Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಮಮತಾ ದರ್ಗಾಕ್ಕೆ ರಹಸ್ಯ ಭೇಟಿ ನೀಡಿಲ್ಲ, ಮಾಧ್ಯಮದ ಸಮ್ಮುಖದಲ್ಲೇ ಭೇಟಿ

ಫ್ಯಾಕ್ಟ್‌ಚೆಕ್: ಮಮತಾ ದರ್ಗಾಕ್ಕೆ ರಹಸ್ಯ ಭೇಟಿ ನೀಡಿಲ್ಲ, ಮಾಧ್ಯಮದ ಸಮ್ಮುಖದಲ್ಲೇ ಭೇಟಿ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಚುನಾವಣೆಯ ಸಂದರ್ಭದಲ್ಲಿ ಸುಳ್ಳು ಸುದ್ದಿಗಳು, ತಪ್ಪು ಮಾಹಿತಿಗಳು ದಂಡಿದಂಡಿಯಾಗಿ ಹರಿದು ಬರುತ್ತಿವೆ. ಇವುಗಳಲ್ಲಿ  ’ಮಮತಾ ಬ್ಯಾನರ್ಜಿಯವರು ಕದ್ದು ಮುಚ್ಚಿ ದರ್ಗಾಕ್ಕೆ ಹೋಗಿ ಬಂದರು’ ಎಂಬ ವೈರಲ್ ಸುದ್ದಿ ಬಂಗಾಳದಲ್ಲಿ ಹರಿದಾಡುತ್ತಿದೆ.

ಮುಸ್ಲಿಂ ಸಮುದಾಯದ ಸದಸ್ಯರೊಂದಿಗೆ ಇರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿಡಿಯೋ ವೈರಲ್ ಆಗಿದೆ. ಕ್ಲಿಪ್‌ನಲ್ಲಿ ಅಲ್ಲಾಹನ ಹೆಸರನ್ನು ಜಪಿಸುವುದನ್ನು ಜನರು ಪದೇ ಪದೇ ಕೇಳಬಹುದು. ಹಲವಾರು ಪೋಸ್ಟ್‌ಗಳು ಬ್ಯಾನರ್ಜಿ ಮುಸ್ಲಿಮರನ್ನು ಹಗಲು ಹೊತ್ತಿನಲ್ಲಿ ಭೇಟಿಯಾಗುತ್ತಿದ್ದರು, ಆದರೆ ಈಗ ರಾತ್ರಿಯ ಸಮಯದಲ್ಲಿ ಅವರನ್ನು ರಹಸ್ಯವಾಗಿ ಭೇಟಿ ಮಾಡುತ್ತಿದ್ದಾರಲ್ಲ ಎಂದು ಕೇಳಿ ಕುಹಕವಾಡಿದ್ದಾರೆ. ಹಿಂದೂಗಳನ್ನು ಮೋಸಗೊಳಿಸಲು ಇದು ಮಮತಾರ ತಂತ್ರ ಎಂದು ಆರೋಪಿಸಲಾಗುತ್ತಿದೆ.

ಮಮತಾ ಬ್ಯಾನರ್ಜಿ ದರ್ಗಾಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗುವ, ಈ ವಿಡಿಯೋ ಹಾಕಿರುವ ಟ್ವಿಟರ್ ಬಳಕೆದಾರ ಡಾ. ಸಂತೋಷ್ ವ್ಯಾಸ್ ಅವರ ಟ್ವೀಟ್  ಈ ವರದಿ ಮಾಡುವ ಹೊತ್ತಿಗೆ ಸುಮಾರು 8,000  ಜನರು ನೋಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಊಟದ ವೇಳೆ ರಾಹುಲ್ ಗಾಂಧಿ ಮಾಸ್ಕ್ ಧರಿಸಿರಲಿಲ್ಲ

 

ರಾಜೇಶ್ ಕೇಸರಿ ಎನ್ನುವವರೂ ಕೂಡ ವಿಡಿಯೋ ಹಂಚಿಕೊಂಡಿದ್ದಾರೆ. ಈ ದೃಶ್ಯಗಳು ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲಿ ವೈರಲ್ ಆಗಿವೆ.

ಆಲ್ಟ್ ನ್ಯೂಸ್ ಕೀವರ್ಡ್ ಶೋಧವನ್ನು ನಡೆಸಿದಾಗ ದೊರೆತ ಮಾಹಿತಿಗಳಿವು: ಮಾರ್ಚ್ 9ರ ಎಬಿಪಿ ನ್ಯೂಸ್‌ನಲ್ಲಿ ಈ ಸ್ಟೋರಿಯಿದೆ. ಮಮತಾ ಬ್ಯಾನರ್ಜಿ ನಂದಿಗ್ರಾಮದಿಂದ ನಾಮಪತ್ರ ಸಲ್ಲಿಸುವ ಮೊದಲು ದೇವಾಲಯ ಮತ್ತು ದರ್ಗಾಕ್ಕೆ ಭೇಟಿ ನೀಡಿದ್ದರು ಎಂದು ಅದು ಹೇಳುತ್ತದೆ.

ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ನಂತರ, ಅವರು ಹರಿ ದೇವಸ್ಥಾನದಲ್ಲಿ ಗೌರವ ಸಲ್ಲಿಸಿದರು ಮತ್ತು ನಂತರ ದುರ್ಗಾಕ್ಕೆ ಹೋದರು, ಅಲ್ಲಿ ಅವರು ಹೂವುಗಳನ್ನು ಅರ್ಪಿಸಿದರು. ಪಶ್ಚಿಮ ಬಂಗಾಳದ ಹಿಂದೂ-ಮುಸ್ಲಿಂ ಜನಸಂಖ್ಯೆಯ 70:30 ಅನುಪಾತವನ್ನು ಬಳಸಿಕೊಂಡು ಕೆಲವರು ವಿಭಜನೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ. ಹಾಗೆ ಮಾಡುವವರು ಎರಡೂ ಧರ್ಮಗಳ ಜನರನ್ನು ಪರಸ್ಪರ ವಿರುದ್ಧವಾಗಿ ಪ್ರಚೋದಿಸುವ ಮೂಲಕ ನಂದಿಗ್ರಾಮದ ಪವಿತ್ರ ಆಂದೋಲನವನ್ನು ದೂಷಿಸುತ್ತಿದ್ದಾರೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಗ್ರೇಟಾ ಥನ್‌ಬರ್ಗ್‌ಗೆ ಕಳಂಕ ತರಲು ಮತ್ತೆ ಚಾಲ್ತಿಗೆ ಬಂದ ಎಡಿಟೆಡ್ ಫೋಟೊ!

ಮಾರ್ಚ್ 9 ರಂದು, ಟೈಮ್ಸ್ ನೌ ನಂದಿಗ್ರಾಮದಲ್ಲಿ ನಾಮಪತ್ರ ಕುರಿತಾದ ವಿಡಿಯೋ ಪ್ರಸಾರ ಮಾಡಿ ಸ್ಟೋರಿ ಮಾಡಿದೆ. ಅದು ಮಮತಾ ಬ್ಯಾನರ್ಜಿಯ ದರ್ಗಾ ಭೇಟಿಯನ್ನು ಒಳಗೊಂಡಿದೆ. ಇಲ್ಲಿ, ನೀಲಿ ಬಣ್ಣದ ಶರ್ಟ್ ಧರಿಸಿದ ವ್ಯಕ್ತಿಯನ್ನು ಹಿನ್ನೆಲೆಯಲ್ಲಿ ಕಾಣಬಹುದು. ಅವರು ವೈರಲ್ ಕ್ಲಿಪ್‌ನಲ್ಲಿಯೂ ಕಾಣಿಸಿಕೊಳ್ಳುತ್ತಾರೆ. ಇದಲ್ಲದೆ, ಮಮತಾ ಎರಡರಲ್ಲೂ ಗುಲಾಬಿ ಸ್ಕಾರ್ಫ್ ಮತ್ತು ಬಿಳಿ ಮಾಸ್ಕ್ ಧರಿಸಿರುವುದನ್ನು ಗಮನಿಸಬಹುದು.

ಆಜ್ ತಕ್ ವಿಡಿಯೋ ಪ್ರಸಾರವು ದರ್ಗಾದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚಾದರ ನೀಡುವುದನ್ನು ತೋರಿಸುತ್ತದೆ.


ವಿಧಾನಸಭಾ ಚುನಾವಣೆಗೆ ನಂದಿಗ್ರಾಮದಿಂದ ನಾಮಪತ್ರ ಸಲ್ಲಿಸುವ ಮೊದಲು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ದೇವಸ್ಥಾನ ಮತ್ತು ದರ್ಗಾಕ್ಕೆ ಭೇಟಿ ನೀಡಿದರು. ಮುಸ್ಲಿಂ ಪೂಜಾ ಸ್ಥಳಕ್ಕೆ ರಹಸ್ಯವಾಗಿ ಭೇಟಿ ನೀಡಿದ್ದಾರೆ ಎಂಬ ದಾರಿತಪ್ಪಿಸುವ ಹೇಳಿಕೆಯೊಂದಿಗೆ ಅವರು ದರ್ಗಾಕ್ಕೆ ಭೇಟಿ ನೀಡುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.

ಆದರೆ, ಈ ಘಟನೆ ಸಂಪೂರ್ಣವಾಗಿ ಮಾಧ್ಯಮಗಳ ಕ್ಯಾಮೆರಾಗಳ ಎದುರೇ ನಡೆದಿದೆ ಮತ್ತು ಅವು ಸಹಜವಾದ ಸ್ಟೋರಿಗಳನ್ನು ಅಂದೇ ಮಾಡಿವೆ. ಇಲ್ಲಿ ರಹಸ್ಯ ಅನ್ನುವಂಥದ್ದೂ ಏನೇನೂ ಇಲ್ಲ.

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಭಗತ್ ಸಿಂಗ್‌ರನ್ನು ಗಲ್ಲಿಗೇರಿಸಿದ್ದು ಫೆಬ್ರವರಿ 14 ಪ್ರೇಮಿಗಳ ದಿನದಂದು ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...