Homeಫ್ಯಾಕ್ಟ್‌ಚೆಕ್FACT CHECK: 'ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗೆ' ಎಂದು ಮನಮೋಹನ್ ಸಿಂಗ್ ಹೇಳಿಲ್ಲ

FACT CHECK: ‘ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗೆ’ ಎಂದು ಮನಮೋಹನ್ ಸಿಂಗ್ ಹೇಳಿಲ್ಲ

- Advertisement -
- Advertisement -

ಭಾನುವಾರ (ಏ.22) ರಾಜಸ್ಥಾನದ ಬನ್‌ಸ್ವಾರಾದಲ್ಲಿ ಬಿಜೆಪಿಯ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಮನಮೋಹನ್ ಅವರ ಹಳೆಯ ಹೇಳಿಕೆಯೊಂದನ್ನು ಉಲ್ಲೇಖಿಸಿದ್ದಾರೆ.

‘ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಅಧಿಕಾರ’ ಇರುವುದಾಗಿ ಮನಮೋಹನ್ ಸಿಂಗ್‌ ಹೇಳಿದ್ದಾರೆ ಎಂದು ಮೋದಿ ಪ್ರಸ್ತಾಪಿಸಿದ್ದಾರೆ. ಮೋದಿಯವರ ಭಾಷಣದ 1 ನಿಮಿಷ 13 ಸೆಕೆಂಡ್‌ಗಳ ವಿಡಿಯೋ ವೈರಲ್ ಆಗಿದೆ.

“ಈ ಹಿಂದಿನ ಸರ್ಕಾರದವರು ಹೇಳಿದ್ದರು. ಈ ದೇಶದ ಸಂಪತ್ತಿನ ಮೇಲಿನ ಮೊದಲ ಅಧಿಕಾರ ಮುಸ್ಲಿಮರಿಗಾಗಿದೆ. ಇದರರ್ಥ, ಈ ಸಂಪತ್ತನ್ನೆಲ್ಲಾ ಒಟ್ಟು ಮಾಡಿ, ಯಾರಿಗೆ ಹಂಚ್ತೀವಿ? ಯಾರಿಗೆ ಹೆಚ್ಚು ಮಕ್ಕಳಿದ್ದಾವೋ, ಅವರಿಗೆ ಹಂಚ್ತೀವಿ. ನುಸುಳುಕೋರರಿಗೆ ಹಂಚ್ತೀವಿ. ನಿಮ್ಮ ಶ್ರಮದ ಹಣವನ್ನು ನುಸುಳುಕೋರರಿಗೆ ಕೊಡಬಹುದಾ? ಇದಕ್ಕೆ ನಿಮ್ಮ ಒಪ್ಪಿಗೆ ಇದೆಯಾ? ಇದು ಕಾಂಗ್ರೆಸ್‌ನ ಪ್ರಣಾಳಿಕೆ ಹೇಳ್ತಿದೆ. ತಾಯಂದಿರು, ಸೋದರಿಯರ ಬಳಿಯ ಚಿನ್ನದ ಲೆಕ್ಕ ಹಾಕ್ತಾರೆ. ಅದನ್ನು ಜಪ್ತಿ ಮಾಡ್ತಾರೆ ಮತ್ತು ಆ ಸಂಪತ್ತನ್ನು ಹಂಚಿ ಬಿಡ್ತಾರೆ. ಯಾರಿಗೆ ಹಂಚ್ತಾರೆ ಅಂದ್ರೆ, ಮನಮೋಹನ್‌ ಸಿಂಗ್‌ ಹೇಳಿದ್ರಲ್ಲ, ‘ಸಂಪತ್ತಿನ ಮೇಲೆ ಮೊದಲ ಅಧಿಕಾರ ಇದೆ’ ಅಂತ ಅವರಿಗೆ ಹಂಚ್ತಾರೆ! ಈ ಅರ್ಬನ್‌ ನಕ್ಸಲ್‌ ಚಿಂತನೆ ತಾಯಂದಿರು, ಸೋದರಿಯರ ಮಂಗಳ ಸೂತ್ರವನ್ನೂ ಉಳಿಸುವುದಿಲ್ಲ!” ಎಂದು ಪ್ರಧಾನಿ ತನ್ನ ಭಾಷಣದಲ್ಲಿ ಹೇಳಿದ್ದಾರೆ.

