Homeಫ್ಯಾಕ್ಟ್‌ಚೆಕ್FACT CHECK: 'ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗೆ' ಎಂದು ಮನಮೋಹನ್ ಸಿಂಗ್ ಹೇಳಿಲ್ಲ

FACT CHECK: ‘ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗೆ’ ಎಂದು ಮನಮೋಹನ್ ಸಿಂಗ್ ಹೇಳಿಲ್ಲ

- Advertisement -
- Advertisement -

ಭಾನುವಾರ (ಏ.22) ರಾಜಸ್ಥಾನದ ಬನ್‌ಸ್ವಾರಾದಲ್ಲಿ ಬಿಜೆಪಿಯ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಮನಮೋಹನ್ ಅವರ ಹಳೆಯ ಹೇಳಿಕೆಯೊಂದನ್ನು ಉಲ್ಲೇಖಿಸಿದ್ದಾರೆ.

‘ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಅಧಿಕಾರ’ ಇರುವುದಾಗಿ ಮನಮೋಹನ್ ಸಿಂಗ್‌ ಹೇಳಿದ್ದಾರೆ ಎಂದು ಮೋದಿ ಪ್ರಸ್ತಾಪಿಸಿದ್ದಾರೆ. ಮೋದಿಯವರ ಭಾಷಣದ 1 ನಿಮಿಷ 13 ಸೆಕೆಂಡ್‌ಗಳ ವಿಡಿಯೋ ವೈರಲ್ ಆಗಿದೆ.

“ಈ ಹಿಂದಿನ ಸರ್ಕಾರದವರು ಹೇಳಿದ್ದರು. ಈ ದೇಶದ ಸಂಪತ್ತಿನ ಮೇಲಿನ ಮೊದಲ ಅಧಿಕಾರ ಮುಸ್ಲಿಮರಿಗಾಗಿದೆ. ಇದರರ್ಥ, ಈ ಸಂಪತ್ತನ್ನೆಲ್ಲಾ ಒಟ್ಟು ಮಾಡಿ, ಯಾರಿಗೆ ಹಂಚ್ತೀವಿ? ಯಾರಿಗೆ ಹೆಚ್ಚು ಮಕ್ಕಳಿದ್ದಾವೋ, ಅವರಿಗೆ ಹಂಚ್ತೀವಿ. ನುಸುಳುಕೋರರಿಗೆ ಹಂಚ್ತೀವಿ. ನಿಮ್ಮ ಶ್ರಮದ ಹಣವನ್ನು ನುಸುಳುಕೋರರಿಗೆ ಕೊಡಬಹುದಾ? ಇದಕ್ಕೆ ನಿಮ್ಮ ಒಪ್ಪಿಗೆ ಇದೆಯಾ? ಇದು ಕಾಂಗ್ರೆಸ್‌ನ ಪ್ರಣಾಳಿಕೆ ಹೇಳ್ತಿದೆ. ತಾಯಂದಿರು, ಸೋದರಿಯರ ಬಳಿಯ ಚಿನ್ನದ ಲೆಕ್ಕ ಹಾಕ್ತಾರೆ. ಅದನ್ನು ಜಪ್ತಿ ಮಾಡ್ತಾರೆ ಮತ್ತು ಆ ಸಂಪತ್ತನ್ನು ಹಂಚಿ ಬಿಡ್ತಾರೆ. ಯಾರಿಗೆ ಹಂಚ್ತಾರೆ ಅಂದ್ರೆ, ಮನಮೋಹನ್‌ ಸಿಂಗ್‌ ಹೇಳಿದ್ರಲ್ಲ, ‘ಸಂಪತ್ತಿನ ಮೇಲೆ ಮೊದಲ ಅಧಿಕಾರ ಇದೆ’ ಅಂತ ಅವರಿಗೆ ಹಂಚ್ತಾರೆ! ಈ ಅರ್ಬನ್‌ ನಕ್ಸಲ್‌ ಚಿಂತನೆ ತಾಯಂದಿರು, ಸೋದರಿಯರ ಮಂಗಳ ಸೂತ್ರವನ್ನೂ ಉಳಿಸುವುದಿಲ್ಲ!” ಎಂದು ಪ್ರಧಾನಿ ತನ್ನ ಭಾಷಣದಲ್ಲಿ ಹೇಳಿದ್ದಾರೆ.

