Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಮಮತಾ ದರ್ಗಾಕ್ಕೆ ರಹಸ್ಯ ಭೇಟಿ ನೀಡಿಲ್ಲ, ಮಾಧ್ಯಮದ ಸಮ್ಮುಖದಲ್ಲೇ ಭೇಟಿ

ಫ್ಯಾಕ್ಟ್‌ಚೆಕ್: ಮಮತಾ ದರ್ಗಾಕ್ಕೆ ರಹಸ್ಯ ಭೇಟಿ ನೀಡಿಲ್ಲ, ಮಾಧ್ಯಮದ ಸಮ್ಮುಖದಲ್ಲೇ ಭೇಟಿ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಚುನಾವಣೆಯ ಸಂದರ್ಭದಲ್ಲಿ ಸುಳ್ಳು ಸುದ್ದಿಗಳು, ತಪ್ಪು ಮಾಹಿತಿಗಳು ದಂಡಿದಂಡಿಯಾಗಿ ಹರಿದು ಬರುತ್ತಿವೆ. ಇವುಗಳಲ್ಲಿ  ’ಮಮತಾ ಬ್ಯಾನರ್ಜಿಯವರು ಕದ್ದು ಮುಚ್ಚಿ ದರ್ಗಾಕ್ಕೆ ಹೋಗಿ ಬಂದರು’ ಎಂಬ ವೈರಲ್ ಸುದ್ದಿ ಬಂಗಾಳದಲ್ಲಿ ಹರಿದಾಡುತ್ತಿದೆ.

ಮುಸ್ಲಿಂ ಸಮುದಾಯದ ಸದಸ್ಯರೊಂದಿಗೆ ಇರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿಡಿಯೋ ವೈರಲ್ ಆಗಿದೆ. ಕ್ಲಿಪ್‌ನಲ್ಲಿ ಅಲ್ಲಾಹನ ಹೆಸರನ್ನು ಜಪಿಸುವುದನ್ನು ಜನರು ಪದೇ ಪದೇ ಕೇಳಬಹುದು. ಹಲವಾರು ಪೋಸ್ಟ್‌ಗಳು ಬ್ಯಾನರ್ಜಿ ಮುಸ್ಲಿಮರನ್ನು ಹಗಲು ಹೊತ್ತಿನಲ್ಲಿ ಭೇಟಿಯಾಗುತ್ತಿದ್ದರು, ಆದರೆ ಈಗ ರಾತ್ರಿಯ ಸಮಯದಲ್ಲಿ ಅವರನ್ನು ರಹಸ್ಯವಾಗಿ ಭೇಟಿ ಮಾಡುತ್ತಿದ್ದಾರಲ್ಲ ಎಂದು ಕೇಳಿ ಕುಹಕವಾಡಿದ್ದಾರೆ. ಹಿಂದೂಗಳನ್ನು ಮೋಸಗೊಳಿಸಲು ಇದು ಮಮತಾರ ತಂತ್ರ ಎಂದು ಆರೋಪಿಸಲಾಗುತ್ತಿದೆ.

ಮಮತಾ ಬ್ಯಾನರ್ಜಿ ದರ್ಗಾಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗುವ, ಈ ವಿಡಿಯೋ ಹಾಕಿರುವ ಟ್ವಿಟರ್ ಬಳಕೆದಾರ ಡಾ. ಸಂತೋಷ್ ವ್ಯಾಸ್ ಅವರ ಟ್ವೀಟ್  ಈ ವರದಿ ಮಾಡುವ ಹೊತ್ತಿಗೆ ಸುಮಾರು 8,000  ಜನರು ನೋಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಊಟದ ವೇಳೆ ರಾಹುಲ್ ಗಾಂಧಿ ಮಾಸ್ಕ್ ಧರಿಸಿರಲಿಲ್ಲ

 

ರಾಜೇಶ್ ಕೇಸರಿ ಎನ್ನುವವರೂ ಕೂಡ ವಿಡಿಯೋ ಹಂಚಿಕೊಂಡಿದ್ದಾರೆ. ಈ ದೃಶ್ಯಗಳು ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲಿ ವೈರಲ್ ಆಗಿವೆ.

ಆಲ್ಟ್ ನ್ಯೂಸ್ ಕೀವರ್ಡ್ ಶೋಧವನ್ನು ನಡೆಸಿದಾಗ ದೊರೆತ ಮಾಹಿತಿಗಳಿವು: ಮಾರ್ಚ್ 9ರ ಎಬಿಪಿ ನ್ಯೂಸ್‌ನಲ್ಲಿ ಈ ಸ್ಟೋರಿಯಿದೆ. ಮಮತಾ ಬ್ಯಾನರ್ಜಿ ನಂದಿಗ್ರಾಮದಿಂದ ನಾಮಪತ್ರ ಸಲ್ಲಿಸುವ ಮೊದಲು ದೇವಾಲಯ ಮತ್ತು ದರ್ಗಾಕ್ಕೆ ಭೇಟಿ ನೀಡಿದ್ದರು ಎಂದು ಅದು ಹೇಳುತ್ತದೆ.

ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ನಂತರ, ಅವರು ಹರಿ ದೇವಸ್ಥಾನದಲ್ಲಿ ಗೌರವ ಸಲ್ಲಿಸಿದರು ಮತ್ತು ನಂತರ ದುರ್ಗಾಕ್ಕೆ ಹೋದರು, ಅಲ್ಲಿ ಅವರು ಹೂವುಗಳನ್ನು ಅರ್ಪಿಸಿದರು. ಪಶ್ಚಿಮ ಬಂಗಾಳದ ಹಿಂದೂ-ಮುಸ್ಲಿಂ ಜನಸಂಖ್ಯೆಯ 70:30 ಅನುಪಾತವನ್ನು ಬಳಸಿಕೊಂಡು ಕೆಲವರು ವಿಭಜನೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ. ಹಾಗೆ ಮಾಡುವವರು ಎರಡೂ ಧರ್ಮಗಳ ಜನರನ್ನು ಪರಸ್ಪರ ವಿರುದ್ಧವಾಗಿ ಪ್ರಚೋದಿಸುವ ಮೂಲಕ ನಂದಿಗ್ರಾಮದ ಪವಿತ್ರ ಆಂದೋಲನವನ್ನು ದೂಷಿಸುತ್ತಿದ್ದಾರೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಗ್ರೇಟಾ ಥನ್‌ಬರ್ಗ್‌ಗೆ ಕಳಂಕ ತರಲು ಮತ್ತೆ ಚಾಲ್ತಿಗೆ ಬಂದ ಎಡಿಟೆಡ್ ಫೋಟೊ!

ಮಾರ್ಚ್ 9 ರಂದು, ಟೈಮ್ಸ್ ನೌ ನಂದಿಗ್ರಾಮದಲ್ಲಿ ನಾಮಪತ್ರ ಕುರಿತಾದ ವಿಡಿಯೋ ಪ್ರಸಾರ ಮಾಡಿ ಸ್ಟೋರಿ ಮಾಡಿದೆ. ಅದು ಮಮತಾ ಬ್ಯಾನರ್ಜಿಯ ದರ್ಗಾ ಭೇಟಿಯನ್ನು ಒಳಗೊಂಡಿದೆ. ಇಲ್ಲಿ, ನೀಲಿ ಬಣ್ಣದ ಶರ್ಟ್ ಧರಿಸಿದ ವ್ಯಕ್ತಿಯನ್ನು ಹಿನ್ನೆಲೆಯಲ್ಲಿ ಕಾಣಬಹುದು. ಅವರು ವೈರಲ್ ಕ್ಲಿಪ್‌ನಲ್ಲಿಯೂ ಕಾಣಿಸಿಕೊಳ್ಳುತ್ತಾರೆ. ಇದಲ್ಲದೆ, ಮಮತಾ ಎರಡರಲ್ಲೂ ಗುಲಾಬಿ ಸ್ಕಾರ್ಫ್ ಮತ್ತು ಬಿಳಿ ಮಾಸ್ಕ್ ಧರಿಸಿರುವುದನ್ನು ಗಮನಿಸಬಹುದು.

ಆಜ್ ತಕ್ ವಿಡಿಯೋ ಪ್ರಸಾರವು ದರ್ಗಾದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚಾದರ ನೀಡುವುದನ್ನು ತೋರಿಸುತ್ತದೆ.


ವಿಧಾನಸಭಾ ಚುನಾವಣೆಗೆ ನಂದಿಗ್ರಾಮದಿಂದ ನಾಮಪತ್ರ ಸಲ್ಲಿಸುವ ಮೊದಲು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ದೇವಸ್ಥಾನ ಮತ್ತು ದರ್ಗಾಕ್ಕೆ ಭೇಟಿ ನೀಡಿದರು. ಮುಸ್ಲಿಂ ಪೂಜಾ ಸ್ಥಳಕ್ಕೆ ರಹಸ್ಯವಾಗಿ ಭೇಟಿ ನೀಡಿದ್ದಾರೆ ಎಂಬ ದಾರಿತಪ್ಪಿಸುವ ಹೇಳಿಕೆಯೊಂದಿಗೆ ಅವರು ದರ್ಗಾಕ್ಕೆ ಭೇಟಿ ನೀಡುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.

ಆದರೆ, ಈ ಘಟನೆ ಸಂಪೂರ್ಣವಾಗಿ ಮಾಧ್ಯಮಗಳ ಕ್ಯಾಮೆರಾಗಳ ಎದುರೇ ನಡೆದಿದೆ ಮತ್ತು ಅವು ಸಹಜವಾದ ಸ್ಟೋರಿಗಳನ್ನು ಅಂದೇ ಮಾಡಿವೆ. ಇಲ್ಲಿ ರಹಸ್ಯ ಅನ್ನುವಂಥದ್ದೂ ಏನೇನೂ ಇಲ್ಲ.

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಭಗತ್ ಸಿಂಗ್‌ರನ್ನು ಗಲ್ಲಿಗೇರಿಸಿದ್ದು ಫೆಬ್ರವರಿ 14 ಪ್ರೇಮಿಗಳ ದಿನದಂದು ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...