Homeಫ್ಯಾಕ್ಟ್‌ಚೆಕ್FACT CHECK : ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಡೆ...

FACT CHECK : ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಡೆ ನಿಲ್ಲಿಸಿ ಅವಮಾನಿಸಲಾಗಿದೆಯಾ?

- Advertisement -
- Advertisement -

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರಿಂದ ತೆರವಾಗಿರುವ ಕೇರಳದ ವಯನಾಡ್ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಐಸಿಸಿ ಪ್ರಧಾನ ಕಾರ್ಯರ್ಶಿ ಪ್ರಿಯಾಂಕಾ ಗಾಂಧಿ ಬುಧವಾರ (ಅ.23) ನಾಮಪತ್ರ ಸಲ್ಲಿಸಿದ್ದಾರೆ.

ವಯನಾಡ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಡೆ ನಿಲ್ಲಿಸಿ ಅವಮಾನಿಸಲಾಗಿದೆ ಎಂದು ಪ್ರತಿಪಾದಿಸಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಮಲ್ಲಿಕಾರ್ಜುನ ಖರ್ಗೆ ಅವರು ಹೊರಗಡೆ ನಿಂತು ಬಾಗಿಲಿನ ಸಂದಿಯಲ್ಲಿ ನೋಡುತ್ತಿರುವ ಸಣ್ಣ ವಿಡಿಯೋ ಕ್ಲಿಪ್ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಕರ್ನಾಟಕ ಬಿಜೆಪಿ “ಯಾವುದೇ ನಾಯಕನಿರಲಿ, ಎಷ್ಟೇ ಪ್ರಮುಖರಾಗಿರಲಿ, ಕಾಂಗ್ರೆಸ್‌ನ ನಕಲಿ ಗಾಂಧಿ ಕುಟುಂಬದ ಬಳಿ ತೆರಳಲು ಸಾಧ್ಯವಿಲ್ಲ. ವಯನಾಡ್‌ನಲ್ಲಿ ಪ್ರಿಯಾಂಕಾ ಗಾಂಧಿಯ ನಾಮಪತ್ರ ಸಲ್ಲಿಕೆ ವೇಳೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಡೆಗಣಿಸಿರುವುದು ನಿಜಕ್ಕೂ ಆಘಾತಕಾರಿ ವಿಷಯ. ಮಕ್ಕಳ ಬುದ್ದಿಯ ರಾಹುಲ್ ಗಾಂಧಿಯವರೇ, ನಿಮ್ಮ ಕುಟುಂಬದ ಹಿತಾಸಕ್ತಿ ಕಾಪಾಡಲು ದಲಿತ ನಾಯಕರನ್ನು ಕೀಳಾಗಿ ಕಾಣಬೇಡಿ!” ಎಂದು ಬರೆದುಕೊಂಡಿದೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು ಕೂಡ ಎಕ್ಸ್‌ನಲ್ಲಿ ವಿಡಿಯೋ ಕ್ಲಿಪ್ ಹಂಚಿಕೊಂಡು ” ಸೋ ಕಾಲ್ಡ್ ಹೋಲಿ ಟ್ರಿನಿಟಿ, ಹಿರಿಯ ಸಂಸದೀಯ ಪಟು ಮತ್ತು ದಲಿತ ನಾಯಕರಾದ ಮಲ್ಲಿಕಾರ್ಜು ಖರ್ಗೆ ಮೇಲೆ ತೋರಿದ ಅಗೌರವವನ್ನು ಕಣ್ಣಾರೆ ನೋಡುವುದು ತುಂಬಾ ಬೇಸರ ತಂದಿದೆ. ಅದು ಎಐಸಿಸಿ ಅಥವಾ ಪಿಸಿಸಿ ಅಧ್ಯಕ್ಷರಾಗಿರಲಿ, ಅವರನ್ನು ಕೇವಲ ರಬ್ಬರ್ ಸ್ಟ್ಯಾಂಪ್‌ಗಳಂತೆ ಪರಿಗಣಿಸಿ ಅವಮಾನಿಸುವುದರಲ್ಲಿ ಈ ಕುಟುಂಬ ಹೆಮ್ಮೆಪಡುತ್ತದೆಯೇ?” ಎಂದು ಬರೆದುಕೊಂಡಿದ್ದಾರೆ.

ಹಾಗಾದರೆ, ಪ್ರಿಯಾಂಕಾ ಗಾಂಧಿಯವರ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜು ಖರ್ಗೆ ಅವರನ್ನು ಬಾಗಿಲ ಹೊರಗೆ ನಿಲ್ಲಿಸಿದ್ದು ನಿಜಾನಾ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಈ ವಿಷಯದ ಬಗ್ಗೆ ಖಚಿತಪಡಿಸಿಕೊಳ್ಳಲು ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿರುವ ಸಂದರ್ಭದ ಹಲವು ವಿಡಿಯೋಗಳನ್ನು ಮಾಧ್ಯಮಗಳ ಯೂಟ್ಯೂಬ್‌ ಚಾನೆಲ್‌ಗಳಲ್ಲಿ ನಾವು ಪರಿಶೀಲಿಸಿದ್ದೇವೆ.

