Homeಫ್ಯಾಕ್ಟ್‌ಚೆಕ್FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ...

FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮಗಳು

- Advertisement -
- Advertisement -

ಹಿಂದೂ ಸಾಧುಗಳ ರೀತಿ ವಸ್ತ್ರ ಧರಿಸಿ, ಹಣೆ ಮೇಲೆ ವಿಭೂತಿ ಹಚ್ಚಿರುವ ಮೂವರು ಗಡ್ಡದಾರಿ ವ್ಯಕ್ತಿಗಳ ಜೊತೆ ಜನರ ಗುಂಪೊಂದು ವಾಗ್ವಾದ ನಡೆಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿ ‘ಮೂವರು ಸಾಧುಗಳನ್ನು ವ್ಯಕ್ತಿಯೊಬ್ಬ”ನಿಮಗೆ ಎಷ್ಟು ದೇವರ ನಾಮಗಳು ಗೊತ್ತಿದೆ?” ಎಂದು ಪ್ರಶ್ನಿಸುವುದು ಮತ್ತು ಇತರ ವ್ಯಕ್ತಿಗಳಿಗೆ ” ಇವರು ನಿಜವಾದ ಸಾಧುಗಳಲ್ಲ, ಸಾಧುಗಳ ವೇಷ ಧರಿಸಿರುವ ಮುಸ್ಲಿಮರು. ಇವರಲ್ಲಿ ಒಬ್ಬಾತನ ಹೆಸರು ಸಲ್ಮಾನ್ ” ಎಂದು ಹೇಳುತ್ತಿರುವುದು ಇದೆ.

ಈ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಂಡಿರುವ ಸಾಮಾಜಿಕ ಜಾಲತಾಣ ಬಳಕೆದಾರರು, “ಹಿಂದೂ ಸಾಧುಗಳ ವೇಷ ಧರಿಸಿದ್ದ ಓಡಾಡುತ್ತಿದ್ದ ಮುಸ್ಲಿಮರು ಸಿಕ್ಕಿ ಬಿದ್ದಿದ್ದಾರೆ” ಎಂದು ಪ್ರತಿಪಾದಿಸಿದ್ದಾರೆ.

ನವೆಂಬರ್ 2ರಂದು ಈ ವೈರಲ್ ವಿಡಿಯೋವನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದ ಗುಜರಾತ್ ಭಾಷೆಯ ಸುದ್ದಿವಾಹಿನಿ ಝೀ 24 ಕಾಲಕ್‘ “ಸಾಧುವಿನ ವೇಷದಲ್ಲಿದ್ದ ಸಲ್ಮಾನ್ ಸಿಕ್ಕಿಬಿದ್ದ! ಸೂರತ್‌ನಲ್ಲಿ ಸಾಧುಗಳಂತೆ ಭಿಕ್ಷೆ ಬೇಡುತ್ತಿದ್ದವರ ವಂಚನೆ ಐಡಿ ಪರಿಶೀಲಿಸಿದಾಗ ಬಹಿರಂಗಗೊಂಡಿದೆ” ಎಂದು ಬರೆದುಕೊಂಡಿತ್ತು. ಈಗಲೂ

ಬಲಪಂಥೀಯ ಸುದ್ದಿ ಸಂಸ್ಥೆ ‘ಓಪ್‌ ಇಂಡಿಯಾ‘ ಕೂಡ ನವೆಂಬರ್ 24ರಂದು ವೈರಲ್ ವಿಡಿಯೋ ಹಂಚಿಕೊಂಡು “ಸಲ್ಮಾನ್ ಮತ್ತು ಆತನ ಸಹಚರರು ಕೇಸರಿ ಬಟ್ಟೆ ಧರಿಸಿ ಭಿಕ್ಷೆ ಬೇಡುತ್ತಿದ್ದರು. ಗುರುತಿನ ಚೀಟಿಯ ಮೂಲಕ ಅವರ ನಿಜವಾದ ಗುರುತು ಬಯಲಾಗಿದೆ. ಅವರಿಗೆ ಯಾವುದೇ ಶ್ಲೋಕ ಪಠಿಸಲು ಅಥವಾ ಹಿಂದೂ ದೇವರು ಮತ್ತು ದೇವತೆಗಳ ಹೆಸರು ಸರಿಯಾಗಿ ಹೇಳಲು ಸಾಧ್ಯವಾಗಿಲ್ಲ” ಎಂದು ಬರೆದುಕೊಂಡಿತ್ತು.

