Homeಫ್ಯಾಕ್ಟ್‌ಚೆಕ್FACT CHECK : ಕಾಂಗ್ರೆಸ್ ಪ್ರಣಾಳಿಕೆ ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ಭರವಸೆ ನೀಡಿದೆ ಎಂಬ...

FACT CHECK : ಕಾಂಗ್ರೆಸ್ ಪ್ರಣಾಳಿಕೆ ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ಭರವಸೆ ನೀಡಿದೆ ಎಂಬ ಮೋದಿ ಹೇಳಿಕೆ ಸುಳ್ಳು

- Advertisement -
- Advertisement -

ಮೇ 2,2024ರಂದು ಗುಜರಾತ್‌ನ ಸುರೇಂದ್ರನಗರದಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ” ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸುವ ಭರವಸೆ ನೀಡಿದೆ” ಎಂದಿದ್ದಾರೆ.

“ಕಾಂಗ್ರೆಸ್‌ನ ಪ್ರಣಾಳಿಕೆ ಸಂಪೂರ್ಣ ತುಷ್ಠೀಕರಣದಿಂದ ಕೂಡಿದೆ. ಅದರಲ್ಲಿ, ಅಧಿಕಾರಕ್ಕೆ ಬಂದರೆ ಅಲ್ಪ ಸಂಖ್ಯಾತರಿಗೆ ಅಥವಾ ಮುಸ್ಲಿಮರಿಗೆ ವಿಶೇಷ ಮೀಸಲಾತಿ ಕಲ್ಪಿಸುವ ಆಘಾತಕಾರಿ ಭರವಸೆಯನ್ನು ಕಾಂಗ್ರೆಸ್ ಲಿಖಿತವಾಗಿ ನೀಡಿದೆ” ಎಂದು ಪ್ರಧಾನಿ ಹೇಳಿದ್ದಾರೆ.

ಪ್ರಧಾನಿಯ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾದ ಸುರೇಂದ್ರನಗರದ ಕಾರ್ಯಕ್ರಮದ ವಿಡಿಯೋದಲ್ಲಿ 30 ನಿಮಿಷ 32 ಸೆಕೆಂಡ್‌ನಿಂದ ಮೇಲಿನ ಹೇಳಿಕೆಯನ್ನು ಆಲಿಸಬಹುದು.

ಫ್ಯಾಕ್ಟ್‌ಚೆಕ್ : ಪ್ರಧಾನಿಯ ಹೇಳಿಕೆಯ ಸತ್ಯಾಸತ್ಯತೆ ಪರಿಶೀಲಿಸಲು ನಾವು ಕಾಂಗ್ರೆಸ್‌ನ ಲೋಕಸಭೆ ಚುನಾವಣೆಯ ಪ್ರಣಾಳಿಕೆಯನ್ನು ಪರಿಶೀಲಿಸಿದ್ದೇವೆ. ಪ್ರಣಾಳಿಕೆಯಲ್ಲಿ ಎಲ್ಲೂ ‘ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ’ ನೀಡುತ್ತೇವೆ ಎಂದು ಕಾಂಗ್ರೆಸ್ ಭರವಸೆ ನೀಡಿರುವುದು ನಮಗೆ ಕಂಡು ಬಂದಿಲ್ಲ.

ಒಟ್ಟು 48 ಪುಟಗಳ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಎರಡು ಕಡೆ ಸರ್ಕಾರಿ ಕಾಮಗಾರಿಗಳ ಟೆಂಡರ್‌ ಅಥವಾ ಕಾಂಟ್ರಾಕ್ಟ್ ಬಗ್ಗೆ ಉಲ್ಲೇಖಿಸಲಾಗಿದೆ.

1. ಪ್ರಣಾಳಿಕೆಯಲ್ಲಿ ‘ಈಕ್ವಿಟಿ (ಸಮಾನತೆ)’ ಎಂಬ ವಿಭಾಗದ ( ಪುಟ ಸಂಖ್ಯೆ 6) 8 ನೇ ಪ್ಯಾರಾದಲ್ಲಿ “ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಹೆಚ್ಚಿನ ಗುತ್ತಿಗೆಗಳು ಸಿಗುವಂತೆ ಮಾಡಲು ಸಾರ್ವಜನಿಕ ಗುತ್ತಿಗೆ ಪ್ರಕ್ರಿಯೆಯ ವ್ಯಾಪ್ತಿ ವಿಸ್ತರಿಸುತ್ತೇವೆ” ಎಂದು ಹೇಳಲಾಗಿದೆ.

