Homeಫ್ಯಾಕ್ಟ್‌ಚೆಕ್FACT CHECK : ಆಂಧ್ರದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲಾಗಿದೆ ಎಂಬ ಮೋದಿ...

FACT CHECK : ಆಂಧ್ರದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲಾಗಿದೆ ಎಂಬ ಮೋದಿ ಹೇಳಿಕೆ ಸುಳ್ಳು

- Advertisement -
- Advertisement -

“ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಲು ಕಾಂಗ್ರೆಸ್ ಆಂಧ್ರ ಪ್ರದೇಶದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಕಡಿಮೆ ಮಾಡಿದೆ. ಇದೊಂದು ಪ್ರಮುಖ ಯೋಜನೆಯಾಗಿದ್ದು, ಇದನ್ನು ಇಡೀ ದೇಶದಾದ್ಯಂತ ಜಾರಿಗೆ ತರಲು ಕಾಂಗ್ರೆಸ್ ಬಯಸಿದೆ” ಎಂದು ಟೋಂಕ್‌ನಲ್ಲಿ ಮಂಗಳವಾರ (ಏ.23) ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡುವಾಗ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ಮೋದಿಯವರು ಹೇಳಿರುವುದು ನಿಜಾನಾ? ಎಂಬುವುದನ್ನು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಫ್ಯಾಕ್ಟ್‌ಚೆಕ್ : ಅವಿಭಜಿತ ಆಂಧ್ರ ಪ್ರದೇಶದಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಕ್ರಿಯೆಯನ್ನು 1993 ಮತ್ತು 1994 ರ ನಡುವಿನ ಕಾಂಗ್ರೆಸ್ ಆಡಳಿತದಲ್ಲಿ ಪ್ರಾರಂಭಿಸಲಾಯಿತು. ಈ ಸಮಯದಲ್ಲಿ ಕೋಟ್ಲಾ ವಿಜಯಭಾಸ್ಕರ್ ರೆಡ್ಡಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಅಲ್ಪಸಂಖ್ಯಾತರ ಕಲ್ಯಾಣ ಸಚಿವಾಲಯದ ಸ್ಥಾಪನೆಯ ನಂತರ ಆಗಸ್ಟ್ 1994ರಲ್ಲಿ ಮುಸ್ಲಿಮರಿಗೆ ಮೀಸಲಾತಿ ಸಂಬಂಧ ಆದೇಶ ಹೊರಡಿಸಲಾಯಿತು. ಈ ಮೂಲಕ ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಹುದ್ದೆಗಳಲ್ಲಿ 14 ಇತರ ಜಾತಿಗಳೊಂದಿಗೆ ಮುಸ್ಲಿಮರಿಗೆ 5% ಮೀಸಲಾತಿಯನ್ನು ಕಡ್ಡಾಯಗೊಳಿಸಲಾಯಿತು. ಆದರೆ, 1994 ಮತ್ತು 1999ರ ಚುನಾವಣಾ ಸೋಲಿನಿಂದಾಗಿ ಈ ಆದೇಶವನ್ನು ಜಾರಿಗೆ ತರಲು ಕಾಂಗ್ರೆಸ್‌ಗೆ ಸಾಧ್ಯವಾಗಲಿಲ್ಲ.

2004ರ ಚುನಾವಣೆಯಲ್ಲಿ, ಮುಸ್ಲಿಮರಿಗೆ 5% ಮೀಸಲಾತಿಯನ್ನು ಪುನಃ ಪರಿಚಯಿಸುವುದು ಕಾಂಗ್ರೆಸ್‌ನ ಮಹತ್ವದ ಪ್ರಚಾರ ಭರವಸೆಯಾಗಿತ್ತು. ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಮುಸ್ಲಿಮರನ್ನು ಮೇಲೆತ್ತುವುದು ಇದರ ಉದ್ದೇಶವಾಗಿತ್ತು. ವೈಎಸ್ ರಾಜಶೇಖರ ರೆಡ್ಡಿ ನೇತೃತ್ವದಲ್ಲಿ ಚುನಾವಣಾ ಗೆಲುವಿನ ನಂತರ, ಕಾಂಗ್ರೆಸ್ ಎರಡು ತಿಂಗಳೊಳಗೆ ಮೀಸಲಾತಿ ಜಾರಿಗೊಳಿಸುವ ಭರವಸೆ ನೀಡಿತ್ತು. ಕೇಂದ್ರಲ್ಲಿ ಅಧಿಕಾರದಲ್ಲಿದ್ದ ಆಗಿನ ಯುಪಿಎ ಸರ್ಕಾರ ಈ ಕ್ರಮವನ್ನು ಸಂಪೂರ್ಣವಾಗಿ ಬೆಂಬಲಿಸಿತ್ತು. ನಂತರ, ಸಾಮಾಜಿಕ ಆರ್ಥಿಕ ಹಿಂದುಳಿದಿರುವಿಕೆಯನ್ನು ಆಧರಿಸಿ, ಹಿಂದುಳಿದ ವರ್ಗಗಳ ಆಯೋಗ ಗುರುತಿಸಿದ 14 ನಿರ್ದಿಷ್ಟ ಗುಂಪುಗಳಿಗೆ 4% ಮೀಸಲಾತಿ ಜಾರಿಗೊಳಿಸಲಾಯಿತು. ಇದರಲ್ಲಿ ಮುಸ್ಲಿಮರು ಒಳಗೊಂಡಿದ್ದರು.

ಧಾರ್ಮಿಕ ಆಧಾರದ ಮೇಲೆ ಮುಸ್ಲಿಮರಿಗೆ ಮೀಸಲಾತಿ ನೀಡಿಲ್ಲ ಎಂಬುವುದು ಇಲ್ಲಿ ಗಮನಾರ್ಹ ಸಂಗತಿ. ಅಲ್ಲದೆ, ಎಸ್‌ಸಿ, ಎಸ್‌ಟಿ ಸೇರಿದಂತೆ ಯಾವುದೇ ಸಮುದಾಯದ ಮೀಸಲಾತಿ ಕಡಿತಗೊಳಿಸದೆ ಮುಸ್ಲಿಮರಿಗೆ ಮೀಸಲಾತಿ ನೀಡಲಾಗಿತ್ತು. ಸರ್ಕಾರ 5% ಮೀಸಲಾತಿ ನೀಡಲು ಮುಂದಾಗಿದ್ದರೂ, ಒಟ್ಟಾರೆ ಮೀಸಲಾತಿ ಮಿತಿ 50% ಮೀರುವ ಕಾರಣ 4%ಗೆ ಇಳಿಸಲಾಗಿತ್ತು.

ನಂತರ 2004 ರಲ್ಲಿ, ಯುಪಿಎ ಸರ್ಕಾರವು ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗವನ್ನು ಸ್ಥಾಪಿಸಿತು. ಇದನ್ನು ಸಾಮಾನ್ಯವಾಗಿ ರಂಗನಾಥ್ ಮಿಶ್ರಾ ಪ್ಯಾನಲ್ ಎಂದು ಕರೆಯಲಾಗುತ್ತದೆ. ಧಾರ್ಮಿಕ ಮತ್ತು ಭಾಷಿಕ ಅಲ್ಪಸಂಖ್ಯಾತರಲ್ಲಿ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು (SEBC) ಗುರುತಿಸಲು, ಕಲ್ಯಾಣ ಕ್ರಮಗಳನ್ನು ಶಿಫಾರಸು ಮಾಡಲು, ಮಾನದಂಡಗಳನ್ನು ವ್ಯಾಖ್ಯಾನಿಸಲು ಈ ಸಮಿತಿಯನ್ನು ನಿಯೋಜಿಸಲಾಗಿತ್ತು. ಇದು ಅಲ್ಪಸಂಖ್ಯಾತರಿಗೆ ನಿರ್ದಿಷ್ಟವಲ್ಲದ ಸರ್ಕಾರಿ ವಲಯಗಳಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ 10% ಮತ್ತು ಇತರ ಅಲ್ಪಸಂಖ್ಯಾತರಿಗೆ 5% ಮೀಸಲಾತಿಯನ್ನು ಪ್ರಸ್ತಾಪಿಸಿತ್ತು. ಇವುಗಳನ್ನು ಅಸ್ತಿತ್ವದಲ್ಲಿರುವ ಒಬಿಸಿ ಕೋಟಾದಲ್ಲಿ ಅಳವಡಿಸಿಕೊಳ್ಳಬಹುದು ಎಂದು ಸೂಚಿಸಿತ್ತು.

2009ರ ಲೋಕಸಭೆ ಚುನಾವಣೆಯ ತನ್ನ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಉದ್ಯೋಗ ಮತ್ತು ಶಿಕ್ಷಣದಲ್ಲಿ ಒಬಿಸಿಗಳಿಗೆ ಅಸ್ತಿತ್ವದಲ್ಲಿರುವ 27% ಮೀಸಲಾತಿಯೊಳಗೆ ಮುಸ್ಲಿಂ ಉಪ-ಕೋಟಾವನ್ನು ಜಾರಿಗೆ ತರುವುದಾಗಿ ಭರವಸೆ ನೀಡಿತ್ತು.

ಮಾರ್ಚ್ 25, 2010 ರಂದು, ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಆಂಧ್ರ ಪ್ರದೇಶದಲ್ಲಿ 4% ಮುಸ್ಲಿಂ ಕೋಟಾದ ಅನುಷ್ಠಾನವನ್ನು ತಡೆ ಹಿಡಿಯಿತು. ಆರ್ಥಿಕವಾಗಿ ಹಿಂದುಳಿದ ವರ್ಗೀಕರಣದ ಅಡಿಯಲ್ಲಿ ಈ ಹಿಂದೆ ನಿರ್ದಿಷ್ಟಪಡಿಸಿದ 14 ವರ್ಗಗಳಿಗೆ ಮೀಸಲಾತಿ ಮುಂದುವರೆಸುವಂತೆ ತಿಳಿಸಿತ್ತು.ಈ ವಿಷಯವನ್ನು ಸಾಂವಿಧಾನಿಕ ಪೀಠಕ್ಕೆ ಒಪ್ಪಿಸಲಾಗಿದ್ದು, ಅದು ಇನ್ನೂ ಬಾಕಿ ಉಳಿದಿದೆ.

2011 ರ ವೇಳೆಗೆ, ಯುಪಿಎಯ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಒಬಿಸಿ ಕೋಟಾದೊಳಗೆ 8.4% ಉಪ-ಕೋಟಾವನ್ನು ಪ್ರಸ್ತಾಪಿಸಿತು. ಇದರಲ್ಲಿ ಮುಸ್ಲಿಮರಿಗೆ 6% ಮೀಸಲಾತಿಯೂ ಸೇರಿದೆ. ಇದು ಮಿಶ್ರಾ ಪ್ಯಾನೆಲ್‌ನ ಶಿಫಾರಸುಗಳೊಂದಿಗೆ ಇದು ಹೊಂದಾಣಿಕೆಯಾಗುತ್ತದೆ. ನಂತರ ಮಂಡಲ್ ಆಯೋಗದ ಮಾರ್ಗಸೂಚಿಗಳನ್ನು ಅನುಸರಿಸಿ ಈ ಶೇಕಡಾವಾರು ಪ್ರಮಾಣವನ್ನು ಎಲ್ಲಾ ಅಲ್ಪಸಂಖ್ಯಾತರಿಗೆ 4.5% ಕ್ಕೆ ಇಳಿಸಲಾಯಿತು.

2012 ರ ಉತ್ತರ ಪ್ರದೇಶ ರಾಜ್ಯ ಚುನಾವಣೆಗಳಿಗೆ ಮುಂಚಿತವಾಗಿ, ಯುಪಿಎ ಸರ್ಕಾರವು ಕೇಂದ್ರ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಒಬಿಸಿಯ 27% ಮೀಸಲಾತಿಯಲ್ಲಿ 4.5% ಅಲ್ಪಸಂಖ್ಯಾತ ಉಪ-ಕೋಟಾವನ್ನು ಘೋಷಿಸಿತು. ಚುನಾವಣಾ ಸಮಯದಲ್ಲಿ ಚುನಾವಣಾ ಆಯೋಗವು ಮಧ್ಯಪ್ರವೇಶಿಸಿತು, ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ಚುನಾವಣೆ ಮುಗಿಯುವವರೆಗೆ ಇದರ ಅನುಷ್ಠಾನವನ್ನು ತಡೆ ಹಿಡಿಯುವಂತೆ ಮನಮೋಹನ್ ಸಿಂಗ್ ಆಡಳಿತಕ್ಕೆ ಸೂಚಿಸಿತು.

