Homeಫ್ಯಾಕ್ಟ್‌ಚೆಕ್FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ...

FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮಗಳು

- Advertisement -
- Advertisement -

ಹಿಂದೂ ಸಾಧುಗಳ ರೀತಿ ವಸ್ತ್ರ ಧರಿಸಿ, ಹಣೆ ಮೇಲೆ ವಿಭೂತಿ ಹಚ್ಚಿರುವ ಮೂವರು ಗಡ್ಡದಾರಿ ವ್ಯಕ್ತಿಗಳ ಜೊತೆ ಜನರ ಗುಂಪೊಂದು ವಾಗ್ವಾದ ನಡೆಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿ ‘ಮೂವರು ಸಾಧುಗಳನ್ನು ವ್ಯಕ್ತಿಯೊಬ್ಬ”ನಿಮಗೆ ಎಷ್ಟು ದೇವರ ನಾಮಗಳು ಗೊತ್ತಿದೆ?” ಎಂದು ಪ್ರಶ್ನಿಸುವುದು ಮತ್ತು ಇತರ ವ್ಯಕ್ತಿಗಳಿಗೆ ” ಇವರು ನಿಜವಾದ ಸಾಧುಗಳಲ್ಲ, ಸಾಧುಗಳ ವೇಷ ಧರಿಸಿರುವ ಮುಸ್ಲಿಮರು. ಇವರಲ್ಲಿ ಒಬ್ಬಾತನ ಹೆಸರು ಸಲ್ಮಾನ್ ” ಎಂದು ಹೇಳುತ್ತಿರುವುದು ಇದೆ.

ಈ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಂಡಿರುವ ಸಾಮಾಜಿಕ ಜಾಲತಾಣ ಬಳಕೆದಾರರು, “ಹಿಂದೂ ಸಾಧುಗಳ ವೇಷ ಧರಿಸಿದ್ದ ಓಡಾಡುತ್ತಿದ್ದ ಮುಸ್ಲಿಮರು ಸಿಕ್ಕಿ ಬಿದ್ದಿದ್ದಾರೆ” ಎಂದು ಪ್ರತಿಪಾದಿಸಿದ್ದಾರೆ.

ನವೆಂಬರ್ 2ರಂದು ಈ ವೈರಲ್ ವಿಡಿಯೋವನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದ ಗುಜರಾತ್ ಭಾಷೆಯ ಸುದ್ದಿವಾಹಿನಿ ಝೀ 24 ಕಾಲಕ್‘ “ಸಾಧುವಿನ ವೇಷದಲ್ಲಿದ್ದ ಸಲ್ಮಾನ್ ಸಿಕ್ಕಿಬಿದ್ದ! ಸೂರತ್‌ನಲ್ಲಿ ಸಾಧುಗಳಂತೆ ಭಿಕ್ಷೆ ಬೇಡುತ್ತಿದ್ದವರ ವಂಚನೆ ಐಡಿ ಪರಿಶೀಲಿಸಿದಾಗ ಬಹಿರಂಗಗೊಂಡಿದೆ” ಎಂದು ಬರೆದುಕೊಂಡಿತ್ತು. ಈಗಲೂ

ಬಲಪಂಥೀಯ ಸುದ್ದಿ ಸಂಸ್ಥೆ ‘ಓಪ್‌ ಇಂಡಿಯಾ‘ ಕೂಡ ನವೆಂಬರ್ 24ರಂದು ವೈರಲ್ ವಿಡಿಯೋ ಹಂಚಿಕೊಂಡು “ಸಲ್ಮಾನ್ ಮತ್ತು ಆತನ ಸಹಚರರು ಕೇಸರಿ ಬಟ್ಟೆ ಧರಿಸಿ ಭಿಕ್ಷೆ ಬೇಡುತ್ತಿದ್ದರು. ಗುರುತಿನ ಚೀಟಿಯ ಮೂಲಕ ಅವರ ನಿಜವಾದ ಗುರುತು ಬಯಲಾಗಿದೆ. ಅವರಿಗೆ ಯಾವುದೇ ಶ್ಲೋಕ ಪಠಿಸಲು ಅಥವಾ ಹಿಂದೂ ದೇವರು ಮತ್ತು ದೇವತೆಗಳ ಹೆಸರು ಸರಿಯಾಗಿ ಹೇಳಲು ಸಾಧ್ಯವಾಗಿಲ್ಲ” ಎಂದು ಬರೆದುಕೊಂಡಿತ್ತು.

