Homeಫ್ಯಾಕ್ಟ್‌ಚೆಕ್FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ...

FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮಗಳು

- Advertisement -
- Advertisement -

ಹಿಂದೂ ಸಾಧುಗಳ ರೀತಿ ವಸ್ತ್ರ ಧರಿಸಿ, ಹಣೆ ಮೇಲೆ ವಿಭೂತಿ ಹಚ್ಚಿರುವ ಮೂವರು ಗಡ್ಡದಾರಿ ವ್ಯಕ್ತಿಗಳ ಜೊತೆ ಜನರ ಗುಂಪೊಂದು ವಾಗ್ವಾದ ನಡೆಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿ ‘ಮೂವರು ಸಾಧುಗಳನ್ನು ವ್ಯಕ್ತಿಯೊಬ್ಬ”ನಿಮಗೆ ಎಷ್ಟು ದೇವರ ನಾಮಗಳು ಗೊತ್ತಿದೆ?” ಎಂದು ಪ್ರಶ್ನಿಸುವುದು ಮತ್ತು ಇತರ ವ್ಯಕ್ತಿಗಳಿಗೆ ” ಇವರು ನಿಜವಾದ ಸಾಧುಗಳಲ್ಲ, ಸಾಧುಗಳ ವೇಷ ಧರಿಸಿರುವ ಮುಸ್ಲಿಮರು. ಇವರಲ್ಲಿ ಒಬ್ಬಾತನ ಹೆಸರು ಸಲ್ಮಾನ್ ” ಎಂದು ಹೇಳುತ್ತಿರುವುದು ಇದೆ.

ಈ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಂಡಿರುವ ಸಾಮಾಜಿಕ ಜಾಲತಾಣ ಬಳಕೆದಾರರು, “ಹಿಂದೂ ಸಾಧುಗಳ ವೇಷ ಧರಿಸಿದ್ದ ಓಡಾಡುತ್ತಿದ್ದ ಮುಸ್ಲಿಮರು ಸಿಕ್ಕಿ ಬಿದ್ದಿದ್ದಾರೆ” ಎಂದು ಪ್ರತಿಪಾದಿಸಿದ್ದಾರೆ.

ನವೆಂಬರ್ 2ರಂದು ಈ ವೈರಲ್ ವಿಡಿಯೋವನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದ ಗುಜರಾತ್ ಭಾಷೆಯ ಸುದ್ದಿವಾಹಿನಿ ಝೀ 24 ಕಾಲಕ್‘ “ಸಾಧುವಿನ ವೇಷದಲ್ಲಿದ್ದ ಸಲ್ಮಾನ್ ಸಿಕ್ಕಿಬಿದ್ದ! ಸೂರತ್‌ನಲ್ಲಿ ಸಾಧುಗಳಂತೆ ಭಿಕ್ಷೆ ಬೇಡುತ್ತಿದ್ದವರ ವಂಚನೆ ಐಡಿ ಪರಿಶೀಲಿಸಿದಾಗ ಬಹಿರಂಗಗೊಂಡಿದೆ” ಎಂದು ಬರೆದುಕೊಂಡಿತ್ತು. ಈಗಲೂ

ಬಲಪಂಥೀಯ ಸುದ್ದಿ ಸಂಸ್ಥೆ ‘ಓಪ್‌ ಇಂಡಿಯಾ‘ ಕೂಡ ನವೆಂಬರ್ 24ರಂದು ವೈರಲ್ ವಿಡಿಯೋ ಹಂಚಿಕೊಂಡು “ಸಲ್ಮಾನ್ ಮತ್ತು ಆತನ ಸಹಚರರು ಕೇಸರಿ ಬಟ್ಟೆ ಧರಿಸಿ ಭಿಕ್ಷೆ ಬೇಡುತ್ತಿದ್ದರು. ಗುರುತಿನ ಚೀಟಿಯ ಮೂಲಕ ಅವರ ನಿಜವಾದ ಗುರುತು ಬಯಲಾಗಿದೆ. ಅವರಿಗೆ ಯಾವುದೇ ಶ್ಲೋಕ ಪಠಿಸಲು ಅಥವಾ ಹಿಂದೂ ದೇವರು ಮತ್ತು ದೇವತೆಗಳ ಹೆಸರು ಸರಿಯಾಗಿ ಹೇಳಲು ಸಾಧ್ಯವಾಗಿಲ್ಲ” ಎಂದು ಬರೆದುಕೊಂಡಿತ್ತು.