ಬಹುತೇಕ ವಿಡಿಯೋಗಳಲ್ಲಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ, ಆರಂಭದಲ್ಲಿ ಅವರ ಹಿಂದೆ, ಬಳಿಕ ಪಕ್ಕದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಕುಳಿತಿರುವುದು ಕಂಡು ಬಂದಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಕೂಡ ಜೊತೆಗಿರುವುದನ್ನು ನೋಡಬಹುದು.

ಹಾಗಾದರೆ, ಮಲ್ಲಿಕಾರ್ಜುನ ಖರ್ಗೆಯವರು ಹೊರಗಡೆ ನಿಂತು ಬಾಗಿಲ ಸಂದಿಯಲ್ಲಿ ಇಣುಕಿದ್ದು ಯಾವಾಗ? ಎಂಬುವುದರ ಬಗ್ಗೆ ನಾವು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಇಂಡಿಯಾ ಟುಡೇ ವೆಬ್‌ಸೈಟ್‌ ಸ್ಥಳದಲ್ಲಿದ್ದ ತಮ್ಮ ವರದಿಗಾರ ನೀಡಿದ ಮಾಹಿತಿ ಆಧರಿಸಿ ಮಾಡಿರುವ ವಿಸ್ಕೃತ ವರದಿ ಲಭ್ಯವಾಗಿದೆ.

ವರದಿಯ ಪ್ರಕಾರ, “ರ್‍ಯಾಲಿಯ ಬಳಿಕ ನಾಮಪತ್ರ ಸಲ್ಲಿಸಲು ಪ್ರಿಯಾಂಕಾ ಗಾಂಧಿಯವರು ವಯನಾಡ್ ಜಿಲ್ಲಾ ಕೇಂದ್ರ ಕಲ್ಪೆಟ್ಟಾದಲ್ಲಿರುವ ಜಿಲ್ಲಾಧಿಕಾರಿ (ಕಲೆಕ್ಟರ್‌) ಕಚೇರಿಗೆ ಮಧ್ಯಾಹ್ನ 1 ಗಂಟೆಗೆ ಆಗಮಿಸಬೇಕಿತ್ತು. ಆದರೆ, ಈ ಹೊತ್ತಿಗೆ ರ್‍ಯಾಲಿ ಕೊನೆಗೊಂಡಿರಲಿಲ್ಲ.

ಆದರೆ, ಸಮಯವಾದ್ದರಿಂದ ಮಲ್ಲಿಕಾರ್ಜುನ ಖರ್ಗೆ ಮಾತನಾಡುತ್ತಿದ್ದಾಗಲೇ ಮಧ್ಯದಲ್ಲಿ ಪ್ರಿಯಾಂಕಾ ಗಾಂಧಿ ರ್‍ಯಾಲಿಯಿಂದ ಎದ್ದು ಬಂದಿದ್ದರು. ಅವರು ಮಧ್ಯಾಹ್ನ 1.24ಕ್ಕೆ ಗಂಡ ರಾಬರ್ಟ್ ವಾದ್ರಾ ಮತ್ತು ಮಗನ ಜೊತೆ ಜಿಲ್ಲಾಧಿಕಾರಿ ಕಚೇರಿಗೆ ತಲುಪಿದ್ದರು.

ಮಾನ್ಯತೆ ಪಡೆದ ರಾಷ್ಟ್ರೀಯ ಅಥವಾ ರಾಜ್ಯ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಅದನ್ನು ಅನುಮೋದಿಸಲು ಒಬ್ಬರು ಸ್ಥಳದಲ್ಲಿರಬೇಕು. ನಾಯಕರೆಲ್ಲ ರ್‍ಯಾಲಿಯಲ್ಲಿ ಇದ್ದಿದ್ದರಿಂದ ಪ್ರಿಯಾಂಕಾ ಗಾಂಧಿ ಗಂಡ ಮತ್ತು ಮಗನನ್ನು ಕರೆದುಕೊಂಡು ಬಂದಿದ್ದರು.

