Homeಫ್ಯಾಕ್ಟ್‌ಚೆಕ್FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ...

FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮಗಳು

- Advertisement -
- Advertisement -

ಹಿಂದೂ ಸಾಧುಗಳ ರೀತಿ ವಸ್ತ್ರ ಧರಿಸಿ, ಹಣೆ ಮೇಲೆ ವಿಭೂತಿ ಹಚ್ಚಿರುವ ಮೂವರು ಗಡ್ಡದಾರಿ ವ್ಯಕ್ತಿಗಳ ಜೊತೆ ಜನರ ಗುಂಪೊಂದು ವಾಗ್ವಾದ ನಡೆಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿ ‘ಮೂವರು ಸಾಧುಗಳನ್ನು ವ್ಯಕ್ತಿಯೊಬ್ಬ”ನಿಮಗೆ ಎಷ್ಟು ದೇವರ ನಾಮಗಳು ಗೊತ್ತಿದೆ?” ಎಂದು ಪ್ರಶ್ನಿಸುವುದು ಮತ್ತು ಇತರ ವ್ಯಕ್ತಿಗಳಿಗೆ ” ಇವರು ನಿಜವಾದ ಸಾಧುಗಳಲ್ಲ, ಸಾಧುಗಳ ವೇಷ ಧರಿಸಿರುವ ಮುಸ್ಲಿಮರು. ಇವರಲ್ಲಿ ಒಬ್ಬಾತನ ಹೆಸರು ಸಲ್ಮಾನ್ ” ಎಂದು ಹೇಳುತ್ತಿರುವುದು ಇದೆ.

ಈ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಂಡಿರುವ ಸಾಮಾಜಿಕ ಜಾಲತಾಣ ಬಳಕೆದಾರರು, “ಹಿಂದೂ ಸಾಧುಗಳ ವೇಷ ಧರಿಸಿದ್ದ ಓಡಾಡುತ್ತಿದ್ದ ಮುಸ್ಲಿಮರು ಸಿಕ್ಕಿ ಬಿದ್ದಿದ್ದಾರೆ” ಎಂದು ಪ್ರತಿಪಾದಿಸಿದ್ದಾರೆ.

ನವೆಂಬರ್ 2ರಂದು ಈ ವೈರಲ್ ವಿಡಿಯೋವನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದ ಗುಜರಾತ್ ಭಾಷೆಯ ಸುದ್ದಿವಾಹಿನಿ ಝೀ 24 ಕಾಲಕ್‘ “ಸಾಧುವಿನ ವೇಷದಲ್ಲಿದ್ದ ಸಲ್ಮಾನ್ ಸಿಕ್ಕಿಬಿದ್ದ! ಸೂರತ್‌ನಲ್ಲಿ ಸಾಧುಗಳಂತೆ ಭಿಕ್ಷೆ ಬೇಡುತ್ತಿದ್ದವರ ವಂಚನೆ ಐಡಿ ಪರಿಶೀಲಿಸಿದಾಗ ಬಹಿರಂಗಗೊಂಡಿದೆ” ಎಂದು ಬರೆದುಕೊಂಡಿತ್ತು. ಈಗಲೂ

ಬಲಪಂಥೀಯ ಸುದ್ದಿ ಸಂಸ್ಥೆ ‘ಓಪ್‌ ಇಂಡಿಯಾ‘ ಕೂಡ ನವೆಂಬರ್ 24ರಂದು ವೈರಲ್ ವಿಡಿಯೋ ಹಂಚಿಕೊಂಡು “ಸಲ್ಮಾನ್ ಮತ್ತು ಆತನ ಸಹಚರರು ಕೇಸರಿ ಬಟ್ಟೆ ಧರಿಸಿ ಭಿಕ್ಷೆ ಬೇಡುತ್ತಿದ್ದರು. ಗುರುತಿನ ಚೀಟಿಯ ಮೂಲಕ ಅವರ ನಿಜವಾದ ಗುರುತು ಬಯಲಾಗಿದೆ. ಅವರಿಗೆ ಯಾವುದೇ ಶ್ಲೋಕ ಪಠಿಸಲು ಅಥವಾ ಹಿಂದೂ ದೇವರು ಮತ್ತು ದೇವತೆಗಳ ಹೆಸರು ಸರಿಯಾಗಿ ಹೇಳಲು ಸಾಧ್ಯವಾಗಿಲ್ಲ” ಎಂದು ಬರೆದುಕೊಂಡಿತ್ತು.

