Homeಫ್ಯಾಕ್ಟ್‌ಚೆಕ್FACT CHECK : ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಡೆ...

FACT CHECK : ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಡೆ ನಿಲ್ಲಿಸಿ ಅವಮಾನಿಸಲಾಗಿದೆಯಾ?

- Advertisement -
- Advertisement -

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರಿಂದ ತೆರವಾಗಿರುವ ಕೇರಳದ ವಯನಾಡ್ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಐಸಿಸಿ ಪ್ರಧಾನ ಕಾರ್ಯರ್ಶಿ ಪ್ರಿಯಾಂಕಾ ಗಾಂಧಿ ಬುಧವಾರ (ಅ.23) ನಾಮಪತ್ರ ಸಲ್ಲಿಸಿದ್ದಾರೆ.

ವಯನಾಡ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಡೆ ನಿಲ್ಲಿಸಿ ಅವಮಾನಿಸಲಾಗಿದೆ ಎಂದು ಪ್ರತಿಪಾದಿಸಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಮಲ್ಲಿಕಾರ್ಜುನ ಖರ್ಗೆ ಅವರು ಹೊರಗಡೆ ನಿಂತು ಬಾಗಿಲಿನ ಸಂದಿಯಲ್ಲಿ ನೋಡುತ್ತಿರುವ ಸಣ್ಣ ವಿಡಿಯೋ ಕ್ಲಿಪ್ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಕರ್ನಾಟಕ ಬಿಜೆಪಿ “ಯಾವುದೇ ನಾಯಕನಿರಲಿ, ಎಷ್ಟೇ ಪ್ರಮುಖರಾಗಿರಲಿ, ಕಾಂಗ್ರೆಸ್‌ನ ನಕಲಿ ಗಾಂಧಿ ಕುಟುಂಬದ ಬಳಿ ತೆರಳಲು ಸಾಧ್ಯವಿಲ್ಲ. ವಯನಾಡ್‌ನಲ್ಲಿ ಪ್ರಿಯಾಂಕಾ ಗಾಂಧಿಯ ನಾಮಪತ್ರ ಸಲ್ಲಿಕೆ ವೇಳೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಡೆಗಣಿಸಿರುವುದು ನಿಜಕ್ಕೂ ಆಘಾತಕಾರಿ ವಿಷಯ. ಮಕ್ಕಳ ಬುದ್ದಿಯ ರಾಹುಲ್ ಗಾಂಧಿಯವರೇ, ನಿಮ್ಮ ಕುಟುಂಬದ ಹಿತಾಸಕ್ತಿ ಕಾಪಾಡಲು ದಲಿತ ನಾಯಕರನ್ನು ಕೀಳಾಗಿ ಕಾಣಬೇಡಿ!” ಎಂದು ಬರೆದುಕೊಂಡಿದೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು ಕೂಡ ಎಕ್ಸ್‌ನಲ್ಲಿ ವಿಡಿಯೋ ಕ್ಲಿಪ್ ಹಂಚಿಕೊಂಡು ” ಸೋ ಕಾಲ್ಡ್ ಹೋಲಿ ಟ್ರಿನಿಟಿ, ಹಿರಿಯ ಸಂಸದೀಯ ಪಟು ಮತ್ತು ದಲಿತ ನಾಯಕರಾದ ಮಲ್ಲಿಕಾರ್ಜು ಖರ್ಗೆ ಮೇಲೆ ತೋರಿದ ಅಗೌರವವನ್ನು ಕಣ್ಣಾರೆ ನೋಡುವುದು ತುಂಬಾ ಬೇಸರ ತಂದಿದೆ. ಅದು ಎಐಸಿಸಿ ಅಥವಾ ಪಿಸಿಸಿ ಅಧ್ಯಕ್ಷರಾಗಿರಲಿ, ಅವರನ್ನು ಕೇವಲ ರಬ್ಬರ್ ಸ್ಟ್ಯಾಂಪ್‌ಗಳಂತೆ ಪರಿಗಣಿಸಿ ಅವಮಾನಿಸುವುದರಲ್ಲಿ ಈ ಕುಟುಂಬ ಹೆಮ್ಮೆಪಡುತ್ತದೆಯೇ?” ಎಂದು ಬರೆದುಕೊಂಡಿದ್ದಾರೆ.

ಹಾಗಾದರೆ, ಪ್ರಿಯಾಂಕಾ ಗಾಂಧಿಯವರ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜು ಖರ್ಗೆ ಅವರನ್ನು ಬಾಗಿಲ ಹೊರಗೆ ನಿಲ್ಲಿಸಿದ್ದು ನಿಜಾನಾ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಈ ವಿಷಯದ ಬಗ್ಗೆ ಖಚಿತಪಡಿಸಿಕೊಳ್ಳಲು ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿರುವ ಸಂದರ್ಭದ ಹಲವು ವಿಡಿಯೋಗಳನ್ನು ಮಾಧ್ಯಮಗಳ ಯೂಟ್ಯೂಬ್‌ ಚಾನೆಲ್‌ಗಳಲ್ಲಿ ನಾವು ಪರಿಶೀಲಿಸಿದ್ದೇವೆ.

