Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

- Advertisement -
- Advertisement -

ತಮಿಳುನಾಡಿನ ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ, ಆಹಾರದ ಮೇಲೆ ಉಗುಳುವುದು ಹಲಾಲ್ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತದೆ ಎಂದು ಮುಸ್ಲಿಮರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎಂದು ಹೇಳುವ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಪೋಸ್ಟ್ ಕಾರ್ಡ್ ಎಂಬ ಫೇಕ್ ಸುದ್ದಿಗಳನ್ನು ಪ್ರಸಾರ ಮಾಡುವ ಮತ್ತು ಅದಕ್ಕಾಗಿ ಬಂಧನವಾಗಿದ್ದ ಮಹೇಶ್ ವಿಕ್ರಮ್ ಹೆಗ್ಡೆ ಇದನ್ನು ಟ್ವೀಟ್ ಮಾಡಿದ್ದಾರೆ. ಅದು ನಿಜವೇ ಎಂಬುದನ್ನು ಪರಿಶೀಲಿಸೋಣ.

ಈ ಹಿಂದೆ ನವೆಂಬರ್ 2021 ರಲ್ಲಿ, ತಮಿಳುನಾಡಿನ ಇಂದು ಮಕ್ಕಳ್ ಕಚ್ಚಿ ಟ್ವೀಟ್ ಮೂಲಕ ಅದೇ ರೀತಿಯ ಹೇಳಿಕೆಯನ್ನು ಪೋಸ್ಟ್‌ ಮಾಡಿದ್ದರು. ಆ ನಂತರ, ಈ ಹೇಳಿಕೆ ವೈರಲ್ ಆಗುತ್ತಿದೆ.

ಈಕುರಿತು ಹುಡುಕಿದಾಗ, ಪ್ರಕರಣದ ವಿಚಾರಣೆ ನಡೆಯುತ್ತಿರುವುದು ತಮಿಳುನಾಡು ನ್ಯಾಯಾಲಯದಲ್ಲಿ ಅಲ್ಲ. ಬದಲಾಗಿ, ಕೇರಳ ಹೈಕೋರ್ಟ್‌ನಲ್ಲಿ ಎಂದು ಕಂಡುಬಂದಿದೆ. ಇದರಲ್ಲಿ ಶಬರಿಮಲೆ ಕ್ರಿಯಾ ಸಮಿತಿಯ ಪ್ರಧಾನ ಸಂಚಾಲಕ ಎಸ್‌ಜೆಆರ್ ಕುಮಾರ್ ಸಲ್ಲಿಸಿದ ಮನವಿಯಲ್ಲಿ ಅರ್ಜಿದಾರರು, ಶಬರಿಮಲೆ ದೇವಸ್ಥಾನವನ್ನು ನಿರ್ವಹಿಸುತ್ತಿರುವ ಟ್ರಾವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ)ಯು ದೇವಸ್ಥಾನದಲ್ಲಿ ನೈವೇದ್ಯಂ ಮತ್ತು ಪ್ರಸಾದವನ್ನು ತಯಾರಿಸಲು ಹಲಾಲ್ ದೃಢಪಡಿಸಿರುವ ಹಾಳಾದ ಬೆಲ್ಲವನ್ನು ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.

