Homeಫ್ಯಾಕ್ಟ್‌ಚೆಕ್FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ...

FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮಗಳು

- Advertisement -
- Advertisement -

ಹಿಂದೂ ಸಾಧುಗಳ ರೀತಿ ವಸ್ತ್ರ ಧರಿಸಿ, ಹಣೆ ಮೇಲೆ ವಿಭೂತಿ ಹಚ್ಚಿರುವ ಮೂವರು ಗಡ್ಡದಾರಿ ವ್ಯಕ್ತಿಗಳ ಜೊತೆ ಜನರ ಗುಂಪೊಂದು ವಾಗ್ವಾದ ನಡೆಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿ ‘ಮೂವರು ಸಾಧುಗಳನ್ನು ವ್ಯಕ್ತಿಯೊಬ್ಬ”ನಿಮಗೆ ಎಷ್ಟು ದೇವರ ನಾಮಗಳು ಗೊತ್ತಿದೆ?” ಎಂದು ಪ್ರಶ್ನಿಸುವುದು ಮತ್ತು ಇತರ ವ್ಯಕ್ತಿಗಳಿಗೆ ” ಇವರು ನಿಜವಾದ ಸಾಧುಗಳಲ್ಲ, ಸಾಧುಗಳ ವೇಷ ಧರಿಸಿರುವ ಮುಸ್ಲಿಮರು. ಇವರಲ್ಲಿ ಒಬ್ಬಾತನ ಹೆಸರು ಸಲ್ಮಾನ್ ” ಎಂದು ಹೇಳುತ್ತಿರುವುದು ಇದೆ.

ಈ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಂಡಿರುವ ಸಾಮಾಜಿಕ ಜಾಲತಾಣ ಬಳಕೆದಾರರು, “ಹಿಂದೂ ಸಾಧುಗಳ ವೇಷ ಧರಿಸಿದ್ದ ಓಡಾಡುತ್ತಿದ್ದ ಮುಸ್ಲಿಮರು ಸಿಕ್ಕಿ ಬಿದ್ದಿದ್ದಾರೆ” ಎಂದು ಪ್ರತಿಪಾದಿಸಿದ್ದಾರೆ.

ನವೆಂಬರ್ 2ರಂದು ಈ ವೈರಲ್ ವಿಡಿಯೋವನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದ ಗುಜರಾತ್ ಭಾಷೆಯ ಸುದ್ದಿವಾಹಿನಿ ಝೀ 24 ಕಾಲಕ್‘ “ಸಾಧುವಿನ ವೇಷದಲ್ಲಿದ್ದ ಸಲ್ಮಾನ್ ಸಿಕ್ಕಿಬಿದ್ದ! ಸೂರತ್‌ನಲ್ಲಿ ಸಾಧುಗಳಂತೆ ಭಿಕ್ಷೆ ಬೇಡುತ್ತಿದ್ದವರ ವಂಚನೆ ಐಡಿ ಪರಿಶೀಲಿಸಿದಾಗ ಬಹಿರಂಗಗೊಂಡಿದೆ” ಎಂದು ಬರೆದುಕೊಂಡಿತ್ತು. ಈಗಲೂ

ಬಲಪಂಥೀಯ ಸುದ್ದಿ ಸಂಸ್ಥೆ ‘ಓಪ್‌ ಇಂಡಿಯಾ‘ ಕೂಡ ನವೆಂಬರ್ 24ರಂದು ವೈರಲ್ ವಿಡಿಯೋ ಹಂಚಿಕೊಂಡು “ಸಲ್ಮಾನ್ ಮತ್ತು ಆತನ ಸಹಚರರು ಕೇಸರಿ ಬಟ್ಟೆ ಧರಿಸಿ ಭಿಕ್ಷೆ ಬೇಡುತ್ತಿದ್ದರು. ಗುರುತಿನ ಚೀಟಿಯ ಮೂಲಕ ಅವರ ನಿಜವಾದ ಗುರುತು ಬಯಲಾಗಿದೆ. ಅವರಿಗೆ ಯಾವುದೇ ಶ್ಲೋಕ ಪಠಿಸಲು ಅಥವಾ ಹಿಂದೂ ದೇವರು ಮತ್ತು ದೇವತೆಗಳ ಹೆಸರು ಸರಿಯಾಗಿ ಹೇಳಲು ಸಾಧ್ಯವಾಗಿಲ್ಲ” ಎಂದು ಬರೆದುಕೊಂಡಿತ್ತು.

