Homeಫ್ಯಾಕ್ಟ್‌ಚೆಕ್FACT CHECK : ಪ್ರತಿಭಟನೆಯ ವಿಡಿಯೋಗೆ ಕೋಮು ಬಣ್ಣ ಬಳಿದ ಮಾಧ್ಯಮಗಳು

FACT CHECK : ಪ್ರತಿಭಟನೆಯ ವಿಡಿಯೋಗೆ ಕೋಮು ಬಣ್ಣ ಬಳಿದ ಮಾಧ್ಯಮಗಳು

- Advertisement -
- Advertisement -

ಹಿರಿಯ ವಯಸ್ಸಿನ ವ್ಯಕ್ತಿಯೊಬ್ಬರು ತನ್ನ ಕತ್ತಿಗೆ ಮತ್ತೊಬ್ಬ ವ್ಯಕ್ತಿಯ ಫೋಟೋ ನೇತು ಹಾಕಿಕೊಂಡು ರಸ್ತೆಯಲ್ಲಿ ಕುಳಿತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ವಿಡಿಯೋದಲ್ಲಿ ಹಿರಿಯ ವ್ಯಕ್ತಿಯನ್ನು ಸಮವಸ್ತ್ರ ತೊಟ್ಟ ಸೇನಾ ಸಿಬ್ಬಂದಿ ಸುತ್ತುವರಿದಿರುವುದು ಮತ್ತು ಅವರು ಬೆಂಗಾಲಿ ಭಾಷೆಯಲ್ಲಿ “ನಾನು ಸಾಯುತ್ತೇನೆ, ಆದರೆ, ನನಗೆ ನ್ಯಾಯಬೇಕು. ನನ್ನ ಮಗುವಿಗೆ ನ್ಯಾಯಬೇಕು. ನನ್ನ ಮಗು ಎಲ್ಲಿ? ನನಗೆ ನ್ಯಾಯಬೇಕು. ನಾನು ಬಾಗಿಲಿನಿಂದ ಬಾಗಿಲಿಗೆ, ಕಚೇರಿಯಿಂದ ಕಚೇರಿಗೆ ಅಲೆದಾಡಿದ್ದೇನೆ. ಆದರೆ, ಒಬ್ಬರೂ ನನ್ನ ಅಳಲು ಕೇಳಿಲ್ಲ. ಇವತ್ತು ಬೆಳಿಗ್ಗಿಯೇ ನಾನಿಲ್ಲಿಗೆ ಬಂದಿದ್ದೇನೆ” ಎಂದು ಹೇಳುತ್ತಿರುವ ದೃಶ್ಯವಿದೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಹಲವರು, ವಿಡಿಯೋದಲ್ಲಿರುವ ವ್ಯಕ್ತಿ ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂ, ಅವರ ಮಗ ನಾಪತ್ತೆಯಾಗಿದ್ದಾರೆ” ಎಂದು ಪ್ರತಿಪಾದಿಸಿದ್ದಾರೆ.

ವೈರಲ್ ವಿಡಿಯೋವನ್ನು ಮೊದಲು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು ಸುದ್ದಿ ಸಂಸ್ಥೆ ಎಎನ್‌ಐ. ವಿಡಿಯೋ ಜೊತೆಗೆ “ಬಾಂಗ್ಲಾದೇಶ : ಅಲ್ಪಸಂಖ್ಯಾತ ಹಿಂದೂ ಸಮುದಾಯದ ಸದಸ್ಯರೊಬ್ಬರು ತಮ್ಮ ಕಾಣೆಯಾದ ಮಗನ ಪೋಸ್ಟರ್‌ನೊಂದಿಗೆ ಪ್ರತಿಭಟಿಸುತ್ತಿದ್ದಾರೆ. “ನಾನು ನನ್ನ ಜೀವವನ್ನು ನೀಡುತ್ತೇನೆ, ಆದರೆ ನನ್ನ ಮಗುವಿಗೆ ನ್ಯಾಯಬೇಕು. ನನ್ನ ಮಗು ಎಲ್ಲಿ? ನನ್ನ ಮಗುವಿನ ಬಗ್ಗೆ ವಿಚಾರಿಸಲು ನಾನು ಬಾಗಿಲಿನಿಂದ ಬಾಗಿಲಿಗೆ ಹೋಗುತ್ತಿದ್ದೇನೆ. ಆದರೆ, ಯಾರೂ ನನ್ನ ಮಾತನ್ನು ಕೇಳುತ್ತಿಲ್ಲ” ಎಂದು ಎಎನ್‌ಐ ಬರೆದುಕೊಂಡಿತ್ತು.

ಎಎನ್‌ಐ ಪೋಸ್ಟ್‌ ಮಾಡಿದ್ದ ವಿಡಿಯೋ ಮತ್ತು ಅದರಲ್ಲಿರುವ ಮಾಹಿತಿಯನ್ನು ಅನೇಕ ಸುದ್ದಿವಾಹಿನಿಗಳು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ಬಳಸಿಕೊಂಡಿದ್ದರು.

ಜಾಗರಣ್, ಹಿಂದೂಸ್ತಾನ್, ಎನ್‌ಡಿಟಿವಿ ಇಂಡಿಯಾ, ಮಿರರ್ ನೌ ಮುಂತಾದ ಸುದ್ದಿವಾಹಿನಿಗಳು ಹಿಂದೂ ವ್ಯಕ್ತಿಯೊಬ್ಬ ತನ್ನ ಮಗನಿಗಾಗಿ ಹತಾಶರಾಗಿ ಹುಡುಕುತ್ತಿರುವ ಬಗ್ಗೆ ವರದಿ ಮಾಡಿತ್ತು. ಹೆಚ್ಚಿನ ವರದಿಗಳು ಎಎನ್‌ಐ ಎಕ್ಸ್‌ನಲ್ಲಿ ಮಾಡಿದ್ದ ಪೋಸ್ಟ್ ಆಧರಿಸಿತ್ತು.

ಸುಮಾರು 3 ಲಕ್ಷ ಫಾಲೋವರ್ಸ್ ಇರುವ ಎಕ್ಸ್‌ ಬಳಕೆದಾರ ಬಾಲ (@erbmjha)ಆಗಸ್ಟ್ 13ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು ” “ನಾನು ನನ್ನ ಪ್ರಾಣ ಕೊಡುತ್ತೇನೆ. ಆದರೆ ನನ್ನ ಮಗುವಿಗೆ ನ್ಯಾಯ ಬೇಕು. ನನ್ನ ಮಗು ಎಲ್ಲಿದೆ? ನನ್ನ ಮಗುವಿನ ಬಗ್ಗೆ ನಾನು ಬಾಗಿಲಿನಿಂದ ಬಾಗಿಲಿಗೆ ಹೋಗಿ ವಿಚಾರಿಸುತ್ತಿದ್ದೇನೆ. ಆದರೆ ಯಾರೂ ನನ್ನ ಮಾತನ್ನು ಕೇಳುತ್ತಿಲ್ಲ”

“ಅಸಹಾಯಕ ಹಿಂದೂ ತಂದೆಗೆ ಬಾಂಗ್ಲಾದೇಶದಲ್ಲಿ ಕಾಣೆಯಾದ ತನ್ನ ಮಗನಿಗೆ ನ್ಯಾಯಕ್ಕಾಗಿ ರಸ್ತೆಯಲ್ಲಿ ಮನವಿ ಮಾಡುವುದನ್ನು ಬಿಟ್ಟು ಬೇರೆ ದಾರಿ ಇರಲಿಲ್ಲ” ಎಂದು ಬರೆದುಕೊಂಡಿದ್ದಾರೆ.

ಬಲಪಂಥೀಯ ಪ್ರಭಾವಿ ಎಕ್ಸ್ ಬಳಕೆದಾರರಾದ @MrSinha_, @VIKRAMPRATAPSIN,@RealBababanaras ಸೇರಿದಂತೆ ಹಲವರು ವೈರಲ್ ವಿಡಿಯೋವನ್ನು ಪೋಸ್ಟ್ ಮಾಡಿದ್ದರು. ಬಳಿಕ ಅದನ್ನು ಡಿಲಿಟ್ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್ : ಅಸಲಿಗೆ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಂಡಿರುವ ವಿಡಿಯೋದಲ್ಲಿರುವ ವ್ಯಕ್ತಿ ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂ ಸಮುದಾಯವರಲ್ಲ. ಅವರು ಬಹುಸಂಖ್ಯಾತ ಮುಸ್ಲಿಂ ಸಮುದಾಯದವರು.

