Homeಫ್ಯಾಕ್ಟ್‌ಚೆಕ್FACT CHECK : ಆಂಧ್ರದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲಾಗಿದೆ ಎಂಬ ಮೋದಿ...

FACT CHECK : ಆಂಧ್ರದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲಾಗಿದೆ ಎಂಬ ಮೋದಿ ಹೇಳಿಕೆ ಸುಳ್ಳು

- Advertisement -
- Advertisement -

“ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಲು ಕಾಂಗ್ರೆಸ್ ಆಂಧ್ರ ಪ್ರದೇಶದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಕಡಿಮೆ ಮಾಡಿದೆ. ಇದೊಂದು ಪ್ರಮುಖ ಯೋಜನೆಯಾಗಿದ್ದು, ಇದನ್ನು ಇಡೀ ದೇಶದಾದ್ಯಂತ ಜಾರಿಗೆ ತರಲು ಕಾಂಗ್ರೆಸ್ ಬಯಸಿದೆ” ಎಂದು ಟೋಂಕ್‌ನಲ್ಲಿ ಮಂಗಳವಾರ (ಏ.23) ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡುವಾಗ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ಮೋದಿಯವರು ಹೇಳಿರುವುದು ನಿಜಾನಾ? ಎಂಬುವುದನ್ನು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಫ್ಯಾಕ್ಟ್‌ಚೆಕ್ : ಅವಿಭಜಿತ ಆಂಧ್ರ ಪ್ರದೇಶದಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಕ್ರಿಯೆಯನ್ನು 1993 ಮತ್ತು 1994 ರ ನಡುವಿನ ಕಾಂಗ್ರೆಸ್ ಆಡಳಿತದಲ್ಲಿ ಪ್ರಾರಂಭಿಸಲಾಯಿತು. ಈ ಸಮಯದಲ್ಲಿ ಕೋಟ್ಲಾ ವಿಜಯಭಾಸ್ಕರ್ ರೆಡ್ಡಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಅಲ್ಪಸಂಖ್ಯಾತರ ಕಲ್ಯಾಣ ಸಚಿವಾಲಯದ ಸ್ಥಾಪನೆಯ ನಂತರ ಆಗಸ್ಟ್ 1994ರಲ್ಲಿ ಮುಸ್ಲಿಮರಿಗೆ ಮೀಸಲಾತಿ ಸಂಬಂಧ ಆದೇಶ ಹೊರಡಿಸಲಾಯಿತು. ಈ ಮೂಲಕ ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಹುದ್ದೆಗಳಲ್ಲಿ 14 ಇತರ ಜಾತಿಗಳೊಂದಿಗೆ ಮುಸ್ಲಿಮರಿಗೆ 5% ಮೀಸಲಾತಿಯನ್ನು ಕಡ್ಡಾಯಗೊಳಿಸಲಾಯಿತು. ಆದರೆ, 1994 ಮತ್ತು 1999ರ ಚುನಾವಣಾ ಸೋಲಿನಿಂದಾಗಿ ಈ ಆದೇಶವನ್ನು ಜಾರಿಗೆ ತರಲು ಕಾಂಗ್ರೆಸ್‌ಗೆ ಸಾಧ್ಯವಾಗಲಿಲ್ಲ.