ಹಲಾಲ್ಅನ್ನು ದೃಢಪಡಿಸುವ ಉತ್ಪನ್ನಗಳ ಬಳಕೆಯ ವಿರುದ್ಧ ಅರ್ಜಿದಾರರು ಮಾಡಿದ ಬಹು ಆರೋಪಗಳಲ್ಲಿ ಒಂದಾದ ‘ಮುಸ್ಲಿಂ ಸಮುದಾಯದ ಧಾರ್ಮಿಕ ವಿದ್ವಾಂಸರು ಆಹಾರ ಸಾಮಗ್ರಿಗಳ ತಯಾರಿಕೆಯಲ್ಲಿ ಹಲಾಲ್ ಅನ್ನು ಪ್ರಮಾಣೀಕರಿಸಲು ಲಾಲಾರಸವು(ಉಗುಳು) ಅವಶ್ಯಕ ಅಂಶವಾಗಿದೆ ಎಂದು ಸಾರ್ವಜನಿಕವಾಗಿ ಘೋಷಿಸುತ್ತಿದ್ದಾರೆ. ಧಾರ್ಮಿಕ ವಿದ್ವಾಂಸರು ಪವಿತ್ರ ಗ್ರಂಥಗಳಲ್ಲಿ ಮಾನ್ಯವಾದ ವ್ಯಾಖ್ಯಾನಗಳನ್ನು ಅರ್ಥೈಸುವ ಮೂಲಕ ಮೇಲಿನ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಅಂದರೆ ಕಲ್ಪಿತ ಆರೋಪವನ್ನು ಮಾಡಲಾಗಿದೆ. ಈ ಬಗ್ಗೆ ತಿರುವಾಂಕೂರು ದೇವಸ್ವಂ ಮಂಡಳಿ ಪ್ರತಿಕ್ರಿಯೆ ಸಲ್ಲಿಸಿದೆ. ಅವರ ಪ್ರತಿಕ್ರಿಯೆಯಲ್ಲಿ, ಕೋವಿಡ್-19 ಪ್ರೋಟೋಕಾಲ್‌ನಿಂದಾಗಿ 2019-20ನೇ ವರ್ಷಕ್ಕೆ ಹೆಚ್ಚಿನ ಪ್ರಮಾಣದ ಬೆಲ್ಲವು ಬಳಸದೆ ಉಳಿದಿದೆ. ಆದ್ದರಿಂದ ಮಂಡಳಿಯು ಈ ಉಳಿದ ಬೆಲ್ಲವನ್ನು M/s ಸದರ್ನ್ ಆಗ್ರೋ ಟೆಕ್ ಪ್ರೈವೇಟ್‌ ಲಿಮಿಟೆಡ್, ತ್ರಿಶೂರ್‌ಗೆ ನೀಡಿದೆ ಎಂದು ಮಂಡಳಿಯು ಹೇಳಿದೆ. ಆದರೆ 2020-21ನೇ ಸಾಲಿಗೆ ಬೆಲ್ಲ ಪೂರೈಕೆಯ ಗುತ್ತಿಗೆಯನ್ನು M/s S.P.Sugar and Agro Pvt. lmt, ಮಹಾರಾಷ್ಟ್ರಕ್ಕೆ ನೀಡಲಾಗಿದ್ದು, ಅವರು ಏಪ್ರಿಲ್ 2021 ರಿಂದ ಪೂರೈಕೆಯನ್ನು ಪ್ರಾರಂಭಿಸಿದ್ದಾರೆ. ಅಂದಿನಿಂದ ಆ ಬೆಲ್ಲವನ್ನು ಬಳಸಲಾಗುತ್ತಿದೆ.

ಹಲಾಲ್‌ನ ಪ್ರಶ್ನೆಗೆ, ‘ಬೆಲ್ಲದ ಪ್ಯಾಕೇಜಿಂಗ್‌ನಲ್ಲಿ ಇಂಗ್ಲಿಷ್‌ನಲ್ಲಿ “permissible” ಎಂದು ಅನುವಾದಿಸುವ ಅರೇಬಿಕ್ ಪದವಾದ ಹಲಾಲ್ ಎಂಬ ಪದವನ್ನು ಉಲ್ಲೇಖಿಸಲಾಗಿದೆ ಎಂದು TDB ವಿವರಿಸಿದೆ. ಈ ಸರಕುಗಳನ್ನು ಪಡೆದ ಕಂಪನಿಯು ಅರಬ್ ದೇಶಗಳಿಗೆ ಬೆಲ್ಲವನ್ನು ರಫ್ತು ಮಾಡಿದೆ. ಅಲ್ಲಿನ ನಿಯಮಗಳು ಇಸ್ಲಾಮಿಕ್ ನಿಯಮಗಳನ್ನು ಅನುಸರಿಸುವುದರಿಂದಾಗಿ, ಹಲಾಲ್ ಆಹಾರಗಳ ಮಾರಾಟವನ್ನು ಕಡ್ಡಾಯಗೊಳಿಸುತ್ತವೆ ಎಂದು ನ್ಯೂಸ್ 18 ವರದಿ ಮಾಡಿದೆ.

