Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

- Advertisement -
- Advertisement -

ತಮಿಳುನಾಡಿನ ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ, ಆಹಾರದ ಮೇಲೆ ಉಗುಳುವುದು ಹಲಾಲ್ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತದೆ ಎಂದು ಮುಸ್ಲಿಮರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎಂದು ಹೇಳುವ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಪೋಸ್ಟ್ ಕಾರ್ಡ್ ಎಂಬ ಫೇಕ್ ಸುದ್ದಿಗಳನ್ನು ಪ್ರಸಾರ ಮಾಡುವ ಮತ್ತು ಅದಕ್ಕಾಗಿ ಬಂಧನವಾಗಿದ್ದ ಮಹೇಶ್ ವಿಕ್ರಮ್ ಹೆಗ್ಡೆ ಇದನ್ನು ಟ್ವೀಟ್ ಮಾಡಿದ್ದಾರೆ. ಅದು ನಿಜವೇ ಎಂಬುದನ್ನು ಪರಿಶೀಲಿಸೋಣ.

ಈ ಹಿಂದೆ ನವೆಂಬರ್ 2021 ರಲ್ಲಿ, ತಮಿಳುನಾಡಿನ ಇಂದು ಮಕ್ಕಳ್ ಕಚ್ಚಿ ಟ್ವೀಟ್ ಮೂಲಕ ಅದೇ ರೀತಿಯ ಹೇಳಿಕೆಯನ್ನು ಪೋಸ್ಟ್‌ ಮಾಡಿದ್ದರು. ಆ ನಂತರ, ಈ ಹೇಳಿಕೆ ವೈರಲ್ ಆಗುತ್ತಿದೆ.

ಈಕುರಿತು ಹುಡುಕಿದಾಗ, ಪ್ರಕರಣದ ವಿಚಾರಣೆ ನಡೆಯುತ್ತಿರುವುದು ತಮಿಳುನಾಡು ನ್ಯಾಯಾಲಯದಲ್ಲಿ ಅಲ್ಲ. ಬದಲಾಗಿ, ಕೇರಳ ಹೈಕೋರ್ಟ್‌ನಲ್ಲಿ ಎಂದು ಕಂಡುಬಂದಿದೆ. ಇದರಲ್ಲಿ ಶಬರಿಮಲೆ ಕ್ರಿಯಾ ಸಮಿತಿಯ ಪ್ರಧಾನ ಸಂಚಾಲಕ ಎಸ್‌ಜೆಆರ್ ಕುಮಾರ್ ಸಲ್ಲಿಸಿದ ಮನವಿಯಲ್ಲಿ ಅರ್ಜಿದಾರರು, ಶಬರಿಮಲೆ ದೇವಸ್ಥಾನವನ್ನು ನಿರ್ವಹಿಸುತ್ತಿರುವ ಟ್ರಾವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ)ಯು ದೇವಸ್ಥಾನದಲ್ಲಿ ನೈವೇದ್ಯಂ ಮತ್ತು ಪ್ರಸಾದವನ್ನು ತಯಾರಿಸಲು ಹಲಾಲ್ ದೃಢಪಡಿಸಿರುವ ಹಾಳಾದ ಬೆಲ್ಲವನ್ನು ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.

ಹಲಾಲ್ಅನ್ನು ದೃಢಪಡಿಸುವ ಉತ್ಪನ್ನಗಳ ಬಳಕೆಯ ವಿರುದ್ಧ ಅರ್ಜಿದಾರರು ