Homeಫ್ಯಾಕ್ಟ್‌ಚೆಕ್FACT CHECK: 'ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗೆ' ಎಂದು ಮನಮೋಹನ್ ಸಿಂಗ್ ಹೇಳಿಲ್ಲ

FACT CHECK: ‘ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗೆ’ ಎಂದು ಮನಮೋಹನ್ ಸಿಂಗ್ ಹೇಳಿಲ್ಲ

- Advertisement -
- Advertisement -

ಭಾನುವಾರ (ಏ.22) ರಾಜಸ್ಥಾನದ ಬನ್‌ಸ್ವಾರಾದಲ್ಲಿ ಬಿಜೆಪಿಯ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಮನಮೋಹನ್ ಅವರ ಹಳೆಯ ಹೇಳಿಕೆಯೊಂದನ್ನು ಉಲ್ಲೇಖಿಸಿದ್ದಾರೆ.

‘ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಅಧಿಕಾರ’ ಇರುವುದಾಗಿ ಮನಮೋಹನ್ ಸಿಂಗ್‌ ಹೇಳಿದ್ದಾರೆ ಎಂದು ಮೋದಿ ಪ್ರಸ್ತಾಪಿಸಿದ್ದಾರೆ. ಮೋದಿಯವರ ಭಾಷಣದ 1 ನಿಮಿಷ 13 ಸೆಕೆಂಡ್‌ಗಳ ವಿಡಿಯೋ ವೈರಲ್ ಆಗಿದೆ.

“ಈ ಹಿಂದಿನ ಸರ್ಕಾರದವರು ಹೇಳಿದ್ದರು. ಈ ದೇಶದ ಸಂಪತ್ತಿನ ಮೇಲಿನ ಮೊದಲ ಅಧಿಕಾರ ಮುಸ್ಲಿಮರಿಗಾಗಿದೆ. ಇದರರ್ಥ, ಈ ಸಂಪತ್ತನ್ನೆಲ್ಲಾ ಒಟ್ಟು ಮಾಡಿ, ಯಾರಿಗೆ ಹಂಚ್ತೀವಿ? ಯಾರಿಗೆ ಹೆಚ್ಚು ಮಕ್ಕಳಿದ್ದಾವೋ, ಅವರಿಗೆ ಹಂಚ್ತೀವಿ. ನುಸುಳುಕೋರರಿಗೆ ಹಂಚ್ತೀವಿ. ನಿಮ್ಮ ಶ್ರಮದ ಹಣವನ್ನು ನುಸುಳುಕೋರರಿಗೆ ಕೊಡಬಹುದಾ? ಇದಕ್ಕೆ ನಿಮ್ಮ ಒಪ್ಪಿಗೆ ಇದೆಯಾ? ಇದು ಕಾಂಗ್ರೆಸ್‌ನ ಪ್ರಣಾಳಿಕೆ ಹೇಳ್ತಿದೆ. ತಾಯಂದಿರು, ಸೋದರಿಯರ ಬಳಿಯ ಚಿನ್ನದ ಲೆಕ್ಕ ಹಾಕ್ತಾರೆ. ಅದನ್ನು ಜಪ್ತಿ ಮಾಡ್ತಾರೆ ಮತ್ತು ಆ ಸಂಪತ್ತನ್ನು ಹಂಚಿ ಬಿಡ್ತಾರೆ. ಯಾರಿಗೆ ಹಂಚ್ತಾರೆ ಅಂದ್ರೆ, ಮನಮೋಹನ್‌ ಸಿಂಗ್‌ ಹೇಳಿದ್ರಲ್ಲ, ‘ಸಂಪತ್ತಿನ ಮೇಲೆ ಮೊದಲ ಅಧಿಕಾರ ಇದೆ’ ಅಂತ ಅವರಿಗೆ ಹಂಚ್ತಾರೆ! ಈ ಅರ್ಬನ್‌ ನಕ್ಸಲ್‌ ಚಿಂತನೆ ತಾಯಂದಿರು, ಸೋದರಿಯರ ಮಂಗಳ ಸೂತ್ರವನ್ನೂ ಉಳಿಸುವುದಿಲ್ಲ!” ಎಂದು ಪ್ರಧಾನಿ ತನ್ನ ಭಾಷಣದಲ್ಲಿ ಹೇಳಿದ್ದಾರೆ.

