Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

- Advertisement -
- Advertisement -

ತಮಿಳುನಾಡಿನ ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ, ಆಹಾರದ ಮೇಲೆ ಉಗುಳುವುದು ಹಲಾಲ್ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತದೆ ಎಂದು ಮುಸ್ಲಿಮರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎಂದು ಹೇಳುವ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಪೋಸ್ಟ್ ಕಾರ್ಡ್ ಎಂಬ ಫೇಕ್ ಸುದ್ದಿಗಳನ್ನು ಪ್ರಸಾರ ಮಾಡುವ ಮತ್ತು ಅದಕ್ಕಾಗಿ ಬಂಧನವಾಗಿದ್ದ ಮಹೇಶ್ ವಿಕ್ರಮ್ ಹೆಗ್ಡೆ ಇದನ್ನು ಟ್ವೀಟ್ ಮಾಡಿದ್ದಾರೆ. ಅದು ನಿಜವೇ ಎಂಬುದನ್ನು ಪರಿಶೀಲಿಸೋಣ.

ಈ ಹಿಂದೆ ನವೆಂಬರ್ 2021 ರಲ್ಲಿ, ತಮಿಳುನಾಡಿನ ಇಂದು ಮಕ್ಕಳ್ ಕಚ್ಚಿ ಟ್ವೀಟ್ ಮೂಲಕ ಅದೇ ರೀತಿಯ ಹೇಳಿಕೆಯನ್ನು ಪೋಸ್ಟ್‌ ಮಾಡಿದ್ದರು. ಆ ನಂತರ, ಈ ಹೇಳಿಕೆ ವೈರಲ್ ಆಗುತ್ತಿದೆ.

ಈಕುರಿತು ಹುಡುಕಿದಾಗ, ಪ್ರಕರಣದ ವಿಚಾರಣೆ ನಡೆಯುತ್ತಿರುವುದು ತಮಿಳುನಾಡು ನ್ಯಾಯಾಲಯದಲ್ಲಿ ಅಲ್ಲ. ಬದಲಾಗಿ, ಕೇರಳ ಹೈಕೋರ್ಟ್‌ನಲ್ಲಿ ಎಂದು ಕಂಡುಬಂದಿದೆ. ಇದರಲ್ಲಿ ಶಬರಿಮಲೆ ಕ್ರಿಯಾ ಸಮಿತಿಯ ಪ್ರಧಾನ ಸಂಚಾಲಕ ಎಸ್‌ಜೆಆರ್ ಕುಮಾರ್ ಸಲ್ಲಿಸಿದ ಮನವಿಯಲ್ಲಿ ಅರ್ಜಿದಾರರು, ಶಬರಿಮಲೆ ದೇವಸ್ಥಾನವನ್ನು ನಿರ್ವಹಿಸುತ್ತಿರುವ ಟ್ರಾವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ)ಯು ದೇವಸ್ಥಾನದಲ್ಲಿ ನೈವೇದ್ಯಂ ಮತ್ತು ಪ್ರಸಾದವನ್ನು ತಯಾರಿಸಲು ಹಲಾಲ್ ದೃಢಪಡಿಸಿರುವ ಹಾಳಾದ ಬೆಲ್ಲವನ್ನು ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.

