Homeಫ್ಯಾಕ್ಟ್‌ಚೆಕ್FACT CHECK : ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಡೆ...

FACT CHECK : ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಡೆ ನಿಲ್ಲಿಸಿ ಅವಮಾನಿಸಲಾಗಿದೆಯಾ?

- Advertisement -
- Advertisement -

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರಿಂದ ತೆರವಾಗಿರುವ ಕೇರಳದ ವಯನಾಡ್ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಐಸಿಸಿ ಪ್ರಧಾನ ಕಾರ್ಯರ್ಶಿ ಪ್ರಿಯಾಂಕಾ ಗಾಂಧಿ ಬುಧವಾರ (ಅ.23) ನಾಮಪತ್ರ ಸಲ್ಲಿಸಿದ್ದಾರೆ.

ವಯನಾಡ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಡೆ ನಿಲ್ಲಿಸಿ ಅವಮಾನಿಸಲಾಗಿದೆ ಎಂದು ಪ್ರತಿಪಾದಿಸಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಮಲ್ಲಿಕಾರ್ಜುನ ಖರ್ಗೆ ಅವರು ಹೊರಗಡೆ ನಿಂತು ಬಾಗಿಲಿನ ಸಂದಿಯಲ್ಲಿ ನೋಡುತ್ತಿರುವ ಸಣ್ಣ ವಿಡಿಯೋ ಕ್ಲಿಪ್ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಕರ್ನಾಟಕ ಬಿಜೆಪಿ “ಯಾವುದೇ ನಾಯಕನಿರಲಿ, ಎಷ್ಟೇ ಪ್ರಮುಖರಾಗಿರಲಿ, ಕಾಂಗ್ರೆಸ್‌ನ ನಕಲಿ ಗಾಂಧಿ ಕುಟುಂಬದ ಬಳಿ ತೆರಳಲು ಸಾಧ್ಯವಿಲ್ಲ. ವಯನಾಡ್‌ನಲ್ಲಿ ಪ್ರಿಯಾಂಕಾ ಗಾಂಧಿಯ ನಾಮಪತ್ರ ಸಲ್ಲಿಕೆ ವೇಳೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಡೆಗಣಿಸಿರುವುದು ನಿಜಕ್ಕೂ ಆಘಾತಕಾರಿ ವಿಷಯ. ಮಕ್ಕಳ ಬುದ್ದಿಯ ರಾಹುಲ್ ಗಾಂಧಿಯವರೇ, ನಿಮ್ಮ ಕುಟುಂಬದ ಹಿತಾಸಕ್ತಿ ಕಾಪಾಡಲು ದಲಿತ ನಾಯಕರನ್ನು ಕೀಳಾಗಿ ಕಾಣಬೇಡಿ!” ಎಂದು ಬರೆದುಕೊಂಡಿದೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು ಕೂಡ ಎಕ್ಸ್‌ನಲ್ಲಿ ವಿಡಿಯೋ ಕ್ಲಿಪ್ ಹಂಚಿಕೊಂಡು ” ಸೋ ಕಾಲ್ಡ್ ಹೋಲಿ ಟ್ರಿನಿಟಿ, ಹಿರಿಯ ಸಂಸದೀಯ ಪಟು ಮತ್ತು ದಲಿತ ನಾಯಕರಾದ ಮಲ್ಲಿಕಾರ್ಜು ಖರ್ಗೆ ಮೇಲೆ ತೋರಿದ ಅಗೌರವವನ್ನು ಕಣ್ಣಾರೆ ನೋಡುವುದು ತುಂಬಾ ಬೇಸರ ತಂದಿದೆ. ಅದು ಎಐಸಿಸಿ ಅಥವಾ ಪಿಸಿಸಿ ಅಧ್ಯಕ್ಷರಾಗಿರಲಿ, ಅವರನ್ನು ಕೇವಲ ರಬ್ಬರ್ ಸ್ಟ್ಯಾಂಪ್‌ಗಳಂತೆ ಪರಿಗಣಿಸಿ ಅವಮಾನಿಸುವುದರಲ್ಲಿ ಈ ಕುಟುಂಬ ಹೆಮ್ಮೆಪಡುತ್ತದೆಯೇ?” ಎಂದು ಬರೆದುಕೊಂಡಿದ್ದಾರೆ.

ಹಾಗಾದರೆ, ಪ್ರಿಯಾಂಕಾ ಗಾಂಧಿಯವರ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜು ಖರ್ಗೆ ಅವರನ್ನು ಬಾಗಿಲ ಹೊರಗೆ ನಿಲ್ಲಿಸಿದ್ದು ನಿಜಾನಾ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಈ ವಿಷಯದ ಬಗ್ಗೆ ಖಚಿತಪಡಿಸಿಕೊಳ್ಳಲು ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿರುವ ಸಂದರ್ಭದ ಹಲವು ವಿಡಿಯೋಗಳನ್ನು ಮಾಧ್ಯಮಗಳ ಯೂಟ್ಯೂಬ್‌ ಚಾನೆಲ್‌ಗಳಲ್ಲಿ ನಾವು ಪರಿಶೀಲಿಸಿದ್ದೇವೆ.

