Homeಫ್ಯಾಕ್ಟ್‌ಚೆಕ್Fact Check : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ವ್ಯಕ್ತಪಡಿಸಿರುವುದು ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್‌...

Fact Check : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ವ್ಯಕ್ತಪಡಿಸಿರುವುದು ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್‌ ಅಲ್ಲ

- Advertisement -
- Advertisement -

‘ರಾಷ್ಟ್ರೀಯ ಸ್ವಯಂ ಸೇವಕ ಸಂಘ’ ಎಂಬ ಹೆಸರಿನ ಬ್ಯಾನರ್ ಮುಂದೆ ಕುಳಿತು ನಾಲ್ಕೈದು ಮಂದಿ ಸುದ್ದಿಗೋಷ್ಠಿ ನಡೆಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

‘East Bangalore Congress Sevadal’ಎಂಬ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, “ದೇಶ ಮತ್ತು ಸಂವಿಧಾನವನ್ನು ಉಳಿಸಬೇಕು, ಮೋದಿಯನ್ನು ತೊಲಗಿಸಬೇಕು: ಆರ್.ಎಸ್.ಎಸ್” ಎಂದು ಬರೆದುಕೊಳ್ಳಲಾಗಿದೆ.

ಇತರ ಕೆಲ ಎಕ್ಸ್ ಬಳಕೆದಾರರು ಕೂಡ ಸುದ್ದಿಗೋಷ್ಠಿಯ ವಿಡಿಯೋ ಹಂಚಿಕೊಂಡು, ಆರ್‌ ಎಸ್‌ ಎಸ್‌ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದೆ ಎಂಬರ್ಥದಲ್ಲಿ ಬರೆದುಕೊಂಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದವರು ಕಾಂಗ್ರೆಸ್ ಪರವಾಗಿ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿದುಕೊಳ್ಳುವ ಸಲುವಾಗಿ ನಾವು ಕೀ ವರ್ಡ್‌ಗಳನ್ನು ಬಳಸಿ ಗೂಗಲ್ ಸರ್ಚ್‌ ಮಾಡಿದ್ದೇವೆ. ಈ ವೇಳೆ ಅನೇಕ ಸುದ್ದಿ ವೆಬ್‌ಸೈಟ್‌ಗಳು ಈ ಕುರಿತು ವರದಿ ಮಾಡಿರುವುದು ಕಂಡು ಬಂದಿದೆ.

‘The Quint’ ವೆಬ್‌ಸೈಟ್‌ ವರದಿಯ ಪ್ರಕಾರ, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಆರ್‌ಎಸ್‌) ಎಂಬ ಹೆಸರಿನ ಸಂಘಟನೆ ಸುದ್ದಿಗೋಷ್ಠಿ ನಡೆಸಿದೆ. ಆದರೆ, ಇದು ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್‌ ಅಲ್ಲ.

ಸಾಮಾಜಿಕ ಕಾರ್ಯಕರ್ತ ಮತ್ತು ಮಾಜಿ ಕಾರ್ಪೊರೇಟರ್ ಜನಾರ್ದನ್ ಮೂನ್ ಅವರು ನಾಗಪುರದಲ್ಲಿ ಆರ್‌ಎಸ್‌ಎಸ್ ಎಂಬ ಹೆಸರಿನ ಮತ್ತೊಂದು ಸಂಘಟನೆಯನ್ನು ಪ್ರಾರಂಭಿಸಿದ್ದಾರೆ. ಅವರು ತಮ್ಮ ಸಂಘಟನೆಯನ್ನು ಆರ್‌ಎಸ್‌ಎಸ್ ಹೆಸರಿನಲ್ಲಿ ನೋಂದಾಯಿಸಲು ಪ್ರಯತ್ನಿಸಿದ್ದಾರೆ. ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್‌ ನೋಂದಾಯಿತ ಸಂಘಟನೆ ಅಲ್ಲ. ಹಾಗಾಗಿ, ಆ ಹೆಸರನ್ನು ಯಾರು ಬೇಕಾದರು ಬಳಸಬಹುದು ಎಂಬುವುದು ಜನಾರ್ದನ್ ಮೂನ್ ಅವರ ವಾದವಾಗಿದೆ.

