Homeಫ್ಯಾಕ್ಟ್‌ಚೆಕ್FACT CHECK : ಆಂಧ್ರದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲಾಗಿದೆ ಎಂಬ ಮೋದಿ...

FACT CHECK : ಆಂಧ್ರದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲಾಗಿದೆ ಎಂಬ ಮೋದಿ ಹೇಳಿಕೆ ಸುಳ್ಳು

- Advertisement -
- Advertisement -

“ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಲು ಕಾಂಗ್ರೆಸ್ ಆಂಧ್ರ ಪ್ರದೇಶದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಕಡಿಮೆ ಮಾಡಿದೆ. ಇದೊಂದು ಪ್ರಮುಖ ಯೋಜನೆಯಾಗಿದ್ದು, ಇದನ್ನು ಇಡೀ ದೇಶದಾದ್ಯಂತ ಜಾರಿಗೆ ತರಲು ಕಾಂಗ್ರೆಸ್ ಬಯಸಿದೆ” ಎಂದು ಟೋಂಕ್‌ನಲ್ಲಿ ಮಂಗಳವಾರ (ಏ.23) ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡುವಾಗ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ಮೋದಿಯವರು ಹೇಳಿರುವುದು ನಿಜಾನಾ? ಎಂಬುವುದನ್ನು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಫ್ಯಾಕ್ಟ್‌ಚೆಕ್ : ಅವಿಭಜಿತ ಆಂಧ್ರ ಪ್ರದೇಶದಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಕ್ರಿಯೆಯನ್ನು 1993 ಮತ್ತು 1994 ರ ನಡುವಿನ ಕಾಂಗ್ರೆಸ್ ಆಡಳಿತದಲ್ಲಿ ಪ್ರಾರಂಭಿಸಲಾಯಿತು. ಈ ಸಮಯದಲ್ಲಿ ಕೋಟ್ಲಾ ವಿಜಯಭಾಸ್ಕರ್ ರೆಡ್ಡಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಅಲ್ಪಸಂಖ್ಯಾತರ ಕಲ್ಯಾಣ ಸಚಿವಾಲಯದ ಸ್ಥಾಪನೆಯ ನಂತರ ಆಗಸ್ಟ್ 1994ರಲ್ಲಿ ಮುಸ್ಲಿಮರಿಗೆ ಮೀಸಲಾತಿ ಸಂಬಂಧ ಆದೇಶ ಹೊರಡಿಸಲಾಯಿತು. ಈ ಮೂಲಕ ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಹುದ್ದೆಗಳಲ್ಲಿ 14 ಇತರ ಜಾತಿಗಳೊಂದಿಗೆ ಮುಸ್ಲಿಮರಿಗೆ 5% ಮೀಸಲಾತಿಯನ್ನು ಕಡ್ಡಾಯಗೊಳಿಸಲಾಯಿತು. ಆದರೆ, 1994 ಮತ್ತು 1999ರ ಚುನಾವಣಾ ಸೋಲಿನಿಂದಾಗಿ ಈ ಆದೇಶವನ್ನು ಜಾರಿಗೆ ತರಲು ಕಾಂಗ್ರೆಸ್‌ಗೆ ಸಾಧ್ಯವಾಗಲಿಲ್ಲ.

