Homeಫ್ಯಾಕ್ಟ್‌ಚೆಕ್FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ...

FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮಗಳು

- Advertisement -
- Advertisement -

ಹಿಂದೂ ಸಾಧುಗಳ ರೀತಿ ವಸ್ತ್ರ ಧರಿಸಿ, ಹಣೆ ಮೇಲೆ ವಿಭೂತಿ ಹಚ್ಚಿರುವ ಮೂವರು ಗಡ್ಡದಾರಿ ವ್ಯಕ್ತಿಗಳ ಜೊತೆ ಜನರ ಗುಂಪೊಂದು ವಾಗ್ವಾದ ನಡೆಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿ ‘ಮೂವರು ಸಾಧುಗಳನ್ನು ವ್ಯಕ್ತಿಯೊಬ್ಬ”ನಿಮಗೆ ಎಷ್ಟು ದೇವರ ನಾಮಗಳು ಗೊತ್ತಿದೆ?” ಎಂದು ಪ್ರಶ್ನಿಸುವುದು ಮತ್ತು ಇತರ ವ್ಯಕ್ತಿಗಳಿಗೆ ” ಇವರು ನಿಜವಾದ ಸಾಧುಗಳಲ್ಲ, ಸಾಧುಗಳ ವೇಷ ಧರಿಸಿರುವ ಮುಸ್ಲಿಮರು. ಇವರಲ್ಲಿ ಒಬ್ಬಾತನ ಹೆಸರು ಸಲ್ಮಾನ್ ” ಎಂದು ಹೇಳುತ್ತಿರುವುದು ಇದೆ.

ಈ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಂಡಿರುವ ಸಾಮಾಜಿಕ ಜಾಲತಾಣ ಬಳಕೆದಾರರು, “ಹಿಂದೂ ಸಾಧುಗಳ ವೇಷ ಧರಿಸಿದ್ದ ಓಡಾಡುತ್ತಿದ್ದ ಮುಸ್ಲಿಮರು ಸಿಕ್ಕಿ ಬಿದ್ದಿದ್ದಾರೆ” ಎಂದು ಪ್ರತಿಪಾದಿಸಿದ್ದಾರೆ.

ನವೆಂಬರ್ 2ರಂದು ಈ ವೈರಲ್ ವಿಡಿಯೋವನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದ ಗುಜರಾತ್ ಭಾಷೆಯ ಸುದ್ದಿವಾಹಿನಿ ಝೀ 24 ಕಾಲಕ್‘ “ಸಾಧುವಿನ ವೇಷದಲ್ಲಿದ್ದ ಸಲ್ಮಾನ್ ಸಿಕ್ಕಿಬಿದ್ದ! ಸೂರತ್‌ನಲ್ಲಿ ಸಾಧುಗಳಂತೆ ಭಿಕ್ಷೆ ಬೇಡುತ್ತಿದ್ದವರ ವಂಚನೆ ಐಡಿ ಪರಿಶೀಲಿಸಿದಾಗ ಬಹಿರಂಗಗೊಂಡಿದೆ” ಎಂದು ಬರೆದುಕೊಂಡಿತ್ತು. ಈಗಲೂ

ಬಲಪಂಥೀಯ ಸುದ್ದಿ ಸಂಸ್ಥೆ ‘ಓಪ್‌ ಇಂಡಿಯಾ‘ ಕೂಡ ನವೆಂಬರ್ 24ರಂದು ವೈರಲ್ ವಿಡಿಯೋ ಹಂಚಿಕೊಂಡು “ಸಲ್ಮಾನ್ ಮತ್ತು ಆತನ ಸಹಚರರು ಕೇಸರಿ ಬಟ್ಟೆ ಧರಿಸಿ ಭಿಕ್ಷೆ ಬೇಡುತ್ತಿದ್ದರು. ಗುರುತಿನ ಚೀಟಿಯ ಮೂಲಕ ಅವರ ನಿಜವಾದ ಗುರುತು ಬಯಲಾಗಿದೆ. ಅವರಿಗೆ ಯಾವುದೇ ಶ್ಲೋಕ ಪಠಿಸಲು ಅಥವಾ ಹಿಂದೂ ದೇವರು ಮತ್ತು ದೇವತೆಗಳ ಹೆಸರು ಸರಿಯಾಗಿ ಹೇಳಲು ಸಾಧ್ಯವಾಗಿಲ್ಲ” ಎಂದು ಬರೆದುಕೊಂಡಿತ್ತು.

