Homeಫ್ಯಾಕ್ಟ್‌ಚೆಕ್FACT CHECK : ಇಂಗ್ಲೆಂಡ್‌ನ ಬ್ರೈಟನ್ ನಗರದ ಮೇಯರ್ ಎಂದು ಮುಸ್ಲಿಂ ಧಾರ್ಮಿಕ ನಾಯಕನ ವಿಡಿಯೋ...

FACT CHECK : ಇಂಗ್ಲೆಂಡ್‌ನ ಬ್ರೈಟನ್ ನಗರದ ಮೇಯರ್ ಎಂದು ಮುಸ್ಲಿಂ ಧಾರ್ಮಿಕ ನಾಯಕನ ವಿಡಿಯೋ ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಮುಸ್ಲಿಂ ಧರ್ಮ ಗುರುವೊಬ್ಬರಿಗೆ ಕೆಲ ವ್ಯಕ್ತಿಗಳು ಹೂವಿನ ಹಾರ ಹಾಕಿ ಸನ್ಮಾನ ಮಾಡಿರುವ ವಿಡಿಯೋವೊಂದು ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಅನೇಕರು ಆ ವಿಡಿಯೋ ಹಂಚಿಕೊಂಡು “ಇಂಗ್ಲೆಂಡ್‌ನ ಬ್ರೈಟನ್ ನಗರದ ನೂತನ ಮೇಯರ್‌ ಆಗಿ ಮುಸ್ಲಿಂ ಧರ್ಮ ಗುರು ಆಯ್ಕೆಯಾಗಿದ್ದಾರೆ. ಅವರನ್ನು ಸ್ವಾಗತಿಸಿದ ದೃಶ್ಯ ಇದು” ಎಂದು ಬರೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳ ಈ ಪೋಸ್ಟ್‌ಗಳ ಹಿಂದೆ ‘ಇಸ್ಲಾಮೋಪೋಬಿಕ್’ ಉದ್ದೇಶ ಇರುವುದು ಎದ್ದು ಕಾಣುತ್ತಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ವೈರಲ್ ವಿಡಿಯೋದಲ್ಲಿರುವ ವ್ಯಕ್ತಿ ಬ್ರೈಟನ್ ನಗರದ ನೂತನ ಮೇಯರ್ ಅಲ್ಲ ಎಂದು ತಿಳಿದು ಬಂದಿದೆ.

ವೈರಲ್ ವಿಡಿಯೋದ ಸ್ಕ್ರೀನ್ ಶಾಟ್ ಅನ್ನು ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ಹುಡುಕಿದಾಗ ವಿಡಿಯೋದಲ್ಲಿರುವ ವ್ಯಕ್ತಿ ಮುಸ್ಲಿಂ ಧಾರ್ಮಿಕ ಪಂಡಿತ ‘ಶೈಖ್ ಸೂಫಿ ಮುಹಮ್ಮದ್ ಅಸ್ಗರ್’ ಅವರು ಎಂದು ಗೊತ್ತಾಗಿದೆ.

ಮೇ 27ರಂದು ಅದೇ ವೈರಲ್ ವಿಡಿಯೋವನ್ನು ‘ಅಸ್ಲಮಿಯಾ ಫೌಂಡೇಶನ್’ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾಗಿತ್ತು. “Sheikh visit to friends house #family #mashallah #muslim” ಎಂದು ಶೀರ್ಷಿಕೆ ಕೊಡಲಾಗಿತ್ತು.

ಜನವರಿ 10,2024ರಂದು ‘ಅಸ್ಲಮಿಯಾ ಫೌಂಡೇಶನ್’ ಚಾನೆಲ್‌ನಲ್ಲಿ ‘ಶೈಖ್ ಅಸ್ಗರ್’ ಅವರ ಮತ್ತೊಂದು ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ಆ ವಿಡಿಯೋಗೆ “Welcome of Sheikh Sufi Muhammad Asghar to Peterborough U.K” ಎಂದು ಶೀರ್ಷಿಕೆ ಕೊಡಲಾಗಿತ್ತು.

ಮೇ 17,2024ರಂದು ಬಿಬಿಸಿ ಪ್ರಕಟಿಸಿದ ವರದಿಯ ಪ್ರಕಾರ, ಮೊಹಮ್ಮದ್ ಅಸಾದುಝಮಾನ್ ಬ್ರೈಟನ್ ಮತ್ತು ಹೋವ್‌ನಲ್ಲಿ ಚುನಾಯಿತರಾದ ಮೊದಲ ದಕ್ಷಿಣ ಏಷ್ಯಾದ ಮುಸ್ಲಿಂ ಮೇಯರ್ ಆಗಿದ್ದಾರೆ. ಅಸಾದುಝಮಾನ್ ಅವರನ್ನು ಕೌನ್ಸಿಲರ್‌ಗಳು ಸರ್ವಾನುಮತದಿಂದ ಮೇಯರ್ ಆಗಿ ಆಯ್ಕೆ ಮಾಡಿದ್ದಾರೆ. ಅದಕ್ಕೂ ಮುನ್ನ ಬಾಂಗ್ಲಾದೇಶದಲ್ಲಿ ನೀರಾವರಿ ಮತ್ತು ನೀರಿನ ಅಭಿವೃದ್ಧಿಗಾಗಿ ರಾಜ್ಯ ಸಚಿವರೊಂದಿಗೆ ಕೆಲಸ ಮಾಡಿದ್ದರು ಎಂದು ವರದಿ ಹೇಳಿದೆ.

ಒಟ್ಟಿನಲ್ಲಿ, ಮುಸ್ಲಿಂ ಧಾರ್ಮಿಕ ಪಂಡಿತ ಶೈಖ್ ಸೂಫಿ ಮುಹಮ್ಮದ್ ಅಸ್ಗರ್ ಅವರ ವಿಡಿಯೋವನ್ನು ಇಂಗ್ಲೆಂಡ್‌ನ ಬ್ರೈಟನ್ ಮತ್ತು ಹೋವ್‌ ನಗರಗಳ ಮೇಯರ್ ಆಗಿ ಆಯ್ಕೆಯಾಗಿರುವ ಮೊಹಮ್ಮದ್ ಅಸಾದುಝಮಾನ್ ಎಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ.

ಇದನ್ನೂ ಓದಿ : FACT CHECK : ಶಾಂಪುವಿನ ವಿಡಂಬನಾತ್ಮಕ ಜಾಹೀರಾತು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಹಂಚಿಕೊಳ್ಳಲಾಗ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...