Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

- Advertisement -
- Advertisement -

ತಮಿಳುನಾಡಿನ ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ, ಆಹಾರದ ಮೇಲೆ ಉಗುಳುವುದು ಹಲಾಲ್ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತದೆ ಎಂದು ಮುಸ್ಲಿಮರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎಂದು ಹೇಳುವ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಪೋಸ್ಟ್ ಕಾರ್ಡ್ ಎಂಬ ಫೇಕ್ ಸುದ್ದಿಗಳನ್ನು ಪ್ರಸಾರ ಮಾಡುವ ಮತ್ತು ಅದಕ್ಕಾಗಿ ಬಂಧನವಾಗಿದ್ದ ಮಹೇಶ್ ವಿಕ್ರಮ್ ಹೆಗ್ಡೆ ಇದನ್ನು ಟ್ವೀಟ್ ಮಾಡಿದ್ದಾರೆ. ಅದು ನಿಜವೇ ಎಂಬುದನ್ನು ಪರಿಶೀಲಿಸೋಣ.

ಈ ಹಿಂದೆ ನವೆಂಬರ್ 2021 ರಲ್ಲಿ, ತಮಿಳುನಾಡಿನ ಇಂದು ಮಕ್ಕಳ್ ಕಚ್ಚಿ ಟ್ವೀಟ್ ಮೂಲಕ ಅದೇ ರೀತಿಯ ಹೇಳಿಕೆಯನ್ನು ಪೋಸ್ಟ್‌ ಮಾಡಿದ್ದರು. ಆ ನಂತರ, ಈ ಹೇಳಿಕೆ ವೈರಲ್ ಆಗುತ್ತಿದೆ.

ಈಕುರಿತು ಹುಡುಕಿದಾಗ, ಪ್ರಕರಣದ ವಿಚಾರಣೆ ನಡೆಯುತ್ತಿರುವುದು ತಮಿಳುನಾಡು ನ್ಯಾಯಾಲಯದಲ್ಲಿ ಅಲ್ಲ. ಬದಲಾಗಿ, ಕೇರಳ ಹೈಕೋರ್ಟ್‌ನಲ್ಲಿ ಎಂದು ಕಂಡುಬಂದಿದೆ. ಇದರಲ್ಲಿ ಶಬರಿಮಲೆ ಕ್ರಿಯಾ ಸಮಿತಿಯ ಪ್ರಧಾನ ಸಂಚಾಲಕ ಎಸ್‌ಜೆಆರ್ ಕುಮಾರ್ ಸಲ್ಲಿಸಿದ ಮನವಿಯಲ್ಲಿ ಅರ್ಜಿದಾರರು, ಶಬರಿಮಲೆ ದೇವಸ್ಥಾನವನ್ನು ನಿರ್ವಹಿಸುತ್ತಿರುವ ಟ್ರಾವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ)ಯು ದೇವಸ್ಥಾನದಲ್ಲಿ ನೈವೇದ್ಯಂ ಮತ್ತು ಪ್ರಸಾದವನ್ನು ತಯಾರಿಸಲು ಹಲಾಲ್ ದೃಢಪಡಿಸಿರುವ ಹಾಳಾದ ಬೆಲ್ಲವನ್ನು ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.