ಮತ್ತೊಂದು ಬಲಪಂಥೀಯ ಸುದ್ದಿ ಸಂಸ್ಥೆ ಸುದರ್ಶನ್ ನ್ಯೂಸ್ ಕೂಡ ನವೆಂಬರ್ 4ರಂದು ವೈರಲ್ ವಿಡಿಯೋ ಹಂಚಿಕೊಂಡು “ಗುಜರಾತ್‌ನ ಸೂರತ್‌ನಲ್ಲಿ, ‘ಜಿಹಾದಿ’ ಸಲ್ಮಾನ್ ಮತ್ತು ಆತನ ಗ್ಯಾಂಗ್ ಸಾಧುಗಳಂತೆ ಪೋಸು ಕೊಡುತ್ತಾ ಭಿಕ್ಷೆ ಬೇಡುತ್ತಿದ್ದರು… ಕೇಸರಿ ವಸ್ತ್ರಗಳನ್ನು ಧರಿಸಿ ಸಾಧುಗಳಂತೆ ಪೋಸು ಕೊಡುತ್ತಿದ್ದ ಮೂವರು ‘ಜಿಹಾದಿ’ಗಳನ್ನು ಬಂಧಿಸಲಾಗಿದೆ” ಎಂದು ಬರೆದುಕೊಂಡಿತ್ತು.

ನವೆಂಬರ್ 4ರಂದು ಎಕ್ಸ್‌ನಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದ ಆರ್‌ಎಸ್‌ಎಸ್‌ ಮುಖವಾಣಿ ಪಾಂಚಜನ್ಯ “ಸಾಧುಗಳ ವೇಷದಲ್ಲಿ ಸಿಕ್ಕಿಬಿದ್ದ ಮುಸ್ಲಿಮರು! ನೀವು ಸಾಧು ಆಗಲು ಬಯಸಿದರೆ, ಏಕೆ ಹಿಂದೂ ಆಗಬಾರದು? ಸಲ್ಮಾನ್ ಎಂಬ ಮುಸ್ಲಿಂ ವ್ಯಕ್ತಿ, ಕೇಸರಿ ವೇಷ ಧರಿಸಿ ಸಾಧುವಿನಂತೆ ಪೋಸು ಕೊಟ್ಟು ಭಿಕ್ಷೆ ಬೇಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಈ ಘಟನೆ ಗುಜರಾತ್‌ನ ಸೂರತ್‌ನಲ್ಲಿ ನವೆಂಬರ್ 3,2024 ರಂದು ನಡೆದಿದ್ದು, ನಂತರ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಇದೇ ಮೊದಲಲ್ಲ-ಸಾಧುಗಳ ವೇಷ ಧರಿಸಿದ ಮುಸ್ಲಿಮರು ಈ ಹಿಂದೆ 16 ಬಾರಿ ಸಿಕ್ಕಿಬಿದ್ದಿದ್ದಾರೆ” ಎಂದು ಬರೆದುಕೊಂಡಿತ್ತು.

ಇನ್ನೂ ಅನೇಕ ಬಲಪಂಥೀಯ ಸುದ್ದಿ ಸಂಸ್ಥೆಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋ, ಫೋಟೋ ಹಂಚಿಕೊಂಡು ಮುಸ್ಲಿಮರು ಹಿಂದೂ ಸಾಧುಗಳ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದಾಗ ಸಿಕ್ಕಿ ಬಿದ್ದಿದ್ದಾರೆ” ಎಂದು ಬರೆದುಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಈ ಬಗ್ಗೆ ವರದಿಗಳನ್ನು ಹುಡುಕಿದ್ದೇವೆ. ಈ ವೇಳೆ ದೈನಿಕ್ ಭಾಸ್ಕರ್ ಗ್ರೂಪ್‌ನ ಗುಜರಾತಿ ದಿನಪತ್ರಿಕೆ ದಿವ್ಯಾ ಭಾಸ್ಕರ್ ನವೆಂಬರ್ 4ರಂದು ವಿಡಿಯೋ ಕುರಿತು ಪ್ರಕಟಿಸಿದ ವರದಿ ಲಭ್ಯವಾಗಿದೆ. ಅದರಲ್ಲಿ “ಪೊಲೀಸ್ ತನಿಖೆಯ ನಂತರ ವಿಡಿಯೋದಲ್ಲಿರುವ ಮೂವರೂ ಸಾಧುಗಳು ಹಿಂದೂಗಳು ಮತ್ತು ಅವರು ಜುನಾಗಢದಿಂದ ಬಂದವರು ಎಂದು ತಿಳಿದು ಬಂದಿದೆ” ಎಂಬುವುದಾಗಿ ಹೇಳಿದೆ.