ಮತ್ತೊಂದು ಬಲಪಂಥೀಯ ಸುದ್ದಿ ಸಂಸ್ಥೆ ಸುದರ್ಶನ್ ನ್ಯೂಸ್ ಕೂಡ ನವೆಂಬರ್ 4ರಂದು ವೈರಲ್ ವಿಡಿಯೋ ಹಂಚಿಕೊಂಡು “ಗುಜರಾತ್‌ನ ಸೂರತ್‌ನಲ್ಲಿ, ‘ಜಿಹಾದಿ’ ಸಲ್ಮಾನ್ ಮತ್ತು ಆತನ ಗ್ಯಾಂಗ್ ಸಾಧುಗಳಂತೆ ಪೋಸು ಕೊಡುತ್ತಾ ಭಿಕ್ಷೆ ಬೇಡುತ್ತಿದ್ದರು… ಕೇಸರಿ ವಸ್ತ್ರಗಳನ್ನು ಧರಿಸಿ ಸಾಧುಗಳಂತೆ ಪೋಸು ಕೊಡುತ್ತಿದ್ದ ಮೂವರು ‘ಜಿಹಾದಿ’ಗಳನ್ನು ಬಂಧಿಸಲಾಗಿದೆ” ಎಂದು ಬರೆದುಕೊಂಡಿತ್ತು.

ನವೆಂಬರ್ 4ರಂದು ಎಕ್ಸ್‌ನಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದ ಆರ್‌ಎಸ್‌ಎಸ್‌ ಮುಖವಾಣಿ ಪಾಂಚಜನ್ಯ “ಸಾಧುಗಳ ವೇಷದಲ್ಲಿ ಸಿಕ್ಕಿಬಿದ್ದ ಮುಸ್ಲಿಮರು! ನೀವು ಸಾಧು ಆಗಲು ಬಯಸಿದರೆ, ಏಕೆ ಹಿಂದೂ ಆಗಬಾರದು? ಸಲ್ಮಾನ್ ಎಂಬ ಮುಸ್ಲಿಂ ವ್ಯಕ್ತಿ, ಕೇಸರಿ ವೇಷ ಧರಿಸಿ ಸಾಧುವಿನಂತೆ ಪೋಸು ಕೊಟ್ಟು ಭಿಕ್ಷೆ ಬೇಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಈ ಘಟನೆ ಗುಜರಾತ್‌ನ ಸೂರತ್‌ನಲ್ಲಿ ನವೆಂಬರ್ 3,2024 ರಂದು ನಡೆದಿದ್ದು, ನಂತರ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಇದೇ ಮೊದಲಲ್ಲ-ಸಾಧುಗಳ ವೇಷ ಧರಿಸಿದ ಮುಸ್ಲಿಮರು ಈ ಹಿಂದೆ 16 ಬಾರಿ ಸಿಕ್ಕಿಬಿದ್ದಿದ್ದಾರೆ” ಎಂದು ಬರೆದುಕೊಂಡಿತ್ತು.

ಇನ್ನೂ ಅನೇಕ ಬಲಪಂಥೀಯ ಸುದ್ದಿ ಸಂಸ್ಥೆಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋ, ಫೋಟೋ ಹಂಚಿಕೊಂಡು ಮುಸ್ಲಿಮರು ಹಿಂದೂ ಸಾಧುಗಳ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದಾಗ ಸಿಕ್ಕಿ ಬಿದ್ದಿದ್ದಾರೆ” ಎಂದು ಬರೆದುಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಈ ಬಗ್ಗೆ ವರದಿಗಳನ್ನು ಹುಡುಕಿದ್ದೇವೆ. ಈ ವೇಳೆ ದೈನಿಕ್ ಭಾಸ್ಕರ್ ಗ್ರೂಪ್‌ನ ಗುಜರಾತಿ ದಿನಪತ್ರಿಕೆ ದಿವ್ಯಾ ಭಾಸ್ಕರ್ ನವೆಂಬರ್ 4ರಂದು ವಿಡಿಯೋ ಕುರಿತು ಪ್ರಕಟಿಸಿದ ವರದಿ ಲಭ್ಯವಾಗಿದೆ. ಅದರಲ್ಲಿ “ಪೊಲೀಸ್ ತನಿಖೆಯ ನಂತರ ವಿಡಿಯೋದಲ್ಲಿರುವ ಮೂವರೂ ಸಾಧುಗಳು ಹಿಂದೂಗಳು ಮತ್ತು ಅವರು ಜುನಾಗಢದಿಂದ ಬಂದವರು ಎಂದು ತಿಳಿದು ಬಂದಿದೆ” ಎಂಬುವುದಾಗಿ ಹೇಳಿದೆ.

