Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

- Advertisement -
- Advertisement -

ತಮಿಳುನಾಡಿನ ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ, ಆಹಾರದ ಮೇಲೆ ಉಗುಳುವುದು ಹಲಾಲ್ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತದೆ ಎಂದು ಮುಸ್ಲಿಮರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎಂದು ಹೇಳುವ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಪೋಸ್ಟ್ ಕಾರ್ಡ್ ಎಂಬ ಫೇಕ್ ಸುದ್ದಿಗಳನ್ನು ಪ್ರಸಾರ ಮಾಡುವ ಮತ್ತು ಅದಕ್ಕಾಗಿ ಬಂಧನವಾಗಿದ್ದ ಮಹೇಶ್ ವಿಕ್ರಮ್ ಹೆಗ್ಡೆ ಇದನ್ನು ಟ್ವೀಟ್ ಮಾಡಿದ್ದಾರೆ. ಅದು ನಿಜವೇ ಎಂಬುದನ್ನು ಪರಿಶೀಲಿಸೋಣ.

ಈ ಹಿಂದೆ ನವೆಂಬರ್ 2021 ರಲ್ಲಿ, ತಮಿಳುನಾಡಿನ ಇಂದು ಮಕ್ಕಳ್ ಕಚ್ಚಿ ಟ್ವೀಟ್ ಮೂಲಕ ಅದೇ ರೀತಿಯ ಹೇಳಿಕೆಯನ್ನು ಪೋಸ್ಟ್‌ ಮಾಡಿದ್ದರು. ಆ ನಂತರ, ಈ ಹೇಳಿಕೆ ವೈರಲ್ ಆಗುತ್ತಿದೆ.

ಈಕುರಿತು ಹುಡುಕಿದಾಗ, ಪ್ರಕರಣದ ವಿಚಾರಣೆ ನಡೆಯುತ್ತಿರುವುದು ತಮಿಳುನಾಡು ನ್ಯಾಯಾಲಯದಲ್ಲಿ ಅಲ್ಲ. ಬದಲಾಗಿ, ಕೇರಳ ಹೈಕೋರ್ಟ್‌ನಲ್ಲಿ ಎಂದು ಕಂಡುಬಂದಿದೆ. ಇದರಲ್ಲಿ ಶಬರಿಮಲೆ ಕ್ರಿಯಾ ಸಮಿತಿಯ ಪ್ರಧಾನ ಸಂಚಾಲಕ ಎಸ್‌ಜೆಆರ್ ಕುಮಾರ್ ಸಲ್ಲಿಸಿದ ಮನವಿಯಲ್ಲಿ ಅರ್ಜಿದಾರರು, ಶಬರಿಮಲೆ ದೇವಸ್ಥಾನವನ್ನು ನಿರ್ವಹಿಸುತ್ತಿರುವ ಟ್ರಾವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ)ಯು ದೇವಸ್ಥಾನದಲ್ಲಿ ನೈವೇದ್ಯಂ ಮತ್ತು ಪ್ರಸಾದವನ್ನು ತಯಾರಿಸಲು ಹಲಾಲ್ ದೃಢಪಡಿಸಿರುವ ಹಾಳಾದ ಬೆಲ್ಲವನ್ನು ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.

