ನು ‘ಕುಂಭಮೇಳ – 2025’ ನಡೆಯುತ್ತಿರುವ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂಬ ಹೇಳಿಕೆಯಿರುವ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗುತ್ತಿದೆ. FACT CHECK Maha Kumbh Mela, Muslim youth arrested for dressing up as a saint, image created by AI,

ಈ ಚಿತ್ರದಲ್ಲಿ ಸಾಧುವಿನಂತೆ ವೇಷ ಧರಿಸಿದ ವ್ಯಕ್ತಿಯನ್ನು ಇಬ್ಬರು ಪೊಲೀಸರು ಬಂಧಿಸುತ್ತಿರುವ ಫೋಟೋ ಇದ್ದು, ಅದನ್ನು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ಗಳಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ. FACT CHECK

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಕೀವರ್ಡ್‌ಗಳನ್ನು ಬಳಸಿ ಸರ್ಚ್ ಮಾಡಿದಾಗ, ಅಯೂಬ್ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ ಎಂಬ ವರದಿಗಳು ಲಭ್ಯವಾಗಿವೆ. ಅವುಗಳನ್ನು ಇಲ್ಲಿ ನೋಡಬಹುದು.

FACT CHECK, ಮಹಾ ಕುಂಭಮೇಳ, ಸಾಧುವಿನ ವೇಷ ಧರಿಸಿ,  ಬಂಧಿತ, ಮುಸ್ಲಿಂ ಯುವಕ, ಚಿತ್ರ AI ರಚಿತ, Maha Kumbh Mela, Muslim youth arrested for dressing up as a saint, image created by AI,

ವರದಿಗಳ ಪ್ರಕರ, ಜನವರಿ 14, 2025 ರಂದು, ಬೆಳಗಿನ ಜಾವ 2 ಗಂಟೆ ಸುಮಾರಿಗೆ, ಮಹಾ ಕುಂಭಮೇಳದಲ್ಲಿ ಯತಿ ನರಸಿಂಹಾನಂದ ಗಿರಿ ಅವರ ಶಿಬಿರದ ಬಳಿ ಒಬ್ಬ ವ್ಯಕ್ತಿ ಅನುಮಾನಾಸ್ಪದವಾಗಿ ತಿರುಗಾಡುತ್ತಿರುವುದು ಕಂಡುಬಂದಿದೆ.

ಈ ವೇಳೆ ಯತಿ ನರಸಿಂಹಾನಂದರ ಕೆಲವು ಅನುಯಾಯಿಗಳು ಅವನನ್ನು ಹಿಡಿದು ಪ್ರಶ್ನಿಸಿದ್ದಾರೆ. ಆರಂಭದಲ್ಲಿ, ಅವನು ಯತಿ ನರಸಿಂಹಾನಂದರನ್ನು ಭೇಟಿಯಾಗಲು ಬಂದಿದ್ದೇನೆ ಎಂದು ಹೇಳಿಕೊಂಡು ತನ್ನನ್ನು ಆಯುಷ್ ಎಂದು ಪರಿಚಯಿಸಿಕೊಂಡಿದ್ದಾನೆ. ಆತನ ನಡವಳಿಕೆಯ ಬಗ್ಗೆ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸ್ ವಿಚಾರಣೆಯ ಸಮಯದಲ್ಲಿ, ಅವನ ನಿಜವಾದ ಹೆಸರು ಅಯೂಬ್ ಮತ್ತು ಅವನು ಮುಸ್ಲಿಂ ಎಂದು ತಿಳಿದುಬಂದಿದೆ.

ಹಿಂದೂಸ್ತಾನ್ ಟೈಮ್ಸ್‌ ಮತ್ತು ಇಂಡಿಯಾ ಟಿವಿ ಪ್ರಕಟಿಸಿದ ವರದಿಗಳ ಪ್ರಕಾರ, ಅಯೂಬ್ ಅಲಿ ಉತ್ತರ ಪ್ರದೇಶದ ಎಟಾದ ಅಲಿಗಂಜ್‌ನವನು. ಅವನ ತಂದೆಯ ಹೆಸರು ಶಕೀರ್ ಅಲಿ, ಮತ್ತು ಅವನಿಗೆ ಯಾವುದೇ ಕ್ರಿಮಿನಲ್ ದಾಖಲೆಗಳಿಲ್ಲ. ಮಹಾ ಕುಂಭಮೇಳದ ಅಖಾರ ಪೊಲೀಸ್ ಠಾಣೆಯ ಉಸ್ತುವಾರಿ ಭಾಸ್ಕರ್ ಮಿಶ್ರಾ, ಅಯೂಬ್ ಅಲಿ ಎಟಾದವನಾಗಿದ್ದು, ಅವರನ್ನು ಎಸ್‌ಒಟಿ ಮತ್ತು ಎಸ್‌ಟಿಎಫ್ ವಿಚಾರಣೆ ನಡೆಸಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಘಟನೆಯ ಕುರಿತು ಹೆಚ್ಚಿನ ವಿವರಗಳಿಗಾಗಿ, ಆಯುಬ್ ಅಲಿಯನ್ನು ವಶಕ್ಕೆ ಪಡೆದಿದ್ದ ಮಹಾ ಕುಂಭಮೇಳದ ಅಖಾರ ಪೊಲೀಸ್ ಠಾಣೆಯ ಉಸ್ತುವಾರಿ ಭಾಸ್ಕರ್ ಮಿಶ್ರಾ ಅವರನ್ನು ಫ್ಯಾಕ್ಟ್‌ಲಿ ತಂಡ ಸಂಪರ್ಕಿಸಿದ್ದು, ಅವರು ಕೆಳಗಿನಂತೆ ಮಾಹಿತಿ ನೀಡಿದ್ದಾರೆ.

