Homeಫ್ಯಾಕ್ಟ್‌ಚೆಕ್Fact Check: ಮಹುವಾ ಮೊಯಿತ್ರಾ 'ಎಗ್ಸ್' ಎಂದಿರುವುದನ್ನು 'ಸೆಕ್ಸ್' ಎಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

Fact Check: ಮಹುವಾ ಮೊಯಿತ್ರಾ ‘ಎಗ್ಸ್’ ಎಂದಿರುವುದನ್ನು ‘ಸೆಕ್ಸ್’ ಎಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಪಶ್ಚಿಮ ಬಂಗಾಳದ ಕೃಷ್ಣನಗರ ಲೋಕಸಭಾ ಕ್ಷೇತ್ರದ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಮಹುವಾ ಮೊಯಿತ್ರಾ ಅವರಿಗೆ ಸಂಬಂಧಿಸಿದ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಹುವಾ ಅವರು ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ವೇಳೆ, ಸ್ವತಂತ್ರ ಮಾಧ್ಯಮ ಸಂಸ್ಥೆ ‘ನ್ಯೂಸ್ ದಿ ಟ್ರುತ್'(ಎನ್‌ಟಿಟಿ) ನ ವರದಿಗಾರ ಅವರನ್ನು ಮಾತನಾಡಿಸಿದ್ದಾರೆ. ಈ ವೇಳೆ ಇಂಗ್ಲಿಷ್ ಭಾಷೆಯಲ್ಲಿ ‘What’s your source of Energy?'(ನಿಮ್ಮ ಶಕ್ತಿಯ ಮೂಲ ಯಾವುದು?) ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಮಹುವಾ ಮೊಯಿತ್ರಾ ನೀಡಿರುವ ಉತ್ತರ ವೈರಲ್ ಆಗಿದೆ.

ಅನೇಕ ಎಕ್ಸ್ ಬಳಕೆದಾರರು ‘What’s your source of Energy?’ ಎಂದು ಪತ್ರಕರ್ತ ಕೇಳಿದ್ದಕ್ಕೆ, ಮಹುವಾ ಅವರು ‘Sex'(ಲೈಂಗಿಕತೆ ಅಥವಾ ಲೈಂಗಿಕ ಕ್ರಿಯೆ) ಎಂದು ಉತ್ತರ ನೀಡಿರುವುದಾಗಿ ಬರೆದುಕೊಂಡಿದ್ದಾರೆ. ಎಕ್ಸ್‌ ಬಳಕೆದಾರರು ಹಂಚಿಕೊಂಡ ವಿಡಿಯೋ ನೋಡಿದರೆ, ಮಹುವಾ ಮೊಯಿತ್ರಾ ‘Sex’ಎಂದೇ ಹೇಳಿದಂತೆ ಕೇಳುತ್ತಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದಲ್ಲಿರುವಂತೆ ಮಹುವಾ ಮೊಯಿತ್ರಾ ಅವರು ತನ್ನ ಶಕ್ತಿಯಾ ಅಥವಾ ಉತ್ಸಾಹದ ಮೂಲ ‘ಸೆಕ್ಸ್’ ಎಂದು ಹೇಳಿದ್ದಾರಾ? ಎಂಬುವುದನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ವೈರಲ್ ವಿಡಿಯೋದಲ್ಲಿರುವ ಅಂಶ ಸತ್ಯವೇ? ಎಂದು ತಿಳಿದುಕೊಳ್ಳಲು ನಾವು ಮೂಲ ವಿಡಿಯೋ ಹುಡುಕಿದ್ದೇವೆ. ಇದಕ್ಕಾಗಿ ನಾವು ‘ನ್ಯೂಸ್ ದಿ ಟ್ರುತ್’ನ ಅಧಿಕೃತ ಯೂಟ್ಯೂಬ್ ಪೇಜ್ ನೋಡಿದ್ದೇವೆ.
ಅಲ್ಲಿ, “I am Unapologetic”: TMC Mahua Moitra in Conversation with Tamal Saha | Lok Sabha Election 2024″ ಎಂಬ ಶೀರ್ಷಿಕೆಯಲ್ಲಿ ಏಪ್ರಿಲ್ 13, 2024ರಂದು ಅಪ್ಲೋಡ್ ಮಾಡಲಾದ ವಿಡಿಯೋ ದೊರೆತಿದೆ.