ಮತ್ತೊಂದು ಬಲಪಂಥೀಯ ಸುದ್ದಿ ಸಂಸ್ಥೆ ಸುದರ್ಶನ್ ನ್ಯೂಸ್ ಕೂಡ ನವೆಂಬರ್ 4ರಂದು ವೈರಲ್ ವಿಡಿಯೋ ಹಂಚಿಕೊಂಡು “ಗುಜರಾತ್‌ನ ಸೂರತ್‌ನಲ್ಲಿ, ‘ಜಿಹಾದಿ’ ಸಲ್ಮಾನ್ ಮತ್ತು ಆತನ ಗ್ಯಾಂಗ್ ಸಾಧುಗಳಂತೆ ಪೋಸು ಕೊಡುತ್ತಾ ಭಿಕ್ಷೆ ಬೇಡುತ್ತಿದ್ದರು… ಕೇಸರಿ ವಸ್ತ್ರಗಳನ್ನು ಧರಿಸಿ ಸಾಧುಗಳಂತೆ ಪೋಸು ಕೊಡುತ್ತಿದ್ದ ಮೂವರು ‘ಜಿಹಾದಿ’ಗಳನ್ನು ಬಂಧಿಸಲಾಗಿದೆ” ಎಂದು ಬರೆದುಕೊಂಡಿತ್ತು.

ನವೆಂಬರ್ 4ರಂದು ಎಕ್ಸ್‌ನಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದ ಆರ್‌ಎಸ್‌ಎಸ್‌ ಮುಖವಾಣಿ ಪಾಂಚಜನ್ಯ “ಸಾಧುಗಳ ವೇಷದಲ್ಲಿ ಸಿಕ್ಕಿಬಿದ್ದ ಮುಸ್ಲಿಮರು! ನೀವು ಸಾಧು ಆಗಲು ಬಯಸಿದರೆ, ಏಕೆ ಹಿಂದೂ ಆಗಬಾರದು? ಸಲ್ಮಾನ್ ಎಂಬ ಮುಸ್ಲಿಂ ವ್ಯಕ್ತಿ, ಕೇಸರಿ ವೇಷ ಧರಿಸಿ ಸಾಧುವಿನಂತೆ ಪೋಸು ಕೊಟ್ಟು ಭಿಕ್ಷೆ ಬೇಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಈ ಘಟನೆ ಗುಜರಾತ್‌ನ ಸೂರತ್‌ನಲ್ಲಿ ನವೆಂಬರ್ 3,2024 ರಂದು ನಡೆದಿದ್ದು, ನಂತರ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಇದೇ ಮೊದಲಲ್ಲ-ಸಾಧುಗಳ ವೇಷ ಧರಿಸಿದ ಮುಸ್ಲಿಮರು ಈ ಹಿಂದೆ 16 ಬಾರಿ ಸಿಕ್ಕಿಬಿದ್ದಿದ್ದಾರೆ” ಎಂದು ಬರೆದುಕೊಂಡಿತ್ತು.

ಇನ್ನೂ ಅನೇಕ ಬಲಪಂಥೀಯ ಸುದ್ದಿ ಸಂಸ್ಥೆಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋ, ಫೋಟೋ ಹಂಚಿಕೊಂಡು ಮುಸ್ಲಿಮರು ಹಿಂದೂ ಸಾಧುಗಳ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದಾಗ ಸಿಕ್ಕಿ ಬಿದ್ದಿದ್ದಾರೆ” ಎಂದು ಬರೆದುಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಈ ಬಗ್ಗೆ ವರದಿಗಳನ್ನು ಹುಡುಕಿದ್ದೇವೆ. ಈ ವೇಳೆ ದೈನಿಕ್ ಭಾಸ್ಕರ್ ಗ್ರೂಪ್‌ನ ಗುಜರಾತಿ ದಿನಪತ್ರಿಕೆ ದಿವ್ಯಾ ಭಾಸ್ಕರ್ ನವೆಂಬರ್ 4ರಂದು ವಿಡಿಯೋ ಕುರಿತು ಪ್ರಕಟಿಸಿದ ವರದಿ ಲಭ್ಯವಾಗಿದೆ. ಅದರಲ್ಲಿ “ಪೊಲೀಸ್ ತನಿಖೆಯ ನಂತರ ವಿಡಿಯೋದಲ್ಲಿರುವ ಮೂವರೂ ಸಾಧುಗಳು ಹಿಂದೂಗಳು ಮತ್ತು ಅವರು ಜುನಾಗಢದಿಂದ ಬಂದವರು ಎಂದು ತಿಳಿದು ಬಂದಿದೆ” ಎಂಬುವುದಾಗಿ ಹೇಳಿದೆ.

