Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಮಮತಾ ದರ್ಗಾಕ್ಕೆ ರಹಸ್ಯ ಭೇಟಿ ನೀಡಿಲ್ಲ, ಮಾಧ್ಯಮದ ಸಮ್ಮುಖದಲ್ಲೇ ಭೇಟಿ

ಫ್ಯಾಕ್ಟ್‌ಚೆಕ್: ಮಮತಾ ದರ್ಗಾಕ್ಕೆ ರಹಸ್ಯ ಭೇಟಿ ನೀಡಿಲ್ಲ, ಮಾಧ್ಯಮದ ಸಮ್ಮುಖದಲ್ಲೇ ಭೇಟಿ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಚುನಾವಣೆಯ ಸಂದರ್ಭದಲ್ಲಿ ಸುಳ್ಳು ಸುದ್ದಿಗಳು, ತಪ್ಪು ಮಾಹಿತಿಗಳು ದಂಡಿದಂಡಿಯಾಗಿ ಹರಿದು ಬರುತ್ತಿವೆ. ಇವುಗಳಲ್ಲಿ  ’ಮಮತಾ ಬ್ಯಾನರ್ಜಿಯವರು ಕದ್ದು ಮುಚ್ಚಿ ದರ್ಗಾಕ್ಕೆ ಹೋಗಿ ಬಂದರು’ ಎಂಬ ವೈರಲ್ ಸುದ್ದಿ ಬಂಗಾಳದಲ್ಲಿ ಹರಿದಾಡುತ್ತಿದೆ.

ಮುಸ್ಲಿಂ ಸಮುದಾಯದ ಸದಸ್ಯರೊಂದಿಗೆ ಇರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿಡಿಯೋ ವೈರಲ್ ಆಗಿದೆ. ಕ್ಲಿಪ್‌ನಲ್ಲಿ ಅಲ್ಲಾಹನ ಹೆಸರನ್ನು ಜಪಿಸುವುದನ್ನು ಜನರು ಪದೇ ಪದೇ ಕೇಳಬಹುದು. ಹಲವಾರು ಪೋಸ್ಟ್‌ಗಳು ಬ್ಯಾನರ್ಜಿ ಮುಸ್ಲಿಮರನ್ನು ಹಗಲು ಹೊತ್ತಿನಲ್ಲಿ ಭೇಟಿಯಾಗುತ್ತಿದ್ದರು, ಆದರೆ ಈಗ ರಾತ್ರಿಯ ಸಮಯದಲ್ಲಿ ಅವರನ್ನು ರಹಸ್ಯವಾಗಿ ಭೇಟಿ ಮಾಡುತ್ತಿದ್ದಾರಲ್ಲ ಎಂದು ಕೇಳಿ ಕುಹಕವಾಡಿದ್ದಾರೆ. ಹಿಂದೂಗಳನ್ನು ಮೋಸಗೊಳಿಸಲು ಇದು ಮಮತಾರ ತಂತ್ರ ಎಂದು ಆರೋಪಿಸಲಾಗುತ್ತಿದೆ.

ಮಮತಾ ಬ್ಯಾನರ್ಜಿ ದರ್ಗಾಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗುವ, ಈ ವಿಡಿಯೋ ಹಾಕಿರುವ ಟ್ವಿಟರ್ ಬಳಕೆದಾರ ಡಾ. ಸಂತೋಷ್ ವ್ಯಾಸ್ ಅವರ ಟ್ವೀಟ್  ಈ ವರದಿ ಮಾಡುವ ಹೊತ್ತಿಗೆ ಸುಮಾರು 8,000  ಜನರು ನೋಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಊಟದ ವೇಳೆ ರಾಹುಲ್ ಗಾಂಧಿ ಮಾಸ್ಕ್ ಧರಿಸಿರಲಿಲ್ಲ

 

ರಾಜೇಶ್ ಕೇಸರಿ ಎನ್ನುವವರೂ ಕೂಡ ವಿಡಿಯೋ ಹಂಚಿಕೊಂಡಿದ್ದಾರೆ. ಈ ದೃಶ್ಯಗಳು ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲಿ ವೈರಲ್ ಆಗಿವೆ.

ಆಲ್ಟ್ ನ್ಯೂಸ್ ಕೀವರ್ಡ್ ಶೋಧವನ್ನು ನಡೆಸಿದಾಗ ದೊರೆತ ಮಾಹಿತಿಗಳಿವು: ಮಾರ್ಚ್ 9ರ ಎಬಿಪಿ ನ್ಯೂಸ್‌ನಲ್ಲಿ ಈ ಸ್ಟೋರಿಯಿದೆ. ಮಮತಾ ಬ್ಯಾನರ್ಜಿ ನಂದಿಗ್ರಾಮದಿಂದ ನಾಮಪತ್ರ ಸಲ್ಲಿಸುವ ಮೊದಲು ದೇವಾಲಯ ಮತ್ತು ದರ್ಗಾಕ್ಕೆ ಭೇಟಿ ನೀಡಿದ್ದರು ಎಂದು ಅದು ಹೇಳುತ್ತದೆ.

ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ನಂತರ, ಅವರು ಹರಿ ದೇವಸ್ಥಾನದಲ್ಲಿ ಗೌರವ ಸಲ್ಲಿಸಿದರು ಮತ್ತು ನಂತರ ದುರ್ಗಾಕ್ಕೆ ಹೋದರು, ಅಲ್ಲಿ ಅವರು ಹೂವುಗಳನ್ನು ಅರ್ಪಿಸಿದರು. ಪಶ್ಚಿಮ ಬಂಗಾಳದ ಹಿಂದೂ-ಮುಸ್ಲಿಂ ಜನಸಂಖ್ಯೆಯ 70:30 ಅನುಪಾತವನ್ನು ಬಳಸಿಕೊಂಡು ಕೆಲವರು ವಿಭಜನೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ. ಹಾಗೆ ಮಾಡುವವರು ಎರಡೂ ಧರ್ಮಗಳ ಜನರನ್ನು ಪರಸ್ಪರ ವಿರುದ್ಧವಾಗಿ ಪ್ರಚೋದಿಸುವ ಮೂಲಕ ನಂದಿಗ್ರಾಮದ ಪವಿತ್ರ ಆಂದೋಲನವನ್ನು ದೂಷಿಸುತ್ತಿದ್ದಾರೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಗ್ರೇಟಾ ಥನ್‌ಬರ್ಗ್‌ಗೆ ಕಳಂಕ ತರಲು ಮತ್ತೆ ಚಾಲ್ತಿಗೆ ಬಂದ ಎಡಿಟೆಡ್ ಫೋಟೊ!

ಮಾರ್ಚ್ 9 ರಂದು, ಟೈಮ್ಸ್ ನೌ ನಂದಿಗ್ರಾಮದಲ್ಲಿ ನಾಮಪತ್ರ ಕುರಿತಾದ ವಿಡಿಯೋ ಪ್ರಸಾರ ಮಾಡಿ ಸ್ಟೋರಿ ಮಾಡಿದೆ. ಅದು ಮಮತಾ ಬ್ಯಾನರ್ಜಿಯ ದರ್ಗಾ ಭೇಟಿಯನ್ನು ಒಳಗೊಂಡಿದೆ. ಇಲ್ಲಿ, ನೀಲಿ ಬಣ್ಣದ ಶರ್ಟ್ ಧರಿಸಿದ ವ್ಯಕ್ತಿಯನ್ನು ಹಿನ್ನೆಲೆಯಲ್ಲಿ ಕಾಣಬಹುದು. ಅವರು ವೈರಲ್ ಕ್ಲಿಪ್‌ನಲ್ಲಿಯೂ ಕಾಣಿಸಿಕೊಳ್ಳುತ್ತಾರೆ. ಇದಲ್ಲದೆ, ಮಮತಾ ಎರಡರಲ್ಲೂ ಗುಲಾಬಿ ಸ್ಕಾರ್ಫ್ ಮತ್ತು ಬಿಳಿ ಮಾಸ್ಕ್ ಧರಿಸಿರುವುದನ್ನು ಗಮನಿಸಬಹುದು.

ಆಜ್ ತಕ್ ವಿಡಿಯೋ ಪ್ರಸಾರವು ದರ್ಗಾದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚಾದರ ನೀಡುವುದನ್ನು ತೋರಿಸುತ್ತದೆ.


ವಿಧಾನಸಭಾ ಚುನಾವಣೆಗೆ ನಂದಿಗ್ರಾಮದಿಂದ ನಾಮಪತ್ರ ಸಲ್ಲಿಸುವ ಮೊದಲು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ದೇವಸ್ಥಾನ ಮತ್ತು ದರ್ಗಾಕ್ಕೆ ಭೇಟಿ ನೀಡಿದರು. ಮುಸ್ಲಿಂ ಪೂಜಾ ಸ್ಥಳಕ್ಕೆ ರಹಸ್ಯವಾಗಿ ಭೇಟಿ ನೀಡಿದ್ದಾರೆ ಎಂಬ ದಾರಿತಪ್ಪಿಸುವ ಹೇಳಿಕೆಯೊಂದಿಗೆ ಅವರು ದರ್ಗಾಕ್ಕೆ ಭೇಟಿ ನೀಡುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.

ಆದರೆ, ಈ ಘಟನೆ ಸಂಪೂರ್ಣವಾಗಿ ಮಾಧ್ಯಮಗಳ ಕ್ಯಾಮೆರಾಗಳ ಎದುರೇ ನಡೆದಿದೆ ಮತ್ತು ಅವು ಸಹಜವಾದ ಸ್ಟೋರಿಗಳನ್ನು ಅಂದೇ ಮಾಡಿವೆ. ಇಲ್ಲಿ ರಹಸ್ಯ ಅನ್ನುವಂಥದ್ದೂ ಏನೇನೂ ಇಲ್ಲ.

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಭಗತ್ ಸಿಂಗ್‌ರನ್ನು ಗಲ್ಲಿಗೇರಿಸಿದ್ದು ಫೆಬ್ರವರಿ 14 ಪ್ರೇಮಿಗಳ ದಿನದಂದು ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...