ಬಹುತೇಕ ವಿಡಿಯೋಗಳಲ್ಲಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ, ಆರಂಭದಲ್ಲಿ ಅವರ ಹಿಂದೆ, ಬಳಿಕ ಪಕ್ಕದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಕುಳಿತಿರುವುದು ಕಂಡು ಬಂದಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಕೂಡ ಜೊತೆಗಿರುವುದನ್ನು ನೋಡಬಹುದು.

ಹಾಗಾದರೆ, ಮಲ್ಲಿಕಾರ್ಜುನ ಖರ್ಗೆಯವರು ಹೊರಗಡೆ ನಿಂತು ಬಾಗಿಲ ಸಂದಿಯಲ್ಲಿ ಇಣುಕಿದ್ದು ಯಾವಾಗ? ಎಂಬುವುದರ ಬಗ್ಗೆ ನಾವು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಇಂಡಿಯಾ ಟುಡೇ ವೆಬ್‌ಸೈಟ್‌ ಸ್ಥಳದಲ್ಲಿದ್ದ ತಮ್ಮ ವರದಿಗಾರ ನೀಡಿದ ಮಾಹಿತಿ ಆಧರಿಸಿ ಮಾಡಿರುವ ವಿಸ್ಕೃತ ವರದಿ ಲಭ್ಯವಾಗಿದೆ.

ವರದಿಯ ಪ್ರಕಾರ, “ರ್‍ಯಾಲಿಯ ಬಳಿಕ ನಾಮಪತ್ರ ಸಲ್ಲಿಸಲು ಪ್ರಿಯಾಂಕಾ ಗಾಂಧಿಯವರು ವಯನಾಡ್ ಜಿಲ್ಲಾ ಕೇಂದ್ರ ಕಲ್ಪೆಟ್ಟಾದಲ್ಲಿರುವ ಜಿಲ್ಲಾಧಿಕಾರಿ (ಕಲೆಕ್ಟರ್‌) ಕಚೇರಿಗೆ ಮಧ್ಯಾಹ್ನ 1 ಗಂಟೆಗೆ ಆಗಮಿಸಬೇಕಿತ್ತು. ಆದರೆ, ಈ ಹೊತ್ತಿಗೆ ರ್‍ಯಾಲಿ ಕೊನೆಗೊಂಡಿರಲಿಲ್ಲ.

ಆದರೆ, ಸಮಯವಾದ್ದರಿಂದ ಮಲ್ಲಿಕಾರ್ಜುನ ಖರ್ಗೆ ಮಾತನಾಡುತ್ತಿದ್ದಾಗಲೇ ಮಧ್ಯದಲ್ಲಿ ಪ್ರಿಯಾಂಕಾ ಗಾಂಧಿ ರ್‍ಯಾಲಿಯಿಂದ ಎದ್ದು ಬಂದಿದ್ದರು. ಅವರು ಮಧ್ಯಾಹ್ನ 1.24ಕ್ಕೆ ಗಂಡ ರಾಬರ್ಟ್ ವಾದ್ರಾ ಮತ್ತು ಮಗನ ಜೊತೆ ಜಿಲ್ಲಾಧಿಕಾರಿ ಕಚೇರಿಗೆ ತಲುಪಿದ್ದರು.

ಮಾನ್ಯತೆ ಪಡೆದ ರಾಷ್ಟ್ರೀಯ ಅಥವಾ ರಾಜ್ಯ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಅದನ್ನು ಅನುಮೋದಿಸಲು ಒಬ್ಬರು ಸ್ಥಳದಲ್ಲಿರಬೇಕು. ನಾಯಕರೆಲ್ಲ ರ್‍ಯಾಲಿಯಲ್ಲಿ ಇದ್ದಿದ್ದರಿಂದ ಪ್ರಿಯಾಂಕಾ ಗಾಂಧಿ ಗಂಡ ಮತ್ತು ಮಗನನ್ನು ಕರೆದುಕೊಂಡು ಬಂದಿದ್ದರು.