ಎಎಎನ್‌ಐ ಸುದ್ದಿ ಸಂಸ್ಥೆ ತಪ್ಪಾಗಿ ರಸ್ತೆಯಲ್ಲಿ ಕುಳಿತವರು ಹಿಂದೂ ವ್ಯಕ್ತಿ ಎಂದು ಸುದ್ದಿ ಹಬ್ಬಿಸಿತ್ತು. ಬಳಿಕ ಅದು ತಪ್ಪಾಗಿರುವುದನ್ನು ಒಪ್ಪಿಕೊಂಡಿದೆ.

ಮೊದಲು ತಪ್ಪಾಗಿ ಹಾಕಿದ್ದ ಪೋಸ್ಟ್‌ನ ಸ್ಕ್ರೀನ್ ಶಾಟ್ ಹಂಚಿಕೊಂಡ ಎಎನ್‌ಐ “ತಿದ್ದುಪಡಿ: ಈ ವ್ಯಕ್ತಿಯು ಅಲ್ಪಸಂಖ್ಯಾತ ಹಿಂದೂ ಸಮುದಾಯದವರಲ್ಲದ ಕಾರಣ ಕೆಳಗಿನ ಟ್ವೀಟ್ ಅನ್ನು ಅಳಿಸಲಾಗಿದೆ. ತಪ್ಪಿಗೆ ವಿಷಾದಿಸುತ್ತೇವೆ” ಎಂದು ಬರೆದುಕೊಂಡಿದೆ.

ಹಾಗಾದರೆ, ಆ ವಿಡಿಯೋ ಯಾವ ಘಟನೆಗೆ ಸಂಬಂಧಿಸಿದ್ದು ಎಂದು ನಾವು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸ್ಕ್ರೀಟ್ ಶಾಟ್ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ಬಾಂಗ್ಲಾದೇಶದ ಸುದ್ದಿವಾಹಿನಿ ‘Barta24’ತನ್ನ ಫೇಸ್‌ಬುಕ್ ಖಾತೆಯಲ್ಲಿ ಮಾಡಿರುವ ಲೈವ್ ವಿಡಿಯೋ ಒಂದು ಲಭ್ಯವಾಗಿದೆ.

ಆ ವಿಡಿಯೋಗೆ ಬೆಂಗಾಲಿ ಭಾಷೆಯಲ್ಲಿ “ನಮ್ಮ ಪ್ರೀತಿ ಪಾತ್ರರನ್ನು ಹಿಂತಿರುಗಿಸಿ, ರಹಸ್ಯ ಬಂಧನ ಕೇಂದ್ರಗಳನ್ನು ಒಡೆಯಿರಿ’- ಮಾನವ ಸರಪಳಿ ಪ್ರತಿಭಟನೆಯ ಸಂದರ್ಭದಲ್ಲಿ ಕಣ್ಮರೆಯಾದವರ ಕುಟುಂಬ ಸದಸ್ಯರು ರಸ್ತೆ ತಡೆ ನಡೆಸಿದರು” ಎಂದು ಶೀರ್ಷಿಕೆ ಕೊಡಲಾಗಿದೆ.

ವೈರಲ್ ವಿಡಿಯೋದಲ್ಲಿ ಕಂಡು ಬರುವ ಹಿರಿಯ ವ್ಯಕ್ತಿ ಈ ಫೇಸ್‌ಬುಕ್ ಲೈವ್‌ನಲ್ಲಿ ಬೀದಿಯಲ್ಲಿ ಕುಳಿತು ‘ನಮ್ಮ ಪ್ರೀತಿ ಪಾತ್ರರನ್ನು ಹಿಂತಿರುಗಿ’ ಮತ್ತು ‘ಅವರನ್ನು ಮುಕ್ತಗೊಳಿಸಿ’ ಎಂಬ ಘೋಷಣೆಗಳನ್ನು ಕೂಗುತ್ತಿರುವುದನ್ನು ಕಾಣಬಹುದು. ಅಲ್ಲದೆ, ಅವರು ಟೋಪಿ ಧರಿಸಿರುವುದೂ ವಿಡಿಯೋದಲ್ಲಿ ಇದೆ.

ಲೈವ್‌ ವಿಡಿಯೋದ 1:45 ನಿಮಿಷದಲ್ಲಿ ವರದಿಗಾರೊಬ್ಬರು ಹಿರಿಯ ವ್ಯಕ್ತಿಯನ್ನು ಕೇಳುತ್ತಾರೆ ” ನೀವು ಫೋಟೋ ಹಿಡಿದುಕೊಂಡಿರುವ ವ್ಯಕ್ತಿ ಯಾರು ಮತ್ತು ಅವರು ಹೇಗೆ ಕಾಣೆಯಾದರು?