ಮತ್ತೊಂದು ಬಲಪಂಥೀಯ ಸುದ್ದಿ ಸಂಸ್ಥೆ ಸುದರ್ಶನ್ ನ್ಯೂಸ್ ಕೂಡ ನವೆಂಬರ್ 4ರಂದು ವೈರಲ್ ವಿಡಿಯೋ ಹಂಚಿಕೊಂಡು “ಗುಜರಾತ್‌ನ ಸೂರತ್‌ನಲ್ಲಿ, ‘ಜಿಹಾದಿ’ ಸಲ್ಮಾನ್ ಮತ್ತು ಆತನ ಗ್ಯಾಂಗ್ ಸಾಧುಗಳಂತೆ ಪೋಸು ಕೊಡುತ್ತಾ ಭಿಕ್ಷೆ ಬೇಡುತ್ತಿದ್ದರು… ಕೇಸರಿ ವಸ್ತ್ರಗಳನ್ನು ಧರಿಸಿ ಸಾಧುಗಳಂತೆ ಪೋಸು ಕೊಡುತ್ತಿದ್ದ ಮೂವರು ‘ಜಿಹಾದಿ’ಗಳನ್ನು ಬಂಧಿಸಲಾಗಿದೆ” ಎಂದು ಬರೆದುಕೊಂಡಿತ್ತು.

ನವೆಂಬರ್ 4ರಂದು ಎಕ್ಸ್‌ನಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದ ಆರ್‌ಎಸ್‌ಎಸ್‌ ಮುಖವಾಣಿ ಪಾಂಚಜನ್ಯ “ಸಾಧುಗಳ ವೇಷದಲ್ಲಿ ಸಿಕ್ಕಿಬಿದ್ದ ಮುಸ್ಲಿಮರು! ನೀವು ಸಾಧು ಆಗಲು ಬಯಸಿದರೆ, ಏಕೆ ಹಿಂದೂ ಆಗಬಾರದು? ಸಲ್ಮಾನ್ ಎಂಬ ಮುಸ್ಲಿಂ ವ್ಯಕ್ತಿ, ಕೇಸರಿ ವೇಷ ಧರಿಸಿ ಸಾಧುವಿನಂತೆ ಪೋಸು ಕೊಟ್ಟು ಭಿಕ್ಷೆ ಬೇಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಈ ಘಟನೆ ಗುಜರಾತ್‌ನ ಸೂರತ್‌ನಲ್ಲಿ ನವೆಂಬರ್ 3,2024 ರಂದು ನಡೆದಿದ್ದು, ನಂತರ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಇದೇ ಮೊದಲಲ್ಲ-ಸಾಧುಗಳ ವೇಷ ಧರಿಸಿದ ಮುಸ್ಲಿಮರು ಈ ಹಿಂದೆ 16 ಬಾರಿ ಸಿಕ್ಕಿಬಿದ್ದಿದ್ದಾರೆ” ಎಂದು ಬರೆದುಕೊಂಡಿತ್ತು.

ಇನ್ನೂ ಅನೇಕ ಬಲಪಂಥೀಯ ಸುದ್ದಿ ಸಂಸ್ಥೆಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋ, ಫೋಟೋ ಹಂಚಿಕೊಂಡು ಮುಸ್ಲಿಮರು ಹಿಂದೂ ಸಾಧುಗಳ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದಾಗ ಸಿಕ್ಕಿ ಬಿದ್ದಿದ್ದಾರೆ” ಎಂದು ಬರೆದುಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಈ ಬಗ್ಗೆ ವರದಿಗಳನ್ನು ಹುಡುಕಿದ್ದೇವೆ. ಈ ವೇಳೆ ದೈನಿಕ್ ಭಾಸ್ಕರ್ ಗ್ರೂಪ್‌ನ ಗುಜರಾತಿ ದಿನಪತ್ರಿಕೆ ದಿವ್ಯಾ ಭಾಸ್ಕರ್ ನವೆಂಬರ್ 4ರಂದು ವಿಡಿಯೋ ಕುರಿತು ಪ್ರಕಟಿಸಿದ ವರದಿ ಲಭ್ಯವಾಗಿದೆ. ಅದರಲ್ಲಿ “ಪೊಲೀಸ್ ತನಿಖೆಯ ನಂತರ ವಿಡಿಯೋದಲ್ಲಿರುವ ಮೂವರೂ ಸಾಧುಗಳು ಹಿಂದೂಗಳು ಮತ್ತು ಅವರು ಜುನಾಗಢದಿಂದ ಬಂದವರು ಎಂದು ತಿಳಿದು ಬಂದಿದೆ” ಎಂಬುವುದಾಗಿ ಹೇಳಿದೆ.

