Homeಫ್ಯಾಕ್ಟ್‌ಚೆಕ್Fact Check : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ವ್ಯಕ್ತಪಡಿಸಿರುವುದು ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್‌...

Fact Check : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ವ್ಯಕ್ತಪಡಿಸಿರುವುದು ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್‌ ಅಲ್ಲ

- Advertisement -
- Advertisement -

‘ರಾಷ್ಟ್ರೀಯ ಸ್ವಯಂ ಸೇವಕ ಸಂಘ’ ಎಂಬ ಹೆಸರಿನ ಬ್ಯಾನರ್ ಮುಂದೆ ಕುಳಿತು ನಾಲ್ಕೈದು ಮಂದಿ ಸುದ್ದಿಗೋಷ್ಠಿ ನಡೆಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

‘East Bangalore Congress Sevadal’ಎಂಬ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, “ದೇಶ ಮತ್ತು ಸಂವಿಧಾನವನ್ನು ಉಳಿಸಬೇಕು, ಮೋದಿಯನ್ನು ತೊಲಗಿಸಬೇಕು: ಆರ್.ಎಸ್.ಎಸ್” ಎಂದು ಬರೆದುಕೊಳ್ಳಲಾಗಿದೆ.

ಇತರ ಕೆಲ ಎಕ್ಸ್ ಬಳಕೆದಾರರು ಕೂಡ ಸುದ್ದಿಗೋಷ್ಠಿಯ ವಿಡಿಯೋ ಹಂಚಿಕೊಂಡು, ಆರ್‌ ಎಸ್‌ ಎಸ್‌ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದೆ ಎಂಬರ್ಥದಲ್ಲಿ ಬರೆದುಕೊಂಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದವರು ಕಾಂಗ್ರೆಸ್ ಪರವಾಗಿ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿದುಕೊಳ್ಳುವ ಸಲುವಾಗಿ ನಾವು ಕೀ ವರ್ಡ್‌ಗಳನ್ನು ಬಳಸಿ ಗೂಗಲ್ ಸರ್ಚ್‌ ಮಾಡಿದ್ದೇವೆ. ಈ ವೇಳೆ ಅನೇಕ ಸುದ್ದಿ ವೆಬ್‌ಸೈಟ್‌ಗಳು ಈ ಕುರಿತು ವರದಿ ಮಾಡಿರುವುದು ಕಂಡು ಬಂದಿದೆ.

‘The Quint’ ವೆಬ್‌ಸೈಟ್‌ ವರದಿಯ ಪ್ರಕಾರ, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಆರ್‌ಎಸ್‌) ಎಂಬ ಹೆಸರಿನ ಸಂಘಟನೆ ಸುದ್ದಿಗೋಷ್ಠಿ ನಡೆಸಿದೆ. ಆದರೆ, ಇದು ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್‌ ಅಲ್ಲ.

ಸಾಮಾಜಿಕ ಕಾರ್ಯಕರ್ತ ಮತ್ತು ಮಾಜಿ ಕಾರ್ಪೊರೇಟರ್ ಜನಾರ್ದನ್ ಮೂನ್ ಅವರು ನಾಗಪುರದಲ್ಲಿ ಆರ್‌ಎಸ್‌ಎಸ್ ಎಂಬ ಹೆಸರಿನ ಮತ್ತೊಂದು ಸಂಘಟನೆಯನ್ನು ಪ್ರಾರಂಭಿಸಿದ್ದಾರೆ. ಅವರು ತಮ್ಮ ಸಂಘಟನೆಯನ್ನು ಆರ್‌ಎಸ್‌ಎಸ್ ಹೆಸರಿನಲ್ಲಿ ನೋಂದಾಯಿಸಲು ಪ್ರಯತ್ನಿಸಿದ್ದಾರೆ. ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್‌ ನೋಂದಾಯಿತ ಸಂಘಟನೆ ಅಲ್ಲ. ಹಾಗಾಗಿ, ಆ ಹೆಸರನ್ನು ಯಾರು ಬೇಕಾದರು ಬಳಸಬಹುದು ಎಂಬುವುದು ಜನಾರ್ದನ್ ಮೂನ್ ಅವರ ವಾದವಾಗಿದೆ.