ಹಲಾಲ್ಅನ್ನು ದೃಢಪಡಿಸುವ ಉತ್ಪನ್ನಗಳ ಬಳಕೆಯ ವಿರುದ್ಧ ಅರ್ಜಿದಾರರು ಮಾಡಿದ ಬಹು ಆರೋಪಗಳಲ್ಲಿ ಒಂದಾದ ‘ಮುಸ್ಲಿಂ ಸಮುದಾಯದ ಧಾರ್ಮಿಕ ವಿದ್ವಾಂಸರು ಆಹಾರ ಸಾಮಗ್ರಿಗಳ ತಯಾರಿಕೆಯಲ್ಲಿ ಹಲಾಲ್ ಅನ್ನು ಪ್ರಮಾಣೀಕರಿಸಲು ಲಾಲಾರಸವು(ಉಗುಳು) ಅವಶ್ಯಕ ಅಂಶವಾಗಿದೆ ಎಂದು ಸಾರ್ವಜನಿಕವಾಗಿ ಘೋಷಿಸುತ್ತಿದ್ದಾರೆ. ಧಾರ್ಮಿಕ ವಿದ್ವಾಂಸರು ಪವಿತ್ರ ಗ್ರಂಥಗಳಲ್ಲಿ ಮಾನ್ಯವಾದ ವ್ಯಾಖ್ಯಾನಗಳನ್ನು ಅರ್ಥೈಸುವ ಮೂಲಕ ಮೇಲಿನ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಅಂದರೆ ಕಲ್ಪಿತ ಆರೋಪವನ್ನು ಮಾಡಲಾಗಿದೆ. ಈ ಬಗ್ಗೆ ತಿರುವಾಂಕೂರು ದೇವಸ್ವಂ ಮಂಡಳಿ ಪ್ರತಿಕ್ರಿಯೆ ಸಲ್ಲಿಸಿದೆ. ಅವರ ಪ್ರತಿಕ್ರಿಯೆಯಲ್ಲಿ, ಕೋವಿಡ್-19 ಪ್ರೋಟೋಕಾಲ್‌ನಿಂದಾಗಿ 2019-20ನೇ ವರ್ಷಕ್ಕೆ ಹೆಚ್ಚಿನ ಪ್ರಮಾಣದ ಬೆಲ್ಲವು ಬಳಸದೆ ಉಳಿದಿದೆ. ಆದ್ದರಿಂದ ಮಂಡಳಿಯು ಈ ಉಳಿದ ಬೆಲ್ಲವನ್ನು M/s ಸದರ್ನ್ ಆಗ್ರೋ ಟೆಕ್ ಪ್ರೈವೇಟ್‌ ಲಿಮಿಟೆಡ್, ತ್ರಿಶೂರ್‌ಗೆ ನೀಡಿದೆ ಎಂದು ಮಂಡಳಿಯು ಹೇಳಿದೆ. ಆದರೆ 2020-21ನೇ ಸಾಲಿಗೆ ಬೆಲ್ಲ ಪೂರೈಕೆಯ ಗುತ್ತಿಗೆಯನ್ನು M/s S.P.Sugar and Agro Pvt. lmt, ಮಹಾರಾಷ್ಟ್ರಕ್ಕೆ ನೀಡಲಾಗಿದ್ದು, ಅವರು ಏಪ್ರಿಲ್ 2021 ರಿಂದ ಪೂರೈಕೆಯನ್ನು ಪ್ರಾರಂಭಿಸಿದ್ದಾರೆ. ಅಂದಿನಿಂದ ಆ ಬೆಲ್ಲವನ್ನು ಬಳಸಲಾಗುತ್ತಿದೆ.

ಹಲಾಲ್‌ನ ಪ್ರಶ್ನೆಗೆ, ‘ಬೆಲ್ಲದ ಪ್ಯಾಕೇಜಿಂಗ್‌ನಲ್ಲಿ ಇಂಗ್ಲಿಷ್‌ನಲ್ಲಿ “permissible” ಎಂದು ಅನುವಾದಿಸುವ ಅರೇಬಿಕ್ ಪದವಾದ ಹಲಾಲ್ ಎಂಬ ಪದವನ್ನು ಉಲ್ಲೇಖಿಸಲಾಗಿದೆ ಎಂದು TDB ವಿವರಿಸಿದೆ. ಈ ಸರಕುಗಳನ್ನು ಪಡೆದ ಕಂಪನಿಯು ಅರಬ್ ದೇಶಗಳಿಗೆ ಬೆಲ್ಲವನ್ನು ರಫ್ತು ಮಾಡಿದೆ. ಅಲ್ಲಿನ ನಿಯಮಗಳು ಇಸ್ಲಾಮಿಕ್ ನಿಯಮಗಳನ್ನು ಅನುಸರಿಸುವುದರಿಂದಾಗಿ, ಹಲಾಲ್ ಆಹಾರಗಳ ಮಾರಾಟವನ್ನು ಕಡ್ಡಾಯಗೊಳಿಸುತ್ತವೆ ಎಂದು ನ್ಯೂಸ್ 18 ವರದಿ ಮಾಡಿದೆ.