“ಮೂವರು ಸಾಧುಗಳು ಅನುಮಾನಾಸ್ಪದವಾಗಿ ಕಂಡು ಬಂದಿದ್ದರು. ನಂತರ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ವಿಚಾರಣೆ ವೇಳೆ ಅವರು ನೀಡಿದ ಮಾಹಿತಿ ಆಧರಿಸಿ ಜುನಾಗಢದಲ್ಲೂ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಅವರು ನೀಡಿರುವ ಮಾಹಿತಿ ಸರಿಯಾಗಿರುವುದು ಗೊತ್ತಾಗಿದೆ. ಮೂವರು ಸಾಧುಗಳಲ್ಲಿ ಒಬ್ಬರ ಹೆಸರು ‘ಸಲ್ಮಾನಾಥ್’. ಇದನ್ನು ಜನರು ಸಲ್ಮಾನ್ ಎಂದು ತಪ್ಪು ತಿಳಿದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ ಎಂದು” ದಿವ್ಯಾ ಭಾಸ್ಕರ್ ವರದಿ ವಿವರಿಸಿದೆ.

ಫ್ಯಾಕ್ಟ್‌ಚೆಕ್ ಸಂಸ್ಥೆ ‘ಸಲ್ಮಾನಾಥ್’ ಅವರ ಚುನಾವಣಾ ಗುರುತಿನ ಚೀಟಿಯನ್ನು ಹಂಚಿಕೊಂಡಿದೆ. ಅದರಲ್ಲಿ ಸಲ್ಮಾನಾಥ್ ಅವರ ತಂದೆ ಸೂರಮನಾಥ್ ಪರ್ಮಾರ್ ಎಂದು ಇದೆ. ಪರ್ಮಾರ್ ಎಂಬ ಉಪನಾಮವು ರಜಪೂತ ಸಮುದಾಯಕ್ಕೆ ಸಂಬಂಧಿಸಿದೆ. ಇವರು ಹೆಚ್ಚಾಗಿ ಉತ್ತರ ಮತ್ತು ಮಧ್ಯ ಭಾರತದಲ್ಲಿ, ವಿಶೇಷವಾಗಿ ರಾಜಸ್ಥಾನ, ಗುಜರಾತ್, ಪಂಜಾಬ್, ಹರಿಯಾಣ, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ ಮತ್ತು ಉತ್ತರ ಮಹಾರಾಷ್ಟ್ರದಲ್ಲಿ ನೆಲೆಗೊಂಡಿದ್ದಾರೆ.

pc : altnews.in

ಸಾಧುಗಳನ್ನು, ವಿಶೇಷವಾಗಿ ಮನೆಯಿಂದ ಮನೆಗೆ ತೆರಳಿ ಭಿಕ್ಷೆ ಬೇಡುವವರಿಗೆ ಮುಸ್ಲಿಮರು ಎಂದು ಆಧಾರರಹಿತ ಅನುಮಾನದ ಮೇಲೆ ಕಿರುಕುಳ ನೀಡುತ್ತಿರುವುದು ಇದೇ ಮೊದಲಲ್ಲ. ಈ ವರ್ಷದ ಜುಲೈನಲ್ಲಿ ಮೀರತ್‌ನಲ್ಲಿ ಮೂವರು ಸಾಧುಗಳ ಗುಂಪಿಗೆ ಮುಸ್ಲಿಮರು ಎಂಬ ಹಣೆಪಟ್ಟಿ ಕಟ್ಟಲಾಗಿತ್ತು. ಅಲೆದಾಡುವ ಸನ್ಯಾಸಿಗಳನ್ನು ಮಕ್ಕಳ ಅಪಹರಣಕಾರರು ಎಂದು ಸುಳ್ಳು ಆರೋಪ ಹೊರಿಸಿದ ಇತರ ನಿದರ್ಶನಗಳೂ ಇವೆ.

ಇದನ್ನೂ ಓದಿ | FACT CHECK : ಅಪಘಾತದ ವಿಡಿಯೋಗೆ ಕೋಮು ಬಣ್ಣ ಬಳಿದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...