Homeಫ್ಯಾಕ್ಟ್‌ಚೆಕ್FACT CHECK: 'ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗೆ' ಎಂದು ಮನಮೋಹನ್ ಸಿಂಗ್ ಹೇಳಿಲ್ಲ

FACT CHECK: ‘ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗೆ’ ಎಂದು ಮನಮೋಹನ್ ಸಿಂಗ್ ಹೇಳಿಲ್ಲ

- Advertisement -
- Advertisement -

ಭಾನುವಾರ (ಏ.22) ರಾಜಸ್ಥಾನದ ಬನ್‌ಸ್ವಾರಾದಲ್ಲಿ ಬಿಜೆಪಿಯ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಮನಮೋಹನ್ ಅವರ ಹಳೆಯ ಹೇಳಿಕೆಯೊಂದನ್ನು ಉಲ್ಲೇಖಿಸಿದ್ದಾರೆ.

‘ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಅಧಿಕಾರ’ ಇರುವುದಾಗಿ ಮನಮೋಹನ್ ಸಿಂಗ್‌ ಹೇಳಿದ್ದಾರೆ ಎಂದು ಮೋದಿ ಪ್ರಸ್ತಾಪಿಸಿದ್ದಾರೆ. ಮೋದಿಯವರ ಭಾಷಣದ 1 ನಿಮಿಷ 13 ಸೆಕೆಂಡ್‌ಗಳ ವಿಡಿಯೋ ವೈರಲ್ ಆಗಿದೆ.

“ಈ ಹಿಂದಿನ ಸರ್ಕಾರದವರು ಹೇಳಿದ್ದರು. ಈ ದೇಶದ ಸಂಪತ್ತಿನ ಮೇಲಿನ ಮೊದಲ ಅಧಿಕಾರ ಮುಸ್ಲಿಮರಿಗಾಗಿದೆ. ಇದರರ್ಥ, ಈ ಸಂಪತ್ತನ್ನೆಲ್ಲಾ ಒಟ್ಟು ಮಾಡಿ, ಯಾರಿಗೆ ಹಂಚ್ತೀವಿ? ಯಾರಿಗೆ ಹೆಚ್ಚು ಮಕ್ಕಳಿದ್ದಾವೋ, ಅವರಿಗೆ ಹಂಚ್ತೀವಿ. ನುಸುಳುಕೋರರಿಗೆ ಹಂಚ್ತೀವಿ. ನಿಮ್ಮ ಶ್ರಮದ ಹಣವನ್ನು ನುಸುಳುಕೋರರಿಗೆ ಕೊಡಬಹುದಾ? ಇದಕ್ಕೆ ನಿಮ್ಮ ಒಪ್ಪಿಗೆ ಇದೆಯಾ? ಇದು ಕಾಂಗ್ರೆಸ್‌ನ ಪ್ರಣಾಳಿಕೆ ಹೇಳ್ತಿದೆ. ತಾಯಂದಿರು, ಸೋದರಿಯರ ಬಳಿಯ ಚಿನ್ನದ ಲೆಕ್ಕ ಹಾಕ್ತಾರೆ. ಅದನ್ನು ಜಪ್ತಿ ಮಾಡ್ತಾರೆ ಮತ್ತು ಆ ಸಂಪತ್ತನ್ನು ಹಂಚಿ ಬಿಡ್ತಾರೆ. ಯಾರಿಗೆ ಹಂಚ್ತಾರೆ ಅಂದ್ರೆ, ಮನಮೋಹನ್‌ ಸಿಂಗ್‌ ಹೇಳಿದ್ರಲ್ಲ, ‘ಸಂಪತ್ತಿನ ಮೇಲೆ ಮೊದಲ ಅಧಿಕಾರ ಇದೆ’ ಅಂತ ಅವರಿಗೆ ಹಂಚ್ತಾರೆ! ಈ ಅರ್ಬನ್‌ ನಕ್ಸಲ್‌ ಚಿಂತನೆ ತಾಯಂದಿರು, ಸೋದರಿಯರ ಮಂಗಳ ಸೂತ್ರವನ್ನೂ ಉಳಿಸುವುದಿಲ್ಲ!” ಎಂದು ಪ್ರಧಾನಿ ತನ್ನ ಭಾಷಣದಲ್ಲಿ ಹೇಳಿದ್ದಾರೆ.