“ಮಹಾ ಕುಂಭಮೇಳದಲ್ಲಿ ಬಂಧಿಸಲ್ಪಟ್ಟ ಅಯೂಬ್ ಅಲಿ ಭಯೋತ್ಪಾದಕನಲ್ಲ ಎಂದು ಎಸ್‌ಒಟಿ ಮತ್ತು ಎಟಿಎಸ್ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಅವರು ಉತ್ತರ ಪ್ರದೇಶದ ಇಟಾದಲ್ಲಿರುವ ಅಲಿಗಂಜ್‌ನವರು. ಅವರ ತಂದೆಯ ಹೆಸರು ಶಕೀರ್ ಅಲಿ. ಅವರಿಗೆ ಯಾವುದೇ ಕ್ರಿಮಿನಲ್ ದಾಖಲೆಗಳಿಲ್ಲ, ದಿನಗೂಲಿ ಕಾರ್ಮಿಕರಾಗಿರುವ ಅವರನ್ನು ಬಂಧಿಸಿದಾಗ ಸಂತನಂತೆ ವೇಷ ಧರಿಸಿರಲಿಲ್ಲ.” ಎಂದು ಅವರು ಹೇಳಿದ್ದಾರೆ. ಜೊತೆಗೆ, ಘಟನೆಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಅವರು ಉಲ್ಲೇಖಿಸಿದ್ದಾರೆ.

FACT CHECK, ಮಹಾ ಕುಂಭಮೇಳ, ಸಾಧುವಿನ ವೇಷ ಧರಿಸಿ,  ಬಂಧಿತ, ಮುಸ್ಲಿಂ ಯುವಕ, ಚಿತ್ರ AI ರಚಿತ, Maha Kumbh Mela, Muslim youth arrested for dressing up as a saint, image created by AI,

ಇದಲ್ಲದೆ, ಫೋಟೊವನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ವೈರಲ್ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ಫೋಟೋ AI-ರಚಿತವಾಗಿದೆ ಎಂದು ತೋರುತ್ತದೆ. ಇದನ್ನು ಪರಿಶೀಲಿಸಲು,  ಹೈವ್ ಮತ್ತು ವಾಸಿಟ್‌ಎಐನಂತಹ ಹಲವಾರು AI ಪತ್ತೆ ಸಾಧನಗಳನ್ನು ಬಳಸಿದಾಗ. ಹೈವ್‌ನ ಫಲಿತಾಂಶಗಳು ಶೇ 99.8% ವೈರಲ್ ಚಿತ್ರವು AI ನಿಂದ ರಚಿತವಾಗಿದೆ ಎಂದು ದೃಢಪಡಿಸಿದೆ.

FACT CHECK, ಮಹಾ ಕುಂಭಮೇಳ, ಸಾಧುವಿನ ವೇಷ ಧರಿಸಿ,  ಬಂಧಿತ, ಮುಸ್ಲಿಂ ಯುವಕ, ಚಿತ್ರ AI ರಚಿತ, Maha Kumbh Mela, Muslim youth arrested for dressing up as a saint, image created by AI,

ಒಟ್ಟಾರೆಯಾಗಿ ಹೇಳುವುದಾದರೆ, 2025 ರ ಮಹಾ ಕುಂಭಮೇಳದಲ್ಲಿ ಬಂಧಿಸಲ್ಪಟ್ಟ ಅಯೂಬ್ ಅಲಿ ಭಯೋತ್ಪಾದಕನಲ್ಲ ಮತ್ತು ಬಂಧನದ ಸಮಯದಲ್ಲಿ ಸಂತನ ವೇಷ ಧರಿಸಿರಲಿಲ್ಲ ಎಂದು ಉತ್ತರ ಪ್ರದೇಶ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

(This story was originally published by Factly, and republished by ನಾನುಗೌರಿ.ಕಾಂ as part of the Shakti Collective)

ಇದನ್ನೂಓದಿ:  ಎಲ್ಗರ್ ಪರಿಷತ್ ಪ್ರಕರಣ : ಆರು ವರ್ಷಗಳ ಬಳಿಕ ಜೈಲಿನಿಂದ ಹೊರಬಂದ ರೋನಾ ವಿಲ್ಸನ್, ಸುಧೀರ್ ಧಾವಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...