ಸುದ್ದಿಗೋಷ್ಠಿ ನಡೆಸಿದ ಸಂಘಟನೆಯ ಕುರಿತು ಇನ್ನಷ್ಟು ತಿಳಿದುಕೊಳ್ಳಲು ನಾವು ಸುದ್ದಿಗೋಷ್ಠಿಯ ವಿಡಿಯೋ ಪ್ರಸಾರ ಮಾಡಿದ ಯೂಟ್ಯೂಬ್‌ ಚಾನೆಲ್‌ ಆವಾಝ್ ಇಂಡಿಯಾವನ್ನು ಹುಡುಕಿದ್ದೇವೆ. ಈ ವೇಳೆ ಆ ಯೂಟ್ಯೂಬ್ ಚಾನೆಲ್‌ನಲ್ಲಿ ಮಾರ್ಚ್ 24,2024ರಂದು ಸುದ್ದಿಗೋಷ್ಠಿಯ ಸಂಪೂರ್ಣ ವಿಡಿಯೋ ಪೋಸ್ಟ್ ಮಾಡಿರುವುದು ಕಂಡು ಬಂದಿದೆ. ವಿಡಿಯೋಗೆ “ನಾಗ್ಪುರ: ಆರ್‌ಎಸ್‌ಎಸ್‌ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದು, ಆರ್‌ಎಸ್‌ಎಸ್ ಮುಖ್ಯಸ್ಥ ಜನಾರ್ದನ್ ಮೂನ್, ಅಬ್ದುಲ್ ಪಾಷಾ ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದಾರೆ” ಎಂದು ಶೀರ್ಷಿಕೆ ಕೊಡಲಾಗಿದೆ.

ವಿಡಿಯೋದ ಡಿಸ್ಕ್ರಿಪ್ಶನ್‌ನಲ್ಲಿ ” ಆರ್‌ಎಸ್‌ಎಸ್‌ ಇಂಡಿಯಾ ಮೈತ್ರಿಕೂಟವನ್ನು ಹೇಗೆ ಬೆಂಬಲಿಸಿತು ಎಂದು ಆಶ್ಚರ್ಯಪಡುವವರಿಗೆ, ದೇಶದಲ್ಲಿ ಎರಡು ಆರ್‌ಎಸ್‌ಎಸ್‌ಗಳಿವೆ. ಒಂದು ಕಾಂಗ್ರೆಸ್ ಅನ್ನು ಬೆಂಬಲಿಸಿದ ಆನ್‌ಲೈನ್ ನೋಂದಣಿಯದ್ದು. ಇನ್ನೊಂದು ನೋಂದಣಿಯಾಗದ್ದು, ಅದರ ಸರ ಸಂಘಚಾಲಕ ಮೋಹನ್ ಭಾಗವತ್. ದಯವಿಟ್ಟು ಎಚ್ಚರಿಕೆ ವಹಿಸಿ ಗೊಂದಲಕ್ಕೊಳಗಾಗಬೇಡಿ” ಎಂದು ಬರೆಯಲಾಗಿದೆ.

ನಾವು ಜನಾರ್ದನ್ ಮೂನ್ ಅವರ ಹೆಸರನ್ನು ಗೂಗಲ್ ಸರ್ಚ್ ಮಾಡಿದಾಗ ಅವರು ಪ್ರತ್ಯೇಕ ಆರ್‌ಎಸ್‌ಎಸ್‌ ಎಂಬ ಸಂಘಟನೆ ಹೊಂದಿರುವುದು ಗೊತ್ತಾಗಿದೆ. ಜನಾರ್ದನ್ ಅವರು ತಮ್ಮ ಅರ್‌ಎಸ್‌ಎಸ್‌ ಸಂಘಟನೆಯನ್ನು ನೋಂದಣಿ ಮಾಡಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸುವ ಬಗ್ಗೆ ಜನವರಿ 22, 2019ರಂದು ಟೈಮ್ಸ್ ಆಫ್ ಇಂಡಿಯಾದಲ್ಲಿ ವರದಿಯೊಂದು ಪ್ರಕಟಗೊಂಡಿರುವುದು ಲಭ್ಯವಾಗಿದೆ.

ಸುದ್ದಿ : ಆರ್‌ಎಸ್‌ಎಸ್‌ ಸಂಘಟನೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅಥವಾ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದೆ.

ಸತ್ಯ : ದೇಶದಲ್ಲಿ ಎರಡು ಆರ್‌ಎಸ್‌ಎಸ್‌ ಸಂಘಟನೆಯಿದೆ. ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್‌ ಕಾಂಗ್ರೆಸ್‌ ಬೆಂಬಲಿಸಿಲ್ಲ. ಜನಾರ್ದನ್ ಮೂನ್ ಎಂಬವರ ನೇತೃತ್ವದಲ್ಲಿರುವ ಮತ್ತೊಂದು ಆರ್‌ಎಸ್‌ಎಸ್‌ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದೆ.

ಇದನ್ನೂ ಓದಿ : Fact Check: ಕರ್ನಾಟಕದಲ್ಲಿ ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...