Homeಫ್ಯಾಕ್ಟ್‌ಚೆಕ್FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ...

FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮಗಳು

- Advertisement -
- Advertisement -

ಹಿಂದೂ ಸಾಧುಗಳ ರೀತಿ ವಸ್ತ್ರ ಧರಿಸಿ, ಹಣೆ ಮೇಲೆ ವಿಭೂತಿ ಹಚ್ಚಿರುವ ಮೂವರು ಗಡ್ಡದಾರಿ ವ್ಯಕ್ತಿಗಳ ಜೊತೆ ಜನರ ಗುಂಪೊಂದು ವಾಗ್ವಾದ ನಡೆಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿ ‘ಮೂವರು ಸಾಧುಗಳನ್ನು ವ್ಯಕ್ತಿಯೊಬ್ಬ”ನಿಮಗೆ ಎಷ್ಟು ದೇವರ ನಾಮಗಳು ಗೊತ್ತಿದೆ?” ಎಂದು ಪ್ರಶ್ನಿಸುವುದು ಮತ್ತು ಇತರ ವ್ಯಕ್ತಿಗಳಿಗೆ ” ಇವರು ನಿಜವಾದ ಸಾಧುಗಳಲ್ಲ, ಸಾಧುಗಳ ವೇಷ ಧರಿಸಿರುವ ಮುಸ್ಲಿಮರು. ಇವರಲ್ಲಿ ಒಬ್ಬಾತನ ಹೆಸರು ಸಲ್ಮಾನ್ ” ಎಂದು ಹೇಳುತ್ತಿರುವುದು ಇದೆ.

ಈ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಂಡಿರುವ ಸಾಮಾಜಿಕ ಜಾಲತಾಣ ಬಳಕೆದಾರರು, “ಹಿಂದೂ ಸಾಧುಗಳ ವೇಷ ಧರಿಸಿದ್ದ ಓಡಾಡುತ್ತಿದ್ದ ಮುಸ್ಲಿಮರು ಸಿಕ್ಕಿ ಬಿದ್ದಿದ್ದಾರೆ” ಎಂದು ಪ್ರತಿಪಾದಿಸಿದ್ದಾರೆ.

ನವೆಂಬರ್ 2ರಂದು ಈ ವೈರಲ್ ವಿಡಿಯೋವನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದ ಗುಜರಾತ್ ಭಾಷೆಯ ಸುದ್ದಿವಾಹಿನಿ ಝೀ 24 ಕಾಲಕ್‘ “ಸಾಧುವಿನ ವೇಷದಲ್ಲಿದ್ದ ಸಲ್ಮಾನ್ ಸಿಕ್ಕಿಬಿದ್ದ! ಸೂರತ್‌ನಲ್ಲಿ ಸಾಧುಗಳಂತೆ ಭಿಕ್ಷೆ ಬೇಡುತ್ತಿದ್ದವರ ವಂಚನೆ ಐಡಿ ಪರಿಶೀಲಿಸಿದಾಗ ಬಹಿರಂಗಗೊಂಡಿದೆ” ಎಂದು ಬರೆದುಕೊಂಡಿತ್ತು. ಈಗಲೂ

ಬಲಪಂಥೀಯ ಸುದ್ದಿ ಸಂಸ್ಥೆ ‘ಓಪ್‌ ಇಂಡಿಯಾ‘ ಕೂಡ ನವೆಂಬರ್ 24ರಂದು ವೈರಲ್ ವಿಡಿಯೋ ಹಂಚಿಕೊಂಡು “ಸಲ್ಮಾನ್ ಮತ್ತು ಆತನ ಸಹಚರರು ಕೇಸರಿ ಬಟ್ಟೆ ಧರಿಸಿ ಭಿಕ್ಷೆ ಬೇಡುತ್ತಿದ್ದರು. ಗುರುತಿನ ಚೀಟಿಯ ಮೂಲಕ ಅವರ ನಿಜವಾದ ಗುರುತು ಬಯಲಾಗಿದೆ. ಅವರಿಗೆ ಯಾವುದೇ ಶ್ಲೋಕ ಪಠಿಸಲು ಅಥವಾ ಹಿಂದೂ ದೇವರು ಮತ್ತು ದೇವತೆಗಳ ಹೆಸರು ಸರಿಯಾಗಿ ಹೇಳಲು ಸಾಧ್ಯವಾಗಿಲ್ಲ” ಎಂದು ಬರೆದುಕೊಂಡಿತ್ತು.

ಮತ್ತೊಂದು ಬಲಪಂಥೀಯ ಸುದ್ದಿ ಸಂಸ್ಥೆ ಸುದರ್ಶನ್ ನ್ಯೂಸ್ ಕೂಡ ನವೆಂಬರ್ 4ರಂದು ವೈರಲ್ ವಿಡಿಯೋ ಹಂಚಿಕೊಂಡು “ಗುಜರಾತ್‌ನ ಸೂರತ್‌ನಲ್ಲಿ, ‘ಜಿಹಾದಿ’ ಸಲ್ಮಾನ್ ಮತ್ತು ಆತನ ಗ್ಯಾಂಗ್ ಸಾಧುಗಳಂತೆ ಪೋಸು ಕೊಡುತ್ತಾ ಭಿಕ್ಷೆ ಬೇಡುತ್ತಿದ್ದರು… ಕೇಸರಿ ವಸ್ತ್ರಗಳನ್ನು ಧರಿಸಿ ಸಾಧುಗಳಂತೆ ಪೋಸು ಕೊಡುತ್ತಿದ್ದ ಮೂವರು ‘ಜಿಹಾದಿ’ಗಳನ್ನು ಬಂಧಿಸಲಾಗಿದೆ” ಎಂದು ಬರೆದುಕೊಂಡಿತ್ತು.

ನವೆಂಬರ್ 4ರಂದು ಎಕ್ಸ್‌ನಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದ ಆರ್‌ಎಸ್‌ಎಸ್‌ ಮುಖವಾಣಿ ಪಾಂಚಜನ್ಯ “ಸಾಧುಗಳ ವೇಷದಲ್ಲಿ ಸಿಕ್ಕಿಬಿದ್ದ ಮುಸ್ಲಿಮರು! ನೀವು ಸಾಧು ಆಗಲು ಬಯಸಿದರೆ, ಏಕೆ ಹಿಂದೂ ಆಗಬಾರದು? ಸಲ್ಮಾನ್ ಎಂಬ ಮುಸ್ಲಿಂ ವ್ಯಕ್ತಿ, ಕೇಸರಿ ವೇಷ ಧರಿಸಿ ಸಾಧುವಿನಂತೆ ಪೋಸು ಕೊಟ್ಟು ಭಿಕ್ಷೆ ಬೇಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಈ ಘಟನೆ ಗುಜರಾತ್‌ನ ಸೂರತ್‌ನಲ್ಲಿ ನವೆಂಬರ್ 3,2024 ರಂದು ನಡೆದಿದ್ದು, ನಂತರ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಇದೇ ಮೊದಲಲ್ಲ-ಸಾಧುಗಳ ವೇಷ ಧರಿಸಿದ ಮುಸ್ಲಿಮರು ಈ ಹಿಂದೆ 16 ಬಾರಿ ಸಿಕ್ಕಿಬಿದ್ದಿದ್ದಾರೆ” ಎಂದು ಬರೆದುಕೊಂಡಿತ್ತು.

ಇನ್ನೂ ಅನೇಕ ಬಲಪಂಥೀಯ ಸುದ್ದಿ ಸಂಸ್ಥೆಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋ, ಫೋಟೋ ಹಂಚಿಕೊಂಡು ಮುಸ್ಲಿಮರು ಹಿಂದೂ ಸಾಧುಗಳ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದಾಗ ಸಿಕ್ಕಿ ಬಿದ್ದಿದ್ದಾರೆ” ಎಂದು ಬರೆದುಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಈ ಬಗ್ಗೆ ವರದಿಗಳನ್ನು ಹುಡುಕಿದ್ದೇವೆ. ಈ ವೇಳೆ ದೈನಿಕ್ ಭಾಸ್ಕರ್ ಗ್ರೂಪ್‌ನ ಗುಜರಾತಿ ದಿನಪತ್ರಿಕೆ ದಿವ್ಯಾ ಭಾಸ್ಕರ್ ನವೆಂಬರ್ 4ರಂದು ವಿಡಿಯೋ ಕುರಿತು ಪ್ರಕಟಿಸಿದ ವರದಿ ಲಭ್ಯವಾಗಿದೆ. ಅದರಲ್ಲಿ “ಪೊಲೀಸ್ ತನಿಖೆಯ ನಂತರ ವಿಡಿಯೋದಲ್ಲಿರುವ ಮೂವರೂ ಸಾಧುಗಳು ಹಿಂದೂಗಳು ಮತ್ತು ಅವರು ಜುನಾಗಢದಿಂದ ಬಂದವರು ಎಂದು ತಿಳಿದು ಬಂದಿದೆ” ಎಂಬುವುದಾಗಿ ಹೇಳಿದೆ.

