Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಮಮತಾ ದರ್ಗಾಕ್ಕೆ ರಹಸ್ಯ ಭೇಟಿ ನೀಡಿಲ್ಲ, ಮಾಧ್ಯಮದ ಸಮ್ಮುಖದಲ್ಲೇ ಭೇಟಿ

ಫ್ಯಾಕ್ಟ್‌ಚೆಕ್: ಮಮತಾ ದರ್ಗಾಕ್ಕೆ ರಹಸ್ಯ ಭೇಟಿ ನೀಡಿಲ್ಲ, ಮಾಧ್ಯಮದ ಸಮ್ಮುಖದಲ್ಲೇ ಭೇಟಿ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಚುನಾವಣೆಯ ಸಂದರ್ಭದಲ್ಲಿ ಸುಳ್ಳು ಸುದ್ದಿಗಳು, ತಪ್ಪು ಮಾಹಿತಿಗಳು ದಂಡಿದಂಡಿಯಾಗಿ ಹರಿದು ಬರುತ್ತಿವೆ. ಇವುಗಳಲ್ಲಿ  ’ಮಮತಾ ಬ್ಯಾನರ್ಜಿಯವರು ಕದ್ದು ಮುಚ್ಚಿ ದರ್ಗಾಕ್ಕೆ ಹೋಗಿ ಬಂದರು’ ಎಂಬ ವೈರಲ್ ಸುದ್ದಿ ಬಂಗಾಳದಲ್ಲಿ ಹರಿದಾಡುತ್ತಿದೆ.

ಮುಸ್ಲಿಂ ಸಮುದಾಯದ ಸದಸ್ಯರೊಂದಿಗೆ ಇರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿಡಿಯೋ ವೈರಲ್ ಆಗಿದೆ. ಕ್ಲಿಪ್‌ನಲ್ಲಿ ಅಲ್ಲಾಹನ ಹೆಸರನ್ನು ಜಪಿಸುವುದನ್ನು ಜನರು ಪದೇ ಪದೇ ಕೇಳಬಹುದು. ಹಲವಾರು ಪೋಸ್ಟ್‌ಗಳು ಬ್ಯಾನರ್ಜಿ ಮುಸ್ಲಿಮರನ್ನು ಹಗಲು ಹೊತ್ತಿನಲ್ಲಿ ಭೇಟಿಯಾಗುತ್ತಿದ್ದರು, ಆದರೆ ಈಗ ರಾತ್ರಿಯ ಸಮಯದಲ್ಲಿ ಅವರನ್ನು ರಹಸ್ಯವಾಗಿ ಭೇಟಿ ಮಾಡುತ್ತಿದ್ದಾರಲ್ಲ ಎಂದು ಕೇಳಿ ಕುಹಕವಾಡಿದ್ದಾರೆ. ಹಿಂದೂಗಳನ್ನು ಮೋಸಗೊಳಿಸಲು ಇದು ಮಮತಾರ ತಂತ್ರ ಎಂದು ಆರೋಪಿಸಲಾಗುತ್ತಿದೆ.

ಮಮತಾ ಬ್ಯಾನರ್ಜಿ ದರ್ಗಾಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗುವ, ಈ ವಿಡಿಯೋ ಹಾಕಿರುವ ಟ್ವಿಟರ್ ಬಳಕೆದಾರ ಡಾ. ಸಂತೋಷ್ ವ್ಯಾಸ್ ಅವರ ಟ್ವೀಟ್  ಈ ವರದಿ ಮಾಡುವ ಹೊತ್ತಿಗೆ ಸುಮಾರು 8,000  ಜನರು ನೋಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಊಟದ ವೇಳೆ ರಾಹುಲ್ ಗಾಂಧಿ ಮಾಸ್ಕ್ ಧರಿಸಿರಲಿಲ್ಲ

 

ರಾಜೇಶ್ ಕೇಸರಿ ಎನ್ನುವವರೂ ಕೂಡ ವಿಡಿಯೋ ಹಂಚಿಕೊಂಡಿದ್ದಾರೆ. ಈ ದೃಶ್ಯಗಳು ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲಿ ವೈರಲ್ ಆಗಿವೆ.

ಆಲ್ಟ್ ನ್ಯೂಸ್ ಕೀವರ್ಡ್ ಶೋಧವನ್ನು ನಡೆಸಿದಾಗ ದೊರೆತ ಮಾಹಿತಿಗಳಿವು: ಮಾರ್ಚ್ 9ರ ಎಬಿಪಿ ನ್ಯೂಸ್‌ನಲ್ಲಿ ಈ ಸ್ಟೋರಿಯಿದೆ. ಮಮತಾ ಬ್ಯಾನರ್ಜಿ ನಂದಿಗ್ರಾಮದಿಂದ ನಾಮಪತ್ರ ಸಲ್ಲಿಸುವ ಮೊದಲು ದೇವಾಲಯ ಮತ್ತು ದರ್ಗಾಕ್ಕೆ ಭೇಟಿ ನೀಡಿದ್ದರು ಎಂದು ಅದು ಹೇಳುತ್ತದೆ.

ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ನಂತರ, ಅವರು ಹರಿ ದೇವಸ್ಥಾನದಲ್ಲಿ ಗೌರವ ಸಲ್ಲಿಸಿದರು ಮತ್ತು ನಂತರ ದುರ್ಗಾಕ್ಕೆ ಹೋದರು, ಅಲ್ಲಿ ಅವರು ಹೂವುಗಳನ್ನು ಅರ್ಪಿಸಿದರು. ಪಶ್ಚಿಮ ಬಂಗಾಳದ ಹಿಂದೂ-ಮುಸ್ಲಿಂ ಜನಸಂಖ್ಯೆಯ 70:30 ಅನುಪಾತವನ್ನು ಬಳಸಿಕೊಂಡು ಕೆಲವರು ವಿಭಜನೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ. ಹಾಗೆ ಮಾಡುವವರು ಎರಡೂ ಧರ್ಮಗಳ ಜನರನ್ನು ಪರಸ್ಪರ ವಿರುದ್ಧವಾಗಿ ಪ್ರಚೋದಿಸುವ ಮೂಲಕ ನಂದಿಗ್ರಾಮದ ಪವಿತ್ರ ಆಂದೋಲನವನ್ನು ದೂಷಿಸುತ್ತಿದ್ದಾರೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಗ್ರೇಟಾ ಥನ್‌ಬರ್ಗ್‌ಗೆ ಕಳಂಕ ತರಲು ಮತ್ತೆ ಚಾಲ್ತಿಗೆ ಬಂದ ಎಡಿಟೆಡ್ ಫೋಟೊ!

ಮಾರ್ಚ್ 9 ರಂದು, ಟೈಮ್ಸ್ ನೌ ನಂದಿಗ್ರಾಮದಲ್ಲಿ ನಾಮಪತ್ರ ಕುರಿತಾದ ವಿಡಿಯೋ ಪ್ರಸಾರ ಮಾಡಿ ಸ್ಟೋರಿ ಮಾಡಿದೆ. ಅದು ಮಮತಾ ಬ್ಯಾನರ್ಜಿಯ ದರ್ಗಾ ಭೇಟಿಯನ್ನು ಒಳಗೊಂಡಿದೆ. ಇಲ್ಲಿ, ನೀಲಿ ಬಣ್ಣದ ಶರ್ಟ್ ಧರಿಸಿದ ವ್ಯಕ್ತಿಯನ್ನು ಹಿನ್ನೆಲೆಯಲ್ಲಿ ಕಾಣಬಹುದು. ಅವರು ವೈರಲ್ ಕ್ಲಿಪ್‌ನಲ್ಲಿಯೂ ಕಾಣಿಸಿಕೊಳ್ಳುತ್ತಾರೆ. ಇದಲ್ಲದೆ, ಮಮತಾ ಎರಡರಲ್ಲೂ ಗುಲಾಬಿ ಸ್ಕಾರ್ಫ್ ಮತ್ತು ಬಿಳಿ ಮಾಸ್ಕ್ ಧರಿಸಿರುವುದನ್ನು ಗಮನಿಸಬಹುದು.

ಆಜ್ ತಕ್ ವಿಡಿಯೋ ಪ್ರಸಾರವು ದರ್ಗಾದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚಾದರ ನೀಡುವುದನ್ನು ತೋರಿಸುತ್ತದೆ.


ವಿಧಾನಸಭಾ ಚುನಾವಣೆಗೆ ನಂದಿಗ್ರಾಮದಿಂದ ನಾಮಪತ್ರ ಸಲ್ಲಿಸುವ ಮೊದಲು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ದೇವಸ್ಥಾನ ಮತ್ತು ದರ್ಗಾಕ್ಕೆ ಭೇಟಿ ನೀಡಿದರು. ಮುಸ್ಲಿಂ ಪೂಜಾ ಸ್ಥಳಕ್ಕೆ ರಹಸ್ಯವಾಗಿ ಭೇಟಿ ನೀಡಿದ್ದಾರೆ ಎಂಬ ದಾರಿತಪ್ಪಿಸುವ ಹೇಳಿಕೆಯೊಂದಿಗೆ ಅವರು ದರ್ಗಾಕ್ಕೆ ಭೇಟಿ ನೀಡುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.

ಆದರೆ, ಈ ಘಟನೆ ಸಂಪೂರ್ಣವಾಗಿ ಮಾಧ್ಯಮಗಳ ಕ್ಯಾಮೆರಾಗಳ ಎದುರೇ ನಡೆದಿದೆ ಮತ್ತು ಅವು ಸಹಜವಾದ ಸ್ಟೋರಿಗಳನ್ನು ಅಂದೇ ಮಾಡಿವೆ. ಇಲ್ಲಿ ರಹಸ್ಯ ಅನ್ನುವಂಥದ್ದೂ ಏನೇನೂ ಇಲ್ಲ.

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಭಗತ್ ಸಿಂಗ್‌ರನ್ನು ಗಲ್ಲಿಗೇರಿಸಿದ್ದು ಫೆಬ್ರವರಿ 14 ಪ್ರೇಮಿಗಳ ದಿನದಂದು ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...