Homeಫ್ಯಾಕ್ಟ್‌ಚೆಕ್FACT CHECK : ಆಂಧ್ರದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲಾಗಿದೆ ಎಂಬ ಮೋದಿ...

FACT CHECK : ಆಂಧ್ರದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲಾಗಿದೆ ಎಂಬ ಮೋದಿ ಹೇಳಿಕೆ ಸುಳ್ಳು

- Advertisement -
- Advertisement -

“ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಲು ಕಾಂಗ್ರೆಸ್ ಆಂಧ್ರ ಪ್ರದೇಶದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಕಡಿಮೆ ಮಾಡಿದೆ. ಇದೊಂದು ಪ್ರಮುಖ ಯೋಜನೆಯಾಗಿದ್ದು, ಇದನ್ನು ಇಡೀ ದೇಶದಾದ್ಯಂತ ಜಾರಿಗೆ ತರಲು ಕಾಂಗ್ರೆಸ್ ಬಯಸಿದೆ” ಎಂದು ಟೋಂಕ್‌ನಲ್ಲಿ ಮಂಗಳವಾರ (ಏ.23) ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡುವಾಗ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ಮೋದಿಯವರು ಹೇಳಿರುವುದು ನಿಜಾನಾ? ಎಂಬುವುದನ್ನು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಫ್ಯಾಕ್ಟ್‌ಚೆಕ್ : ಅವಿಭಜಿತ ಆಂಧ್ರ ಪ್ರದೇಶದಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಕ್ರಿಯೆಯನ್ನು 1993 ಮತ್ತು 1994 ರ ನಡುವಿನ ಕಾಂಗ್ರೆಸ್ ಆಡಳಿತದಲ್ಲಿ ಪ್ರಾರಂಭಿಸಲಾಯಿತು. ಈ ಸಮಯದಲ್ಲಿ ಕೋಟ್ಲಾ ವಿಜಯಭಾಸ್ಕರ್ ರೆಡ್ಡಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಅಲ್ಪಸಂಖ್ಯಾತರ ಕಲ್ಯಾಣ ಸಚಿವಾಲಯದ ಸ್ಥಾಪನೆಯ ನಂತರ ಆಗಸ್ಟ್ 1994ರಲ್ಲಿ ಮುಸ್ಲಿಮರಿಗೆ ಮೀಸಲಾತಿ ಸಂಬಂಧ ಆದೇಶ ಹೊರಡಿಸಲಾಯಿತು. ಈ ಮೂಲಕ ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಹುದ್ದೆಗಳಲ್ಲಿ 14 ಇತರ ಜಾತಿಗಳೊಂದಿಗೆ ಮುಸ್ಲಿಮರಿಗೆ 5% ಮೀಸಲಾತಿಯನ್ನು ಕಡ್ಡಾಯಗೊಳಿಸಲಾಯಿತು. ಆದರೆ, 1994 ಮತ್ತು 1999ರ ಚುನಾವಣಾ ಸೋಲಿನಿಂದಾಗಿ ಈ ಆದೇಶವನ್ನು ಜಾರಿಗೆ ತರಲು ಕಾಂಗ್ರೆಸ್‌ಗೆ ಸಾಧ್ಯವಾಗಲಿಲ್ಲ.