ಫ್ಯಾಕ್ಟ್‌ಚೆಕ್ : ಪ್ರಧಾನಿ ನರೇಂದ್ರ ಮೋದಿ ಭಾಷಣದಲ್ಲಿ ಹೇಳಿದಂತೆ, ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರಾ? ಎಂಬುವುದರ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ನಾವು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹಳೆಯ ಭಾಷಣ ಹುಡುಕಾಡಿದ್ದೇವೆ. ಈ ವೇಳೆ ಏಪ್ರಿಲ್ 22,2024ರಂದು ಇಂಡಿಯಾ ಟುಡೇ ಚಾನೆಲ್ ತನ್ನ ಯೂಟ್ಯೂಬ್‌ನಲ್ಲಿ ಸಿಂಗ್ ಅವರ ಹಳೆ ಭಾಷಣ ಮತ್ತು ಮೋದಿಯವರ ವಿವಾದಾತ್ಮಕ ಹೇಳಿಕೆಯ ಕುರಿತು ಅಪ್ಲೋಡ್ ಮಾಡಿರುವ ವಿಡಿಯೋ ದೊರೆತಿದೆ.

ಯೂಟ್ಯೂಬ್ ವಿಡಿಯೋ ಲಿಂಕ್ ಇಲ್ಲಿದೆ

ಇಂಡಿಯಾ ಟುಡೇಯಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋದಲ್ಲಿ ಮನಮೋಹನ್ ಸಿಂಗ್ ಅವರು, “ಅಲ್ಪ ಸಂಖ್ಯಾತರು, ವಿಶೇಷವಾಗಿ ಮುಸ್ಲಿಂ ಅಲ್ಪ ಸಂಖ್ಯಾತರ ಅಭಿವೃದ್ದಿಗಾಗಿ ನಾವು ಹೊಸ ಹೊಸ ಯೋಜನೆಗಳನ್ನು ರೂಪಿಸಬೇಕು. ಸಂಪತ್ತಿನ ಸಮಾನ ಹಂಚಿಕೆಯಾಗಬೇಕು. ನಮ್ಮ ಸಂಪತ್ತಿನಲ್ಲಿ ಅವರಿಗೂ(ಮುಸ್ಲಿಮರಿಗೂ) ಮೊದಲ ಹಕ್ಕು ಇರಬೇಕು” ಎಂದಿದ್ದಾರೆ.

ನಾವು ವಿಡಿಯೋದಲ್ಲಿ ಗಮನಿಸಿದಂತೆ ಮನಮೋಹನ್ ಸಿಂಗ್ ಅವರು “ದೇಶದ ಸಂಪತ್ತಿನ ಹಂಚಿಕೆಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಇರಬೇಕು ಎಂದಿದ್ದಾರೆಯೇ ಹೊರತು, ಮುಸ್ಲಿಮರಿಗೆ ಮೊದಲ ಅಧಿಕಾರ ಇದೆ” ಎಂದಿಲ್ಲ.

ಪ್ರಧಾನಿ ಕಚೇರಿಯ ವೆಬ್‌ಸೈಟ್‌ನ ಆರ್ಕೈವ್‌ನಲ್ಲಿ ಮನಮೋಹನ್ ಸಿಂಗ್ ಅವರ ಭಾಷಣದ ಅಧಿಕೃತ ಲಿಖಿತ ರೂಪ ನಮಗೆ ದೊರೆತಿದೆ. ಆರ್ಕೈವ್‌ ಪ್ರಕಾರ, ಪ್ರಧಾನಿ ಮೋದಿ ಉಲ್ಲೇಖಿಸಿದ್ದು, 2006ರ ಡಿಸೆಂಬರ್ 9ರಂದು ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಅಭಿವೃದ್ಧಿ ಮಂಡಳಿಯ 52ನೇ ಸಭೆಯನ್ನು ಉದ್ದೇಶಿಸಿ ಮನಮೋಹನ್ ಸಿಂಗ್ ಅವರು ಮಾಡಿದ್ದ ಭಾಷಣದ ಕುರಿತು ಎಂಬುವುದು ಗೊತ್ತಾಗಿದೆ.

ತನ್ನ ಭಾಷಣದಲ್ಲಿ 11ನೇ ಪಂಚವಾರ್ಷಿಕ ಯೋಜನೆಯ ಪ್ರಸ್ತಾವನೆಯನ್ನು ಉಲ್ಲೇಖಿಸುತ್ತಾ “ವೇಗದ ಮತ್ತು ಸರ್ವರನ್ನು ಒಳಗೊಂಡ ಅಭಿವೃದ್ಧಿಯೆಡೆಗೆ” ಎಂಬ ವಿಷಯದ ಬಗ್ಗೆ ಸವಿಸ್ತಾರವಾಗಿ ಮನಮೋಹನ್ ಸಿಂಗ್ ಮಾತನಾಡಿದ್ದರು.