ಫ್ಯಾಕ್ಟ್‌ಚೆಕ್ : ಪ್ರಧಾನಿ ನರೇಂದ್ರ ಮೋದಿ ಭಾಷಣದಲ್ಲಿ ಹೇಳಿದಂತೆ, ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರಾ? ಎಂಬುವುದರ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ನಾವು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹಳೆಯ ಭಾಷಣ ಹುಡುಕಾಡಿದ್ದೇವೆ. ಈ ವೇಳೆ ಏಪ್ರಿಲ್ 22,2024ರಂದು ಇಂಡಿಯಾ ಟುಡೇ ಚಾನೆಲ್ ತನ್ನ ಯೂಟ್ಯೂಬ್‌ನಲ್ಲಿ ಸಿಂಗ್ ಅವರ ಹಳೆ ಭಾಷಣ ಮತ್ತು ಮೋದಿಯವರ ವಿವಾದಾತ್ಮಕ ಹೇಳಿಕೆಯ ಕುರಿತು ಅಪ್ಲೋಡ್ ಮಾಡಿರುವ ವಿಡಿಯೋ ದೊರೆತಿದೆ.

ಯೂಟ್ಯೂಬ್ ವಿಡಿಯೋ ಲಿಂಕ್ ಇಲ್ಲಿದೆ

ಇಂಡಿಯಾ ಟುಡೇಯಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋದಲ್ಲಿ ಮನಮೋಹನ್ ಸಿಂಗ್ ಅವರು, “ಅಲ್ಪ ಸಂಖ್ಯಾತರು, ವಿಶೇಷವಾಗಿ ಮುಸ್ಲಿಂ ಅಲ್ಪ ಸಂಖ್ಯಾತರ ಅಭಿವೃದ್ದಿಗಾಗಿ ನಾವು ಹೊಸ ಹೊಸ ಯೋಜನೆಗಳನ್ನು ರೂಪಿಸಬೇಕು. ಸಂಪತ್ತಿನ ಸಮಾನ ಹಂಚಿಕೆಯಾಗಬೇಕು. ನಮ್ಮ ಸಂಪತ್ತಿನಲ್ಲಿ ಅವರಿಗೂ(ಮುಸ್ಲಿಮರಿಗೂ) ಮೊದಲ ಹಕ್ಕು ಇರಬೇಕು” ಎಂದಿದ್ದಾರೆ.

ನಾವು ವಿಡಿಯೋದಲ್ಲಿ ಗಮನಿಸಿದಂತೆ ಮನಮೋಹನ್ ಸಿಂಗ್ ಅವರು “ದೇಶದ ಸಂಪತ್ತಿನ ಹಂಚಿಕೆಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಇರಬೇಕು ಎಂದಿದ್ದಾರೆಯೇ ಹೊರತು, ಮುಸ್ಲಿಮರಿಗೆ ಮೊದಲ ಅಧಿಕಾರ ಇದೆ” ಎಂದಿಲ್ಲ.

ಪ್ರಧಾನಿ ಕಚೇರಿಯ ವೆಬ್‌ಸೈಟ್‌ನ ಆರ್ಕೈವ್‌ನಲ್ಲಿ ಮನಮೋಹನ್ ಸಿಂಗ್ ಅವರ ಭಾಷಣದ ಅಧಿಕೃತ ಲಿಖಿತ ರೂಪ ನಮಗೆ ದೊರೆತಿದೆ. ಆರ್ಕೈವ್‌ ಪ್ರಕಾರ, ಪ್ರಧಾನಿ ಮೋದಿ ಉಲ್ಲೇಖಿಸಿದ್ದು, 2006ರ ಡಿಸೆಂಬರ್ 9ರಂದು ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಅಭಿವೃದ್ಧಿ ಮಂಡಳಿಯ 52ನೇ ಸಭೆಯನ್ನು ಉದ್ದೇಶಿಸಿ ಮನಮೋಹನ್ ಸಿಂಗ್ ಅವರು ಮಾಡಿದ್ದ ಭಾಷಣದ ಕುರಿತು ಎಂಬುವುದು ಗೊತ್ತಾಗಿದೆ.

ತನ್ನ ಭಾಷಣದಲ್ಲಿ 11ನೇ ಪಂಚವಾರ್ಷಿಕ ಯೋಜನೆಯ ಪ್ರಸ್ತಾವನೆಯನ್ನು ಉಲ್ಲೇಖಿಸುತ್ತಾ “ವೇಗದ ಮತ್ತು ಸರ್ವರನ್ನು ಒಳಗೊಂಡ ಅಭಿವೃದ್ಧಿಯೆಡೆಗೆ” ಎಂಬ ವಿಷಯದ ಬಗ್ಗೆ ಸವಿಸ್ತಾರವಾಗಿ ಮನಮೋಹನ್ ಸಿಂಗ್ ಮಾತನಾಡಿದ್ದರು.