2004ರ ಚುನಾವಣೆಯಲ್ಲಿ, ಮುಸ್ಲಿಮರಿಗೆ 5% ಮೀಸಲಾತಿಯನ್ನು ಪುನಃ ಪರಿಚಯಿಸುವುದು ಕಾಂಗ್ರೆಸ್‌ನ ಮಹತ್ವದ ಪ್ರಚಾರ ಭರವಸೆಯಾಗಿತ್ತು. ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಮುಸ್ಲಿಮರನ್ನು ಮೇಲೆತ್ತುವುದು ಇದರ ಉದ್ದೇಶವಾಗಿತ್ತು. ವೈಎಸ್ ರಾಜಶೇಖರ ರೆಡ್ಡಿ ನೇತೃತ್ವದಲ್ಲಿ ಚುನಾವಣಾ ಗೆಲುವಿನ ನಂತರ, ಕಾಂಗ್ರೆಸ್ ಎರಡು ತಿಂಗಳೊಳಗೆ ಮೀಸಲಾತಿ ಜಾರಿಗೊಳಿಸುವ ಭರವಸೆ ನೀಡಿತ್ತು. ಕೇಂದ್ರಲ್ಲಿ ಅಧಿಕಾರದಲ್ಲಿದ್ದ ಆಗಿನ ಯುಪಿಎ ಸರ್ಕಾರ ಈ ಕ್ರಮವನ್ನು ಸಂಪೂರ್ಣವಾಗಿ ಬೆಂಬಲಿಸಿತ್ತು. ನಂತರ, ಸಾಮಾಜಿಕ ಆರ್ಥಿಕ ಹಿಂದುಳಿದಿರುವಿಕೆಯನ್ನು ಆಧರಿಸಿ, ಹಿಂದುಳಿದ ವರ್ಗಗಳ ಆಯೋಗ ಗುರುತಿಸಿದ 14 ನಿರ್ದಿಷ್ಟ ಗುಂಪುಗಳಿಗೆ 4% ಮೀಸಲಾತಿ ಜಾರಿಗೊಳಿಸಲಾಯಿತು. ಇದರಲ್ಲಿ ಮುಸ್ಲಿಮರು ಒಳಗೊಂಡಿದ್ದರು.

ಧಾರ್ಮಿಕ ಆಧಾರದ ಮೇಲೆ ಮುಸ್ಲಿಮರಿಗೆ ಮೀಸಲಾತಿ ನೀಡಿಲ್ಲ ಎಂಬುವುದು ಇಲ್ಲಿ ಗಮನಾರ್ಹ ಸಂಗತಿ. ಅಲ್ಲದೆ, ಎಸ್‌ಸಿ, ಎಸ್‌ಟಿ ಸೇರಿದಂತೆ ಯಾವುದೇ ಸಮುದಾಯದ ಮೀಸಲಾತಿ ಕಡಿತಗೊಳಿಸದೆ ಮುಸ್ಲಿಮರಿಗೆ ಮೀಸಲಾತಿ ನೀಡಲಾಗಿತ್ತು. ಸರ್ಕಾರ 5% ಮೀಸಲಾತಿ ನೀಡಲು ಮುಂದಾಗಿದ್ದರೂ, ಒಟ್ಟಾರೆ ಮೀಸಲಾತಿ ಮಿತಿ 50% ಮೀರುವ ಕಾರಣ 4%ಗೆ ಇಳಿಸಲಾಗಿತ್ತು.

ನಂತರ 2004 ರಲ್ಲಿ, ಯುಪಿಎ ಸರ್ಕಾರವು ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗವನ್ನು ಸ್ಥಾಪಿಸಿತು. ಇದನ್ನು ಸಾಮಾನ್ಯವಾಗಿ ರಂಗನಾಥ್ ಮಿಶ್ರಾ ಪ್ಯಾನಲ್ ಎಂದು ಕರೆಯಲಾಗುತ್ತದೆ. ಧಾರ್ಮಿಕ ಮತ್ತು ಭಾಷಿಕ ಅಲ್ಪಸಂಖ್ಯಾತರಲ್ಲಿ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು (SEBC) ಗುರುತಿಸಲು, ಕಲ್ಯಾಣ ಕ್ರಮಗಳನ್ನು ಶಿಫಾರಸು ಮಾಡಲು, ಮಾನದಂಡಗಳನ್ನು ವ್ಯಾಖ್ಯಾನಿಸಲು ಈ ಸಮಿತಿಯನ್ನು ನಿಯೋಜಿಸಲಾಗಿತ್ತು. ಇದು ಅಲ್ಪಸಂಖ್ಯಾತರಿಗೆ ನಿರ್ದಿಷ್ಟವಲ್ಲದ ಸರ್ಕಾರಿ ವಲಯಗಳಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ 10% ಮತ್ತು ಇತರ ಅಲ್ಪಸಂಖ್ಯಾತರಿಗೆ 5% ಮೀಸಲಾತಿಯನ್ನು ಪ್ರಸ್ತಾಪಿಸಿತ್ತು. ಇವುಗಳನ್ನು ಅಸ್ತಿತ್ವದಲ್ಲಿರುವ ಒಬಿಸಿ ಕೋಟಾದಲ್ಲಿ ಅಳವಡಿಸಿಕೊಳ್ಳಬಹುದು ಎಂದು ಸೂಚಿಸಿತ್ತು.

