Homeಫ್ಯಾಕ್ಟ್‌ಚೆಕ್FACT CHECK : ಪ್ರತಿಭಟನೆಯ ವಿಡಿಯೋಗೆ ಕೋಮು ಬಣ್ಣ ಬಳಿದ ಮಾಧ್ಯಮಗಳು

FACT CHECK : ಪ್ರತಿಭಟನೆಯ ವಿಡಿಯೋಗೆ ಕೋಮು ಬಣ್ಣ ಬಳಿದ ಮಾಧ್ಯಮಗಳು

- Advertisement -
- Advertisement -

ಹಿರಿಯ ವಯಸ್ಸಿನ ವ್ಯಕ್ತಿಯೊಬ್ಬರು ತನ್ನ ಕತ್ತಿಗೆ ಮತ್ತೊಬ್ಬ ವ್ಯಕ್ತಿಯ ಫೋಟೋ ನೇತು ಹಾಕಿಕೊಂಡು ರಸ್ತೆಯಲ್ಲಿ ಕುಳಿತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ವಿಡಿಯೋದಲ್ಲಿ ಹಿರಿಯ ವ್ಯಕ್ತಿಯನ್ನು ಸಮವಸ್ತ್ರ ತೊಟ್ಟ ಸೇನಾ ಸಿಬ್ಬಂದಿ ಸುತ್ತುವರಿದಿರುವುದು ಮತ್ತು ಅವರು ಬೆಂಗಾಲಿ ಭಾಷೆಯಲ್ಲಿ “ನಾನು ಸಾಯುತ್ತೇನೆ, ಆದರೆ, ನನಗೆ ನ್ಯಾಯಬೇಕು. ನನ್ನ ಮಗುವಿಗೆ ನ್ಯಾಯಬೇಕು. ನನ್ನ ಮಗು ಎಲ್ಲಿ? ನನಗೆ ನ್ಯಾಯಬೇಕು. ನಾನು ಬಾಗಿಲಿನಿಂದ ಬಾಗಿಲಿಗೆ, ಕಚೇರಿಯಿಂದ ಕಚೇರಿಗೆ ಅಲೆದಾಡಿದ್ದೇನೆ. ಆದರೆ, ಒಬ್ಬರೂ ನನ್ನ ಅಳಲು ಕೇಳಿಲ್ಲ. ಇವತ್ತು ಬೆಳಿಗ್ಗಿಯೇ ನಾನಿಲ್ಲಿಗೆ ಬಂದಿದ್ದೇನೆ” ಎಂದು ಹೇಳುತ್ತಿರುವ ದೃಶ್ಯವಿದೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಹಲವರು, ವಿಡಿಯೋದಲ್ಲಿರುವ ವ್ಯಕ್ತಿ ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂ, ಅವರ ಮಗ ನಾಪತ್ತೆಯಾಗಿದ್ದಾರೆ” ಎಂದು ಪ್ರತಿಪಾದಿಸಿದ್ದಾರೆ.

ವೈರಲ್ ವಿಡಿಯೋವನ್ನು ಮೊದಲು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು ಸುದ್ದಿ ಸಂಸ್ಥೆ ಎಎನ್‌ಐ. ವಿಡಿಯೋ ಜೊತೆಗೆ “ಬಾಂಗ್ಲಾದೇಶ : ಅಲ್ಪಸಂಖ್ಯಾತ ಹಿಂದೂ ಸಮುದಾಯದ ಸದಸ್ಯರೊಬ್ಬರು ತಮ್ಮ ಕಾಣೆಯಾದ ಮಗನ ಪೋಸ್ಟರ್‌ನೊಂದಿಗೆ ಪ್ರತಿಭಟಿಸುತ್ತಿದ್ದಾರೆ. “ನಾನು ನನ್ನ ಜೀವವನ್ನು ನೀಡುತ್ತೇನೆ, ಆದರೆ ನನ್ನ ಮಗುವಿಗೆ ನ್ಯಾಯಬೇಕು. ನನ್ನ ಮಗು ಎಲ್ಲಿ? ನನ್ನ ಮಗುವಿನ ಬಗ್ಗೆ ವಿಚಾರಿಸಲು ನಾನು ಬಾಗಿಲಿನಿಂದ ಬಾಗಿಲಿಗೆ ಹೋಗುತ್ತಿದ್ದೇನೆ. ಆದರೆ, ಯಾರೂ ನನ್ನ ಮಾತನ್ನು ಕೇಳುತ್ತಿಲ್ಲ” ಎಂದು ಎಎನ್‌ಐ ಬರೆದುಕೊಂಡಿತ್ತು.

