Homeಫ್ಯಾಕ್ಟ್‌ಚೆಕ್FACT CHECK : ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಡೆ...

FACT CHECK : ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಡೆ ನಿಲ್ಲಿಸಿ ಅವಮಾನಿಸಲಾಗಿದೆಯಾ?

- Advertisement -
- Advertisement -

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರಿಂದ ತೆರವಾಗಿರುವ ಕೇರಳದ ವಯನಾಡ್ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಐಸಿಸಿ ಪ್ರಧಾನ ಕಾರ್ಯರ್ಶಿ ಪ್ರಿಯಾಂಕಾ ಗಾಂಧಿ ಬುಧವಾರ (ಅ.23) ನಾಮಪತ್ರ ಸಲ್ಲಿಸಿದ್ದಾರೆ.

ವಯನಾಡ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಡೆ ನಿಲ್ಲಿಸಿ ಅವಮಾನಿಸಲಾಗಿದೆ ಎಂದು ಪ್ರತಿಪಾದಿಸಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಮಲ್ಲಿಕಾರ್ಜುನ ಖರ್ಗೆ ಅವರು ಹೊರಗಡೆ ನಿಂತು ಬಾಗಿಲಿನ ಸಂದಿಯಲ್ಲಿ ನೋಡುತ್ತಿರುವ ಸಣ್ಣ ವಿಡಿಯೋ ಕ್ಲಿಪ್ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಕರ್ನಾಟಕ ಬಿಜೆಪಿ “ಯಾವುದೇ ನಾಯಕನಿರಲಿ, ಎಷ್ಟೇ ಪ್ರಮುಖರಾಗಿರಲಿ, ಕಾಂಗ್ರೆಸ್‌ನ ನಕಲಿ ಗಾಂಧಿ ಕುಟುಂಬದ ಬಳಿ ತೆರಳಲು ಸಾಧ್ಯವಿಲ್ಲ. ವಯನಾಡ್‌ನಲ್ಲಿ ಪ್ರಿಯಾಂಕಾ ಗಾಂಧಿಯ ನಾಮಪತ್ರ ಸಲ್ಲಿಕೆ ವೇಳೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಡೆಗಣಿಸಿರುವುದು ನಿಜಕ್ಕೂ ಆಘಾತಕಾರಿ ವಿಷಯ. ಮಕ್ಕಳ ಬುದ್ದಿಯ ರಾಹುಲ್ ಗಾಂಧಿಯವರೇ, ನಿಮ್ಮ ಕುಟುಂಬದ ಹಿತಾಸಕ್ತಿ ಕಾಪಾಡಲು ದಲಿತ ನಾಯಕರನ್ನು ಕೀಳಾಗಿ ಕಾಣಬೇಡಿ!” ಎಂದು ಬರೆದುಕೊಂಡಿದೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು ಕೂಡ ಎಕ್ಸ್‌ನಲ್ಲಿ ವಿಡಿಯೋ ಕ್ಲಿಪ್ ಹಂಚಿಕೊಂಡು ” ಸೋ ಕಾಲ್ಡ್ ಹೋಲಿ ಟ್ರಿನಿಟಿ, ಹಿರಿಯ ಸಂಸದೀಯ ಪಟು ಮತ್ತು ದಲಿತ ನಾಯಕರಾದ ಮಲ್ಲಿಕಾರ್ಜು ಖರ್ಗೆ ಮೇಲೆ ತೋರಿದ ಅಗೌರವವನ್ನು ಕಣ್ಣಾರೆ ನೋಡುವುದು ತುಂಬಾ ಬೇಸರ ತಂದಿದೆ. ಅದು ಎಐಸಿಸಿ ಅಥವಾ ಪಿಸಿಸಿ ಅಧ್ಯಕ್ಷರಾಗಿರಲಿ, ಅವರನ್ನು ಕೇವಲ ರಬ್ಬರ್ ಸ್ಟ್ಯಾಂಪ್‌ಗಳಂತೆ ಪರಿಗಣಿಸಿ ಅವಮಾನಿಸುವುದರಲ್ಲಿ ಈ ಕುಟುಂಬ ಹೆಮ್ಮೆಪಡುತ್ತದೆಯೇ?” ಎಂದು ಬರೆದುಕೊಂಡಿದ್ದಾರೆ.

ಹಾಗಾದರೆ, ಪ್ರಿಯಾಂಕಾ ಗಾಂಧಿಯವರ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜು ಖರ್ಗೆ ಅವರನ್ನು ಬಾಗಿಲ ಹೊರಗೆ ನಿಲ್ಲಿಸಿದ್ದು ನಿಜಾನಾ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಈ ವಿಷಯದ ಬಗ್ಗೆ ಖಚಿತಪಡಿಸಿಕೊಳ್ಳಲು ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿರುವ ಸಂದರ್ಭದ ಹಲವು ವಿಡಿಯೋಗಳನ್ನು ಮಾಧ್ಯಮಗಳ ಯೂಟ್ಯೂಬ್‌ ಚಾನೆಲ್‌ಗಳಲ್ಲಿ ನಾವು ಪರಿಶೀಲಿಸಿದ್ದೇವೆ.