ಅದಕ್ಕೆ ಉತ್ತರಿಸಿದ ಹಿರಿಯ ವ್ಯಕ್ತಿ “ಇದು ನನ್ನ ಹಿರಿಯ ಮಗ ಮೊಹಮ್ಮದ್ ಸನ್ನಿ ಹವ್ಲಾದರ್ ಮತ್ತು ನಾನು ಬಾಬುಲ್ ಹವ್ಲಾದರ್. ವೃತ್ತಿಯಲ್ಲಿ ದಿನಗೂಲಿ ಕಾರ್ಮಿಕನಾಗಿದ್ದ ಮತ್ತು ಬಿಎನ್‌ಪಿ (ಶೇಖ್ ಹಸೀನಾ ಅವರ ಅವಾಮಿ ಲೀಗ್ ಅಧಿಕಾರದಲ್ಲಿದ್ದಾಗ ಬಾಂಗ್ಲಾದೇಶದ ವಿರೋಧ ಪಕ್ಷ) ಬೆಂಬಲಿಗನಾಗಿದ್ದ ತನ್ನ ಹಿರಿಯ ಮಗ ಸನ್ನಿಯನ್ನು ಜನವರಿ 10, 2013 ರಂದು ಕರೆದುಕೊಂಡು ಹೋಗಿದ್ದಾರೆ. ಅಂದಿನಿಂದ ಆತ ಕಾಣೆಯಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಲು ವರ್ಷಗಳಿಂದ ಓಡಾಡುತ್ತಿದ್ದೇನೆ. ನನಗೆ ಬೆದರಿಕೆಗಳು ಬರುತ್ತಿವೆ. ಇದು ಹೀಗೇ ಮುಂದುವರೆದರೆ, ನನ್ನ ಮತ್ತು ನನ್ನ ಕಿರಿಯ ಮಗ ಇಬ್ಬರನ್ನೂ ಹಿರಿಯ ಮಗನ ಶೈಲಿಯಲ್ಲಿ ಕರೆದೊಯ್ಯುತ್ತಾರೆ” ಎಂದು ಹೇಳುತ್ತಾರೆ.

ವಿಡಿಯೋದಲ್ಲಿ, ವರದಿಗಾರ ಪ್ರತಿಭಟನೆಯಲ್ಲಿ ಭಾಗವಹಿಸಿದ ಇತರರೊಂದಿಗೆ ಮಾತನಾಡುವುದನ್ನು ಕಾಣಬಹುದು, “ಅವರು ಕೂಡ ಕಾಣೆಯಾದ ಕುಟುಂಬ ಸದಸ್ಯರ ಬಗ್ಗೆ ಇದೇ ರೀತಿಯ ಮಾಹಿತಿಗಳನ್ನು ಹಂಚಿಕೊಳ್ಳುತ್ತಾರೆ”

ಆಗಸ್ಟ್ 14 ರಂದು ಬಾಂಗ್ಲಾದ ಸುದ್ದಿ ಸಂಸ್ಥೆ ಪ್ರೋಥೋಮ್ ಅಲೋ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ “ಆಗಸ್ಟ್ 13 ರಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಹಲವಾರು ನಾಪತ್ತೆಯಾದ ವ್ಯಕ್ತಿಗಳ ಕುಟುಂಬ ಸದಸ್ಯರು ತಮ್ಮ ಕಾಣೆಯಾದ ಸಂಬಂಧಿಕರ ಚಿತ್ರಗಳು ಮತ್ತು ಬ್ಯಾನರ್‌ಗಳೊಂದಿಗೆ ಹರೇ ರಸ್ತೆಯಲ್ಲಿರುವ ಜಮುನಾ ರಾಜ್ಯ ಅತಿಥಿ ಗೃಹದ ಮುಂದೆ ಜಮಾಯಿಸಿದರು. ಅವಾಮಿ ಲೀಗ್ ಪಕ್ಷ ಅಧಿಕಾರದಲ್ಲಿದ್ದಾಗ ನಾಪತ್ತೆಯಾಗಿರುವ ತಮ್ಮ ಸಂಬಂಧಿಕರನ್ನು ಹಿಂದಿರುಗಿಸುವಂತೆ ಒತ್ತಾಯಿಸಿದರು. ಇನ್ನೂ ‘ಐನಾಘರ್’ (ರಹಸ್ಯ ಬಂಧನ ಕೇಂದ್ರಗಳು) ದಲ್ಲಿ ಬಂಧಿತರಾಗಿರುವವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಅವರು ಒತ್ತಾಯಿಸಿದರು” ಎಂದು ಹೇಳಲಾಗಿದೆ.