ಫ್ಯಾಕ್ಟ್‌ಚೆಕ್ : ಪ್ರಧಾನಿ ನರೇಂದ್ರ ಮೋದಿ ಭಾಷಣದಲ್ಲಿ ಹೇಳಿದಂತೆ, ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರಾ? ಎಂಬುವುದರ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ನಾವು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹಳೆಯ ಭಾಷಣ ಹುಡುಕಾಡಿದ್ದೇವೆ. ಈ ವೇಳೆ ಏಪ್ರಿಲ್ 22,2024ರಂದು ಇಂಡಿಯಾ ಟುಡೇ ಚಾನೆಲ್ ತನ್ನ ಯೂಟ್ಯೂಬ್‌ನಲ್ಲಿ ಸಿಂಗ್ ಅವರ ಹಳೆ ಭಾಷಣ ಮತ್ತು ಮೋದಿಯವರ ವಿವಾದಾತ್ಮಕ ಹೇಳಿಕೆಯ ಕುರಿತು ಅಪ್ಲೋಡ್ ಮಾಡಿರುವ ವಿಡಿಯೋ ದೊರೆತಿದೆ.

ಯೂಟ್ಯೂಬ್ ವಿಡಿಯೋ ಲಿಂಕ್ ಇಲ್ಲಿದೆ

ಇಂಡಿಯಾ ಟುಡೇಯಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋದಲ್ಲಿ ಮನಮೋಹನ್ ಸಿಂಗ್ ಅವರು, “ಅಲ್ಪ ಸಂಖ್ಯಾತರು, ವಿಶೇಷವಾಗಿ ಮುಸ್ಲಿಂ ಅಲ್ಪ ಸಂಖ್ಯಾತರ ಅಭಿವೃದ್ದಿಗಾಗಿ ನಾವು ಹೊಸ ಹೊಸ ಯೋಜನೆಗಳನ್ನು ರೂಪಿಸಬೇಕು. ಸಂಪತ್ತಿನ ಸಮಾನ ಹಂಚಿಕೆಯಾಗಬೇಕು. ನಮ್ಮ ಸಂಪತ್ತಿನಲ್ಲಿ ಅವರಿಗೂ(ಮುಸ್ಲಿಮರಿಗೂ) ಮೊದಲ ಹಕ್ಕು ಇರಬೇಕು” ಎಂದಿದ್ದಾರೆ.

ನಾವು ವಿಡಿಯೋದಲ್ಲಿ ಗಮನಿಸಿದಂತೆ ಮನಮೋಹನ್ ಸಿಂಗ್ ಅವರು “ದೇಶದ ಸಂಪತ್ತಿನ ಹಂಚಿಕೆಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಇರಬೇಕು ಎಂದಿದ್ದಾರೆಯೇ ಹೊರತು, ಮುಸ್ಲಿಮರಿಗೆ ಮೊದಲ ಅಧಿಕಾರ ಇದೆ” ಎಂದಿಲ್ಲ.

ಪ್ರಧಾನಿ ಕಚೇರಿಯ ವೆಬ್‌ಸೈಟ್‌ನ ಆರ್ಕೈವ್‌ನಲ್ಲಿ ಮನಮೋಹನ್ ಸಿಂಗ್ ಅವರ ಭಾಷಣದ ಅಧಿಕೃತ ಲಿಖಿತ ರೂಪ ನಮಗೆ ದೊರೆತಿದೆ. ಆರ್ಕೈವ್‌ ಪ್ರಕಾರ, ಪ್ರಧಾನಿ ಮೋದಿ ಉಲ್ಲೇಖಿಸಿದ್ದು, 2006ರ ಡಿಸೆಂಬರ್ 9ರಂದು ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಅಭಿವೃದ್ಧಿ ಮಂಡಳಿಯ 52ನೇ ಸಭೆಯನ್ನು ಉದ್ದೇಶಿಸಿ ಮನಮೋಹನ್ ಸಿಂಗ್ ಅವರು ಮಾಡಿದ್ದ ಭಾಷಣದ ಕುರಿತು ಎಂಬುವುದು ಗೊತ್ತಾಗಿದೆ.

ತನ್ನ ಭಾಷಣದಲ್ಲಿ 11ನೇ ಪಂಚವಾರ್ಷಿಕ ಯೋಜನೆಯ ಪ್ರಸ್ತಾವನೆಯನ್ನು ಉಲ್ಲೇಖಿಸುತ್ತಾ “ವೇಗದ ಮತ್ತು ಸರ್ವರನ್ನು ಒಳಗೊಂಡ ಅಭಿವೃದ್ಧಿಯೆಡೆಗೆ” ಎಂಬ ವಿಷಯದ ಬಗ್ಗೆ ಸವಿಸ್ತಾರವಾಗಿ ಮನಮೋಹನ್ ಸಿಂಗ್ ಮಾತನಾಡಿದ್ದರು.