ಬಹುತೇಕ ವಿಡಿಯೋಗಳಲ್ಲಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ, ಆರಂಭದಲ್ಲಿ ಅವರ ಹಿಂದೆ, ಬಳಿಕ ಪಕ್ಕದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಕುಳಿತಿರುವುದು ಕಂಡು ಬಂದಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಕೂಡ ಜೊತೆಗಿರುವುದನ್ನು ನೋಡಬಹುದು.

ಹಾಗಾದರೆ, ಮಲ್ಲಿಕಾರ್ಜುನ ಖರ್ಗೆಯವರು ಹೊರಗಡೆ ನಿಂತು ಬಾಗಿಲ ಸಂದಿಯಲ್ಲಿ ಇಣುಕಿದ್ದು ಯಾವಾಗ? ಎಂಬುವುದರ ಬಗ್ಗೆ ನಾವು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಇಂಡಿಯಾ ಟುಡೇ ವೆಬ್‌ಸೈಟ್‌ ಸ್ಥಳದಲ್ಲಿದ್ದ ತಮ್ಮ ವರದಿಗಾರ ನೀಡಿದ ಮಾಹಿತಿ ಆಧರಿಸಿ ಮಾಡಿರುವ ವಿಸ್ಕೃತ ವರದಿ ಲಭ್ಯವಾಗಿದೆ.

ವರದಿಯ ಪ್ರಕಾರ, “ರ್‍ಯಾಲಿಯ ಬಳಿಕ ನಾಮಪತ್ರ ಸಲ್ಲಿಸಲು ಪ್ರಿಯಾಂಕಾ ಗಾಂಧಿಯವರು ವಯನಾಡ್ ಜಿಲ್ಲಾ ಕೇಂದ್ರ ಕಲ್ಪೆಟ್ಟಾದಲ್ಲಿರುವ ಜಿಲ್ಲಾಧಿಕಾರಿ (ಕಲೆಕ್ಟರ್‌) ಕಚೇರಿಗೆ ಮಧ್ಯಾಹ್ನ 1 ಗಂಟೆಗೆ ಆಗಮಿಸಬೇಕಿತ್ತು. ಆದರೆ, ಈ ಹೊತ್ತಿಗೆ ರ್‍ಯಾಲಿ ಕೊನೆಗೊಂಡಿರಲಿಲ್ಲ.

ಆದರೆ, ಸಮಯವಾದ್ದರಿಂದ ಮಲ್ಲಿಕಾರ್ಜುನ ಖರ್ಗೆ ಮಾತನಾಡುತ್ತಿದ್ದಾಗಲೇ ಮಧ್ಯದಲ್ಲಿ ಪ್ರಿಯಾಂಕಾ ಗಾಂಧಿ ರ್‍ಯಾಲಿಯಿಂದ ಎದ್ದು ಬಂದಿದ್ದರು. ಅವರು ಮಧ್ಯಾಹ್ನ 1.24ಕ್ಕೆ ಗಂಡ ರಾಬರ್ಟ್ ವಾದ್ರಾ ಮತ್ತು ಮಗನ ಜೊತೆ ಜಿಲ್ಲಾಧಿಕಾರಿ ಕಚೇರಿಗೆ ತಲುಪಿದ್ದರು.

ಮಾನ್ಯತೆ ಪಡೆದ ರಾಷ್ಟ್ರೀಯ ಅಥವಾ ರಾಜ್ಯ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಅದನ್ನು ಅನುಮೋದಿಸಲು ಒಬ್ಬರು ಸ್ಥಳದಲ್ಲಿರಬೇಕು. ನಾಯಕರೆಲ್ಲ ರ್‍ಯಾಲಿಯಲ್ಲಿ ಇದ್ದಿದ್ದರಿಂದ ಪ್ರಿಯಾಂಕಾ ಗಾಂಧಿ ಗಂಡ ಮತ್ತು ಮಗನನ್ನು ಕರೆದುಕೊಂಡು ಬಂದಿದ್ದರು.