ಸುದ್ದಿಗೋಷ್ಠಿ ನಡೆಸಿದ ಸಂಘಟನೆಯ ಕುರಿತು ಇನ್ನಷ್ಟು ತಿಳಿದುಕೊಳ್ಳಲು ನಾವು ಸುದ್ದಿಗೋಷ್ಠಿಯ ವಿಡಿಯೋ ಪ್ರಸಾರ ಮಾಡಿದ ಯೂಟ್ಯೂಬ್‌ ಚಾನೆಲ್‌ ಆವಾಝ್ ಇಂಡಿಯಾವನ್ನು ಹುಡುಕಿದ್ದೇವೆ. ಈ ವೇಳೆ ಆ ಯೂಟ್ಯೂಬ್ ಚಾನೆಲ್‌ನಲ್ಲಿ ಮಾರ್ಚ್ 24,2024ರಂದು ಸುದ್ದಿಗೋಷ್ಠಿಯ ಸಂಪೂರ್ಣ ವಿಡಿಯೋ ಪೋಸ್ಟ್ ಮಾಡಿರುವುದು ಕಂಡು ಬಂದಿದೆ. ವಿಡಿಯೋಗೆ “ನಾಗ್ಪುರ: ಆರ್‌ಎಸ್‌ಎಸ್‌ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದು, ಆರ್‌ಎಸ್‌ಎಸ್ ಮುಖ್ಯಸ್ಥ ಜನಾರ್ದನ್ ಮೂನ್, ಅಬ್ದುಲ್ ಪಾಷಾ ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದಾರೆ” ಎಂದು ಶೀರ್ಷಿಕೆ ಕೊಡಲಾಗಿದೆ.

ವಿಡಿಯೋದ ಡಿಸ್ಕ್ರಿಪ್ಶನ್‌ನಲ್ಲಿ ” ಆರ್‌ಎಸ್‌ಎಸ್‌ ಇಂಡಿಯಾ ಮೈತ್ರಿಕೂಟವನ್ನು ಹೇಗೆ ಬೆಂಬಲಿಸಿತು ಎಂದು ಆಶ್ಚರ್ಯಪಡುವವರಿಗೆ, ದೇಶದಲ್ಲಿ ಎರಡು ಆರ್‌ಎಸ್‌ಎಸ್‌ಗಳಿವೆ. ಒಂದು ಕಾಂಗ್ರೆಸ್ ಅನ್ನು ಬೆಂಬಲಿಸಿದ ಆನ್‌ಲೈನ್ ನೋಂದಣಿಯದ್ದು. ಇನ್ನೊಂದು ನೋಂದಣಿಯಾಗದ್ದು, ಅದರ ಸರ ಸಂಘಚಾಲಕ ಮೋಹನ್ ಭಾಗವತ್. ದಯವಿಟ್ಟು ಎಚ್ಚರಿಕೆ ವಹಿಸಿ ಗೊಂದಲಕ್ಕೊಳಗಾಗಬೇಡಿ” ಎಂದು ಬರೆಯಲಾಗಿದೆ.

ನಾವು ಜನಾರ್ದನ್ ಮೂನ್ ಅವರ ಹೆಸರನ್ನು ಗೂಗಲ್ ಸರ್ಚ್ ಮಾಡಿದಾಗ ಅವರು ಪ್ರತ್ಯೇಕ ಆರ್‌ಎಸ್‌ಎಸ್‌ ಎಂಬ ಸಂಘಟನೆ ಹೊಂದಿರುವುದು ಗೊತ್ತಾಗಿದೆ. ಜನಾರ್ದನ್ ಅವರು ತಮ್ಮ ಅರ್‌ಎಸ್‌ಎಸ್‌ ಸಂಘಟನೆಯನ್ನು ನೋಂದಣಿ ಮಾಡಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸುವ ಬಗ್ಗೆ ಜನವರಿ 22, 2019ರಂದು ಟೈಮ್ಸ್ ಆಫ್ ಇಂಡಿಯಾದಲ್ಲಿ ವರದಿಯೊಂದು ಪ್ರಕಟಗೊಂಡಿರುವುದು ಲಭ್ಯವಾಗಿದೆ.

ಸುದ್ದಿ : ಆರ್‌ಎಸ್‌ಎಸ್‌ ಸಂಘಟನೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅಥವಾ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದೆ.

ಸತ್ಯ : ದೇಶದಲ್ಲಿ ಎರಡು ಆರ್‌ಎಸ್‌ಎಸ್‌ ಸಂಘಟನೆಯಿದೆ. ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್‌ ಕಾಂಗ್ರೆಸ್‌ ಬೆಂಬಲಿಸಿಲ್ಲ. ಜನಾರ್ದನ್ ಮೂನ್ ಎಂಬವರ ನೇತೃತ್ವದಲ್ಲಿರುವ ಮತ್ತೊಂದು ಆರ್‌ಎಸ್‌ಎಸ್‌ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದೆ.

ಇದನ್ನೂ ಓದಿ : Fact Check: ಕರ್ನಾಟಕದಲ್ಲಿ ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...