ಮತ್ತೊಂದು ಬಲಪಂಥೀಯ ಸುದ್ದಿ ಸಂಸ್ಥೆ ಸುದರ್ಶನ್ ನ್ಯೂಸ್ ಕೂಡ ನವೆಂಬರ್ 4ರಂದು ವೈರಲ್ ವಿಡಿಯೋ ಹಂಚಿಕೊಂಡು “ಗುಜರಾತ್‌ನ ಸೂರತ್‌ನಲ್ಲಿ, ‘ಜಿಹಾದಿ’ ಸಲ್ಮಾನ್ ಮತ್ತು ಆತನ ಗ್ಯಾಂಗ್ ಸಾಧುಗಳಂತೆ ಪೋಸು ಕೊಡುತ್ತಾ ಭಿಕ್ಷೆ ಬೇಡುತ್ತಿದ್ದರು… ಕೇಸರಿ ವಸ್ತ್ರಗಳನ್ನು ಧರಿಸಿ ಸಾಧುಗಳಂತೆ ಪೋಸು ಕೊಡುತ್ತಿದ್ದ ಮೂವರು ‘ಜಿಹಾದಿ’ಗಳನ್ನು ಬಂಧಿಸಲಾಗಿದೆ” ಎಂದು ಬರೆದುಕೊಂಡಿತ್ತು.

ನವೆಂಬರ್ 4ರಂದು ಎಕ್ಸ್‌ನಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದ ಆರ್‌ಎಸ್‌ಎಸ್‌ ಮುಖವಾಣಿ ಪಾಂಚಜನ್ಯ “ಸಾಧುಗಳ ವೇಷದಲ್ಲಿ ಸಿಕ್ಕಿಬಿದ್ದ ಮುಸ್ಲಿಮರು! ನೀವು ಸಾಧು ಆಗಲು ಬಯಸಿದರೆ, ಏಕೆ ಹಿಂದೂ ಆಗಬಾರದು? ಸಲ್ಮಾನ್ ಎಂಬ ಮುಸ್ಲಿಂ ವ್ಯಕ್ತಿ, ಕೇಸರಿ ವೇಷ ಧರಿಸಿ ಸಾಧುವಿನಂತೆ ಪೋಸು ಕೊಟ್ಟು ಭಿಕ್ಷೆ ಬೇಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಈ ಘಟನೆ ಗುಜರಾತ್‌ನ ಸೂರತ್‌ನಲ್ಲಿ ನವೆಂಬರ್ 3,2024 ರಂದು ನಡೆದಿದ್ದು, ನಂತರ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಇದೇ ಮೊದಲಲ್ಲ-ಸಾಧುಗಳ ವೇಷ ಧರಿಸಿದ ಮುಸ್ಲಿಮರು ಈ ಹಿಂದೆ 16 ಬಾರಿ ಸಿಕ್ಕಿಬಿದ್ದಿದ್ದಾರೆ” ಎಂದು ಬರೆದುಕೊಂಡಿತ್ತು.

ಇನ್ನೂ ಅನೇಕ ಬಲಪಂಥೀಯ ಸುದ್ದಿ ಸಂಸ್ಥೆಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋ, ಫೋಟೋ ಹಂಚಿಕೊಂಡು ಮುಸ್ಲಿಮರು ಹಿಂದೂ ಸಾಧುಗಳ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದಾಗ ಸಿಕ್ಕಿ ಬಿದ್ದಿದ್ದಾರೆ” ಎಂದು ಬರೆದುಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಈ ಬಗ್ಗೆ ವರದಿಗಳನ್ನು ಹುಡುಕಿದ್ದೇವೆ. ಈ ವೇಳೆ ದೈನಿಕ್ ಭಾಸ್ಕರ್ ಗ್ರೂಪ್‌ನ ಗುಜರಾತಿ ದಿನಪತ್ರಿಕೆ ದಿವ್ಯಾ ಭಾಸ್ಕರ್ ನವೆಂಬರ್ 4ರಂದು ವಿಡಿಯೋ ಕುರಿತು ಪ್ರಕಟಿಸಿದ ವರದಿ ಲಭ್ಯವಾಗಿದೆ. ಅದರಲ್ಲಿ “ಪೊಲೀಸ್ ತನಿಖೆಯ ನಂತರ ವಿಡಿಯೋದಲ್ಲಿರುವ ಮೂವರೂ ಸಾಧುಗಳು ಹಿಂದೂಗಳು ಮತ್ತು ಅವರು ಜುನಾಗಢದಿಂದ ಬಂದವರು ಎಂದು ತಿಳಿದು ಬಂದಿದೆ” ಎಂಬುವುದಾಗಿ ಹೇಳಿದೆ.