ಯೂಟ್ಯೂಬ್ ಲಿಂಕ್ ಇಲ್ಲಿದೆ 

ಒಟ್ಟು 37 ನಿಮಿಷ 22 ಸೆಕೆಂಡ್‌ನ ವಿಡಿಯೋದಲ್ಲಿ ಎರಡು ನಿಮಿಷ 35 ಸೆಕೆಂಡ್‌ನಿಂದ ವೈರಲ್ ಕ್ಲಿಪ್‌ನಲ್ಲಿರುವ ಹೇಳಿಕೆಯಿದೆ. ವೈರಲ್ ಕ್ಲಿಪ್‌ ಅನ್ನು ಇಂಗ್ಲಿಷ್ ಫ್ಯಾಕ್ಟ್‌ ಚೆಕ್ಕಿಂಗ್ ವೆಬ್‌ಸೈಟ್‌ altnews.in ನಿಧಾನ ಮಾಡಿ (Slowdown)ಮಾಡಿ ಪರಿಶೀಲಿಸಿದೆ. ಅದರಲ್ಲಿ ಮಹುವಾ ಅವರು ‘Eggs,eggs'(ಮೊಟ್ಟೆ, ಮೊಟ್ಟೆ) ಎಂದು ಹೇಳುತ್ತಿರುವುದು ಸ್ಪಷ್ಟವಾಗಿ ಕೇಳಿಸುತ್ತಿದೆ.

ಹಾಗಾಗಿ, ನಿಮ್ಮ ಶಕ್ತಿಯ ಮೂಲವೇನು? ಎಂದು ಕೇಳಿದ್ದಕ್ಕೆ ಮಹುವಾ ಅವರು ‘ಎಗ್ಸ್‌ ‘(ಮೊಟ್ಟೆ) ಎಂದು ಹೇಳಿದ್ದಾರೆಯೇ ಹೊರತು, ಸೆಕ್ಸ್‌ (ಲೈಂಗಿಕ ಕ್ರಿಯೆ) ಎಂದು ಹೇಳಿಲ್ಲಎಂಬುವುದನ್ನು ಖಚಿತಪಡಿಸಬಹುದು.

ಇನ್ನು ಇದೇ ವಿಷಯಕ್ಕೆ ಸಂಬಂಧಪಟ್ಟಂತೆ, ಮಹುವಾ ಅವರನ್ನು ಮಾತನಾಡಿಸಿದ್ದ ಪತ್ರಕರ್ತ ತಮಾಲ್ ಶಾ ಅವರು ಏಪ್ರಿಲ್ 18, 2024ರಂದು ಎಕ್ಸ್‌ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ” ನಾನು ಮಹುವಾ ಮೊಯಿತ್ರಾ ಅವರಿಗೆ ನಿಮ್ಮ ಶಕ್ತಿಯ ಮೂಲವೇನೆಂದು ಕೇಳಿದೆ. ಅದಕ್ಕೆ ಅವರು ಮೊಟ್ಟೆಗಳು ಎಂದು ಹೇಳಿದ್ದಾರೆ. ಭಕ್ತ ಮಂಡಳಿಯವರು ಅದನ್ನು ‘ಸೆಕ್ಸ್’ ಎಂದು ತಿರುಚಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

ಆದ್ದರಿಂದ, ನಿಮ್ಮ ಶಕ್ತಿಯ ಮೂಲ ಯಾವುದು? ಎಂದು ಕೇಳಿದ್ದಕ್ಕೆ ಮಹುವಾ ಮೊಯಿತ್ರಾ ಅವರು ಎಗ್ಸ್ ( ಮೊಟ್ಟೆ) ಎಂದಿದ್ದಾರೆಯೇ ಹೊರತು, ಸೆಕ್ಸ್ (ಲೈಂಗಿಕತೆ) ಎಂದಿಲ್ಲ ಎಂಬುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ಇದನ್ನೂ ಓದಿ : Fact Check : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹಣೆ ಮೇಲಿನ ಕುಂಕುಮ ಅಳಿಸಿದ್ದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...