ಎಎನ್‌ಐ ಪೋಸ್ಟ್‌ ಮಾಡಿದ್ದ ವಿಡಿಯೋ ಮತ್ತು ಅದರಲ್ಲಿರುವ ಮಾಹಿತಿಯನ್ನು ಅನೇಕ ಸುದ್ದಿವಾಹಿನಿಗಳು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ಬಳಸಿಕೊಂಡಿದ್ದರು.

ಜಾಗರಣ್, ಹಿಂದೂಸ್ತಾನ್, ಎನ್‌ಡಿಟಿವಿ ಇಂಡಿಯಾ, ಮಿರರ್ ನೌ ಮುಂತಾದ ಸುದ್ದಿವಾಹಿನಿಗಳು ಹಿಂದೂ ವ್ಯಕ್ತಿಯೊಬ್ಬ ತನ್ನ ಮಗನಿಗಾಗಿ ಹತಾಶರಾಗಿ ಹುಡುಕುತ್ತಿರುವ ಬಗ್ಗೆ ವರದಿ ಮಾಡಿತ್ತು. ಹೆಚ್ಚಿನ ವರದಿಗಳು ಎಎನ್‌ಐ ಎಕ್ಸ್‌ನಲ್ಲಿ ಮಾಡಿದ್ದ ಪೋಸ್ಟ್ ಆಧರಿಸಿತ್ತು.

ಸುಮಾರು 3 ಲಕ್ಷ ಫಾಲೋವರ್ಸ್ ಇರುವ ಎಕ್ಸ್‌ ಬಳಕೆದಾರ ಬಾಲ (@erbmjha)ಆಗಸ್ಟ್ 13ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು ” “ನಾನು ನನ್ನ ಪ್ರಾಣ ಕೊಡುತ್ತೇನೆ. ಆದರೆ ನನ್ನ ಮಗುವಿಗೆ ನ್ಯಾಯ ಬೇಕು. ನನ್ನ ಮಗು ಎಲ್ಲಿದೆ? ನನ್ನ ಮಗುವಿನ ಬಗ್ಗೆ ನಾನು ಬಾಗಿಲಿನಿಂದ ಬಾಗಿಲಿಗೆ ಹೋಗಿ ವಿಚಾರಿಸುತ್ತಿದ್ದೇನೆ. ಆದರೆ ಯಾರೂ ನನ್ನ ಮಾತನ್ನು ಕೇಳುತ್ತಿಲ್ಲ”

“ಅಸಹಾಯಕ ಹಿಂದೂ ತಂದೆಗೆ ಬಾಂಗ್ಲಾದೇಶದಲ್ಲಿ ಕಾಣೆಯಾದ ತನ್ನ ಮಗನಿಗೆ ನ್ಯಾಯಕ್ಕಾಗಿ ರಸ್ತೆಯಲ್ಲಿ ಮನವಿ ಮಾಡುವುದನ್ನು ಬಿಟ್ಟು ಬೇರೆ ದಾರಿ ಇರಲಿಲ್ಲ” ಎಂದು ಬರೆದುಕೊಂಡಿದ್ದಾರೆ.

ಬಲಪಂಥೀಯ ಪ್ರಭಾವಿ ಎಕ್ಸ್ ಬಳಕೆದಾರರಾದ @MrSinha_, @VIKRAMPRATAPSIN,@RealBababanaras ಸೇರಿದಂತೆ ಹಲವರು ವೈರಲ್ ವಿಡಿಯೋವನ್ನು ಪೋಸ್ಟ್ ಮಾಡಿದ್ದರು. ಬಳಿಕ ಅದನ್ನು ಡಿಲಿಟ್ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್ : ಅಸಲಿಗೆ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಂಡಿರುವ ವಿಡಿಯೋದಲ್ಲಿರುವ ವ್ಯಕ್ತಿ ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂ ಸಮುದಾಯವರಲ್ಲ. ಅವರು ಬಹುಸಂಖ್ಯಾತ ಮುಸ್ಲಿಂ ಸಮುದಾಯದವರು.