“ಮೂವರು ಸಾಧುಗಳು ಅನುಮಾನಾಸ್ಪದವಾಗಿ ಕಂಡು ಬಂದಿದ್ದರು. ನಂತರ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ವಿಚಾರಣೆ ವೇಳೆ ಅವರು ನೀಡಿದ ಮಾಹಿತಿ ಆಧರಿಸಿ ಜುನಾಗಢದಲ್ಲೂ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಅವರು ನೀಡಿರುವ ಮಾಹಿತಿ ಸರಿಯಾಗಿರುವುದು ಗೊತ್ತಾಗಿದೆ. ಮೂವರು ಸಾಧುಗಳಲ್ಲಿ ಒಬ್ಬರ ಹೆಸರು ‘ಸಲ್ಮಾನಾಥ್’. ಇದನ್ನು ಜನರು ಸಲ್ಮಾನ್ ಎಂದು ತಪ್ಪು ತಿಳಿದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ ಎಂದು” ದಿವ್ಯಾ ಭಾಸ್ಕರ್ ವರದಿ ವಿವರಿಸಿದೆ.

ಫ್ಯಾಕ್ಟ್‌ಚೆಕ್ ಸಂಸ್ಥೆ ‘ಸಲ್ಮಾನಾಥ್’ ಅವರ ಚುನಾವಣಾ ಗುರುತಿನ ಚೀಟಿಯನ್ನು ಹಂಚಿಕೊಂಡಿದೆ. ಅದರಲ್ಲಿ ಸಲ್ಮಾನಾಥ್ ಅವರ ತಂದೆ ಸೂರಮನಾಥ್ ಪರ್ಮಾರ್ ಎಂದು ಇದೆ. ಪರ್ಮಾರ್ ಎಂಬ ಉಪನಾಮವು ರಜಪೂತ ಸಮುದಾಯಕ್ಕೆ ಸಂಬಂಧಿಸಿದೆ. ಇವರು ಹೆಚ್ಚಾಗಿ ಉತ್ತರ ಮತ್ತು ಮಧ್ಯ ಭಾರತದಲ್ಲಿ, ವಿಶೇಷವಾಗಿ ರಾಜಸ್ಥಾನ, ಗುಜರಾತ್, ಪಂಜಾಬ್, ಹರಿಯಾಣ, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ ಮತ್ತು ಉತ್ತರ ಮಹಾರಾಷ್ಟ್ರದಲ್ಲಿ ನೆಲೆಗೊಂಡಿದ್ದಾರೆ.

pc : altnews.in

ಸಾಧುಗಳನ್ನು, ವಿಶೇಷವಾಗಿ ಮನೆಯಿಂದ ಮನೆಗೆ ತೆರಳಿ ಭಿಕ್ಷೆ ಬೇಡುವವರಿಗೆ ಮುಸ್ಲಿಮರು ಎಂದು ಆಧಾರರಹಿತ ಅನುಮಾನದ ಮೇಲೆ ಕಿರುಕುಳ ನೀಡುತ್ತಿರುವುದು ಇದೇ ಮೊದಲಲ್ಲ. ಈ ವರ್ಷದ ಜುಲೈನಲ್ಲಿ ಮೀರತ್‌ನಲ್ಲಿ ಮೂವರು ಸಾಧುಗಳ ಗುಂಪಿಗೆ ಮುಸ್ಲಿಮರು ಎಂಬ ಹಣೆಪಟ್ಟಿ ಕಟ್ಟಲಾಗಿತ್ತು. ಅಲೆದಾಡುವ ಸನ್ಯಾಸಿಗಳನ್ನು ಮಕ್ಕಳ ಅಪಹರಣಕಾರರು ಎಂದು ಸುಳ್ಳು ಆರೋಪ ಹೊರಿಸಿದ ಇತರ ನಿದರ್ಶನಗಳೂ ಇವೆ.

ಇದನ್ನೂ ಓದಿ | FACT CHECK : ಅಪಘಾತದ ವಿಡಿಯೋಗೆ ಕೋಮು ಬಣ್ಣ ಬಳಿದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...