ಭಾಷಣದ ಕೊನೆಯಲ್ಲಿ “ನಮ್ಮ ಸಾಮೂಹಿಕ ಆದ್ಯತೆಗಳು ಸ್ಪಷ್ಟವಾಗಿವೆ ಎಂದು ನನಗೆ ನಂಬಿಕೆ ಇದೆ. ಕೃಷಿ, ನೀರಾವರಿ ಮತ್ತು ಜಲಸಂಪನ್ಮೂಲ, ಆರೋಗ್ಯ, ಶಿಕ್ಷಣ, ಗ್ರಾಮೀಣ ಮೂಲಸೌಕರ್ಯದಲ್ಲಿ ನಿರ್ಣಾಯಕ ಹೂಡಿಕೆ ಮತ್ತು ಸಾಮಾನ್ಯ ಮೂಲಸೌಕರ್ಯಗಳ ಅಗತ್ಯ ಸಾರ್ವಜನಿಕ ಹೂಡಿಕೆ ಅಗತ್ಯಗಳು, ಎಸ್‌ಸಿ/ಎಸ್‌ಟಿ, ಇತರ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಮತ್ತು ಮಕ್ಕಳ ಉನ್ನತಿಗಾಗಿ ಕಾರ್ಯಕ್ರಮಗಳ ಜೊತೆಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಘಟಕ ಯೋಜನೆಗಳನ್ನು ಪುನಶ್ಚೇತನಗೊಳಿಸಬೇಕಾಗಿದೆ. ಅಲ್ಪಸಂಖ್ಯಾತರು, ವಿಶೇಷವಾಗಿ ಮುಸ್ಲಿಂ ಅಲ್ಪಸಂಖ್ಯಾತರು, ಅಭಿವೃದ್ಧಿಯ ಫಲಗಳಲ್ಲಿ ಸಮಾನ ಪಾಲು ಪಡೆಯುವ ಹಕ್ಕು ಹೊಂದಲು ನಾವು ನವೀನ ಯೋಜನೆಗಳನ್ನು ರೂಪಿಸಬೇಕಾಗಿದೆ. ಸಂಪನ್ಮೂಲಗಳಲ್ಲಿ ಪಾಲು ಪಡೆಯುವ ಮೊದಲ ಹಕ್ಕು ಅವರಿಗೂ ಇರಬೇಕು” ಎಂದಿದ್ದರು.

ಮನಮೋಹನ್ ಸಿಂಗ್ ಅವರ ಭಾಷಣದ ಆರ್ಖೈವ್ ಇಲ್ಲಿದೆ 

‘ದಿ ಲಲ್ಲನ್‌ಟಾಪ್‌’ನ ಸೌರಭ್ ದ್ವಿವೇದಿ ಅವರು ಮೋದಿ ಉಲ್ಲೇಖಿಸಿದ ಮನಮೋಹನ್ ಸಿಂಗ್ ಅವರ ಭಾಷಣದ ನಿಜವಾದ ಅಂಶವನ್ನು ವಿಡಿಯೋ ಮೂಲಕ ವಿವರಿಸಿದ್ದಾರೆ. ಆ ವಿಡಿಯೋ ಲಿಂಕ್ ಕೆಳಗಿದೆ.

ಮೇಲೆ ನಾವು ಉಲ್ಲೇಖಿಸಿದ ಮೂಲಗಳ ಪ್ರಕಾರ, ಮನಮೋಹನ್ ಸಿಂಗ್ ಅವರು “ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗಿದೆ ಎಂದು ಹೇಳಿಲ್ಲ. ಬದಲಾಗಿ, ಸಂಪತ್ತಿನ ಸಮಾನ ಹಂಚಿಕೆಯಾಗಬೇಕು. ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೂ ಮೊದಲ ಹಕ್ಕು ಇರಬೇಕು” ಎಂದಿದ್ದಾರೆ.

ಇದರರ್ಥ ಇತರ ಧರ್ಮಿಯರಿಗೆ ಇರುವಂತೆ ಮುಸ್ಲಿಮರಿಗೂ ದೇಶದ ಸಂಪತ್ತಿನಲ್ಲಿ ಮೊದಲ ಹಕ್ಕು ಇರಬೇಕು. ಈ ಮೂಲಕ ಸಂಪತ್ತಿನ ಸಮಾನ ಹಂಚಿಕೆಯಾಗಬೇಕು. ತಾರತಮ್ಯ ಇರಬಾರದು ಎಂಬುವುದಾಗಿದೆ.

ಇದನ್ನೂ ಓದಿ : FACT CHECK: ಉತ್ತರ ಪ್ರದೇಶದಲ್ಲಿ ಬುರ್ಖಾಧಾರಿ ಮಹಿಳೆಯರಿಂದ ನಕಲಿ ಮತದಾನ ಎಂದು ಹಳೆಯ ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...