Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಮಮತಾ ದರ್ಗಾಕ್ಕೆ ರಹಸ್ಯ ಭೇಟಿ ನೀಡಿಲ್ಲ, ಮಾಧ್ಯಮದ ಸಮ್ಮುಖದಲ್ಲೇ ಭೇಟಿ

ಫ್ಯಾಕ್ಟ್‌ಚೆಕ್: ಮಮತಾ ದರ್ಗಾಕ್ಕೆ ರಹಸ್ಯ ಭೇಟಿ ನೀಡಿಲ್ಲ, ಮಾಧ್ಯಮದ ಸಮ್ಮುಖದಲ್ಲೇ ಭೇಟಿ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಚುನಾವಣೆಯ ಸಂದರ್ಭದಲ್ಲಿ ಸುಳ್ಳು ಸುದ್ದಿಗಳು, ತಪ್ಪು ಮಾಹಿತಿಗಳು ದಂಡಿದಂಡಿಯಾಗಿ ಹರಿದು ಬರುತ್ತಿವೆ. ಇವುಗಳಲ್ಲಿ  ’ಮಮತಾ ಬ್ಯಾನರ್ಜಿಯವರು ಕದ್ದು ಮುಚ್ಚಿ ದರ್ಗಾಕ್ಕೆ ಹೋಗಿ ಬಂದರು’ ಎಂಬ ವೈರಲ್ ಸುದ್ದಿ ಬಂಗಾಳದಲ್ಲಿ ಹರಿದಾಡುತ್ತಿದೆ.

ಮುಸ್ಲಿಂ ಸಮುದಾಯದ ಸದಸ್ಯರೊಂದಿಗೆ ಇರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿಡಿಯೋ ವೈರಲ್ ಆಗಿದೆ. ಕ್ಲಿಪ್‌ನಲ್ಲಿ ಅಲ್ಲಾಹನ ಹೆಸರನ್ನು ಜಪಿಸುವುದನ್ನು ಜನರು ಪದೇ ಪದೇ ಕೇಳಬಹುದು. ಹಲವಾರು ಪೋಸ್ಟ್‌ಗಳು ಬ್ಯಾನರ್ಜಿ ಮುಸ್ಲಿಮರನ್ನು ಹಗಲು ಹೊತ್ತಿನಲ್ಲಿ ಭೇಟಿಯಾಗುತ್ತಿದ್ದರು, ಆದರೆ ಈಗ ರಾತ್ರಿಯ ಸಮಯದಲ್ಲಿ ಅವರನ್ನು ರಹಸ್ಯವಾಗಿ ಭೇಟಿ ಮಾಡುತ್ತಿದ್ದಾರಲ್ಲ ಎಂದು ಕೇಳಿ ಕುಹಕವಾಡಿದ್ದಾರೆ. ಹಿಂದೂಗಳನ್ನು ಮೋಸಗೊಳಿಸಲು ಇದು ಮಮತಾರ ತಂತ್ರ ಎಂದು ಆರೋಪಿಸಲಾಗುತ್ತಿದೆ.

ಮಮತಾ ಬ್ಯಾನರ್ಜಿ ದರ್ಗಾಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗುವ, ಈ ವಿಡಿಯೋ ಹಾಕಿರುವ ಟ್ವಿಟರ್ ಬಳಕೆದಾರ ಡಾ. ಸಂತೋಷ್ ವ್ಯಾಸ್ ಅವರ ಟ್ವೀಟ್  ಈ ವರದಿ ಮಾಡುವ ಹೊತ್ತಿಗೆ ಸುಮಾರು 8,000  ಜನರು ನೋಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಊಟದ ವೇಳೆ ರಾಹುಲ್ ಗಾಂಧಿ ಮಾಸ್ಕ್ ಧರಿಸಿರಲಿಲ್ಲ

 

ರಾಜೇಶ್ ಕೇಸರಿ ಎನ್ನುವವರೂ ಕೂಡ ವಿಡಿಯೋ ಹಂಚಿಕೊಂಡಿದ್ದಾರೆ. ಈ ದೃಶ್ಯಗಳು ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲಿ ವೈರಲ್ ಆಗಿವೆ.

ಆಲ್ಟ್ ನ್ಯೂಸ್ ಕೀವರ್ಡ್ ಶೋಧವನ್ನು ನಡೆಸಿದಾಗ ದೊರೆತ ಮಾಹಿತಿಗಳಿವು: ಮಾರ್ಚ್ 9ರ ಎಬಿಪಿ ನ್ಯೂಸ್‌ನಲ್ಲಿ ಈ ಸ್ಟೋರಿಯಿದೆ. ಮಮತಾ ಬ್ಯಾನರ್ಜಿ ನಂದಿಗ್ರಾಮದಿಂದ ನಾಮಪತ್ರ ಸಲ್ಲಿಸುವ ಮೊದಲು ದೇವಾಲಯ ಮತ್ತು ದರ್ಗಾಕ್ಕೆ ಭೇಟಿ ನೀಡಿದ್ದರು ಎಂದು ಅದು ಹೇಳುತ್ತದೆ.

ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ನಂತರ, ಅವರು ಹರಿ ದೇವಸ್ಥಾನದಲ್ಲಿ ಗೌರವ ಸಲ್ಲಿಸಿದರು ಮತ್ತು ನಂತರ ದುರ್ಗಾಕ್ಕೆ ಹೋದರು, ಅಲ್ಲಿ ಅವರು ಹೂವುಗಳನ್ನು ಅರ್ಪಿಸಿದರು. ಪಶ್ಚಿಮ ಬಂಗಾಳದ ಹಿಂದೂ-ಮುಸ್ಲಿಂ ಜನಸಂಖ್ಯೆಯ 70:30 ಅನುಪಾತವನ್ನು ಬಳಸಿಕೊಂಡು ಕೆಲವರು ವಿಭಜನೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ. ಹಾಗೆ ಮಾಡುವವರು ಎರಡೂ ಧರ್ಮಗಳ ಜನರನ್ನು ಪರಸ್ಪರ ವಿರುದ್ಧವಾಗಿ ಪ್ರಚೋದಿಸುವ ಮೂಲಕ ನಂದಿಗ್ರಾಮದ ಪವಿತ್ರ ಆಂದೋಲನವನ್ನು ದೂಷಿಸುತ್ತಿದ್ದಾರೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಗ್ರೇಟಾ ಥನ್‌ಬರ್ಗ್‌ಗೆ ಕಳಂಕ ತರಲು ಮತ್ತೆ ಚಾಲ್ತಿಗೆ ಬಂದ ಎಡಿಟೆಡ್ ಫೋಟೊ!

ಮಾರ್ಚ್ 9 ರಂದು, ಟೈಮ್ಸ್ ನೌ ನಂದಿಗ್ರಾಮದಲ್ಲಿ ನಾಮಪತ್ರ ಕುರಿತಾದ ವಿಡಿಯೋ ಪ್ರಸಾರ ಮಾಡಿ ಸ್ಟೋರಿ ಮಾಡಿದೆ. ಅದು ಮಮತಾ ಬ್ಯಾನರ್ಜಿಯ ದರ್ಗಾ ಭೇಟಿಯನ್ನು ಒಳಗೊಂಡಿದೆ. ಇಲ್ಲಿ, ನೀಲಿ ಬಣ್ಣದ ಶರ್ಟ್ ಧರಿಸಿದ ವ್ಯಕ್ತಿಯನ್ನು ಹಿನ್ನೆಲೆಯಲ್ಲಿ ಕಾಣಬಹುದು. ಅವರು ವೈರಲ್ ಕ್ಲಿಪ್‌ನಲ್ಲಿಯೂ ಕಾಣಿಸಿಕೊಳ್ಳುತ್ತಾರೆ. ಇದಲ್ಲದೆ, ಮಮತಾ ಎರಡರಲ್ಲೂ ಗುಲಾಬಿ ಸ್ಕಾರ್ಫ್ ಮತ್ತು ಬಿಳಿ ಮಾಸ್ಕ್ ಧರಿಸಿರುವುದನ್ನು ಗಮನಿಸಬಹುದು.

ಆಜ್ ತಕ್ ವಿಡಿಯೋ ಪ್ರಸಾರವು ದರ್ಗಾದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚಾದರ ನೀಡುವುದನ್ನು ತೋರಿಸುತ್ತದೆ.


ವಿಧಾನಸಭಾ ಚುನಾವಣೆಗೆ ನಂದಿಗ್ರಾಮದಿಂದ ನಾಮಪತ್ರ ಸಲ್ಲಿಸುವ ಮೊದಲು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ದೇವಸ್ಥಾನ ಮತ್ತು ದರ್ಗಾಕ್ಕೆ ಭೇಟಿ ನೀಡಿದರು. ಮುಸ್ಲಿಂ ಪೂಜಾ ಸ್ಥಳಕ್ಕೆ ರಹಸ್ಯವಾಗಿ ಭೇಟಿ ನೀಡಿದ್ದಾರೆ ಎಂಬ ದಾರಿತಪ್ಪಿಸುವ ಹೇಳಿಕೆಯೊಂದಿಗೆ ಅವರು ದರ್ಗಾಕ್ಕೆ ಭೇಟಿ ನೀಡುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.

ಆದರೆ, ಈ ಘಟನೆ ಸಂಪೂರ್ಣವಾಗಿ ಮಾಧ್ಯಮಗಳ ಕ್ಯಾಮೆರಾಗಳ ಎದುರೇ ನಡೆದಿದೆ ಮತ್ತು ಅವು ಸಹಜವಾದ ಸ್ಟೋರಿಗಳನ್ನು ಅಂದೇ ಮಾಡಿವೆ. ಇಲ್ಲಿ ರಹಸ್ಯ ಅನ್ನುವಂಥದ್ದೂ ಏನೇನೂ ಇಲ್ಲ.

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಭಗತ್ ಸಿಂಗ್‌ರನ್ನು ಗಲ್ಲಿಗೇರಿಸಿದ್ದು ಫೆಬ್ರವರಿ 14 ಪ್ರೇಮಿಗಳ ದಿನದಂದು ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...