2004ರ ಚುನಾವಣೆಯಲ್ಲಿ, ಮುಸ್ಲಿಮರಿಗೆ 5% ಮೀಸಲಾತಿಯನ್ನು ಪುನಃ ಪರಿಚಯಿಸುವುದು ಕಾಂಗ್ರೆಸ್‌ನ ಮಹತ್ವದ ಪ್ರಚಾರ ಭರವಸೆಯಾಗಿತ್ತು. ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಮುಸ್ಲಿಮರನ್ನು ಮೇಲೆತ್ತುವುದು ಇದರ ಉದ್ದೇಶವಾಗಿತ್ತು. ವೈಎಸ್ ರಾಜಶೇಖರ ರೆಡ್ಡಿ ನೇತೃತ್ವದಲ್ಲಿ ಚುನಾವಣಾ ಗೆಲುವಿನ ನಂತರ, ಕಾಂಗ್ರೆಸ್ ಎರಡು ತಿಂಗಳೊಳಗೆ ಮೀಸಲಾತಿ ಜಾರಿಗೊಳಿಸುವ ಭರವಸೆ ನೀಡಿತ್ತು. ಕೇಂದ್ರಲ್ಲಿ ಅಧಿಕಾರದಲ್ಲಿದ್ದ ಆಗಿನ ಯುಪಿಎ ಸರ್ಕಾರ ಈ ಕ್ರಮವನ್ನು ಸಂಪೂರ್ಣವಾಗಿ ಬೆಂಬಲಿಸಿತ್ತು. ನಂತರ, ಸಾಮಾಜಿಕ ಆರ್ಥಿಕ ಹಿಂದುಳಿದಿರುವಿಕೆಯನ್ನು ಆಧರಿಸಿ, ಹಿಂದುಳಿದ ವರ್ಗಗಳ ಆಯೋಗ ಗುರುತಿಸಿದ 14 ನಿರ್ದಿಷ್ಟ ಗುಂಪುಗಳಿಗೆ 4% ಮೀಸಲಾತಿ ಜಾರಿಗೊಳಿಸಲಾಯಿತು. ಇದರಲ್ಲಿ ಮುಸ್ಲಿಮರು ಒಳಗೊಂಡಿದ್ದರು.

ಧಾರ್ಮಿಕ ಆಧಾರದ ಮೇಲೆ ಮುಸ್ಲಿಮರಿಗೆ ಮೀಸಲಾತಿ ನೀಡಿಲ್ಲ ಎಂಬುವುದು ಇಲ್ಲಿ ಗಮನಾರ್ಹ ಸಂಗತಿ. ಅಲ್ಲದೆ, ಎಸ್‌ಸಿ, ಎಸ್‌ಟಿ ಸೇರಿದಂತೆ ಯಾವುದೇ ಸಮುದಾಯದ ಮೀಸಲಾತಿ ಕಡಿತಗೊಳಿಸದೆ ಮುಸ್ಲಿಮರಿಗೆ ಮೀಸಲಾತಿ ನೀಡಲಾಗಿತ್ತು. ಸರ್ಕಾರ 5% ಮೀಸಲಾತಿ ನೀಡಲು ಮುಂದಾಗಿದ್ದರೂ, ಒಟ್ಟಾರೆ ಮೀಸಲಾತಿ ಮಿತಿ 50% ಮೀರುವ ಕಾರಣ 4%ಗೆ ಇಳಿಸಲಾಗಿತ್ತು.

ನಂತರ 2004 ರಲ್ಲಿ, ಯುಪಿಎ ಸರ್ಕಾರವು ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗವನ್ನು ಸ್ಥಾಪಿಸಿತು. ಇದನ್ನು ಸಾಮಾನ್ಯವಾಗಿ ರಂಗನಾಥ್ ಮಿಶ್ರಾ ಪ್ಯಾನಲ್ ಎಂದು ಕರೆಯಲಾಗುತ್ತದೆ. ಧಾರ್ಮಿಕ ಮತ್ತು ಭಾಷಿಕ ಅಲ್ಪಸಂಖ್ಯಾತರಲ್ಲಿ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು (SEBC) ಗುರುತಿಸಲು, ಕಲ್ಯಾಣ ಕ್ರಮಗಳನ್ನು ಶಿಫಾರಸು ಮಾಡಲು, ಮಾನದಂಡಗಳನ್ನು ವ್ಯಾಖ್ಯಾನಿಸಲು ಈ ಸಮಿತಿಯನ್ನು ನಿಯೋಜಿಸಲಾಗಿತ್ತು. ಇದು ಅಲ್ಪಸಂಖ್ಯಾತರಿಗೆ ನಿರ್ದಿಷ್ಟವಲ್ಲದ ಸರ್ಕಾರಿ ವಲಯಗಳಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ 10% ಮತ್ತು ಇತರ ಅಲ್ಪಸಂಖ್ಯಾತರಿಗೆ 5% ಮೀಸಲಾತಿಯನ್ನು ಪ್ರಸ್ತಾಪಿಸಿತ್ತು. ಇವುಗಳನ್ನು ಅಸ್ತಿತ್ವದಲ್ಲಿರುವ ಒಬಿಸಿ ಕೋಟಾದಲ್ಲಿ ಅಳವಡಿಸಿಕೊಳ್ಳಬಹುದು ಎಂದು ಸೂಚಿಸಿತ್ತು.