ಭಾಷಣದ ಕೊನೆಯಲ್ಲಿ “ನಮ್ಮ ಸಾಮೂಹಿಕ ಆದ್ಯತೆಗಳು ಸ್ಪಷ್ಟವಾಗಿವೆ ಎಂದು ನನಗೆ ನಂಬಿಕೆ ಇದೆ. ಕೃಷಿ, ನೀರಾವರಿ ಮತ್ತು ಜಲಸಂಪನ್ಮೂಲ, ಆರೋಗ್ಯ, ಶಿಕ್ಷಣ, ಗ್ರಾಮೀಣ ಮೂಲಸೌಕರ್ಯದಲ್ಲಿ ನಿರ್ಣಾಯಕ ಹೂಡಿಕೆ ಮತ್ತು ಸಾಮಾನ್ಯ ಮೂಲಸೌಕರ್ಯಗಳ ಅಗತ್ಯ ಸಾರ್ವಜನಿಕ ಹೂಡಿಕೆ ಅಗತ್ಯಗಳು, ಎಸ್‌ಸಿ/ಎಸ್‌ಟಿ, ಇತರ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಮತ್ತು ಮಕ್ಕಳ ಉನ್ನತಿಗಾಗಿ ಕಾರ್ಯಕ್ರಮಗಳ ಜೊತೆಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಘಟಕ ಯೋಜನೆಗಳನ್ನು ಪುನಶ್ಚೇತನಗೊಳಿಸಬೇಕಾಗಿದೆ. ಅಲ್ಪಸಂಖ್ಯಾತರು, ವಿಶೇಷವಾಗಿ ಮುಸ್ಲಿಂ ಅಲ್ಪಸಂಖ್ಯಾತರು, ಅಭಿವೃದ್ಧಿಯ ಫಲಗಳಲ್ಲಿ ಸಮಾನ ಪಾಲು ಪಡೆಯುವ ಹಕ್ಕು ಹೊಂದಲು ನಾವು ನವೀನ ಯೋಜನೆಗಳನ್ನು ರೂಪಿಸಬೇಕಾಗಿದೆ. ಸಂಪನ್ಮೂಲಗಳಲ್ಲಿ ಪಾಲು ಪಡೆಯುವ ಮೊದಲ ಹಕ್ಕು ಅವರಿಗೂ ಇರಬೇಕು” ಎಂದಿದ್ದರು.

ಮನಮೋಹನ್ ಸಿಂಗ್ ಅವರ ಭಾಷಣದ ಆರ್ಖೈವ್ ಇಲ್ಲಿದೆ 

‘ದಿ ಲಲ್ಲನ್‌ಟಾಪ್‌’ನ ಸೌರಭ್ ದ್ವಿವೇದಿ ಅವರು ಮೋದಿ ಉಲ್ಲೇಖಿಸಿದ ಮನಮೋಹನ್ ಸಿಂಗ್ ಅವರ ಭಾಷಣದ ನಿಜವಾದ ಅಂಶವನ್ನು ವಿಡಿಯೋ ಮೂಲಕ ವಿವರಿಸಿದ್ದಾರೆ. ಆ ವಿಡಿಯೋ ಲಿಂಕ್ ಕೆಳಗಿದೆ.

ಮೇಲೆ ನಾವು ಉಲ್ಲೇಖಿಸಿದ ಮೂಲಗಳ ಪ್ರಕಾರ, ಮನಮೋಹನ್ ಸಿಂಗ್ ಅವರು “ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗಿದೆ ಎಂದು ಹೇಳಿಲ್ಲ. ಬದಲಾಗಿ, ಸಂಪತ್ತಿನ ಸಮಾನ ಹಂಚಿಕೆಯಾಗಬೇಕು. ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೂ ಮೊದಲ ಹಕ್ಕು ಇರಬೇಕು” ಎಂದಿದ್ದಾರೆ.

ಇದರರ್ಥ ಇತರ ಧರ್ಮಿಯರಿಗೆ ಇರುವಂತೆ ಮುಸ್ಲಿಮರಿಗೂ ದೇಶದ ಸಂಪತ್ತಿನಲ್ಲಿ ಮೊದಲ ಹಕ್ಕು ಇರಬೇಕು. ಈ ಮೂಲಕ ಸಂಪತ್ತಿನ ಸಮಾನ ಹಂಚಿಕೆಯಾಗಬೇಕು. ತಾರತಮ್ಯ ಇರಬಾರದು ಎಂಬುವುದಾಗಿದೆ.

ಇದನ್ನೂ ಓದಿ : FACT CHECK: ಉತ್ತರ ಪ್ರದೇಶದಲ್ಲಿ ಬುರ್ಖಾಧಾರಿ ಮಹಿಳೆಯರಿಂದ ನಕಲಿ ಮತದಾನ ಎಂದು ಹಳೆಯ ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...