ಅರ್ಜಿದಾರರು ಹಲಾಲ್ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾಕ್ಷಿ ಸಮೇತ ವಿವರಿಸಲು ವಿಫಲವಾದ ಹಿನ್ನೆಲೆಯಲ್ಲಿ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಾಲಯವು ‘ಹಲಾಲ್ ಉತ್ಪನ್ನಗಳ ಬಳಕೆಯನ್ನು ಪ್ರಶ್ನಿಸುವ ಅರ್ಜಿಯನ್ನು ಸಲ್ಲಿಸುವ ಮೊದಲು, ಎಂದು ಅಭಿಪ್ರಾಯಪಟ್ಟಿದೆ. ಸುಮ್ಮನೆ ನಿರಾಧಾರ ಆರೋಪ ಮಾಡುವುದು ಥರವಲ್ಲ ಎಂದು ತಾಕೀತು ಮಾಡಿದೆ.

ಹಲಾಲ್ ಪರಿಕಲ್ಪನೆಯು ಕೆಲವು ವಿಷಯಗಳನ್ನು ನಿಷೇಧಿಸಲಾಗಿದೆ ಎಂದು ಮಾತ್ರ ಹೇಳುತ್ತದೆ; ಉಳಿದಂತೆ ಎಲ್ಲಾ ಇತರ ವಿಷಯಗಳು ಹಲಾಲ್‌ಗೆ ಒಳಪಟ್ಟಿವೆ ಎಂದು ಸೂಚಿಸಲಾಗುತ್ತದೆ. ಈ ಪ್ರಮಾಣೀಕರಣವು (ಹಲಾಲ್‌) ಆ ನಿಷೇಧಿತ ವಸ್ತುಗಳನ್ನು ನಿರ್ದಿಷ್ಟ ಉತ್ಪನ್ನದಲ್ಲಿ ಸೇರಿಸಲಾಗಿಲ್ಲ ಎಂಬುದನ್ನು ಮಾತ್ರ ಖಾತ್ರಿಪಡಿಸುತ್ತವೆ. ಯುಕೆಯಂತಹ ಇತರ ದೇಶಗಳಲ್ಲಿ ಇದು ಜಾರಿಯಲ್ಲಿದೆ. ಅಲ್ಲದೆ, ಕೆಲವು ಸುಪ್ರೀಂ ಕೋರ್ಟ್ ತೀರ್ಪುಗಳು ಕೂಡ ಅದರ ಬಗ್ಗೆ ಉಲ್ಲೇಖಿಸಿವೆ.

ಇದಲ್ಲದೆ, ಪ್ರಕರಣದ ವಿಚಾರಣೆಯ ಪ್ರಕ್ರಿಯೆಯ ಅವಧಿಯಲ್ಲಿ, ವೈರಲ್ ಪೋಸ್ಟ್‌ನಲ್ಲಿ ಮಾಡಿದ ಹೇಳಿಕೆಗೆ ವಿರುದ್ಧವಾಗಿ ಯಾವುದೇ ಮುಸ್ಲಿಂ ಸಂಘಟನೆ ಅಥವಾ ಯಾವುದೇ ಮುಸ್ಲಿಂ ವ್ಯಕ್ತಿಯನ್ನು ಪ್ರತಿವಾದಿಯನ್ನಾಗಿ ಮಾಡಲಾಗಿಲ್ಲ ಎಂದು ನಮೂದಿಸುವುದು ಗಮನಾರ್ಹವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಂ ಸಮುದಾಯವು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ.


ಇದನ್ನೂ ಓದಿ: ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...