ಜಿಲ್ಲಾಧಿಕಾರಿ ಕಚೇರಿಗೆ ತಲುಪಿದ ಬಳಿಕ, ಮಲ್ಲಿಕಾರ್ಜುನ ಖರ್ಗೆ, ತಾಯಿ ಸೋನಿಯಾ ಗಾಂಧಿ ಮತ್ತು ಸಹೋದರ ರಾಹುಲ್ ಗಾಂಧಿ ರ್‍ಯಾಲಿಯಲ್ಲಿ ಇದ್ದು, ಶೀಘ್ರದಲ್ಲೇ ಬರಲಿದ್ದಾರೆ. ಅವರು ಬಂದ ಬಳಿಕ ಇವರು (ಗಂಡ, ಮಗ) ಹೊರಗಡೆ ಹೋಗಲಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಚುನಾವಣಾಧಿಕಾರಿಗೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಚುನಾವಣಾಧಿಕಾರಿ, ಅವರು (ಸೋನಿಯಾ, ರಾಹುಲ್, ಖರ್ಗೆ) ಎರಡನೇ ಸೆಟ್ ನಾಮಪತ್ರ ಸಲ್ಲಿಕೆ ವೇಳೆ ಬರಬಹುದು ಎಂದಿದ್ದಾರೆ. ಹಾಗಾಗಿ, ಪ್ರಿಯಾಂಕಾ ಗಾಂಧಿ 1.25ಕ್ಕೆ ಮೊದಲ ಸೆಟ್ ನಾಮಪತ್ರ ಸಲ್ಲಿಸಿದ್ದಾರೆ.

ಇದಾದ ಕೆಲವೇ ನಿಮಿಷಗಳಲ್ಲಿ ರ್‍ಯಾಲಿ ಮುಗಿಸಿ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ ವೇಣುಗೋಪಾಲ್ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದಾರೆ. ಆದರೆ, ಈ ವೇಳೆ ಪ್ರಿಯಾಂಕಾ ಗಾಂಧಿ ಸಲ್ಲಿಸಿದ್ದ ಮೊದಲ ಸೆಟ್ ನಾಮಪತ್ರವನ್ನು ಚುನಾವಣಾಧಿಕಾರಿ ಪರಿಶೀಲಿಸುತ್ತಿದ್ದರಿಂದ ನಿಯಮದಂತೆ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಅವರನ್ನು ಒಳಗೆ ಬಿಟ್ಟಿರಲಿಲ್ಲ.

ಇಲ್ಲಿ ಗಮನಾರ್ಹ ಅಂಶವೆಂದರೆ, ಕೇವಲ ಮಲ್ಲಿಕಾರ್ಜುನ ಖರ್ಗೆ ಮಾತ್ರವಲ್ಲ, ಸೋನಿಯಾ ಗಾಂಧಿ, ಕೆ.ಸಿ ವೇಣುಗೋಪಾಲ್ ಅವರನ್ನೂ ಒಳಗೆ ಬಿಟ್ಟಿರಲಿಲ್ಲ.

ಚುನಾವಣಾಧಿಕಾರಿ ಮೊದಲ ಸೆಟ್ ನಾಮಪತ್ರ ಪರಿಶೀಲನೆ ನಡೆಸಿದ ಬಳಿಕ, ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಮತ್ತು ಮಗ ಹೊರಗೆ ಹೋದರು. ಎರಡನೇ ಸೆಟ್ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ವೇಣುಗೋಪಾಲ್ ಒಳಗೆ ಬಂದರು. ನಂತರ ರಾಹುಲ್ ಗಾಂಧಿ ಕೂಡ ಒಳಗೆ ಬಂದಿದ್ದಾರೆ. ಅವರೂ ಹೊರಗಡೆ ಕಾಯುತ್ತಿದ್ದರು ಎಂದು ವರದಿಯಾಗಿದೆ.

ಈ ಕುರಿತ ವಿಡಿಯೋವನ್ನು ಕೆಳಗೆ ನೋಡಬಹುದು

ಒಟ್ಟಿನಲ್ಲಿ, ತಡವಾಗಿ ಬಂದ ಕಾರಣ ಪ್ರಿಯಾಂಕಾ ಗಾಂಧಿ ಸಲ್ಲಿಸಿದ್ದ ಮೊದಲ ಸೆಟ್ ನಾಮಪತ್ರ ಪರಿಶೀಲನೆ ವೇಳೆ ನಿಯಮದ ಪ್ರಕಾರ, ಸೋನಿಯಾ ಗಾಂಧಿ, ಮಲ್ಲಿಕಾರ್ಜು ಖರ್ಗೆ, ರಾಹುಲ್ ಗಾಂಧಿ ಮತ್ತು ಕೆ.ಸಿ ವೇಣುಗೋಪಾಲ್ ಹೊರಗಡೆ ನಿಂತಿದ್ದರು. ಬಳಿಕ ಅವರೆಲ್ಲರೂ ಒಳಗಡೆ ಬಂದಿದ್ದಾರೆ. ಆದರೆ, ಬಿಜೆಪಿ ಮತ್ತು ಅದರ ನಾಯಕರು ಖರ್ಗೆ ಅವರು ಹೊರಗಡೆ ನಿಂತಿದ್ದ ಸಣ್ಣ ಕ್ಲಿಪ್ ಅನ್ನು ಮಾತ್ರ ಹಂಚಿಕೊಂಡು ಖರ್ಗೆ ಅವರನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...