ಮತ್ತೊಂದು ಬಲಪಂಥೀಯ ಸುದ್ದಿ ಸಂಸ್ಥೆ ಸುದರ್ಶನ್ ನ್ಯೂಸ್ ಕೂಡ ನವೆಂಬರ್ 4ರಂದು ವೈರಲ್ ವಿಡಿಯೋ ಹಂಚಿಕೊಂಡು “ಗುಜರಾತ್‌ನ ಸೂರತ್‌ನಲ್ಲಿ, ‘ಜಿಹಾದಿ’ ಸಲ್ಮಾನ್ ಮತ್ತು ಆತನ ಗ್ಯಾಂಗ್ ಸಾಧುಗಳಂತೆ ಪೋಸು ಕೊಡುತ್ತಾ ಭಿಕ್ಷೆ ಬೇಡುತ್ತಿದ್ದರು… ಕೇಸರಿ ವಸ್ತ್ರಗಳನ್ನು ಧರಿಸಿ ಸಾಧುಗಳಂತೆ ಪೋಸು ಕೊಡುತ್ತಿದ್ದ ಮೂವರು ‘ಜಿಹಾದಿ’ಗಳನ್ನು ಬಂಧಿಸಲಾಗಿದೆ” ಎಂದು ಬರೆದುಕೊಂಡಿತ್ತು.

ನವೆಂಬರ್ 4ರಂದು ಎಕ್ಸ್‌ನಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದ ಆರ್‌ಎಸ್‌ಎಸ್‌ ಮುಖವಾಣಿ ಪಾಂಚಜನ್ಯ “ಸಾಧುಗಳ ವೇಷದಲ್ಲಿ ಸಿಕ್ಕಿಬಿದ್ದ ಮುಸ್ಲಿಮರು! ನೀವು ಸಾಧು ಆಗಲು ಬಯಸಿದರೆ, ಏಕೆ ಹಿಂದೂ ಆಗಬಾರದು? ಸಲ್ಮಾನ್ ಎಂಬ ಮುಸ್ಲಿಂ ವ್ಯಕ್ತಿ, ಕೇಸರಿ ವೇಷ ಧರಿಸಿ ಸಾಧುವಿನಂತೆ ಪೋಸು ಕೊಟ್ಟು ಭಿಕ್ಷೆ ಬೇಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಈ ಘಟನೆ ಗುಜರಾತ್‌ನ ಸೂರತ್‌ನಲ್ಲಿ ನವೆಂಬರ್ 3,2024 ರಂದು ನಡೆದಿದ್ದು, ನಂತರ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಇದೇ ಮೊದಲಲ್ಲ-ಸಾಧುಗಳ ವೇಷ ಧರಿಸಿದ ಮುಸ್ಲಿಮರು ಈ ಹಿಂದೆ 16 ಬಾರಿ ಸಿಕ್ಕಿಬಿದ್ದಿದ್ದಾರೆ” ಎಂದು ಬರೆದುಕೊಂಡಿತ್ತು.

ಇನ್ನೂ ಅನೇಕ ಬಲಪಂಥೀಯ ಸುದ್ದಿ ಸಂಸ್ಥೆಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋ, ಫೋಟೋ ಹಂಚಿಕೊಂಡು ಮುಸ್ಲಿಮರು ಹಿಂದೂ ಸಾಧುಗಳ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದಾಗ ಸಿಕ್ಕಿ ಬಿದ್ದಿದ್ದಾರೆ” ಎಂದು ಬರೆದುಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಈ ಬಗ್ಗೆ ವರದಿಗಳನ್ನು ಹುಡುಕಿದ್ದೇವೆ. ಈ ವೇಳೆ ದೈನಿಕ್ ಭಾಸ್ಕರ್ ಗ್ರೂಪ್‌ನ ಗುಜರಾತಿ ದಿನಪತ್ರಿಕೆ ದಿವ್ಯಾ ಭಾಸ್ಕರ್ ನವೆಂಬರ್ 4ರಂದು ವಿಡಿಯೋ ಕುರಿತು ಪ್ರಕಟಿಸಿದ ವರದಿ ಲಭ್ಯವಾಗಿದೆ. ಅದರಲ್ಲಿ “ಪೊಲೀಸ್ ತನಿಖೆಯ ನಂತರ ವಿಡಿಯೋದಲ್ಲಿರುವ ಮೂವರೂ ಸಾಧುಗಳು ಹಿಂದೂಗಳು ಮತ್ತು ಅವರು ಜುನಾಗಢದಿಂದ ಬಂದವರು ಎಂದು ತಿಳಿದು ಬಂದಿದೆ” ಎಂಬುವುದಾಗಿ ಹೇಳಿದೆ.