2004ರ ಚುನಾವಣೆಯಲ್ಲಿ, ಮುಸ್ಲಿಮರಿಗೆ 5% ಮೀಸಲಾತಿಯನ್ನು ಪುನಃ ಪರಿಚಯಿಸುವುದು ಕಾಂಗ್ರೆಸ್‌ನ ಮಹತ್ವದ ಪ್ರಚಾರ ಭರವಸೆಯಾಗಿತ್ತು. ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಮುಸ್ಲಿಮರನ್ನು ಮೇಲೆತ್ತುವುದು ಇದರ ಉದ್ದೇಶವಾಗಿತ್ತು. ವೈಎಸ್ ರಾಜಶೇಖರ ರೆಡ್ಡಿ ನೇತೃತ್ವದಲ್ಲಿ ಚುನಾವಣಾ ಗೆಲುವಿನ ನಂತರ, ಕಾಂಗ್ರೆಸ್ ಎರಡು ತಿಂಗಳೊಳಗೆ ಮೀಸಲಾತಿ ಜಾರಿಗೊಳಿಸುವ ಭರವಸೆ ನೀಡಿತ್ತು. ಕೇಂದ್ರಲ್ಲಿ ಅಧಿಕಾರದಲ್ಲಿದ್ದ ಆಗಿನ ಯುಪಿಎ ಸರ್ಕಾರ ಈ ಕ್ರಮವನ್ನು ಸಂಪೂರ್ಣವಾಗಿ ಬೆಂಬಲಿಸಿತ್ತು. ನಂತರ, ಸಾಮಾಜಿಕ ಆರ್ಥಿಕ ಹಿಂದುಳಿದಿರುವಿಕೆಯನ್ನು ಆಧರಿಸಿ, ಹಿಂದುಳಿದ ವರ್ಗಗಳ ಆಯೋಗ ಗುರುತಿಸಿದ 14 ನಿರ್ದಿಷ್ಟ ಗುಂಪುಗಳಿಗೆ 4% ಮೀಸಲಾತಿ ಜಾರಿಗೊಳಿಸಲಾಯಿತು. ಇದರಲ್ಲಿ ಮುಸ್ಲಿಮರು ಒಳಗೊಂಡಿದ್ದರು.

ಧಾರ್ಮಿಕ ಆಧಾರದ ಮೇಲೆ ಮುಸ್ಲಿಮರಿಗೆ ಮೀಸಲಾತಿ ನೀಡಿಲ್ಲ ಎಂಬುವುದು ಇಲ್ಲಿ ಗಮನಾರ್ಹ ಸಂಗತಿ. ಅಲ್ಲದೆ, ಎಸ್‌ಸಿ, ಎಸ್‌ಟಿ ಸೇರಿದಂತೆ ಯಾವುದೇ ಸಮುದಾಯದ ಮೀಸಲಾತಿ ಕಡಿತಗೊಳಿಸದೆ ಮುಸ್ಲಿಮರಿಗೆ ಮೀಸಲಾತಿ ನೀಡಲಾಗಿತ್ತು. ಸರ್ಕಾರ 5% ಮೀಸಲಾತಿ ನೀಡಲು ಮುಂದಾಗಿದ್ದರೂ, ಒಟ್ಟಾರೆ ಮೀಸಲಾತಿ ಮಿತಿ 50% ಮೀರುವ ಕಾರಣ 4%ಗೆ ಇಳಿಸಲಾಗಿತ್ತು.

ನಂತರ 2004 ರಲ್ಲಿ, ಯುಪಿಎ ಸರ್ಕಾರವು ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗವನ್ನು ಸ್ಥಾಪಿಸಿತು. ಇದನ್ನು ಸಾಮಾನ್ಯವಾಗಿ ರಂಗನಾಥ್ ಮಿಶ್ರಾ ಪ್ಯಾನಲ್ ಎಂದು ಕರೆಯಲಾಗುತ್ತದೆ. ಧಾರ್ಮಿಕ ಮತ್ತು ಭಾಷಿಕ ಅಲ್ಪಸಂಖ್ಯಾತರಲ್ಲಿ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು (SEBC) ಗುರುತಿಸಲು, ಕಲ್ಯಾಣ ಕ್ರಮಗಳನ್ನು ಶಿಫಾರಸು ಮಾಡಲು, ಮಾನದಂಡಗಳನ್ನು ವ್ಯಾಖ್ಯಾನಿಸಲು ಈ ಸಮಿತಿಯನ್ನು ನಿಯೋಜಿಸಲಾಗಿತ್ತು. ಇದು ಅಲ್ಪಸಂಖ್ಯಾತರಿಗೆ ನಿರ್ದಿಷ್ಟವಲ್ಲದ ಸರ್ಕಾರಿ ವಲಯಗಳಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ 10% ಮತ್ತು ಇತರ ಅಲ್ಪಸಂಖ್ಯಾತರಿಗೆ 5% ಮೀಸಲಾತಿಯನ್ನು ಪ್ರಸ್ತಾಪಿಸಿತ್ತು. ಇವುಗಳನ್ನು ಅಸ್ತಿತ್ವದಲ್ಲಿರುವ ಒಬಿಸಿ ಕೋಟಾದಲ್ಲಿ ಅಳವಡಿಸಿಕೊಳ್ಳಬಹುದು ಎಂದು ಸೂಚಿಸಿತ್ತು.