ಆಂಧ್ರ ಪ್ರದೇಶ ಹೈಕೋರ್ಟ್, ಮೇ 2012 ರಲ್ಲಿ, ಕೇಂದ್ರ ಸರ್ಕಾರದ 4.5% ಉಪ-ಕೋಟಾ ಉಪಕ್ರಮವನ್ನು ಅಮಾನ್ಯಗೊಳಿಸಿತು. ಇದು ಇತರ ಗಣನೀಯ ಮಾನದಂಡಗಳನ್ನು ಆಧರಿಸಿದೆ ಬದಲಿಗೆ ಧಾರ್ಮಿಕವಾಗಿ ಪ್ರೇರೇಪಿತವಾಗಿದೆ ಎಂದು ಟೀಕಿಸಿತು. ಈ ತೀರ್ಪಿಗೆ ತಡೆಯಾಜ್ಞೆ ಪಡೆಯುವಲ್ಲಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು ವಿಫಲವಾಗಿತ್ತು.

ಕಾಂಗ್ರೆಸ್ ತನ್ನ 2014 ರ ಸಾರ್ವತ್ರಿಕ ಚುನಾವಣಾ ಪ್ರಣಾಳಿಕೆಯಲ್ಲಿ ಹಿಂದಿನ ಯುಪಿಎ ಆಡಳಿತವು ಹಿಂದುಳಿದ ಅಲ್ಪಸಂಖ್ಯಾತರ ಸ್ಥಿತಿಯನ್ನು ಸುಧಾರಿಸಲು ಪ್ರಯತ್ನಿಸಿದೆ ಎಂದು ಹೈಲೈಟ್ ಮಾಡಿತ್ತು ಮತ್ತು ಶೈಕ್ಷಣಿಕ ವಲಯ ಮತ್ತು ಸಾರ್ವಜನಿಕ ವಲಯದ ಉದ್ಯೋಗಗಳಲ್ಲಿ ಹೆಚ್ಚುವರಿ ಮೀಸಲಾತಿ ಒದಗಿಸುವ ಭರವಸೆ ನೀಡಿತ್ತು.

ನಮ್ಮ ಪರಿಶೀಲನೆಯಲ್ಲಿ ಕಂಡು ಬಂದ ವಿಷಯವೆಂದರೆ, ಅವಿಭಜಿತ ಆಂಧ್ರ ಪ್ರದೇಶದಲ್ಲಿ 2004ರ ವೇಳೆಗೆ ಮುಸ್ಲಿಮರಿಗೆ 4% ಮೀಸಲಾತಿ ನೀಡಲಾಗಿತ್ತು. ಇದನ್ನು ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ಕಡಿತಗೊಳಿಸಿ ನೀಡಿದ್ದಲ್ಲ. ಬದಲಾಗಿ ಪ್ರತ್ಯೇಕವಾಗಿ ನೀಡಿದ್ದು. ಹಾಗಾಗಿ, ಮುಸ್ಲಿಮರಿಗೆ ಮೀಸಲಾತಿ ನೀಡಲು ಎಸ್‌ಸಿ, ಎಸ್‌ಟಿಗಳ ಮೀಸಲಾತಿ ಕಡಿತಗೊಳಿಸಲಾಗಿದೆ ಎಂಬ ಪ್ರಧಾನಿ ಮೋದಿಯವರ ಹೇಳಿಕೆ ಸುಳ್ಳು.

ಅವಿಭಜಿತ ಆಂಧ್ರ ಪ್ರದೇಶದಲ್ಲಿ 1993-94ರಲ್ಲೇ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಕ್ರಿಯೆ ಪ್ರಾರಂಭವಾಗಿತ್ತು. ಕಾರಣಾಂತರಗಳಿಂದ ಅದು 2004ರ ವೇಳೆಗೆ ಜಾರಿ ಬಂತು. ಇನ್ನು ಆಂಧ್ರ ಪ್ರದೇಶ ಹೈಕೋರ್ಟ್, ಮೇ 2012 ರಲ್ಲಿ ಕೇಂದ್ರ ಸರ್ಕಾರದ 4.5% ಉಪ-ಕೋಟಾ ಉಪಕ್ರಮವನ್ನು ಅಮಾನ್ಯಗೊಳಿಸಿದೆ.