“ಮೂವರು ಸಾಧುಗಳು ಅನುಮಾನಾಸ್ಪದವಾಗಿ ಕಂಡು ಬಂದಿದ್ದರು. ನಂತರ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ವಿಚಾರಣೆ ವೇಳೆ ಅವರು ನೀಡಿದ ಮಾಹಿತಿ ಆಧರಿಸಿ ಜುನಾಗಢದಲ್ಲೂ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಅವರು ನೀಡಿರುವ ಮಾಹಿತಿ ಸರಿಯಾಗಿರುವುದು ಗೊತ್ತಾಗಿದೆ. ಮೂವರು ಸಾಧುಗಳಲ್ಲಿ ಒಬ್ಬರ ಹೆಸರು ‘ಸಲ್ಮಾನಾಥ್’. ಇದನ್ನು ಜನರು ಸಲ್ಮಾನ್ ಎಂದು ತಪ್ಪು ತಿಳಿದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ ಎಂದು” ದಿವ್ಯಾ ಭಾಸ್ಕರ್ ವರದಿ ವಿವರಿಸಿದೆ.

ಫ್ಯಾಕ್ಟ್‌ಚೆಕ್ ಸಂಸ್ಥೆ ‘ಸಲ್ಮಾನಾಥ್’ ಅವರ ಚುನಾವಣಾ ಗುರುತಿನ ಚೀಟಿಯನ್ನು ಹಂಚಿಕೊಂಡಿದೆ. ಅದರಲ್ಲಿ ಸಲ್ಮಾನಾಥ್ ಅವರ ತಂದೆ ಸೂರಮನಾಥ್ ಪರ್ಮಾರ್ ಎಂದು ಇದೆ. ಪರ್ಮಾರ್ ಎಂಬ ಉಪನಾಮವು ರಜಪೂತ ಸಮುದಾಯಕ್ಕೆ ಸಂಬಂಧಿಸಿದೆ. ಇವರು ಹೆಚ್ಚಾಗಿ ಉತ್ತರ ಮತ್ತು ಮಧ್ಯ ಭಾರತದಲ್ಲಿ, ವಿಶೇಷವಾಗಿ ರಾಜಸ್ಥಾನ, ಗುಜರಾತ್, ಪಂಜಾಬ್, ಹರಿಯಾಣ, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ ಮತ್ತು ಉತ್ತರ ಮಹಾರಾಷ್ಟ್ರದಲ್ಲಿ ನೆಲೆಗೊಂಡಿದ್ದಾರೆ.

pc : altnews.in

ಸಾಧುಗಳನ್ನು, ವಿಶೇಷವಾಗಿ ಮನೆಯಿಂದ ಮನೆಗೆ ತೆರಳಿ ಭಿಕ್ಷೆ ಬೇಡುವವರಿಗೆ ಮುಸ್ಲಿಮರು ಎಂದು ಆಧಾರರಹಿತ ಅನುಮಾನದ ಮೇಲೆ ಕಿರುಕುಳ ನೀಡುತ್ತಿರುವುದು ಇದೇ ಮೊದಲಲ್ಲ. ಈ ವರ್ಷದ ಜುಲೈನಲ್ಲಿ ಮೀರತ್‌ನಲ್ಲಿ ಮೂವರು ಸಾಧುಗಳ ಗುಂಪಿಗೆ ಮುಸ್ಲಿಮರು ಎಂಬ ಹಣೆಪಟ್ಟಿ ಕಟ್ಟಲಾಗಿತ್ತು. ಅಲೆದಾಡುವ ಸನ್ಯಾಸಿಗಳನ್ನು ಮಕ್ಕಳ ಅಪಹರಣಕಾರರು ಎಂದು ಸುಳ್ಳು ಆರೋಪ ಹೊರಿಸಿದ ಇತರ ನಿದರ್ಶನಗಳೂ ಇವೆ.

ಇದನ್ನೂ ಓದಿ | FACT CHECK : ಅಪಘಾತದ ವಿಡಿಯೋಗೆ ಕೋಮು ಬಣ್ಣ ಬಳಿದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...