2009ರ ಲೋಕಸಭೆ ಚುನಾವಣೆಯ ತನ್ನ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಉದ್ಯೋಗ ಮತ್ತು ಶಿಕ್ಷಣದಲ್ಲಿ ಒಬಿಸಿಗಳಿಗೆ ಅಸ್ತಿತ್ವದಲ್ಲಿರುವ 27% ಮೀಸಲಾತಿಯೊಳಗೆ ಮುಸ್ಲಿಂ ಉಪ-ಕೋಟಾವನ್ನು ಜಾರಿಗೆ ತರುವುದಾಗಿ ಭರವಸೆ ನೀಡಿತ್ತು.

ಮಾರ್ಚ್ 25, 2010 ರಂದು, ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಆಂಧ್ರ ಪ್ರದೇಶದಲ್ಲಿ 4% ಮುಸ್ಲಿಂ ಕೋಟಾದ ಅನುಷ್ಠಾನವನ್ನು ತಡೆ ಹಿಡಿಯಿತು. ಆರ್ಥಿಕವಾಗಿ ಹಿಂದುಳಿದ ವರ್ಗೀಕರಣದ ಅಡಿಯಲ್ಲಿ ಈ ಹಿಂದೆ ನಿರ್ದಿಷ್ಟಪಡಿಸಿದ 14 ವರ್ಗಗಳಿಗೆ ಮೀಸಲಾತಿ ಮುಂದುವರೆಸುವಂತೆ ತಿಳಿಸಿತ್ತು.ಈ ವಿಷಯವನ್ನು ಸಾಂವಿಧಾನಿಕ ಪೀಠಕ್ಕೆ ಒಪ್ಪಿಸಲಾಗಿದ್ದು, ಅದು ಇನ್ನೂ ಬಾಕಿ ಉಳಿದಿದೆ.

2011 ರ ವೇಳೆಗೆ, ಯುಪಿಎಯ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಒಬಿಸಿ ಕೋಟಾದೊಳಗೆ 8.4% ಉಪ-ಕೋಟಾವನ್ನು ಪ್ರಸ್ತಾಪಿಸಿತು. ಇದರಲ್ಲಿ ಮುಸ್ಲಿಮರಿಗೆ 6% ಮೀಸಲಾತಿಯೂ ಸೇರಿದೆ. ಇದು ಮಿಶ್ರಾ ಪ್ಯಾನೆಲ್‌ನ ಶಿಫಾರಸುಗಳೊಂದಿಗೆ ಇದು ಹೊಂದಾಣಿಕೆಯಾಗುತ್ತದೆ. ನಂತರ ಮಂಡಲ್ ಆಯೋಗದ ಮಾರ್ಗಸೂಚಿಗಳನ್ನು ಅನುಸರಿಸಿ ಈ ಶೇಕಡಾವಾರು ಪ್ರಮಾಣವನ್ನು ಎಲ್ಲಾ ಅಲ್ಪಸಂಖ್ಯಾತರಿಗೆ 4.5% ಕ್ಕೆ ಇಳಿಸಲಾಯಿತು.

2012 ರ ಉತ್ತರ ಪ್ರದೇಶ ರಾಜ್ಯ ಚುನಾವಣೆಗಳಿಗೆ ಮುಂಚಿತವಾಗಿ, ಯುಪಿಎ ಸರ್ಕಾರವು ಕೇಂದ್ರ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಒಬಿಸಿಯ 27% ಮೀಸಲಾತಿಯಲ್ಲಿ 4.5% ಅಲ್ಪಸಂಖ್ಯಾತ ಉಪ-ಕೋಟಾವನ್ನು ಘೋಷಿಸಿತು. ಚುನಾವಣಾ ಸಮಯದಲ್ಲಿ ಚುನಾವಣಾ ಆಯೋಗವು ಮಧ್ಯಪ್ರವೇಶಿಸಿತು, ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ಚುನಾವಣೆ ಮುಗಿಯುವವರೆಗೆ ಇದರ ಅನುಷ್ಠಾನವನ್ನು ತಡೆ ಹಿಡಿಯುವಂತೆ ಮನಮೋಹನ್ ಸಿಂಗ್ ಆಡಳಿತಕ್ಕೆ ಸೂಚಿಸಿತು.