ಇದನ್ನೂ ಓದಿ : FACT CHECK: ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ ಮೋದಿ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರು| ದಲಿತರ ಜಮೀನಿಗೆ ನುಗ್ಗಿ ಬೆಳೆ ನಾಶ; ಪ್ರಬಲ ಜಾತಿ ಜನರಿಂದ ವಿನಾಕಾರಣ ತೊಂದರೆ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿಯ ಸತ್ತಿಹಳ್ಳಿ ಗ್ರಾಮದ ದಲಿತ ಸಮುದಾಯದ ರೈತರಿಗೆ ಅದೇ ಊರಿನ ಪ್ರಬಲ ಜಾತಿಗೆ ಸೇರಿದ ಜನರು ವಿನಾಕಾರಣ ತೊಂದರೆ ನಿಡುತ್ತಿದ್ದು, ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡಿದ್ದಾರೆ ಎಂಬ...

ಎಲ್‌ಡಿಎಫ್‌ನ ‘ಕೇರಳಂ’ ಮರುನಾಮಕರಣ ಕ್ರಮ ಬೆಂಬಲಿಸಿದ ರಾಜ್ಯ ಬಿಜೆಪಿ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಮನವಿ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇರಳ ಘಟಕವು, ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಸರ್ಕಾರದ 'ಕೇರಳಂ' ಮರುನಾಕರಣ ಪ್ರಸ್ತಾವನೆಯನ್ನು ಬೆಂಬಲಿಸಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಧ್ಯಸ್ಥಿಕೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ...

ರಾಯಚೂರು ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ತಡೆಗೆ ಸಂಚು ಆರೋಪ: ನಿಗದಿತ ದಿನಾಂಕದಂದು ಪರೀಕ್ಷೆ ನಡೆಸಲು ಒತ್ತಾಯ 

ಬೆಂಗಳೂರು: ರಾಯಚೂರು ಕೃಷಿ ವಿವಿಯಲ್ಲಿನ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ನಿಗದಿತ ದಿನಾಂಕಗಳಾದ ಜನವರಿ.17 ಮತ್ತು ಜನವರಿ.18ರಂದೇ ನಡೆಸಬೇಕು. ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯಕ್ಕೆ ಮಣಿದು ಪರೀಕ್ಷೆಯನ್ನು ಮುಂದೂಡಬಾರದು ಎಂದು ಅಭ್ಯರ್ಥಿಗಳು...

ಸಂಭಾಲ್ ಹಿಂಸಾಚಾರ ಪ್ರಕರಣ : ಹಿರಿಯ ಅಧಿಕಾರಿಗಳು ಸೇರಿ 12 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

2024ರ ನವೆಂಬರ್‌ನಲ್ಲಿ ಶಾಹಿ ಜಾಮಾ ಮಸೀದಿ ಬಳಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪಾತ್ರವಿದೆ ಎಂಬ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಸೇರಿದಂತೆ 12 ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಿಮಿನಲ್...

ಪಿಎಂ ಕೇರ್ಸ್ ನಿಧಿಗೆ ಆರ್‌ಟಿಐ ಕಾಯ್ದೆಯಡಿ ಗೌಪ್ಯತೆಯ ಹಕ್ಕಿದೆ : ದೆಹಲಿ ಹೈಕೋರ್ಟ್

ಪಿಎಂ ಕೇರ್ಸ್ ನಿಧಿಯು ಕಾನೂನು ಅಥವಾ ಸರ್ಕಾರಿ ಘಟಕವಾಗಿದ್ದರೂ, ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಗೌಪ್ಯತೆಯ ಹಕ್ಕನ್ನು ನಿರಾಕರಿಸಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಮಂಗಳವಾರ (ಜ.13) ಮೌಖಿಕವಾಗಿ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು...

ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ. ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ...

ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್...

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...