“ಮೂವರು ಸಾಧುಗಳು ಅನುಮಾನಾಸ್ಪದವಾಗಿ ಕಂಡು ಬಂದಿದ್ದರು. ನಂತರ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ವಿಚಾರಣೆ ವೇಳೆ ಅವರು ನೀಡಿದ ಮಾಹಿತಿ ಆಧರಿಸಿ ಜುನಾಗಢದಲ್ಲೂ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಅವರು ನೀಡಿರುವ ಮಾಹಿತಿ ಸರಿಯಾಗಿರುವುದು ಗೊತ್ತಾಗಿದೆ. ಮೂವರು ಸಾಧುಗಳಲ್ಲಿ ಒಬ್ಬರ ಹೆಸರು ‘ಸಲ್ಮಾನಾಥ್’. ಇದನ್ನು ಜನರು ಸಲ್ಮಾನ್ ಎಂದು ತಪ್ಪು ತಿಳಿದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ ಎಂದು” ದಿವ್ಯಾ ಭಾಸ್ಕರ್ ವರದಿ ವಿವರಿಸಿದೆ.

ಫ್ಯಾಕ್ಟ್‌ಚೆಕ್ ಸಂಸ್ಥೆ ‘ಸಲ್ಮಾನಾಥ್’ ಅವರ ಚುನಾವಣಾ ಗುರುತಿನ ಚೀಟಿಯನ್ನು ಹಂಚಿಕೊಂಡಿದೆ. ಅದರಲ್ಲಿ ಸಲ್ಮಾನಾಥ್ ಅವರ ತಂದೆ ಸೂರಮನಾಥ್ ಪರ್ಮಾರ್ ಎಂದು ಇದೆ. ಪರ್ಮಾರ್ ಎಂಬ ಉಪನಾಮವು ರಜಪೂತ ಸಮುದಾಯಕ್ಕೆ ಸಂಬಂಧಿಸಿದೆ. ಇವರು ಹೆಚ್ಚಾಗಿ ಉತ್ತರ ಮತ್ತು ಮಧ್ಯ ಭಾರತದಲ್ಲಿ, ವಿಶೇಷವಾಗಿ ರಾಜಸ್ಥಾನ, ಗುಜರಾತ್, ಪಂಜಾಬ್, ಹರಿಯಾಣ, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ ಮತ್ತು ಉತ್ತರ ಮಹಾರಾಷ್ಟ್ರದಲ್ಲಿ ನೆಲೆಗೊಂಡಿದ್ದಾರೆ.

pc : altnews.in

ಸಾಧುಗಳನ್ನು, ವಿಶೇಷವಾಗಿ ಮನೆಯಿಂದ ಮನೆಗೆ ತೆರಳಿ ಭಿಕ್ಷೆ ಬೇಡುವವರಿಗೆ ಮುಸ್ಲಿಮರು ಎಂದು ಆಧಾರರಹಿತ ಅನುಮಾನದ ಮೇಲೆ ಕಿರುಕುಳ ನೀಡುತ್ತಿರುವುದು ಇದೇ ಮೊದಲಲ್ಲ. ಈ ವರ್ಷದ ಜುಲೈನಲ್ಲಿ ಮೀರತ್‌ನಲ್ಲಿ ಮೂವರು ಸಾಧುಗಳ ಗುಂಪಿಗೆ ಮುಸ್ಲಿಮರು ಎಂಬ ಹಣೆಪಟ್ಟಿ ಕಟ್ಟಲಾಗಿತ್ತು. ಅಲೆದಾಡುವ ಸನ್ಯಾಸಿಗಳನ್ನು ಮಕ್ಕಳ ಅಪಹರಣಕಾರರು ಎಂದು ಸುಳ್ಳು ಆರೋಪ ಹೊರಿಸಿದ ಇತರ ನಿದರ್ಶನಗಳೂ ಇವೆ.

ಇದನ್ನೂ ಓದಿ | FACT CHECK : ಅಪಘಾತದ ವಿಡಿಯೋಗೆ ಕೋಮು ಬಣ್ಣ ಬಳಿದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...