“ಮೂವರು ಸಾಧುಗಳು ಅನುಮಾನಾಸ್ಪದವಾಗಿ ಕಂಡು ಬಂದಿದ್ದರು. ನಂತರ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ವಿಚಾರಣೆ ವೇಳೆ ಅವರು ನೀಡಿದ ಮಾಹಿತಿ ಆಧರಿಸಿ ಜುನಾಗಢದಲ್ಲೂ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಅವರು ನೀಡಿರುವ ಮಾಹಿತಿ ಸರಿಯಾಗಿರುವುದು ಗೊತ್ತಾಗಿದೆ. ಮೂವರು ಸಾಧುಗಳಲ್ಲಿ ಒಬ್ಬರ ಹೆಸರು ‘ಸಲ್ಮಾನಾಥ್’. ಇದನ್ನು ಜನರು ಸಲ್ಮಾನ್ ಎಂದು ತಪ್ಪು ತಿಳಿದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ ಎಂದು” ದಿವ್ಯಾ ಭಾಸ್ಕರ್ ವರದಿ ವಿವರಿಸಿದೆ.

ಫ್ಯಾಕ್ಟ್‌ಚೆಕ್ ಸಂಸ್ಥೆ ‘ಸಲ್ಮಾನಾಥ್’ ಅವರ ಚುನಾವಣಾ ಗುರುತಿನ ಚೀಟಿಯನ್ನು ಹಂಚಿಕೊಂಡಿದೆ. ಅದರಲ್ಲಿ ಸಲ್ಮಾನಾಥ್ ಅವರ ತಂದೆ ಸೂರಮನಾಥ್ ಪರ್ಮಾರ್ ಎಂದು ಇದೆ. ಪರ್ಮಾರ್ ಎಂಬ ಉಪನಾಮವು ರಜಪೂತ ಸಮುದಾಯಕ್ಕೆ ಸಂಬಂಧಿಸಿದೆ. ಇವರು ಹೆಚ್ಚಾಗಿ ಉತ್ತರ ಮತ್ತು ಮಧ್ಯ ಭಾರತದಲ್ಲಿ, ವಿಶೇಷವಾಗಿ ರಾಜಸ್ಥಾನ, ಗುಜರಾತ್, ಪಂಜಾಬ್, ಹರಿಯಾಣ, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ ಮತ್ತು ಉತ್ತರ ಮಹಾರಾಷ್ಟ್ರದಲ್ಲಿ ನೆಲೆಗೊಂಡಿದ್ದಾರೆ.

pc : altnews.in

ಸಾಧುಗಳನ್ನು, ವಿಶೇಷವಾಗಿ ಮನೆಯಿಂದ ಮನೆಗೆ ತೆರಳಿ ಭಿಕ್ಷೆ ಬೇಡುವವರಿಗೆ ಮುಸ್ಲಿಮರು ಎಂದು ಆಧಾರರಹಿತ ಅನುಮಾನದ ಮೇಲೆ ಕಿರುಕುಳ ನೀಡುತ್ತಿರುವುದು ಇದೇ ಮೊದಲಲ್ಲ. ಈ ವರ್ಷದ ಜುಲೈನಲ್ಲಿ ಮೀರತ್‌ನಲ್ಲಿ ಮೂವರು ಸಾಧುಗಳ ಗುಂಪಿಗೆ ಮುಸ್ಲಿಮರು ಎಂಬ ಹಣೆಪಟ್ಟಿ ಕಟ್ಟಲಾಗಿತ್ತು. ಅಲೆದಾಡುವ ಸನ್ಯಾಸಿಗಳನ್ನು ಮಕ್ಕಳ ಅಪಹರಣಕಾರರು ಎಂದು ಸುಳ್ಳು ಆರೋಪ ಹೊರಿಸಿದ ಇತರ ನಿದರ್ಶನಗಳೂ ಇವೆ.

ಇದನ್ನೂ ಓದಿ | FACT CHECK : ಅಪಘಾತದ ವಿಡಿಯೋಗೆ ಕೋಮು ಬಣ್ಣ ಬಳಿದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...