2009ರ ಲೋಕಸಭೆ ಚುನಾವಣೆಯ ತನ್ನ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಉದ್ಯೋಗ ಮತ್ತು ಶಿಕ್ಷಣದಲ್ಲಿ ಒಬಿಸಿಗಳಿಗೆ ಅಸ್ತಿತ್ವದಲ್ಲಿರುವ 27% ಮೀಸಲಾತಿಯೊಳಗೆ ಮುಸ್ಲಿಂ ಉಪ-ಕೋಟಾವನ್ನು ಜಾರಿಗೆ ತರುವುದಾಗಿ ಭರವಸೆ ನೀಡಿತ್ತು.

ಮಾರ್ಚ್ 25, 2010 ರಂದು, ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಆಂಧ್ರ ಪ್ರದೇಶದಲ್ಲಿ 4% ಮುಸ್ಲಿಂ ಕೋಟಾದ ಅನುಷ್ಠಾನವನ್ನು ತಡೆ ಹಿಡಿಯಿತು. ಆರ್ಥಿಕವಾಗಿ ಹಿಂದುಳಿದ ವರ್ಗೀಕರಣದ ಅಡಿಯಲ್ಲಿ ಈ ಹಿಂದೆ ನಿರ್ದಿಷ್ಟಪಡಿಸಿದ 14 ವರ್ಗಗಳಿಗೆ ಮೀಸಲಾತಿ ಮುಂದುವರೆಸುವಂತೆ ತಿಳಿಸಿತ್ತು.ಈ ವಿಷಯವನ್ನು ಸಾಂವಿಧಾನಿಕ ಪೀಠಕ್ಕೆ ಒಪ್ಪಿಸಲಾಗಿದ್ದು, ಅದು ಇನ್ನೂ ಬಾಕಿ ಉಳಿದಿದೆ.

2011 ರ ವೇಳೆಗೆ, ಯುಪಿಎಯ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಒಬಿಸಿ ಕೋಟಾದೊಳಗೆ 8.4% ಉಪ-ಕೋಟಾವನ್ನು ಪ್ರಸ್ತಾಪಿಸಿತು. ಇದರಲ್ಲಿ ಮುಸ್ಲಿಮರಿಗೆ 6% ಮೀಸಲಾತಿಯೂ ಸೇರಿದೆ. ಇದು ಮಿಶ್ರಾ ಪ್ಯಾನೆಲ್‌ನ ಶಿಫಾರಸುಗಳೊಂದಿಗೆ ಇದು ಹೊಂದಾಣಿಕೆಯಾಗುತ್ತದೆ. ನಂತರ ಮಂಡಲ್ ಆಯೋಗದ ಮಾರ್ಗಸೂಚಿಗಳನ್ನು ಅನುಸರಿಸಿ ಈ ಶೇಕಡಾವಾರು ಪ್ರಮಾಣವನ್ನು ಎಲ್ಲಾ ಅಲ್ಪಸಂಖ್ಯಾತರಿಗೆ 4.5% ಕ್ಕೆ ಇಳಿಸಲಾಯಿತು.

2012 ರ ಉತ್ತರ ಪ್ರದೇಶ ರಾಜ್ಯ ಚುನಾವಣೆಗಳಿಗೆ ಮುಂಚಿತವಾಗಿ, ಯುಪಿಎ ಸರ್ಕಾರವು ಕೇಂದ್ರ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಒಬಿಸಿಯ 27% ಮೀಸಲಾತಿಯಲ್ಲಿ 4.5% ಅಲ್ಪಸಂಖ್ಯಾತ ಉಪ-ಕೋಟಾವನ್ನು ಘೋಷಿಸಿತು. ಚುನಾವಣಾ ಸಮಯದಲ್ಲಿ ಚುನಾವಣಾ ಆಯೋಗವು ಮಧ್ಯಪ್ರವೇಶಿಸಿತು, ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ಚುನಾವಣೆ ಮುಗಿಯುವವರೆಗೆ ಇದರ ಅನುಷ್ಠಾನವನ್ನು ತಡೆ ಹಿಡಿಯುವಂತೆ ಮನಮೋಹನ್ ಸಿಂಗ್ ಆಡಳಿತಕ್ಕೆ ಸೂಚಿಸಿತು.