ಬಹುತೇಕ ವಿಡಿಯೋಗಳಲ್ಲಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ, ಆರಂಭದಲ್ಲಿ ಅವರ ಹಿಂದೆ, ಬಳಿಕ ಪಕ್ಕದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಕುಳಿತಿರುವುದು ಕಂಡು ಬಂದಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಕೂಡ ಜೊತೆಗಿರುವುದನ್ನು ನೋಡಬಹುದು.

ಹಾಗಾದರೆ, ಮಲ್ಲಿಕಾರ್ಜುನ ಖರ್ಗೆಯವರು ಹೊರಗಡೆ ನಿಂತು ಬಾಗಿಲ ಸಂದಿಯಲ್ಲಿ ಇಣುಕಿದ್ದು ಯಾವಾಗ? ಎಂಬುವುದರ ಬಗ್ಗೆ ನಾವು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಇಂಡಿಯಾ ಟುಡೇ ವೆಬ್‌ಸೈಟ್‌ ಸ್ಥಳದಲ್ಲಿದ್ದ ತಮ್ಮ ವರದಿಗಾರ ನೀಡಿದ ಮಾಹಿತಿ ಆಧರಿಸಿ ಮಾಡಿರುವ ವಿಸ್ಕೃತ ವರದಿ ಲಭ್ಯವಾಗಿದೆ.

ವರದಿಯ ಪ್ರಕಾರ, “ರ್‍ಯಾಲಿಯ ಬಳಿಕ ನಾಮಪತ್ರ ಸಲ್ಲಿಸಲು ಪ್ರಿಯಾಂಕಾ ಗಾಂಧಿಯವರು ವಯನಾಡ್ ಜಿಲ್ಲಾ ಕೇಂದ್ರ ಕಲ್ಪೆಟ್ಟಾದಲ್ಲಿರುವ ಜಿಲ್ಲಾಧಿಕಾರಿ (ಕಲೆಕ್ಟರ್‌) ಕಚೇರಿಗೆ ಮಧ್ಯಾಹ್ನ 1 ಗಂಟೆಗೆ ಆಗಮಿಸಬೇಕಿತ್ತು. ಆದರೆ, ಈ ಹೊತ್ತಿಗೆ ರ್‍ಯಾಲಿ ಕೊನೆಗೊಂಡಿರಲಿಲ್ಲ.

ಆದರೆ, ಸಮಯವಾದ್ದರಿಂದ ಮಲ್ಲಿಕಾರ್ಜುನ ಖರ್ಗೆ ಮಾತನಾಡುತ್ತಿದ್ದಾಗಲೇ ಮಧ್ಯದಲ್ಲಿ ಪ್ರಿಯಾಂಕಾ ಗಾಂಧಿ ರ್‍ಯಾಲಿಯಿಂದ ಎದ್ದು ಬಂದಿದ್ದರು. ಅವರು ಮಧ್ಯಾಹ್ನ 1.24ಕ್ಕೆ ಗಂಡ ರಾಬರ್ಟ್ ವಾದ್ರಾ ಮತ್ತು ಮಗನ ಜೊತೆ ಜಿಲ್ಲಾಧಿಕಾರಿ ಕಚೇರಿಗೆ ತಲುಪಿದ್ದರು.

ಮಾನ್ಯತೆ ಪಡೆದ ರಾಷ್ಟ್ರೀಯ ಅಥವಾ ರಾಜ್ಯ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಅದನ್ನು ಅನುಮೋದಿಸಲು ಒಬ್ಬರು ಸ್ಥಳದಲ್ಲಿರಬೇಕು. ನಾಯಕರೆಲ್ಲ ರ್‍ಯಾಲಿಯಲ್ಲಿ ಇದ್ದಿದ್ದರಿಂದ ಪ್ರಿಯಾಂಕಾ ಗಾಂಧಿ ಗಂಡ ಮತ್ತು ಮಗನನ್ನು ಕರೆದುಕೊಂಡು ಬಂದಿದ್ದರು.