ಹಲಾಲ್ಅನ್ನು ದೃಢಪಡಿಸುವ ಉತ್ಪನ್ನಗಳ ಬಳಕೆಯ ವಿರುದ್ಧ ಅರ್ಜಿದಾರರು ಮಾಡಿದ ಬಹು ಆರೋಪಗಳಲ್ಲಿ ಒಂದಾದ ‘ಮುಸ್ಲಿಂ ಸಮುದಾಯದ ಧಾರ್ಮಿಕ ವಿದ್ವಾಂಸರು ಆಹಾರ ಸಾಮಗ್ರಿಗಳ ತಯಾರಿಕೆಯಲ್ಲಿ ಹಲಾಲ್ ಅನ್ನು ಪ್ರಮಾಣೀಕರಿಸಲು ಲಾಲಾರಸವು(ಉಗುಳು) ಅವಶ್ಯಕ ಅಂಶವಾಗಿದೆ ಎಂದು ಸಾರ್ವಜನಿಕವಾಗಿ ಘೋಷಿಸುತ್ತಿದ್ದಾರೆ. ಧಾರ್ಮಿಕ ವಿದ್ವಾಂಸರು ಪವಿತ್ರ ಗ್ರಂಥಗಳಲ್ಲಿ ಮಾನ್ಯವಾದ ವ್ಯಾಖ್ಯಾನಗಳನ್ನು ಅರ್ಥೈಸುವ ಮೂಲಕ ಮೇಲಿನ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಅಂದರೆ ಕಲ್ಪಿತ ಆರೋಪವನ್ನು ಮಾಡಲಾಗಿದೆ. ಈ ಬಗ್ಗೆ ತಿರುವಾಂಕೂರು ದೇವಸ್ವಂ ಮಂಡಳಿ ಪ್ರತಿಕ್ರಿಯೆ ಸಲ್ಲಿಸಿದೆ. ಅವರ ಪ್ರತಿಕ್ರಿಯೆಯಲ್ಲಿ, ಕೋವಿಡ್-19 ಪ್ರೋಟೋಕಾಲ್‌ನಿಂದಾಗಿ 2019-20ನೇ ವರ್ಷಕ್ಕೆ ಹೆಚ್ಚಿನ ಪ್ರಮಾಣದ ಬೆಲ್ಲವು ಬಳಸದೆ ಉಳಿದಿದೆ. ಆದ್ದರಿಂದ ಮಂಡಳಿಯು ಈ ಉಳಿದ ಬೆಲ್ಲವನ್ನು M/s ಸದರ್ನ್ ಆಗ್ರೋ ಟೆಕ್ ಪ್ರೈವೇಟ್‌ ಲಿಮಿಟೆಡ್, ತ್ರಿಶೂರ್‌ಗೆ ನೀಡಿದೆ ಎಂದು ಮಂಡಳಿಯು ಹೇಳಿದೆ. ಆದರೆ 2020-21ನೇ ಸಾಲಿಗೆ ಬೆಲ್ಲ ಪೂರೈಕೆಯ ಗುತ್ತಿಗೆಯನ್ನು M/s S.P.Sugar and Agro Pvt. lmt, ಮಹಾರಾಷ್ಟ್ರಕ್ಕೆ ನೀಡಲಾಗಿದ್ದು, ಅವರು ಏಪ್ರಿಲ್ 2021 ರಿಂದ ಪೂರೈಕೆಯನ್ನು ಪ್ರಾರಂಭಿಸಿದ್ದಾರೆ. ಅಂದಿನಿಂದ ಆ ಬೆಲ್ಲವನ್ನು ಬಳಸಲಾಗುತ್ತಿದೆ.

ಹಲಾಲ್‌ನ ಪ್ರಶ್ನೆಗೆ, ‘ಬೆಲ್ಲದ ಪ್ಯಾಕೇಜಿಂಗ್‌ನಲ್ಲಿ ಇಂಗ್ಲಿಷ್‌ನಲ್ಲಿ “permissible” ಎಂದು ಅನುವಾದಿಸುವ ಅರೇಬಿಕ್ ಪದವಾದ ಹಲಾಲ್ ಎಂಬ ಪದವನ್ನು ಉಲ್ಲೇಖಿಸಲಾಗಿದೆ ಎಂದು TDB ವಿವರಿಸಿದೆ. ಈ ಸರಕುಗಳನ್ನು ಪಡೆದ ಕಂಪನಿಯು ಅರಬ್ ದೇಶಗಳಿಗೆ ಬೆಲ್ಲವನ್ನು ರಫ್ತು ಮಾಡಿದೆ. ಅಲ್ಲಿನ ನಿಯಮಗಳು ಇಸ್ಲಾಮಿಕ್ ನಿಯಮಗಳನ್ನು ಅನುಸರಿಸುವುದರಿಂದಾಗಿ, ಹಲಾಲ್ ಆಹಾರಗಳ ಮಾರಾಟವನ್ನು ಕಡ್ಡಾಯಗೊಳಿಸುತ್ತವೆ ಎಂದು ನ್ಯೂಸ್ 18 ವರದಿ ಮಾಡಿದೆ.