ಹಲಾಲ್ಅನ್ನು ದೃಢಪಡಿಸುವ ಉತ್ಪನ್ನಗಳ ಬಳಕೆಯ ವಿರುದ್ಧ ಅರ್ಜಿದಾರರು ಮಾಡಿದ ಬಹು ಆರೋಪಗಳಲ್ಲಿ ಒಂದಾದ ‘ಮುಸ್ಲಿಂ ಸಮುದಾಯದ ಧಾರ್ಮಿಕ ವಿದ್ವಾಂಸರು ಆಹಾರ ಸಾಮಗ್ರಿಗಳ ತಯಾರಿಕೆಯಲ್ಲಿ ಹಲಾಲ್ ಅನ್ನು ಪ್ರಮಾಣೀಕರಿಸಲು ಲಾಲಾರಸವು(ಉಗುಳು) ಅವಶ್ಯಕ ಅಂಶವಾಗಿದೆ ಎಂದು ಸಾರ್ವಜನಿಕವಾಗಿ ಘೋಷಿಸುತ್ತಿದ್ದಾರೆ. ಧಾರ್ಮಿಕ ವಿದ್ವಾಂಸರು ಪವಿತ್ರ ಗ್ರಂಥಗಳಲ್ಲಿ ಮಾನ್ಯವಾದ ವ್ಯಾಖ್ಯಾನಗಳನ್ನು ಅರ್ಥೈಸುವ ಮೂಲಕ ಮೇಲಿನ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಅಂದರೆ ಕಲ್ಪಿತ ಆರೋಪವನ್ನು ಮಾಡಲಾಗಿದೆ. ಈ ಬಗ್ಗೆ ತಿರುವಾಂಕೂರು ದೇವಸ್ವಂ ಮಂಡಳಿ ಪ್ರತಿಕ್ರಿಯೆ ಸಲ್ಲಿಸಿದೆ. ಅವರ ಪ್ರತಿಕ್ರಿಯೆಯಲ್ಲಿ, ಕೋವಿಡ್-19 ಪ್ರೋಟೋಕಾಲ್‌ನಿಂದಾಗಿ 2019-20ನೇ ವರ್ಷಕ್ಕೆ ಹೆಚ್ಚಿನ ಪ್ರಮಾಣದ ಬೆಲ್ಲವು ಬಳಸದೆ ಉಳಿದಿದೆ. ಆದ್ದರಿಂದ ಮಂಡಳಿಯು ಈ ಉಳಿದ ಬೆಲ್ಲವನ್ನು M/s ಸದರ್ನ್ ಆಗ್ರೋ ಟೆಕ್ ಪ್ರೈವೇಟ್‌ ಲಿಮಿಟೆಡ್, ತ್ರಿಶೂರ್‌ಗೆ ನೀಡಿದೆ ಎಂದು ಮಂಡಳಿಯು ಹೇಳಿದೆ. ಆದರೆ 2020-21ನೇ ಸಾಲಿಗೆ ಬೆಲ್ಲ ಪೂರೈಕೆಯ ಗುತ್ತಿಗೆಯನ್ನು M/s S.P.Sugar and Agro Pvt. lmt, ಮಹಾರಾಷ್ಟ್ರಕ್ಕೆ ನೀಡಲಾಗಿದ್ದು, ಅವರು ಏಪ್ರಿಲ್ 2021 ರಿಂದ ಪೂರೈಕೆಯನ್ನು ಪ್ರಾರಂಭಿಸಿದ್ದಾರೆ. ಅಂದಿನಿಂದ ಆ ಬೆಲ್ಲವನ್ನು ಬಳಸಲಾಗುತ್ತಿದೆ.

ಹಲಾಲ್‌ನ ಪ್ರಶ್ನೆಗೆ, ‘ಬೆಲ್ಲದ ಪ್ಯಾಕೇಜಿಂಗ್‌ನಲ್ಲಿ ಇಂಗ್ಲಿಷ್‌ನಲ್ಲಿ “permissible” ಎಂದು ಅನುವಾದಿಸುವ ಅರೇಬಿಕ್ ಪದವಾದ ಹಲಾಲ್ ಎಂಬ ಪದವನ್ನು ಉಲ್ಲೇಖಿಸಲಾಗಿದೆ ಎಂದು TDB ವಿವರಿಸಿದೆ. ಈ ಸರಕುಗಳನ್ನು ಪಡೆದ ಕಂಪನಿಯು ಅರಬ್ ದೇಶಗಳಿಗೆ ಬೆಲ್ಲವನ್ನು ರಫ್ತು ಮಾಡಿದೆ. ಅಲ್ಲಿನ ನಿಯಮಗಳು ಇಸ್ಲಾಮಿಕ್ ನಿಯಮಗಳನ್ನು ಅನುಸರಿಸುವುದರಿಂದಾಗಿ, ಹಲಾಲ್ ಆಹಾರಗಳ ಮಾರಾಟವನ್ನು ಕಡ್ಡಾಯಗೊಳಿಸುತ್ತವೆ ಎಂದು ನ್ಯೂಸ್ 18 ವರದಿ ಮಾಡಿದೆ.

ಅರ್ಜಿದಾರರು ಹಲಾಲ್ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾಕ್ಷಿ ಸಮೇತ ವಿವರಿಸಲು ವಿಫಲವಾದ ಹಿನ್ನೆಲೆಯಲ್ಲಿ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಾಲಯವು ‘ಹಲಾಲ್ ಉತ್ಪನ್ನಗಳ ಬಳಕೆಯನ್ನು ಪ್ರಶ್ನಿಸುವ ಅರ್ಜಿಯನ್ನು ಸಲ್ಲಿಸುವ ಮೊದಲು, ಎಂದು ಅಭಿಪ್ರಾಯಪಟ್ಟಿದೆ. ಸುಮ್ಮನೆ ನಿರಾಧಾರ ಆರೋಪ ಮಾಡುವುದು ಥರವಲ್ಲ ಎಂದು ತಾಕೀತು ಮಾಡಿದೆ.

ಹಲಾಲ್ ಪರಿಕಲ್ಪನೆಯು ಕೆಲವು ವಿಷಯಗಳನ್ನು ನಿಷೇಧಿಸಲಾಗಿದೆ ಎಂದು ಮಾತ್ರ ಹೇಳುತ್ತದೆ; ಉಳಿದಂತೆ ಎಲ್ಲಾ ಇತರ ವಿಷಯಗಳು ಹಲಾಲ್‌ಗೆ ಒಳಪಟ್ಟಿವೆ ಎಂದು ಸೂಚಿಸಲಾಗುತ್ತದೆ. ಈ ಪ್ರಮಾಣೀಕರಣವು (ಹಲಾಲ್‌) ಆ ನಿಷೇಧಿತ ವಸ್ತುಗಳನ್ನು ನಿರ್ದಿಷ್ಟ ಉತ್ಪನ್ನದಲ್ಲಿ ಸೇರಿಸಲಾಗಿಲ್ಲ ಎಂಬುದನ್ನು ಮಾತ್ರ ಖಾತ್ರಿಪಡಿಸುತ್ತವೆ. ಯುಕೆಯಂತಹ ಇತರ ದೇಶಗಳಲ್ಲಿ ಇದು ಜಾರಿಯಲ್ಲಿದೆ. ಅಲ್ಲದೆ, ಕೆಲವು ಸುಪ್ರೀಂ ಕೋರ್ಟ್ ತೀರ್ಪುಗಳು ಕೂಡ ಅದರ ಬಗ್ಗೆ ಉಲ್ಲೇಖಿಸಿವೆ.

ಇದಲ್ಲದೆ, ಪ್ರಕರಣದ ವಿಚಾರಣೆಯ ಪ್ರಕ್ರಿಯೆಯ ಅವಧಿಯಲ್ಲಿ, ವೈರಲ್ ಪೋಸ್ಟ್‌ನಲ್ಲಿ ಮಾಡಿದ ಹೇಳಿಕೆಗೆ ವಿರುದ್ಧವಾಗಿ ಯಾವುದೇ ಮುಸ್ಲಿಂ ಸಂಘಟನೆ ಅಥವಾ ಯಾವುದೇ ಮುಸ್ಲಿಂ ವ್ಯಕ್ತಿಯನ್ನು ಪ್ರತಿವಾದಿಯನ್ನಾಗಿ ಮಾಡಲಾಗಿಲ್ಲ ಎಂದು ನಮೂದಿಸುವುದು ಗಮನಾರ್ಹವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಂ ಸಮುದಾಯವು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ.


ಇದನ್ನೂ ಓದಿ: ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...