2. ಪ್ರಣಾಳಿಕೆಯ ‘ಧಾರ್ಮಿಕ ಮತ್ತು ಭಾಷಾ ಅಲ್ಪ ಸಂಖ್ಯಾತರು’ ಎಂಬ ವಿಭಾಗದ (ಪುಟ ಸಂಖ್ಯೆ 7-8) 6ನೇ ಪ್ಯಾರಾದಲ್ಲಿ “ಶಿಕ್ಷಣ, ಆರೋಗ್ಯ, ಸರ್ಕಾರಿ ಉದ್ಯೋಗ, ಸರ್ಕಾರಿ ಕಾಮಗಾರಿ ಒಪ್ಪಂದಗಳು, ಕೌಶಲ್ಯ ಅಭಿವೃದ್ದಿ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಅಲ್ಪ ಸಂಖ್ಯಾತರು ಯಾವುದೇ ಬೇಧವಿಲ್ಲದೆ ತಮ್ಮ ಪಾಲು ಪಡೆಯುವುದನ್ನು ನಾವು ಖಚಿತಪಡಿಸುತ್ತೇವೆ” ಎಂದು ಹೇಳಲಾಗಿದೆ.

ಮೇಲ್ಗಡೆ ಉಲ್ಲೇಖಿಸಿದ ಎರಡು ಕಡೆ ಹೊರತುಪಡಿಸಿ ಎಲ್ಲೂ ಸರ್ಕಾರಿ ಕಾಮಗಾರಿಗಳ ಕುರಿತು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿಲ್ಲ. ಗಮನಾರ್ಹವಾಗಿ, ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಎಲ್ಲೂ ‘ಮುಸ್ಲಿಂ’ ಎಂಬ ಪದವನ್ನು ಉಲ್ಲೇಖಿಸಿಲ್ಲ. ಅನೇಕ ಕಡೆಗಳಲ್ಲಿ ಅಲ್ಪ ಸಂಖ್ಯಾತರು ಎಂದಿದೆ. ಭಾರತದಲ್ಲಿ ಅಲ್ಪ ಸಂಖ್ಯಾತರು ಎಂದರೆ ಕೇವಲ ಮುಸ್ಲಿಮರಲ್ಲ. ಕ್ರೈಸ್ತ, ಬೌದ್ಧ, ಜೈನ ಮತ್ತು ಪಾರ್ಸಿಗಳೂ ಕೂಡ ಈ ದೇಶದ ಅಧಿಕೃತ ಅಲ್ಪ ಸಂಖ್ಯಾತರು.

ಕಾಂಗ್ರೆಸ್‌ನ ಸಂಪೂರ್ಣ ಪ್ರಣಾಳಿಕೆ ಇಲ್ಲಿದೆ  

ಹಾಗಾಗಿ, ಪ್ರಧಾನಿ ನರೇಂದ್ರ ಮೋದಿ ಭಾಷಣದಲ್ಲಿ ಹೇಳಿರುವುದು ಹಸಿ ಸುಳ್ಳು ಎಂದು ಖಚಿತಪಡಿಸಬಹುದು.

ಪ್ರಧಾನಿ ಇತ್ತೀಚಿನ ಭಾಷಣಗಳಲ್ಲಿ ಅನೇಕ ಬಾರಿ ಕಾಂಗ್ರೆಸ್‌ ಮುಸ್ಲಿಮರಿಗೆ ಮೀಸಲಾತಿ ಕೊಟ್ಟಿದೆ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ. ಮುಸ್ಲಿಂ ಮೀಸಲಾತಿ ಎಂಬುವುದನ್ನು ಭಯೋತ್ಪಾದನಾ ಕೃತ್ಯದಂತೆ ಬಿಂಬಿಸುತ್ತಿದ್ದಾರೆ. ಆದರೆ, ಭಾರತದಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಿರುವುದು ಸಂವಿಧಾನ ಬದ್ದವಾಗಿ ಆಗಿದೆ. ಎಲ್ಲೂ ಸಂವಿಧಾನ ಬಾಹಿರವಾಗಿ ಮುಸ್ಲಿಮರಿಗೆ ಮೀಸಲಾತಿ ನೀಡಿಲ್ಲ.

ಮುಸ್ಲಿಂ ಮೀಸಲಾತಿ ಕುರಿತು ಇತ್ತೀಚೆಗೆ ಪ್ರಧಾನಿ ಮೋದಿ ಸರಣಿ ಸುಳ್ಳುಗಳನ್ನು ಹೇಳುತ್ತಿದ್ದಾರೆ. ಈ ಕುರಿತು ಸತ್ಯಾಸತ್ಯತೆ ಪರಿಶೀಲನೆ ನಡೆಸಿರುವ ‘ನಾನುಗೌರಿ.ಕಾಂ‘ ಸಾಕ್ಷಿ ಸಹಿತ ಸಂಪೂರ್ಣ ವಿವರಣೆಯೊಂದಿಗೆ ಸುದ್ದಿ ಪ್ರಕಟಿಸಿದೆ. ಅವುಗಳ ಲಿಂಕ್ ಕೆಳಗೆ ಕೊಡಲಾಗಿದೆ.

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

FACT CHECK : ಆಂಧ್ರದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲಾಗಿದೆ ಎಂಬ ಮೋದಿ ಹೇಳಿಕೆ ಸುಳ್ಳು

FACT CHECK: ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ ಮೋದಿ ಹೇಳಿಕೆ ಸುಳ್ಳು

FACT CHECK: ‘ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗೆ’ ಎಂದು ಮನಮೋಹನ್ ಸಿಂಗ್ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...