ಎಎಎನ್‌ಐ ಸುದ್ದಿ ಸಂಸ್ಥೆ ತಪ್ಪಾಗಿ ರಸ್ತೆಯಲ್ಲಿ ಕುಳಿತವರು ಹಿಂದೂ ವ್ಯಕ್ತಿ ಎಂದು ಸುದ್ದಿ ಹಬ್ಬಿಸಿತ್ತು. ಬಳಿಕ ಅದು ತಪ್ಪಾಗಿರುವುದನ್ನು ಒಪ್ಪಿಕೊಂಡಿದೆ.

ಮೊದಲು ತಪ್ಪಾಗಿ ಹಾಕಿದ್ದ ಪೋಸ್ಟ್‌ನ ಸ್ಕ್ರೀನ್ ಶಾಟ್ ಹಂಚಿಕೊಂಡ ಎಎನ್‌ಐ “ತಿದ್ದುಪಡಿ: ಈ ವ್ಯಕ್ತಿಯು ಅಲ್ಪಸಂಖ್ಯಾತ ಹಿಂದೂ ಸಮುದಾಯದವರಲ್ಲದ ಕಾರಣ ಕೆಳಗಿನ ಟ್ವೀಟ್ ಅನ್ನು ಅಳಿಸಲಾಗಿದೆ. ತಪ್ಪಿಗೆ ವಿಷಾದಿಸುತ್ತೇವೆ” ಎಂದು ಬರೆದುಕೊಂಡಿದೆ.

ಹಾಗಾದರೆ, ಆ ವಿಡಿಯೋ ಯಾವ ಘಟನೆಗೆ ಸಂಬಂಧಿಸಿದ್ದು ಎಂದು ನಾವು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸ್ಕ್ರೀಟ್ ಶಾಟ್ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ಬಾಂಗ್ಲಾದೇಶದ ಸುದ್ದಿವಾಹಿನಿ ‘Barta24’ತನ್ನ ಫೇಸ್‌ಬುಕ್ ಖಾತೆಯಲ್ಲಿ ಮಾಡಿರುವ ಲೈವ್ ವಿಡಿಯೋ ಒಂದು ಲಭ್ಯವಾಗಿದೆ.

ಆ ವಿಡಿಯೋಗೆ ಬೆಂಗಾಲಿ ಭಾಷೆಯಲ್ಲಿ “ನಮ್ಮ ಪ್ರೀತಿ ಪಾತ್ರರನ್ನು ಹಿಂತಿರುಗಿಸಿ, ರಹಸ್ಯ ಬಂಧನ ಕೇಂದ್ರಗಳನ್ನು ಒಡೆಯಿರಿ’- ಮಾನವ ಸರಪಳಿ ಪ್ರತಿಭಟನೆಯ ಸಂದರ್ಭದಲ್ಲಿ ಕಣ್ಮರೆಯಾದವರ ಕುಟುಂಬ ಸದಸ್ಯರು ರಸ್ತೆ ತಡೆ ನಡೆಸಿದರು” ಎಂದು ಶೀರ್ಷಿಕೆ ಕೊಡಲಾಗಿದೆ.

ವೈರಲ್ ವಿಡಿಯೋದಲ್ಲಿ ಕಂಡು ಬರುವ ಹಿರಿಯ ವ್ಯಕ್ತಿ ಈ ಫೇಸ್‌ಬುಕ್ ಲೈವ್‌ನಲ್ಲಿ ಬೀದಿಯಲ್ಲಿ ಕುಳಿತು ‘ನಮ್ಮ ಪ್ರೀತಿ ಪಾತ್ರರನ್ನು ಹಿಂತಿರುಗಿ’ ಮತ್ತು ‘ಅವರನ್ನು ಮುಕ್ತಗೊಳಿಸಿ’ ಎಂಬ ಘೋಷಣೆಗಳನ್ನು ಕೂಗುತ್ತಿರುವುದನ್ನು ಕಾಣಬಹುದು. ಅಲ್ಲದೆ, ಅವರು ಟೋಪಿ ಧರಿಸಿರುವುದೂ ವಿಡಿಯೋದಲ್ಲಿ ಇದೆ.

ಲೈವ್‌ ವಿಡಿಯೋದ 1:45 ನಿಮಿಷದಲ್ಲಿ ವರದಿಗಾರೊಬ್ಬರು ಹಿರಿಯ ವ್ಯಕ್ತಿಯನ್ನು ಕೇಳುತ್ತಾರೆ ” ನೀವು ಫೋಟೋ ಹಿಡಿದುಕೊಂಡಿರುವ ವ್ಯಕ್ತಿ ಯಾರು ಮತ್ತು ಅವರು ಹೇಗೆ ಕಾಣೆಯಾದರು?