ಜಿಲ್ಲಾಧಿಕಾರಿ ಕಚೇರಿಗೆ ತಲುಪಿದ ಬಳಿಕ, ಮಲ್ಲಿಕಾರ್ಜುನ ಖರ್ಗೆ, ತಾಯಿ ಸೋನಿಯಾ ಗಾಂಧಿ ಮತ್ತು ಸಹೋದರ ರಾಹುಲ್ ಗಾಂಧಿ ರ್‍ಯಾಲಿಯಲ್ಲಿ ಇದ್ದು, ಶೀಘ್ರದಲ್ಲೇ ಬರಲಿದ್ದಾರೆ. ಅವರು ಬಂದ ಬಳಿಕ ಇವರು (ಗಂಡ, ಮಗ) ಹೊರಗಡೆ ಹೋಗಲಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಚುನಾವಣಾಧಿಕಾರಿಗೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಚುನಾವಣಾಧಿಕಾರಿ, ಅವರು (ಸೋನಿಯಾ, ರಾಹುಲ್, ಖರ್ಗೆ) ಎರಡನೇ ಸೆಟ್ ನಾಮಪತ್ರ ಸಲ್ಲಿಕೆ ವೇಳೆ ಬರಬಹುದು ಎಂದಿದ್ದಾರೆ. ಹಾಗಾಗಿ, ಪ್ರಿಯಾಂಕಾ ಗಾಂಧಿ 1.25ಕ್ಕೆ ಮೊದಲ ಸೆಟ್ ನಾಮಪತ್ರ ಸಲ್ಲಿಸಿದ್ದಾರೆ.

ಇದಾದ ಕೆಲವೇ ನಿಮಿಷಗಳಲ್ಲಿ ರ್‍ಯಾಲಿ ಮುಗಿಸಿ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ ವೇಣುಗೋಪಾಲ್ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದಾರೆ. ಆದರೆ, ಈ ವೇಳೆ ಪ್ರಿಯಾಂಕಾ ಗಾಂಧಿ ಸಲ್ಲಿಸಿದ್ದ ಮೊದಲ ಸೆಟ್ ನಾಮಪತ್ರವನ್ನು ಚುನಾವಣಾಧಿಕಾರಿ ಪರಿಶೀಲಿಸುತ್ತಿದ್ದರಿಂದ ನಿಯಮದಂತೆ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಅವರನ್ನು ಒಳಗೆ ಬಿಟ್ಟಿರಲಿಲ್ಲ.

ಇಲ್ಲಿ ಗಮನಾರ್ಹ ಅಂಶವೆಂದರೆ, ಕೇವಲ ಮಲ್ಲಿಕಾರ್ಜುನ ಖರ್ಗೆ ಮಾತ್ರವಲ್ಲ, ಸೋನಿಯಾ ಗಾಂಧಿ, ಕೆ.ಸಿ ವೇಣುಗೋಪಾಲ್ ಅವರನ್ನೂ ಒಳಗೆ ಬಿಟ್ಟಿರಲಿಲ್ಲ.

ಚುನಾವಣಾಧಿಕಾರಿ ಮೊದಲ ಸೆಟ್ ನಾಮಪತ್ರ ಪರಿಶೀಲನೆ ನಡೆಸಿದ ಬಳಿಕ, ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಮತ್ತು ಮಗ ಹೊರಗೆ ಹೋದರು. ಎರಡನೇ ಸೆಟ್ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ವೇಣುಗೋಪಾಲ್ ಒಳಗೆ ಬಂದರು. ನಂತರ ರಾಹುಲ್ ಗಾಂಧಿ ಕೂಡ ಒಳಗೆ ಬಂದಿದ್ದಾರೆ. ಅವರೂ ಹೊರಗಡೆ ಕಾಯುತ್ತಿದ್ದರು ಎಂದು ವರದಿಯಾಗಿದೆ.

ಈ ಕುರಿತ ವಿಡಿಯೋವನ್ನು ಕೆಳಗೆ ನೋಡಬಹುದು

ಒಟ್ಟಿನಲ್ಲಿ, ತಡವಾಗಿ ಬಂದ ಕಾರಣ ಪ್ರಿಯಾಂಕಾ ಗಾಂಧಿ ಸಲ್ಲಿಸಿದ್ದ ಮೊದಲ ಸೆಟ್ ನಾಮಪತ್ರ ಪರಿಶೀಲನೆ ವೇಳೆ ನಿಯಮದ ಪ್ರಕಾರ, ಸೋನಿಯಾ ಗಾಂಧಿ, ಮಲ್ಲಿಕಾರ್ಜು ಖರ್ಗೆ, ರಾಹುಲ್ ಗಾಂಧಿ ಮತ್ತು ಕೆ.ಸಿ ವೇಣುಗೋಪಾಲ್ ಹೊರಗಡೆ ನಿಂತಿದ್ದರು. ಬಳಿಕ ಅವರೆಲ್ಲರೂ ಒಳಗಡೆ ಬಂದಿದ್ದಾರೆ. ಆದರೆ, ಬಿಜೆಪಿ ಮತ್ತು ಅದರ ನಾಯಕರು ಖರ್ಗೆ ಅವರು ಹೊರಗಡೆ ನಿಂತಿದ್ದ ಸಣ್ಣ ಕ್ಲಿಪ್ ಅನ್ನು ಮಾತ್ರ ಹಂಚಿಕೊಂಡು ಖರ್ಗೆ ಅವರನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...