ಫ್ಯಾಕ್ಟ್‌ಚೆಕ್ : ಪ್ರಧಾನಿ ನರೇಂದ್ರ ಮೋದಿ ಭಾಷಣದಲ್ಲಿ ಹೇಳಿದಂತೆ, ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರಾ? ಎಂಬುವುದರ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ನಾವು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹಳೆಯ ಭಾಷಣ ಹುಡುಕಾಡಿದ್ದೇವೆ. ಈ ವೇಳೆ ಏಪ್ರಿಲ್ 22,2024ರಂದು ಇಂಡಿಯಾ ಟುಡೇ ಚಾನೆಲ್ ತನ್ನ ಯೂಟ್ಯೂಬ್‌ನಲ್ಲಿ ಸಿಂಗ್ ಅವರ ಹಳೆ ಭಾಷಣ ಮತ್ತು ಮೋದಿಯವರ ವಿವಾದಾತ್ಮಕ ಹೇಳಿಕೆಯ ಕುರಿತು ಅಪ್ಲೋಡ್ ಮಾಡಿರುವ ವಿಡಿಯೋ ದೊರೆತಿದೆ.

ಯೂಟ್ಯೂಬ್ ವಿಡಿಯೋ ಲಿಂಕ್ ಇಲ್ಲಿದೆ

ಇಂಡಿಯಾ ಟುಡೇಯಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋದಲ್ಲಿ ಮನಮೋಹನ್ ಸಿಂಗ್ ಅವರು, “ಅಲ್ಪ ಸಂಖ್ಯಾತರು, ವಿಶೇಷವಾಗಿ ಮುಸ್ಲಿಂ ಅಲ್ಪ ಸಂಖ್ಯಾತರ ಅಭಿವೃದ್ದಿಗಾಗಿ ನಾವು ಹೊಸ ಹೊಸ ಯೋಜನೆಗಳನ್ನು ರೂಪಿಸಬೇಕು. ಸಂಪತ್ತಿನ ಸಮಾನ ಹಂಚಿಕೆಯಾಗಬೇಕು. ನಮ್ಮ ಸಂಪತ್ತಿನಲ್ಲಿ ಅವರಿಗೂ(ಮುಸ್ಲಿಮರಿಗೂ) ಮೊದಲ ಹಕ್ಕು ಇರಬೇಕು” ಎಂದಿದ್ದಾರೆ.

ನಾವು ವಿಡಿಯೋದಲ್ಲಿ ಗಮನಿಸಿದಂತೆ ಮನಮೋಹನ್ ಸಿಂಗ್ ಅವರು “ದೇಶದ ಸಂಪತ್ತಿನ ಹಂಚಿಕೆಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಇರಬೇಕು ಎಂದಿದ್ದಾರೆಯೇ ಹೊರತು, ಮುಸ್ಲಿಮರಿಗೆ ಮೊದಲ ಅಧಿಕಾರ ಇದೆ” ಎಂದಿಲ್ಲ.

ಪ್ರಧಾನಿ ಕಚೇರಿಯ ವೆಬ್‌ಸೈಟ್‌ನ ಆರ್ಕೈವ್‌ನಲ್ಲಿ ಮನಮೋಹನ್ ಸಿಂಗ್ ಅವರ ಭಾಷಣದ ಅಧಿಕೃತ ಲಿಖಿತ ರೂಪ ನಮಗೆ ದೊರೆತಿದೆ. ಆರ್ಕೈವ್‌ ಪ್ರಕಾರ, ಪ್ರಧಾನಿ ಮೋದಿ ಉಲ್ಲೇಖಿಸಿದ್ದು, 2006ರ ಡಿಸೆಂಬರ್ 9ರಂದು ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಅಭಿವೃದ್ಧಿ ಮಂಡಳಿಯ 52ನೇ ಸಭೆಯನ್ನು ಉದ್ದೇಶಿಸಿ ಮನಮೋಹನ್ ಸಿಂಗ್ ಅವರು ಮಾಡಿದ್ದ ಭಾಷಣದ ಕುರಿತು ಎಂಬುವುದು ಗೊತ್ತಾಗಿದೆ.

ತನ್ನ ಭಾಷಣದಲ್ಲಿ 11ನೇ ಪಂಚವಾರ್ಷಿಕ ಯೋಜನೆಯ ಪ್ರಸ್ತಾವನೆಯನ್ನು ಉಲ್ಲೇಖಿಸುತ್ತಾ “ವೇಗದ ಮತ್ತು ಸರ್ವರನ್ನು ಒಳಗೊಂಡ ಅಭಿವೃದ್ಧಿಯೆಡೆಗೆ” ಎಂಬ ವಿಷಯದ ಬಗ್ಗೆ ಸವಿಸ್ತಾರವಾಗಿ ಮನಮೋಹನ್ ಸಿಂಗ್ ಮಾತನಾಡಿದ್ದರು.