ಅದಕ್ಕೆ ಉತ್ತರಿಸಿದ ಹಿರಿಯ ವ್ಯಕ್ತಿ “ಇದು ನನ್ನ ಹಿರಿಯ ಮಗ ಮೊಹಮ್ಮದ್ ಸನ್ನಿ ಹವ್ಲಾದರ್ ಮತ್ತು ನಾನು ಬಾಬುಲ್ ಹವ್ಲಾದರ್. ವೃತ್ತಿಯಲ್ಲಿ ದಿನಗೂಲಿ ಕಾರ್ಮಿಕನಾಗಿದ್ದ ಮತ್ತು ಬಿಎನ್‌ಪಿ (ಶೇಖ್ ಹಸೀನಾ ಅವರ ಅವಾಮಿ ಲೀಗ್ ಅಧಿಕಾರದಲ್ಲಿದ್ದಾಗ ಬಾಂಗ್ಲಾದೇಶದ ವಿರೋಧ ಪಕ್ಷ) ಬೆಂಬಲಿಗನಾಗಿದ್ದ ತನ್ನ ಹಿರಿಯ ಮಗ ಸನ್ನಿಯನ್ನು ಜನವರಿ 10, 2013 ರಂದು ಕರೆದುಕೊಂಡು ಹೋಗಿದ್ದಾರೆ. ಅಂದಿನಿಂದ ಆತ ಕಾಣೆಯಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಲು ವರ್ಷಗಳಿಂದ ಓಡಾಡುತ್ತಿದ್ದೇನೆ. ನನಗೆ ಬೆದರಿಕೆಗಳು ಬರುತ್ತಿವೆ. ಇದು ಹೀಗೇ ಮುಂದುವರೆದರೆ, ನನ್ನ ಮತ್ತು ನನ್ನ ಕಿರಿಯ ಮಗ ಇಬ್ಬರನ್ನೂ ಹಿರಿಯ ಮಗನ ಶೈಲಿಯಲ್ಲಿ ಕರೆದೊಯ್ಯುತ್ತಾರೆ” ಎಂದು ಹೇಳುತ್ತಾರೆ.

ವಿಡಿಯೋದಲ್ಲಿ, ವರದಿಗಾರ ಪ್ರತಿಭಟನೆಯಲ್ಲಿ ಭಾಗವಹಿಸಿದ ಇತರರೊಂದಿಗೆ ಮಾತನಾಡುವುದನ್ನು ಕಾಣಬಹುದು, “ಅವರು ಕೂಡ ಕಾಣೆಯಾದ ಕುಟುಂಬ ಸದಸ್ಯರ ಬಗ್ಗೆ ಇದೇ ರೀತಿಯ ಮಾಹಿತಿಗಳನ್ನು ಹಂಚಿಕೊಳ್ಳುತ್ತಾರೆ”

ಆಗಸ್ಟ್ 14 ರಂದು ಬಾಂಗ್ಲಾದ ಸುದ್ದಿ ಸಂಸ್ಥೆ ಪ್ರೋಥೋಮ್ ಅಲೋ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ “ಆಗಸ್ಟ್ 13 ರಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಹಲವಾರು ನಾಪತ್ತೆಯಾದ ವ್ಯಕ್ತಿಗಳ ಕುಟುಂಬ ಸದಸ್ಯರು ತಮ್ಮ ಕಾಣೆಯಾದ ಸಂಬಂಧಿಕರ ಚಿತ್ರಗಳು ಮತ್ತು ಬ್ಯಾನರ್‌ಗಳೊಂದಿಗೆ ಹರೇ ರಸ್ತೆಯಲ್ಲಿರುವ ಜಮುನಾ ರಾಜ್ಯ ಅತಿಥಿ ಗೃಹದ ಮುಂದೆ ಜಮಾಯಿಸಿದರು. ಅವಾಮಿ ಲೀಗ್ ಪಕ್ಷ ಅಧಿಕಾರದಲ್ಲಿದ್ದಾಗ ನಾಪತ್ತೆಯಾಗಿರುವ ತಮ್ಮ ಸಂಬಂಧಿಕರನ್ನು ಹಿಂದಿರುಗಿಸುವಂತೆ ಒತ್ತಾಯಿಸಿದರು. ಇನ್ನೂ ‘ಐನಾಘರ್’ (ರಹಸ್ಯ ಬಂಧನ ಕೇಂದ್ರಗಳು) ದಲ್ಲಿ ಬಂಧಿತರಾಗಿರುವವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಅವರು ಒತ್ತಾಯಿಸಿದರು” ಎಂದು ಹೇಳಲಾಗಿದೆ.