ಭಾಷಣದ ಕೊನೆಯಲ್ಲಿ “ನಮ್ಮ ಸಾಮೂಹಿಕ ಆದ್ಯತೆಗಳು ಸ್ಪಷ್ಟವಾಗಿವೆ ಎಂದು ನನಗೆ ನಂಬಿಕೆ ಇದೆ. ಕೃಷಿ, ನೀರಾವರಿ ಮತ್ತು ಜಲಸಂಪನ್ಮೂಲ, ಆರೋಗ್ಯ, ಶಿಕ್ಷಣ, ಗ್ರಾಮೀಣ ಮೂಲಸೌಕರ್ಯದಲ್ಲಿ ನಿರ್ಣಾಯಕ ಹೂಡಿಕೆ ಮತ್ತು ಸಾಮಾನ್ಯ ಮೂಲಸೌಕರ್ಯಗಳ ಅಗತ್ಯ ಸಾರ್ವಜನಿಕ ಹೂಡಿಕೆ ಅಗತ್ಯಗಳು, ಎಸ್‌ಸಿ/ಎಸ್‌ಟಿ, ಇತರ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಮತ್ತು ಮಕ್ಕಳ ಉನ್ನತಿಗಾಗಿ ಕಾರ್ಯಕ್ರಮಗಳ ಜೊತೆಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಘಟಕ ಯೋಜನೆಗಳನ್ನು ಪುನಶ್ಚೇತನಗೊಳಿಸಬೇಕಾಗಿದೆ. ಅಲ್ಪಸಂಖ್ಯಾತರು, ವಿಶೇಷವಾಗಿ ಮುಸ್ಲಿಂ ಅಲ್ಪಸಂಖ್ಯಾತರು, ಅಭಿವೃದ್ಧಿಯ ಫಲಗಳಲ್ಲಿ ಸಮಾನ ಪಾಲು ಪಡೆಯುವ ಹಕ್ಕು ಹೊಂದಲು ನಾವು ನವೀನ ಯೋಜನೆಗಳನ್ನು ರೂಪಿಸಬೇಕಾಗಿದೆ. ಸಂಪನ್ಮೂಲಗಳಲ್ಲಿ ಪಾಲು ಪಡೆಯುವ ಮೊದಲ ಹಕ್ಕು ಅವರಿಗೂ ಇರಬೇಕು” ಎಂದಿದ್ದರು.

ಮನಮೋಹನ್ ಸಿಂಗ್ ಅವರ ಭಾಷಣದ ಆರ್ಖೈವ್ ಇಲ್ಲಿದೆ 

‘ದಿ ಲಲ್ಲನ್‌ಟಾಪ್‌’ನ ಸೌರಭ್ ದ್ವಿವೇದಿ ಅವರು ಮೋದಿ ಉಲ್ಲೇಖಿಸಿದ ಮನಮೋಹನ್ ಸಿಂಗ್ ಅವರ ಭಾಷಣದ ನಿಜವಾದ ಅಂಶವನ್ನು ವಿಡಿಯೋ ಮೂಲಕ ವಿವರಿಸಿದ್ದಾರೆ. ಆ ವಿಡಿಯೋ ಲಿಂಕ್ ಕೆಳಗಿದೆ.

ಮೇಲೆ ನಾವು ಉಲ್ಲೇಖಿಸಿದ ಮೂಲಗಳ ಪ್ರಕಾರ, ಮನಮೋಹನ್ ಸಿಂಗ್ ಅವರು “ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗಿದೆ ಎಂದು ಹೇಳಿಲ್ಲ. ಬದಲಾಗಿ, ಸಂಪತ್ತಿನ ಸಮಾನ ಹಂಚಿಕೆಯಾಗಬೇಕು. ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೂ ಮೊದಲ ಹಕ್ಕು ಇರಬೇಕು” ಎಂದಿದ್ದಾರೆ.

ಇದರರ್ಥ ಇತರ ಧರ್ಮಿಯರಿಗೆ ಇರುವಂತೆ ಮುಸ್ಲಿಮರಿಗೂ ದೇಶದ ಸಂಪತ್ತಿನಲ್ಲಿ ಮೊದಲ ಹಕ್ಕು ಇರಬೇಕು. ಈ ಮೂಲಕ ಸಂಪತ್ತಿನ ಸಮಾನ ಹಂಚಿಕೆಯಾಗಬೇಕು. ತಾರತಮ್ಯ ಇರಬಾರದು ಎಂಬುವುದಾಗಿದೆ.

ಇದನ್ನೂ ಓದಿ : FACT CHECK: ಉತ್ತರ ಪ್ರದೇಶದಲ್ಲಿ ಬುರ್ಖಾಧಾರಿ ಮಹಿಳೆಯರಿಂದ ನಕಲಿ ಮತದಾನ ಎಂದು ಹಳೆಯ ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...