“ಮೂವರು ಸಾಧುಗಳು ಅನುಮಾನಾಸ್ಪದವಾಗಿ ಕಂಡು ಬಂದಿದ್ದರು. ನಂತರ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ವಿಚಾರಣೆ ವೇಳೆ ಅವರು ನೀಡಿದ ಮಾಹಿತಿ ಆಧರಿಸಿ ಜುನಾಗಢದಲ್ಲೂ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಅವರು ನೀಡಿರುವ ಮಾಹಿತಿ ಸರಿಯಾಗಿರುವುದು ಗೊತ್ತಾಗಿದೆ. ಮೂವರು ಸಾಧುಗಳಲ್ಲಿ ಒಬ್ಬರ ಹೆಸರು ‘ಸಲ್ಮಾನಾಥ್’. ಇದನ್ನು ಜನರು ಸಲ್ಮಾನ್ ಎಂದು ತಪ್ಪು ತಿಳಿದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ ಎಂದು” ದಿವ್ಯಾ ಭಾಸ್ಕರ್ ವರದಿ ವಿವರಿಸಿದೆ.

ಫ್ಯಾಕ್ಟ್‌ಚೆಕ್ ಸಂಸ್ಥೆ ‘ಸಲ್ಮಾನಾಥ್’ ಅವರ ಚುನಾವಣಾ ಗುರುತಿನ ಚೀಟಿಯನ್ನು ಹಂಚಿಕೊಂಡಿದೆ. ಅದರಲ್ಲಿ ಸಲ್ಮಾನಾಥ್ ಅವರ ತಂದೆ ಸೂರಮನಾಥ್ ಪರ್ಮಾರ್ ಎಂದು ಇದೆ. ಪರ್ಮಾರ್ ಎಂಬ ಉಪನಾಮವು ರಜಪೂತ ಸಮುದಾಯಕ್ಕೆ ಸಂಬಂಧಿಸಿದೆ. ಇವರು ಹೆಚ್ಚಾಗಿ ಉತ್ತರ ಮತ್ತು ಮಧ್ಯ ಭಾರತದಲ್ಲಿ, ವಿಶೇಷವಾಗಿ ರಾಜಸ್ಥಾನ, ಗುಜರಾತ್, ಪಂಜಾಬ್, ಹರಿಯಾಣ, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ ಮತ್ತು ಉತ್ತರ ಮಹಾರಾಷ್ಟ್ರದಲ್ಲಿ ನೆಲೆಗೊಂಡಿದ್ದಾರೆ.

pc : altnews.in

ಸಾಧುಗಳನ್ನು, ವಿಶೇಷವಾಗಿ ಮನೆಯಿಂದ ಮನೆಗೆ ತೆರಳಿ ಭಿಕ್ಷೆ ಬೇಡುವವರಿಗೆ ಮುಸ್ಲಿಮರು ಎಂದು ಆಧಾರರಹಿತ ಅನುಮಾನದ ಮೇಲೆ ಕಿರುಕುಳ ನೀಡುತ್ತಿರುವುದು ಇದೇ ಮೊದಲಲ್ಲ. ಈ ವರ್ಷದ ಜುಲೈನಲ್ಲಿ ಮೀರತ್‌ನಲ್ಲಿ ಮೂವರು ಸಾಧುಗಳ ಗುಂಪಿಗೆ ಮುಸ್ಲಿಮರು ಎಂಬ ಹಣೆಪಟ್ಟಿ ಕಟ್ಟಲಾಗಿತ್ತು. ಅಲೆದಾಡುವ ಸನ್ಯಾಸಿಗಳನ್ನು ಮಕ್ಕಳ ಅಪಹರಣಕಾರರು ಎಂದು ಸುಳ್ಳು ಆರೋಪ ಹೊರಿಸಿದ ಇತರ ನಿದರ್ಶನಗಳೂ ಇವೆ.

ಇದನ್ನೂ ಓದಿ | FACT CHECK : ಅಪಘಾತದ ವಿಡಿಯೋಗೆ ಕೋಮು ಬಣ್ಣ ಬಳಿದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...