2009ರ ಲೋಕಸಭೆ ಚುನಾವಣೆಯ ತನ್ನ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಉದ್ಯೋಗ ಮತ್ತು ಶಿಕ್ಷಣದಲ್ಲಿ ಒಬಿಸಿಗಳಿಗೆ ಅಸ್ತಿತ್ವದಲ್ಲಿರುವ 27% ಮೀಸಲಾತಿಯೊಳಗೆ ಮುಸ್ಲಿಂ ಉಪ-ಕೋಟಾವನ್ನು ಜಾರಿಗೆ ತರುವುದಾಗಿ ಭರವಸೆ ನೀಡಿತ್ತು.

ಮಾರ್ಚ್ 25, 2010 ರಂದು, ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಆಂಧ್ರ ಪ್ರದೇಶದಲ್ಲಿ 4% ಮುಸ್ಲಿಂ ಕೋಟಾದ ಅನುಷ್ಠಾನವನ್ನು ತಡೆ ಹಿಡಿಯಿತು. ಆರ್ಥಿಕವಾಗಿ ಹಿಂದುಳಿದ ವರ್ಗೀಕರಣದ ಅಡಿಯಲ್ಲಿ ಈ ಹಿಂದೆ ನಿರ್ದಿಷ್ಟಪಡಿಸಿದ 14 ವರ್ಗಗಳಿಗೆ ಮೀಸಲಾತಿ ಮುಂದುವರೆಸುವಂತೆ ತಿಳಿಸಿತ್ತು.ಈ ವಿಷಯವನ್ನು ಸಾಂವಿಧಾನಿಕ ಪೀಠಕ್ಕೆ ಒಪ್ಪಿಸಲಾಗಿದ್ದು, ಅದು ಇನ್ನೂ ಬಾಕಿ ಉಳಿದಿದೆ.

2011 ರ ವೇಳೆಗೆ, ಯುಪಿಎಯ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಒಬಿಸಿ ಕೋಟಾದೊಳಗೆ 8.4% ಉಪ-ಕೋಟಾವನ್ನು ಪ್ರಸ್ತಾಪಿಸಿತು. ಇದರಲ್ಲಿ ಮುಸ್ಲಿಮರಿಗೆ 6% ಮೀಸಲಾತಿಯೂ ಸೇರಿದೆ. ಇದು ಮಿಶ್ರಾ ಪ್ಯಾನೆಲ್‌ನ ಶಿಫಾರಸುಗಳೊಂದಿಗೆ ಇದು ಹೊಂದಾಣಿಕೆಯಾಗುತ್ತದೆ. ನಂತರ ಮಂಡಲ್ ಆಯೋಗದ ಮಾರ್ಗಸೂಚಿಗಳನ್ನು ಅನುಸರಿಸಿ ಈ ಶೇಕಡಾವಾರು ಪ್ರಮಾಣವನ್ನು ಎಲ್ಲಾ ಅಲ್ಪಸಂಖ್ಯಾತರಿಗೆ 4.5% ಕ್ಕೆ ಇಳಿಸಲಾಯಿತು.

2012 ರ ಉತ್ತರ ಪ್ರದೇಶ ರಾಜ್ಯ ಚುನಾವಣೆಗಳಿಗೆ ಮುಂಚಿತವಾಗಿ, ಯುಪಿಎ ಸರ್ಕಾರವು ಕೇಂದ್ರ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಒಬಿಸಿಯ 27% ಮೀಸಲಾತಿಯಲ್ಲಿ 4.5% ಅಲ್ಪಸಂಖ್ಯಾತ ಉಪ-ಕೋಟಾವನ್ನು ಘೋಷಿಸಿತು. ಚುನಾವಣಾ ಸಮಯದಲ್ಲಿ ಚುನಾವಣಾ ಆಯೋಗವು ಮಧ್ಯಪ್ರವೇಶಿಸಿತು, ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ಚುನಾವಣೆ ಮುಗಿಯುವವರೆಗೆ ಇದರ ಅನುಷ್ಠಾನವನ್ನು ತಡೆ ಹಿಡಿಯುವಂತೆ ಮನಮೋಹನ್ ಸಿಂಗ್ ಆಡಳಿತಕ್ಕೆ ಸೂಚಿಸಿತು.