“ಮೂವರು ಸಾಧುಗಳು ಅನುಮಾನಾಸ್ಪದವಾಗಿ ಕಂಡು ಬಂದಿದ್ದರು. ನಂತರ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ವಿಚಾರಣೆ ವೇಳೆ ಅವರು ನೀಡಿದ ಮಾಹಿತಿ ಆಧರಿಸಿ ಜುನಾಗಢದಲ್ಲೂ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಅವರು ನೀಡಿರುವ ಮಾಹಿತಿ ಸರಿಯಾಗಿರುವುದು ಗೊತ್ತಾಗಿದೆ. ಮೂವರು ಸಾಧುಗಳಲ್ಲಿ ಒಬ್ಬರ ಹೆಸರು ‘ಸಲ್ಮಾನಾಥ್’. ಇದನ್ನು ಜನರು ಸಲ್ಮಾನ್ ಎಂದು ತಪ್ಪು ತಿಳಿದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ ಎಂದು” ದಿವ್ಯಾ ಭಾಸ್ಕರ್ ವರದಿ ವಿವರಿಸಿದೆ.

ಫ್ಯಾಕ್ಟ್‌ಚೆಕ್ ಸಂಸ್ಥೆ ‘ಸಲ್ಮಾನಾಥ್’ ಅವರ ಚುನಾವಣಾ ಗುರುತಿನ ಚೀಟಿಯನ್ನು ಹಂಚಿಕೊಂಡಿದೆ. ಅದರಲ್ಲಿ ಸಲ್ಮಾನಾಥ್ ಅವರ ತಂದೆ ಸೂರಮನಾಥ್ ಪರ್ಮಾರ್ ಎಂದು ಇದೆ. ಪರ್ಮಾರ್ ಎಂಬ ಉಪನಾಮವು ರಜಪೂತ ಸಮುದಾಯಕ್ಕೆ ಸಂಬಂಧಿಸಿದೆ. ಇವರು ಹೆಚ್ಚಾಗಿ ಉತ್ತರ ಮತ್ತು ಮಧ್ಯ ಭಾರತದಲ್ಲಿ, ವಿಶೇಷವಾಗಿ ರಾಜಸ್ಥಾನ, ಗುಜರಾತ್, ಪಂಜಾಬ್, ಹರಿಯಾಣ, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ ಮತ್ತು ಉತ್ತರ ಮಹಾರಾಷ್ಟ್ರದಲ್ಲಿ ನೆಲೆಗೊಂಡಿದ್ದಾರೆ.

pc : altnews.in

ಸಾಧುಗಳನ್ನು, ವಿಶೇಷವಾಗಿ ಮನೆಯಿಂದ ಮನೆಗೆ ತೆರಳಿ ಭಿಕ್ಷೆ ಬೇಡುವವರಿಗೆ ಮುಸ್ಲಿಮರು ಎಂದು ಆಧಾರರಹಿತ ಅನುಮಾನದ ಮೇಲೆ ಕಿರುಕುಳ ನೀಡುತ್ತಿರುವುದು ಇದೇ ಮೊದಲಲ್ಲ. ಈ ವರ್ಷದ ಜುಲೈನಲ್ಲಿ ಮೀರತ್‌ನಲ್ಲಿ ಮೂವರು ಸಾಧುಗಳ ಗುಂಪಿಗೆ ಮುಸ್ಲಿಮರು ಎಂಬ ಹಣೆಪಟ್ಟಿ ಕಟ್ಟಲಾಗಿತ್ತು. ಅಲೆದಾಡುವ ಸನ್ಯಾಸಿಗಳನ್ನು ಮಕ್ಕಳ ಅಪಹರಣಕಾರರು ಎಂದು ಸುಳ್ಳು ಆರೋಪ ಹೊರಿಸಿದ ಇತರ ನಿದರ್ಶನಗಳೂ ಇವೆ.

ಇದನ್ನೂ ಓದಿ | FACT CHECK : ಅಪಘಾತದ ವಿಡಿಯೋಗೆ ಕೋಮು ಬಣ್ಣ ಬಳಿದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...