ಅರ್ಜಿದಾರರು ಹಲಾಲ್ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾಕ್ಷಿ ಸಮೇತ ವಿವರಿಸಲು ವಿಫಲವಾದ ಹಿನ್ನೆಲೆಯಲ್ಲಿ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಾಲಯವು ‘ಹಲಾಲ್ ಉತ್ಪನ್ನಗಳ ಬಳಕೆಯನ್ನು ಪ್ರಶ್ನಿಸುವ ಅರ್ಜಿಯನ್ನು ಸಲ್ಲಿಸುವ ಮೊದಲು, ಎಂದು ಅಭಿಪ್ರಾಯಪಟ್ಟಿದೆ. ಸುಮ್ಮನೆ ನಿರಾಧಾರ ಆರೋಪ ಮಾಡುವುದು ಥರವಲ್ಲ ಎಂದು ತಾಕೀತು ಮಾಡಿದೆ.

ಹಲಾಲ್ ಪರಿಕಲ್ಪನೆಯು ಕೆಲವು ವಿಷಯಗಳನ್ನು ನಿಷೇಧಿಸಲಾಗಿದೆ ಎಂದು ಮಾತ್ರ ಹೇಳುತ್ತದೆ; ಉಳಿದಂತೆ ಎಲ್ಲಾ ಇತರ ವಿಷಯಗಳು ಹಲಾಲ್‌ಗೆ ಒಳಪಟ್ಟಿವೆ ಎಂದು ಸೂಚಿಸಲಾಗುತ್ತದೆ. ಈ ಪ್ರಮಾಣೀಕರಣವು (ಹಲಾಲ್‌) ಆ ನಿಷೇಧಿತ ವಸ್ತುಗಳನ್ನು ನಿರ್ದಿಷ್ಟ ಉತ್ಪನ್ನದಲ್ಲಿ ಸೇರಿಸಲಾಗಿಲ್ಲ ಎಂಬುದನ್ನು ಮಾತ್ರ ಖಾತ್ರಿಪಡಿಸುತ್ತವೆ. ಯುಕೆಯಂತಹ ಇತರ ದೇಶಗಳಲ್ಲಿ ಇದು ಜಾರಿಯಲ್ಲಿದೆ. ಅಲ್ಲದೆ, ಕೆಲವು ಸುಪ್ರೀಂ ಕೋರ್ಟ್ ತೀರ್ಪುಗಳು ಕೂಡ ಅದರ ಬಗ್ಗೆ ಉಲ್ಲೇಖಿಸಿವೆ.

ಇದಲ್ಲದೆ, ಪ್ರಕರಣದ ವಿಚಾರಣೆಯ ಪ್ರಕ್ರಿಯೆಯ ಅವಧಿಯಲ್ಲಿ, ವೈರಲ್ ಪೋಸ್ಟ್‌ನಲ್ಲಿ ಮಾಡಿದ ಹೇಳಿಕೆಗೆ ವಿರುದ್ಧವಾಗಿ ಯಾವುದೇ ಮುಸ್ಲಿಂ ಸಂಘಟನೆ ಅಥವಾ ಯಾವುದೇ ಮುಸ್ಲಿಂ ವ್ಯಕ್ತಿಯನ್ನು ಪ್ರತಿವಾದಿಯನ್ನಾಗಿ ಮಾಡಲಾಗಿಲ್ಲ ಎಂದು ನಮೂದಿಸುವುದು ಗಮನಾರ್ಹವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಂ ಸಮುದಾಯವು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ.


ಇದನ್ನೂ ಓದಿ: ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...