ಆಂಧ್ರ ಪ್ರದೇಶ ಹೈಕೋರ್ಟ್, ಮೇ 2012 ರಲ್ಲಿ, ಕೇಂದ್ರ ಸರ್ಕಾರದ 4.5% ಉಪ-ಕೋಟಾ ಉಪಕ್ರಮವನ್ನು ಅಮಾನ್ಯಗೊಳಿಸಿತು. ಇದು ಇತರ ಗಣನೀಯ ಮಾನದಂಡಗಳನ್ನು ಆಧರಿಸಿದೆ ಬದಲಿಗೆ ಧಾರ್ಮಿಕವಾಗಿ ಪ್ರೇರೇಪಿತವಾಗಿದೆ ಎಂದು ಟೀಕಿಸಿತು. ಈ ತೀರ್ಪಿಗೆ ತಡೆಯಾಜ್ಞೆ ಪಡೆಯುವಲ್ಲಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು ವಿಫಲವಾಗಿತ್ತು.

ಕಾಂಗ್ರೆಸ್ ತನ್ನ 2014 ರ ಸಾರ್ವತ್ರಿಕ ಚುನಾವಣಾ ಪ್ರಣಾಳಿಕೆಯಲ್ಲಿ ಹಿಂದಿನ ಯುಪಿಎ ಆಡಳಿತವು ಹಿಂದುಳಿದ ಅಲ್ಪಸಂಖ್ಯಾತರ ಸ್ಥಿತಿಯನ್ನು ಸುಧಾರಿಸಲು ಪ್ರಯತ್ನಿಸಿದೆ ಎಂದು ಹೈಲೈಟ್ ಮಾಡಿತ್ತು ಮತ್ತು ಶೈಕ್ಷಣಿಕ ವಲಯ ಮತ್ತು ಸಾರ್ವಜನಿಕ ವಲಯದ ಉದ್ಯೋಗಗಳಲ್ಲಿ ಹೆಚ್ಚುವರಿ ಮೀಸಲಾತಿ ಒದಗಿಸುವ ಭರವಸೆ ನೀಡಿತ್ತು.

ನಮ್ಮ ಪರಿಶೀಲನೆಯಲ್ಲಿ ಕಂಡು ಬಂದ ವಿಷಯವೆಂದರೆ, ಅವಿಭಜಿತ ಆಂಧ್ರ ಪ್ರದೇಶದಲ್ಲಿ 2004ರ ವೇಳೆಗೆ ಮುಸ್ಲಿಮರಿಗೆ 4% ಮೀಸಲಾತಿ ನೀಡಲಾಗಿತ್ತು. ಇದನ್ನು ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ಕಡಿತಗೊಳಿಸಿ ನೀಡಿದ್ದಲ್ಲ. ಬದಲಾಗಿ ಪ್ರತ್ಯೇಕವಾಗಿ ನೀಡಿದ್ದು. ಹಾಗಾಗಿ, ಮುಸ್ಲಿಮರಿಗೆ ಮೀಸಲಾತಿ ನೀಡಲು ಎಸ್‌ಸಿ, ಎಸ್‌ಟಿಗಳ ಮೀಸಲಾತಿ ಕಡಿತಗೊಳಿಸಲಾಗಿದೆ ಎಂಬ ಪ್ರಧಾನಿ ಮೋದಿಯವರ ಹೇಳಿಕೆ ಸುಳ್ಳು.

ಅವಿಭಜಿತ ಆಂಧ್ರ ಪ್ರದೇಶದಲ್ಲಿ 1993-94ರಲ್ಲೇ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಕ್ರಿಯೆ ಪ್ರಾರಂಭವಾಗಿತ್ತು. ಕಾರಣಾಂತರಗಳಿಂದ ಅದು 2004ರ ವೇಳೆಗೆ ಜಾರಿ ಬಂತು. ಇನ್ನು ಆಂಧ್ರ ಪ್ರದೇಶ ಹೈಕೋರ್ಟ್, ಮೇ 2012 ರಲ್ಲಿ ಕೇಂದ್ರ ಸರ್ಕಾರದ 4.5% ಉಪ-ಕೋಟಾ ಉಪಕ್ರಮವನ್ನು ಅಮಾನ್ಯಗೊಳಿಸಿದೆ.

ಇದನ್ನೂ ಓದಿ : FACT CHECK: ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ ಮೋದಿ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...