ಆಂಧ್ರ ಪ್ರದೇಶ ಹೈಕೋರ್ಟ್, ಮೇ 2012 ರಲ್ಲಿ, ಕೇಂದ್ರ ಸರ್ಕಾರದ 4.5% ಉಪ-ಕೋಟಾ ಉಪಕ್ರಮವನ್ನು ಅಮಾನ್ಯಗೊಳಿಸಿತು. ಇದು ಇತರ ಗಣನೀಯ ಮಾನದಂಡಗಳನ್ನು ಆಧರಿಸಿದೆ ಬದಲಿಗೆ ಧಾರ್ಮಿಕವಾಗಿ ಪ್ರೇರೇಪಿತವಾಗಿದೆ ಎಂದು ಟೀಕಿಸಿತು. ಈ ತೀರ್ಪಿಗೆ ತಡೆಯಾಜ್ಞೆ ಪಡೆಯುವಲ್ಲಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು ವಿಫಲವಾಗಿತ್ತು.

ಕಾಂಗ್ರೆಸ್ ತನ್ನ 2014 ರ ಸಾರ್ವತ್ರಿಕ ಚುನಾವಣಾ ಪ್ರಣಾಳಿಕೆಯಲ್ಲಿ ಹಿಂದಿನ ಯುಪಿಎ ಆಡಳಿತವು ಹಿಂದುಳಿದ ಅಲ್ಪಸಂಖ್ಯಾತರ ಸ್ಥಿತಿಯನ್ನು ಸುಧಾರಿಸಲು ಪ್ರಯತ್ನಿಸಿದೆ ಎಂದು ಹೈಲೈಟ್ ಮಾಡಿತ್ತು ಮತ್ತು ಶೈಕ್ಷಣಿಕ ವಲಯ ಮತ್ತು ಸಾರ್ವಜನಿಕ ವಲಯದ ಉದ್ಯೋಗಗಳಲ್ಲಿ ಹೆಚ್ಚುವರಿ ಮೀಸಲಾತಿ ಒದಗಿಸುವ ಭರವಸೆ ನೀಡಿತ್ತು.

ನಮ್ಮ ಪರಿಶೀಲನೆಯಲ್ಲಿ ಕಂಡು ಬಂದ ವಿಷಯವೆಂದರೆ, ಅವಿಭಜಿತ ಆಂಧ್ರ ಪ್ರದೇಶದಲ್ಲಿ 2004ರ ವೇಳೆಗೆ ಮುಸ್ಲಿಮರಿಗೆ 4% ಮೀಸಲಾತಿ ನೀಡಲಾಗಿತ್ತು. ಇದನ್ನು ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ಕಡಿತಗೊಳಿಸಿ ನೀಡಿದ್ದಲ್ಲ. ಬದಲಾಗಿ ಪ್ರತ್ಯೇಕವಾಗಿ ನೀಡಿದ್ದು. ಹಾಗಾಗಿ, ಮುಸ್ಲಿಮರಿಗೆ ಮೀಸಲಾತಿ ನೀಡಲು ಎಸ್‌ಸಿ, ಎಸ್‌ಟಿಗಳ ಮೀಸಲಾತಿ ಕಡಿತಗೊಳಿಸಲಾಗಿದೆ ಎಂಬ ಪ್ರಧಾನಿ ಮೋದಿಯವರ ಹೇಳಿಕೆ ಸುಳ್ಳು.

ಅವಿಭಜಿತ ಆಂಧ್ರ ಪ್ರದೇಶದಲ್ಲಿ 1993-94ರಲ್ಲೇ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಕ್ರಿಯೆ ಪ್ರಾರಂಭವಾಗಿತ್ತು. ಕಾರಣಾಂತರಗಳಿಂದ ಅದು 2004ರ ವೇಳೆಗೆ ಜಾರಿ ಬಂತು. ಇನ್ನು ಆಂಧ್ರ ಪ್ರದೇಶ ಹೈಕೋರ್ಟ್, ಮೇ 2012 ರಲ್ಲಿ ಕೇಂದ್ರ ಸರ್ಕಾರದ 4.5% ಉಪ-ಕೋಟಾ ಉಪಕ್ರಮವನ್ನು ಅಮಾನ್ಯಗೊಳಿಸಿದೆ.

ಇದನ್ನೂ ಓದಿ : FACT CHECK: ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ ಮೋದಿ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...