Homeಫ್ಯಾಕ್ಟ್‌ಚೆಕ್Fact Check : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ವ್ಯಕ್ತಪಡಿಸಿರುವುದು ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್‌...

Fact Check : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ವ್ಯಕ್ತಪಡಿಸಿರುವುದು ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್‌ ಅಲ್ಲ

- Advertisement -
- Advertisement -

‘ರಾಷ್ಟ್ರೀಯ ಸ್ವಯಂ ಸೇವಕ ಸಂಘ’ ಎಂಬ ಹೆಸರಿನ ಬ್ಯಾನರ್ ಮುಂದೆ ಕುಳಿತು ನಾಲ್ಕೈದು ಮಂದಿ ಸುದ್ದಿಗೋಷ್ಠಿ ನಡೆಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

‘East Bangalore Congress Sevadal’ಎಂಬ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, “ದೇಶ ಮತ್ತು ಸಂವಿಧಾನವನ್ನು ಉಳಿಸಬೇಕು, ಮೋದಿಯನ್ನು ತೊಲಗಿಸಬೇಕು: ಆರ್.ಎಸ್.ಎಸ್” ಎಂದು ಬರೆದುಕೊಳ್ಳಲಾಗಿದೆ.

ಇತರ ಕೆಲ ಎಕ್ಸ್ ಬಳಕೆದಾರರು ಕೂಡ ಸುದ್ದಿಗೋಷ್ಠಿಯ ವಿಡಿಯೋ ಹಂಚಿಕೊಂಡು, ಆರ್‌ ಎಸ್‌ ಎಸ್‌ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದೆ ಎಂಬರ್ಥದಲ್ಲಿ ಬರೆದುಕೊಂಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದವರು ಕಾಂಗ್ರೆಸ್ ಪರವಾಗಿ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿದುಕೊಳ್ಳುವ ಸಲುವಾಗಿ ನಾವು ಕೀ ವರ್ಡ್‌ಗಳನ್ನು ಬಳಸಿ ಗೂಗಲ್ ಸರ್ಚ್‌ ಮಾಡಿದ್ದೇವೆ. ಈ ವೇಳೆ ಅನೇಕ ಸುದ್ದಿ ವೆಬ್‌ಸೈಟ್‌ಗಳು ಈ ಕುರಿತು ವರದಿ ಮಾಡಿರುವುದು ಕಂಡು ಬಂದಿದೆ.

‘The Quint’ ವೆಬ್‌ಸೈಟ್‌ ವರದಿಯ ಪ್ರಕಾರ, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಆರ್‌ಎಸ್‌) ಎಂಬ ಹೆಸರಿನ ಸಂಘಟನೆ ಸುದ್ದಿಗೋಷ್ಠಿ ನಡೆಸಿದೆ. ಆದರೆ, ಇದು ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್‌ ಅಲ್ಲ.

ಸಾಮಾಜಿಕ ಕಾರ್ಯಕರ್ತ ಮತ್ತು ಮಾಜಿ ಕಾರ್ಪೊರೇಟರ್ ಜನಾರ್ದನ್ ಮೂನ್ ಅವರು ನಾಗಪುರದಲ್ಲಿ ಆರ್‌ಎಸ್‌ಎಸ್ ಎಂಬ ಹೆಸರಿನ ಮತ್ತೊಂದು ಸಂಘಟನೆಯನ್ನು ಪ್ರಾರಂಭಿಸಿದ್ದಾರೆ. ಅವರು ತಮ್ಮ ಸಂಘಟನೆಯನ್ನು ಆರ್‌ಎಸ್‌ಎಸ್ ಹೆಸರಿನಲ್ಲಿ ನೋಂದಾಯಿಸಲು ಪ್ರಯತ್ನಿಸಿದ್ದಾರೆ. ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್‌ ನೋಂದಾಯಿತ ಸಂಘಟನೆ ಅಲ್ಲ. ಹಾಗಾಗಿ, ಆ ಹೆಸರನ್ನು ಯಾರು ಬೇಕಾದರು ಬಳಸಬಹುದು ಎಂಬುವುದು ಜನಾರ್ದನ್ ಮೂನ್ ಅವರ ವಾದವಾಗಿದೆ.