ಭಾಷಣದ ಕೊನೆಯಲ್ಲಿ “ನಮ್ಮ ಸಾಮೂಹಿಕ ಆದ್ಯತೆಗಳು ಸ್ಪಷ್ಟವಾಗಿವೆ ಎಂದು ನನಗೆ ನಂಬಿಕೆ ಇದೆ. ಕೃಷಿ, ನೀರಾವರಿ ಮತ್ತು ಜಲಸಂಪನ್ಮೂಲ, ಆರೋಗ್ಯ, ಶಿಕ್ಷಣ, ಗ್ರಾಮೀಣ ಮೂಲಸೌಕರ್ಯದಲ್ಲಿ ನಿರ್ಣಾಯಕ ಹೂಡಿಕೆ ಮತ್ತು ಸಾಮಾನ್ಯ ಮೂಲಸೌಕರ್ಯಗಳ ಅಗತ್ಯ ಸಾರ್ವಜನಿಕ ಹೂಡಿಕೆ ಅಗತ್ಯಗಳು, ಎಸ್‌ಸಿ/ಎಸ್‌ಟಿ, ಇತರ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಮತ್ತು ಮಕ್ಕಳ ಉನ್ನತಿಗಾಗಿ ಕಾರ್ಯಕ್ರಮಗಳ ಜೊತೆಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಘಟಕ ಯೋಜನೆಗಳನ್ನು ಪುನಶ್ಚೇತನಗೊಳಿಸಬೇಕಾಗಿದೆ. ಅಲ್ಪಸಂಖ್ಯಾತರು, ವಿಶೇಷವಾಗಿ ಮುಸ್ಲಿಂ ಅಲ್ಪಸಂಖ್ಯಾತರು, ಅಭಿವೃದ್ಧಿಯ ಫಲಗಳಲ್ಲಿ ಸಮಾನ ಪಾಲು ಪಡೆಯುವ ಹಕ್ಕು ಹೊಂದಲು ನಾವು ನವೀನ ಯೋಜನೆಗಳನ್ನು ರೂಪಿಸಬೇಕಾಗಿದೆ. ಸಂಪನ್ಮೂಲಗಳಲ್ಲಿ ಪಾಲು ಪಡೆಯುವ ಮೊದಲ ಹಕ್ಕು ಅವರಿಗೂ ಇರಬೇಕು” ಎಂದಿದ್ದರು.

ಮನಮೋಹನ್ ಸಿಂಗ್ ಅವರ ಭಾಷಣದ ಆರ್ಖೈವ್ ಇಲ್ಲಿದೆ 

‘ದಿ ಲಲ್ಲನ್‌ಟಾಪ್‌’ನ ಸೌರಭ್ ದ್ವಿವೇದಿ ಅವರು ಮೋದಿ ಉಲ್ಲೇಖಿಸಿದ ಮನಮೋಹನ್ ಸಿಂಗ್ ಅವರ ಭಾಷಣದ ನಿಜವಾದ ಅಂಶವನ್ನು ವಿಡಿಯೋ ಮೂಲಕ ವಿವರಿಸಿದ್ದಾರೆ. ಆ ವಿಡಿಯೋ ಲಿಂಕ್ ಕೆಳಗಿದೆ.

ಮೇಲೆ ನಾವು ಉಲ್ಲೇಖಿಸಿದ ಮೂಲಗಳ ಪ್ರಕಾರ, ಮನಮೋಹನ್ ಸಿಂಗ್ ಅವರು “ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗಿದೆ ಎಂದು ಹೇಳಿಲ್ಲ. ಬದಲಾಗಿ, ಸಂಪತ್ತಿನ ಸಮಾನ ಹಂಚಿಕೆಯಾಗಬೇಕು. ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೂ ಮೊದಲ ಹಕ್ಕು ಇರಬೇಕು” ಎಂದಿದ್ದಾರೆ.

ಇದರರ್ಥ ಇತರ ಧರ್ಮಿಯರಿಗೆ ಇರುವಂತೆ ಮುಸ್ಲಿಮರಿಗೂ ದೇಶದ ಸಂಪತ್ತಿನಲ್ಲಿ ಮೊದಲ ಹಕ್ಕು ಇರಬೇಕು. ಈ ಮೂಲಕ ಸಂಪತ್ತಿನ ಸಮಾನ ಹಂಚಿಕೆಯಾಗಬೇಕು. ತಾರತಮ್ಯ ಇರಬಾರದು ಎಂಬುವುದಾಗಿದೆ.

ಇದನ್ನೂ ಓದಿ : FACT CHECK: ಉತ್ತರ ಪ್ರದೇಶದಲ್ಲಿ ಬುರ್ಖಾಧಾರಿ ಮಹಿಳೆಯರಿಂದ ನಕಲಿ ಮತದಾನ ಎಂದು ಹಳೆಯ ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...