ಒಟ್ಟಿನಲ್ಲಿ ‘ರಸ್ತೆಯಲ್ಲಿ ಕುಳಿತು ಪ್ರತಿಭಟಿಸಿದ ಹಿರಿಯ ವ್ಯಕ್ತಿ ಬಾಂಗ್ಲಾದೇಶದವರೇ, ಆದರೆ, ಅವರು ಅಲ್ಪಸಂಖ್ಯಾತ ಹಿಂದೂ ಸಮುದಾಯದವರಲ್ಲ ಎಂಬುವುದು ನಮ್ಮ ಪರಿಶೀಲನೆಯಲ್ಲಿ ಗೊತ್ತಾಗಿದೆ.

ವೈರಲ್ ವಿಡಿಯೋ ಯಾವುದೇ ಕೋಮು ಸಂಘರ್ಷಕ್ಕೆ ಅಥವಾ ಅಲ್ಪಸಂಖ್ಯಾತರ ಮೇಲಿನ ದಾಳಿಗೆ ಸಂಬಂಧಿಸಿದಲ್ಲ. ಬಾಂಗ್ಲಾದಲ್ಲಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಅಧಿಕಾರದಲ್ಲಿದ್ದಾಗ, ಸರ್ಕಾರ ವಿರೋಧ ಪಕ್ಷದ ಕಾರ್ಯಕರ್ತರು ಅಥವಾ ವಿರೋಧಿಗಳನ್ನು ಅಪಹರಿಸಿ ರಹಸ್ಯ ಬಂಧನ ಕೇಂದ್ರಗಳಲ್ಲಿ ಇಟ್ಟಿದೆ ಎಂಬ ಆರೋಪಗಳು ಕೇಳಿ ಬಂದಿತ್ತು.

ಹೀಗೆ, ಆಪಾದಿತ ಅಪಹರಣಕ್ಕೆ ಒಳಗಾಗಿರುವ ಅಥವಾ ನಾಪತ್ತೆಯಾಗಿರುವ ತನ್ನ ಮಗನನ್ನು ಹುಡುಕಿಕೊಡುವಂತೆ ಹಿರಿಯ ವ್ಯಕ್ತಿ ರಸ್ತೆಯಲ್ಲಿ ಕುಳಿತು ಪ್ರತಿಭಟಿಸಿದ್ದಾರೆ. ಇವರ ಮಗನಂತೆ ನಾಪತ್ತೆಯಾಗಿರುವ ಇನ್ನೂ ಅನೇಕ ವ್ಯಕ್ತಿಗಳ ಕುಟುಂಬಸ್ಥರು ಕೂಡ ಅದೇ ರೀತಿ ರಸ್ತೆಯಲ್ಲಿ ಕುಳಿತು ನ್ಯಾಯಕ್ಕಾಗಿ ಪ್ರತಿಭಟಿಸಿದ್ದಾರೆ.

ಎಎನ್‌ಐ ಸುದ್ದಿ ಸಂಸ್ಥೆ ತಪ್ಪು ಮಾಹಿತಿಯೊಂದಿಗೆ ವಿಡಿಯೋ ಪೋಸ್ಟ್ ಮಾಡಿತ್ತು. ಬಳಿಕ ಅದನ್ನು ಅಳಿಸಿದೆ. ಆದರೆ, ಅಷ್ಟೊತ್ತಿಗೆ ಎಎನ್‌ಐ ಪೋಸ್ಟ್ ಆಧರಿಸಿ ಅನೇಕ ಮಾಧ್ಯಮಗಳು ಸುದ್ದಿ ಮಾಡಿ ಆಗಿದೆ. ಸುಳ್ಳು ಸುದ್ದಿ ಎಲ್ಲೆಡೆ ತಲುಪಿದೆ.

ಇದನ್ನೂ ಓದಿ : FACT CHECK : ಮಾಲ್ಡೀವ್ಸ್ ತನ್ನ 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟು ಕೊಟ್ಟಿರುವುದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...