ಅರ್ಜಿದಾರರು ಹಲಾಲ್ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾಕ್ಷಿ ಸಮೇತ ವಿವರಿಸಲು ವಿಫಲವಾದ ಹಿನ್ನೆಲೆಯಲ್ಲಿ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಾಲಯವು ‘ಹಲಾಲ್ ಉತ್ಪನ್ನಗಳ ಬಳಕೆಯನ್ನು ಪ್ರಶ್ನಿಸುವ ಅರ್ಜಿಯನ್ನು ಸಲ್ಲಿಸುವ ಮೊದಲು, ಎಂದು ಅಭಿಪ್ರಾಯಪಟ್ಟಿದೆ. ಸುಮ್ಮನೆ ನಿರಾಧಾರ ಆರೋಪ ಮಾಡುವುದು ಥರವಲ್ಲ ಎಂದು ತಾಕೀತು ಮಾಡಿದೆ.

ಹಲಾಲ್ ಪರಿಕಲ್ಪನೆಯು ಕೆಲವು ವಿಷಯಗಳನ್ನು ನಿಷೇಧಿಸಲಾಗಿದೆ ಎಂದು ಮಾತ್ರ ಹೇಳುತ್ತದೆ; ಉಳಿದಂತೆ ಎಲ್ಲಾ ಇತರ ವಿಷಯಗಳು ಹಲಾಲ್‌ಗೆ ಒಳಪಟ್ಟಿವೆ ಎಂದು ಸೂಚಿಸಲಾಗುತ್ತದೆ. ಈ ಪ್ರಮಾಣೀಕರಣವು (ಹಲಾಲ್‌) ಆ ನಿಷೇಧಿತ ವಸ್ತುಗಳನ್ನು ನಿರ್ದಿಷ್ಟ ಉತ್ಪನ್ನದಲ್ಲಿ ಸೇರಿಸಲಾಗಿಲ್ಲ ಎಂಬುದನ್ನು ಮಾತ್ರ ಖಾತ್ರಿಪಡಿಸುತ್ತವೆ. ಯುಕೆಯಂತಹ ಇತರ ದೇಶಗಳಲ್ಲಿ ಇದು ಜಾರಿಯಲ್ಲಿದೆ. ಅಲ್ಲದೆ, ಕೆಲವು ಸುಪ್ರೀಂ ಕೋರ್ಟ್ ತೀರ್ಪುಗಳು ಕೂಡ ಅದರ ಬಗ್ಗೆ ಉಲ್ಲೇಖಿಸಿವೆ.

ಇದಲ್ಲದೆ, ಪ್ರಕರಣದ ವಿಚಾರಣೆಯ ಪ್ರಕ್ರಿಯೆಯ ಅವಧಿಯಲ್ಲಿ, ವೈರಲ್ ಪೋಸ್ಟ್‌ನಲ್ಲಿ ಮಾಡಿದ ಹೇಳಿಕೆಗೆ ವಿರುದ್ಧವಾಗಿ ಯಾವುದೇ ಮುಸ್ಲಿಂ ಸಂಘಟನೆ ಅಥವಾ ಯಾವುದೇ ಮುಸ್ಲಿಂ ವ್ಯಕ್ತಿಯನ್ನು ಪ್ರತಿವಾದಿಯನ್ನಾಗಿ ಮಾಡಲಾಗಿಲ್ಲ ಎಂದು ನಮೂದಿಸುವುದು ಗಮನಾರ್ಹವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಂ ಸಮುದಾಯವು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ.


ಇದನ್ನೂ ಓದಿ: ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...