ಆಂಧ್ರ ಪ್ರದೇಶ ಹೈಕೋರ್ಟ್, ಮೇ 2012 ರಲ್ಲಿ, ಕೇಂದ್ರ ಸರ್ಕಾರದ 4.5% ಉಪ-ಕೋಟಾ ಉಪಕ್ರಮವನ್ನು ಅಮಾನ್ಯಗೊಳಿಸಿತು. ಇದು ಇತರ ಗಣನೀಯ ಮಾನದಂಡಗಳನ್ನು ಆಧರಿಸಿದೆ ಬದಲಿಗೆ ಧಾರ್ಮಿಕವಾಗಿ ಪ್ರೇರೇಪಿತವಾಗಿದೆ ಎಂದು ಟೀಕಿಸಿತು. ಈ ತೀರ್ಪಿಗೆ ತಡೆಯಾಜ್ಞೆ ಪಡೆಯುವಲ್ಲಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು ವಿಫಲವಾಗಿತ್ತು.

ಕಾಂಗ್ರೆಸ್ ತನ್ನ 2014 ರ ಸಾರ್ವತ್ರಿಕ ಚುನಾವಣಾ ಪ್ರಣಾಳಿಕೆಯಲ್ಲಿ ಹಿಂದಿನ ಯುಪಿಎ ಆಡಳಿತವು ಹಿಂದುಳಿದ ಅಲ್ಪಸಂಖ್ಯಾತರ ಸ್ಥಿತಿಯನ್ನು ಸುಧಾರಿಸಲು ಪ್ರಯತ್ನಿಸಿದೆ ಎಂದು ಹೈಲೈಟ್ ಮಾಡಿತ್ತು ಮತ್ತು ಶೈಕ್ಷಣಿಕ ವಲಯ ಮತ್ತು ಸಾರ್ವಜನಿಕ ವಲಯದ ಉದ್ಯೋಗಗಳಲ್ಲಿ ಹೆಚ್ಚುವರಿ ಮೀಸಲಾತಿ ಒದಗಿಸುವ ಭರವಸೆ ನೀಡಿತ್ತು.

ನಮ್ಮ ಪರಿಶೀಲನೆಯಲ್ಲಿ ಕಂಡು ಬಂದ ವಿಷಯವೆಂದರೆ, ಅವಿಭಜಿತ ಆಂಧ್ರ ಪ್ರದೇಶದಲ್ಲಿ 2004ರ ವೇಳೆಗೆ ಮುಸ್ಲಿಮರಿಗೆ 4% ಮೀಸಲಾತಿ ನೀಡಲಾಗಿತ್ತು. ಇದನ್ನು ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ಕಡಿತಗೊಳಿಸಿ ನೀಡಿದ್ದಲ್ಲ. ಬದಲಾಗಿ ಪ್ರತ್ಯೇಕವಾಗಿ ನೀಡಿದ್ದು. ಹಾಗಾಗಿ, ಮುಸ್ಲಿಮರಿಗೆ ಮೀಸಲಾತಿ ನೀಡಲು ಎಸ್‌ಸಿ, ಎಸ್‌ಟಿಗಳ ಮೀಸಲಾತಿ ಕಡಿತಗೊಳಿಸಲಾಗಿದೆ ಎಂಬ ಪ್ರಧಾನಿ ಮೋದಿಯವರ ಹೇಳಿಕೆ ಸುಳ್ಳು.

ಅವಿಭಜಿತ ಆಂಧ್ರ ಪ್ರದೇಶದಲ್ಲಿ 1993-94ರಲ್ಲೇ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಕ್ರಿಯೆ ಪ್ರಾರಂಭವಾಗಿತ್ತು. ಕಾರಣಾಂತರಗಳಿಂದ ಅದು 2004ರ ವೇಳೆಗೆ ಜಾರಿ ಬಂತು. ಇನ್ನು ಆಂಧ್ರ ಪ್ರದೇಶ ಹೈಕೋರ್ಟ್, ಮೇ 2012 ರಲ್ಲಿ ಕೇಂದ್ರ ಸರ್ಕಾರದ 4.5% ಉಪ-ಕೋಟಾ ಉಪಕ್ರಮವನ್ನು ಅಮಾನ್ಯಗೊಳಿಸಿದೆ.

ಇದನ್ನೂ ಓದಿ : FACT CHECK: ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ ಮೋದಿ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...