ಒಟ್ಟಿನಲ್ಲಿ ‘ರಸ್ತೆಯಲ್ಲಿ ಕುಳಿತು ಪ್ರತಿಭಟಿಸಿದ ಹಿರಿಯ ವ್ಯಕ್ತಿ ಬಾಂಗ್ಲಾದೇಶದವರೇ, ಆದರೆ, ಅವರು ಅಲ್ಪಸಂಖ್ಯಾತ ಹಿಂದೂ ಸಮುದಾಯದವರಲ್ಲ ಎಂಬುವುದು ನಮ್ಮ ಪರಿಶೀಲನೆಯಲ್ಲಿ ಗೊತ್ತಾಗಿದೆ.

ವೈರಲ್ ವಿಡಿಯೋ ಯಾವುದೇ ಕೋಮು ಸಂಘರ್ಷಕ್ಕೆ ಅಥವಾ ಅಲ್ಪಸಂಖ್ಯಾತರ ಮೇಲಿನ ದಾಳಿಗೆ ಸಂಬಂಧಿಸಿದಲ್ಲ. ಬಾಂಗ್ಲಾದಲ್ಲಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಅಧಿಕಾರದಲ್ಲಿದ್ದಾಗ, ಸರ್ಕಾರ ವಿರೋಧ ಪಕ್ಷದ ಕಾರ್ಯಕರ್ತರು ಅಥವಾ ವಿರೋಧಿಗಳನ್ನು ಅಪಹರಿಸಿ ರಹಸ್ಯ ಬಂಧನ ಕೇಂದ್ರಗಳಲ್ಲಿ ಇಟ್ಟಿದೆ ಎಂಬ ಆರೋಪಗಳು ಕೇಳಿ ಬಂದಿತ್ತು.

ಹೀಗೆ, ಆಪಾದಿತ ಅಪಹರಣಕ್ಕೆ ಒಳಗಾಗಿರುವ ಅಥವಾ ನಾಪತ್ತೆಯಾಗಿರುವ ತನ್ನ ಮಗನನ್ನು ಹುಡುಕಿಕೊಡುವಂತೆ ಹಿರಿಯ ವ್ಯಕ್ತಿ ರಸ್ತೆಯಲ್ಲಿ ಕುಳಿತು ಪ್ರತಿಭಟಿಸಿದ್ದಾರೆ. ಇವರ ಮಗನಂತೆ ನಾಪತ್ತೆಯಾಗಿರುವ ಇನ್ನೂ ಅನೇಕ ವ್ಯಕ್ತಿಗಳ ಕುಟುಂಬಸ್ಥರು ಕೂಡ ಅದೇ ರೀತಿ ರಸ್ತೆಯಲ್ಲಿ ಕುಳಿತು ನ್ಯಾಯಕ್ಕಾಗಿ ಪ್ರತಿಭಟಿಸಿದ್ದಾರೆ.

ಎಎನ್‌ಐ ಸುದ್ದಿ ಸಂಸ್ಥೆ ತಪ್ಪು ಮಾಹಿತಿಯೊಂದಿಗೆ ವಿಡಿಯೋ ಪೋಸ್ಟ್ ಮಾಡಿತ್ತು. ಬಳಿಕ ಅದನ್ನು ಅಳಿಸಿದೆ. ಆದರೆ, ಅಷ್ಟೊತ್ತಿಗೆ ಎಎನ್‌ಐ ಪೋಸ್ಟ್ ಆಧರಿಸಿ ಅನೇಕ ಮಾಧ್ಯಮಗಳು ಸುದ್ದಿ ಮಾಡಿ ಆಗಿದೆ. ಸುಳ್ಳು ಸುದ್ದಿ ಎಲ್ಲೆಡೆ ತಲುಪಿದೆ.

ಇದನ್ನೂ ಓದಿ : FACT CHECK : ಮಾಲ್ಡೀವ್ಸ್ ತನ್ನ 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟು ಕೊಟ್ಟಿರುವುದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...