ಜಿಲ್ಲಾಧಿಕಾರಿ ಕಚೇರಿಗೆ ತಲುಪಿದ ಬಳಿಕ, ಮಲ್ಲಿಕಾರ್ಜುನ ಖರ್ಗೆ, ತಾಯಿ ಸೋನಿಯಾ ಗಾಂಧಿ ಮತ್ತು ಸಹೋದರ ರಾಹುಲ್ ಗಾಂಧಿ ರ್‍ಯಾಲಿಯಲ್ಲಿ ಇದ್ದು, ಶೀಘ್ರದಲ್ಲೇ ಬರಲಿದ್ದಾರೆ. ಅವರು ಬಂದ ಬಳಿಕ ಇವರು (ಗಂಡ, ಮಗ) ಹೊರಗಡೆ ಹೋಗಲಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಚುನಾವಣಾಧಿಕಾರಿಗೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಚುನಾವಣಾಧಿಕಾರಿ, ಅವರು (ಸೋನಿಯಾ, ರಾಹುಲ್, ಖರ್ಗೆ) ಎರಡನೇ ಸೆಟ್ ನಾಮಪತ್ರ ಸಲ್ಲಿಕೆ ವೇಳೆ ಬರಬಹುದು ಎಂದಿದ್ದಾರೆ. ಹಾಗಾಗಿ, ಪ್ರಿಯಾಂಕಾ ಗಾಂಧಿ 1.25ಕ್ಕೆ ಮೊದಲ ಸೆಟ್ ನಾಮಪತ್ರ ಸಲ್ಲಿಸಿದ್ದಾರೆ.

ಇದಾದ ಕೆಲವೇ ನಿಮಿಷಗಳಲ್ಲಿ ರ್‍ಯಾಲಿ ಮುಗಿಸಿ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ ವೇಣುಗೋಪಾಲ್ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದಾರೆ. ಆದರೆ, ಈ ವೇಳೆ ಪ್ರಿಯಾಂಕಾ ಗಾಂಧಿ ಸಲ್ಲಿಸಿದ್ದ ಮೊದಲ ಸೆಟ್ ನಾಮಪತ್ರವನ್ನು ಚುನಾವಣಾಧಿಕಾರಿ ಪರಿಶೀಲಿಸುತ್ತಿದ್ದರಿಂದ ನಿಯಮದಂತೆ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಅವರನ್ನು ಒಳಗೆ ಬಿಟ್ಟಿರಲಿಲ್ಲ.

ಇಲ್ಲಿ ಗಮನಾರ್ಹ ಅಂಶವೆಂದರೆ, ಕೇವಲ ಮಲ್ಲಿಕಾರ್ಜುನ ಖರ್ಗೆ ಮಾತ್ರವಲ್ಲ, ಸೋನಿಯಾ ಗಾಂಧಿ, ಕೆ.ಸಿ ವೇಣುಗೋಪಾಲ್ ಅವರನ್ನೂ ಒಳಗೆ ಬಿಟ್ಟಿರಲಿಲ್ಲ.

ಚುನಾವಣಾಧಿಕಾರಿ ಮೊದಲ ಸೆಟ್ ನಾಮಪತ್ರ ಪರಿಶೀಲನೆ ನಡೆಸಿದ ಬಳಿಕ, ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಮತ್ತು ಮಗ ಹೊರಗೆ ಹೋದರು. ಎರಡನೇ ಸೆಟ್ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ವೇಣುಗೋಪಾಲ್ ಒಳಗೆ ಬಂದರು. ನಂತರ ರಾಹುಲ್ ಗಾಂಧಿ ಕೂಡ ಒಳಗೆ ಬಂದಿದ್ದಾರೆ. ಅವರೂ ಹೊರಗಡೆ ಕಾಯುತ್ತಿದ್ದರು ಎಂದು ವರದಿಯಾಗಿದೆ.

ಈ ಕುರಿತ ವಿಡಿಯೋವನ್ನು ಕೆಳಗೆ ನೋಡಬಹುದು

ಒಟ್ಟಿನಲ್ಲಿ, ತಡವಾಗಿ ಬಂದ ಕಾರಣ ಪ್ರಿಯಾಂಕಾ ಗಾಂಧಿ ಸಲ್ಲಿಸಿದ್ದ ಮೊದಲ ಸೆಟ್ ನಾಮಪತ್ರ ಪರಿಶೀಲನೆ ವೇಳೆ ನಿಯಮದ ಪ್ರಕಾರ, ಸೋನಿಯಾ ಗಾಂಧಿ, ಮಲ್ಲಿಕಾರ್ಜು ಖರ್ಗೆ, ರಾಹುಲ್ ಗಾಂಧಿ ಮತ್ತು ಕೆ.ಸಿ ವೇಣುಗೋಪಾಲ್ ಹೊರಗಡೆ ನಿಂತಿದ್ದರು. ಬಳಿಕ ಅವರೆಲ್ಲರೂ ಒಳಗಡೆ ಬಂದಿದ್ದಾರೆ. ಆದರೆ, ಬಿಜೆಪಿ ಮತ್ತು ಅದರ ನಾಯಕರು ಖರ್ಗೆ ಅವರು ಹೊರಗಡೆ ನಿಂತಿದ್ದ ಸಣ್ಣ ಕ್ಲಿಪ್ ಅನ್ನು ಮಾತ್ರ ಹಂಚಿಕೊಂಡು ಖರ್ಗೆ ಅವರನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...