ಜಿಲ್ಲಾಧಿಕಾರಿ ಕಚೇರಿಗೆ ತಲುಪಿದ ಬಳಿಕ, ಮಲ್ಲಿಕಾರ್ಜುನ ಖರ್ಗೆ, ತಾಯಿ ಸೋನಿಯಾ ಗಾಂಧಿ ಮತ್ತು ಸಹೋದರ ರಾಹುಲ್ ಗಾಂಧಿ ರ್‍ಯಾಲಿಯಲ್ಲಿ ಇದ್ದು, ಶೀಘ್ರದಲ್ಲೇ ಬರಲಿದ್ದಾರೆ. ಅವರು ಬಂದ ಬಳಿಕ ಇವರು (ಗಂಡ, ಮಗ) ಹೊರಗಡೆ ಹೋಗಲಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಚುನಾವಣಾಧಿಕಾರಿಗೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಚುನಾವಣಾಧಿಕಾರಿ, ಅವರು (ಸೋನಿಯಾ, ರಾಹುಲ್, ಖರ್ಗೆ) ಎರಡನೇ ಸೆಟ್ ನಾಮಪತ್ರ ಸಲ್ಲಿಕೆ ವೇಳೆ ಬರಬಹುದು ಎಂದಿದ್ದಾರೆ. ಹಾಗಾಗಿ, ಪ್ರಿಯಾಂಕಾ ಗಾಂಧಿ 1.25ಕ್ಕೆ ಮೊದಲ ಸೆಟ್ ನಾಮಪತ್ರ ಸಲ್ಲಿಸಿದ್ದಾರೆ.

ಇದಾದ ಕೆಲವೇ ನಿಮಿಷಗಳಲ್ಲಿ ರ್‍ಯಾಲಿ ಮುಗಿಸಿ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ ವೇಣುಗೋಪಾಲ್ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದಾರೆ. ಆದರೆ, ಈ ವೇಳೆ ಪ್ರಿಯಾಂಕಾ ಗಾಂಧಿ ಸಲ್ಲಿಸಿದ್ದ ಮೊದಲ ಸೆಟ್ ನಾಮಪತ್ರವನ್ನು ಚುನಾವಣಾಧಿಕಾರಿ ಪರಿಶೀಲಿಸುತ್ತಿದ್ದರಿಂದ ನಿಯಮದಂತೆ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಅವರನ್ನು ಒಳಗೆ ಬಿಟ್ಟಿರಲಿಲ್ಲ.

ಇಲ್ಲಿ ಗಮನಾರ್ಹ ಅಂಶವೆಂದರೆ, ಕೇವಲ ಮಲ್ಲಿಕಾರ್ಜುನ ಖರ್ಗೆ ಮಾತ್ರವಲ್ಲ, ಸೋನಿಯಾ ಗಾಂಧಿ, ಕೆ.ಸಿ ವೇಣುಗೋಪಾಲ್ ಅವರನ್ನೂ ಒಳಗೆ ಬಿಟ್ಟಿರಲಿಲ್ಲ.

ಚುನಾವಣಾಧಿಕಾರಿ ಮೊದಲ ಸೆಟ್ ನಾಮಪತ್ರ ಪರಿಶೀಲನೆ ನಡೆಸಿದ ಬಳಿಕ, ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಮತ್ತು ಮಗ ಹೊರಗೆ ಹೋದರು. ಎರಡನೇ ಸೆಟ್ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ವೇಣುಗೋಪಾಲ್ ಒಳಗೆ ಬಂದರು. ನಂತರ ರಾಹುಲ್ ಗಾಂಧಿ ಕೂಡ ಒಳಗೆ ಬಂದಿದ್ದಾರೆ. ಅವರೂ ಹೊರಗಡೆ ಕಾಯುತ್ತಿದ್ದರು ಎಂದು ವರದಿಯಾಗಿದೆ.

ಈ ಕುರಿತ ವಿಡಿಯೋವನ್ನು ಕೆಳಗೆ ನೋಡಬಹುದು

ಒಟ್ಟಿನಲ್ಲಿ, ತಡವಾಗಿ ಬಂದ ಕಾರಣ ಪ್ರಿಯಾಂಕಾ ಗಾಂಧಿ ಸಲ್ಲಿಸಿದ್ದ ಮೊದಲ ಸೆಟ್ ನಾಮಪತ್ರ ಪರಿಶೀಲನೆ ವೇಳೆ ನಿಯಮದ ಪ್ರಕಾರ, ಸೋನಿಯಾ ಗಾಂಧಿ, ಮಲ್ಲಿಕಾರ್ಜು ಖರ್ಗೆ, ರಾಹುಲ್ ಗಾಂಧಿ ಮತ್ತು ಕೆ.ಸಿ ವೇಣುಗೋಪಾಲ್ ಹೊರಗಡೆ ನಿಂತಿದ್ದರು. ಬಳಿಕ ಅವರೆಲ್ಲರೂ ಒಳಗಡೆ ಬಂದಿದ್ದಾರೆ. ಆದರೆ, ಬಿಜೆಪಿ ಮತ್ತು ಅದರ ನಾಯಕರು ಖರ್ಗೆ ಅವರು ಹೊರಗಡೆ ನಿಂತಿದ್ದ ಸಣ್ಣ ಕ್ಲಿಪ್ ಅನ್ನು ಮಾತ್ರ ಹಂಚಿಕೊಂಡು ಖರ್ಗೆ ಅವರನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...