ಸುದ್ದಿಗೋಷ್ಠಿ ನಡೆಸಿದ ಸಂಘಟನೆಯ ಕುರಿತು ಇನ್ನಷ್ಟು ತಿಳಿದುಕೊಳ್ಳಲು ನಾವು ಸುದ್ದಿಗೋಷ್ಠಿಯ ವಿಡಿಯೋ ಪ್ರಸಾರ ಮಾಡಿದ ಯೂಟ್ಯೂಬ್‌ ಚಾನೆಲ್‌ ಆವಾಝ್ ಇಂಡಿಯಾವನ್ನು ಹುಡುಕಿದ್ದೇವೆ. ಈ ವೇಳೆ ಆ ಯೂಟ್ಯೂಬ್ ಚಾನೆಲ್‌ನಲ್ಲಿ ಮಾರ್ಚ್ 24,2024ರಂದು ಸುದ್ದಿಗೋಷ್ಠಿಯ ಸಂಪೂರ್ಣ ವಿಡಿಯೋ ಪೋಸ್ಟ್ ಮಾಡಿರುವುದು ಕಂಡು ಬಂದಿದೆ. ವಿಡಿಯೋಗೆ “ನಾಗ್ಪುರ: ಆರ್‌ಎಸ್‌ಎಸ್‌ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದು, ಆರ್‌ಎಸ್‌ಎಸ್ ಮುಖ್ಯಸ್ಥ ಜನಾರ್ದನ್ ಮೂನ್, ಅಬ್ದುಲ್ ಪಾಷಾ ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದಾರೆ” ಎಂದು ಶೀರ್ಷಿಕೆ ಕೊಡಲಾಗಿದೆ.

ವಿಡಿಯೋದ ಡಿಸ್ಕ್ರಿಪ್ಶನ್‌ನಲ್ಲಿ ” ಆರ್‌ಎಸ್‌ಎಸ್‌ ಇಂಡಿಯಾ ಮೈತ್ರಿಕೂಟವನ್ನು ಹೇಗೆ ಬೆಂಬಲಿಸಿತು ಎಂದು ಆಶ್ಚರ್ಯಪಡುವವರಿಗೆ, ದೇಶದಲ್ಲಿ ಎರಡು ಆರ್‌ಎಸ್‌ಎಸ್‌ಗಳಿವೆ. ಒಂದು ಕಾಂಗ್ರೆಸ್ ಅನ್ನು ಬೆಂಬಲಿಸಿದ ಆನ್‌ಲೈನ್ ನೋಂದಣಿಯದ್ದು. ಇನ್ನೊಂದು ನೋಂದಣಿಯಾಗದ್ದು, ಅದರ ಸರ ಸಂಘಚಾಲಕ ಮೋಹನ್ ಭಾಗವತ್. ದಯವಿಟ್ಟು ಎಚ್ಚರಿಕೆ ವಹಿಸಿ ಗೊಂದಲಕ್ಕೊಳಗಾಗಬೇಡಿ” ಎಂದು ಬರೆಯಲಾಗಿದೆ.

ನಾವು ಜನಾರ್ದನ್ ಮೂನ್ ಅವರ ಹೆಸರನ್ನು ಗೂಗಲ್ ಸರ್ಚ್ ಮಾಡಿದಾಗ ಅವರು ಪ್ರತ್ಯೇಕ ಆರ್‌ಎಸ್‌ಎಸ್‌ ಎಂಬ ಸಂಘಟನೆ ಹೊಂದಿರುವುದು ಗೊತ್ತಾಗಿದೆ. ಜನಾರ್ದನ್ ಅವರು ತಮ್ಮ ಅರ್‌ಎಸ್‌ಎಸ್‌ ಸಂಘಟನೆಯನ್ನು ನೋಂದಣಿ ಮಾಡಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸುವ ಬಗ್ಗೆ ಜನವರಿ 22, 2019ರಂದು ಟೈಮ್ಸ್ ಆಫ್ ಇಂಡಿಯಾದಲ್ಲಿ ವರದಿಯೊಂದು ಪ್ರಕಟಗೊಂಡಿರುವುದು ಲಭ್ಯವಾಗಿದೆ.

ಸುದ್ದಿ : ಆರ್‌ಎಸ್‌ಎಸ್‌ ಸಂಘಟನೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅಥವಾ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದೆ.

ಸತ್ಯ : ದೇಶದಲ್ಲಿ ಎರಡು ಆರ್‌ಎಸ್‌ಎಸ್‌ ಸಂಘಟನೆಯಿದೆ. ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್‌ ಕಾಂಗ್ರೆಸ್‌ ಬೆಂಬಲಿಸಿಲ್ಲ. ಜನಾರ್ದನ್ ಮೂನ್ ಎಂಬವರ ನೇತೃತ್ವದಲ್ಲಿರುವ ಮತ್ತೊಂದು ಆರ್‌ಎಸ್‌ಎಸ್‌ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದೆ.

ಇದನ್ನೂ ಓದಿ : Fact Check: ಕರ್ನಾಟಕದಲ್ಲಿ ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...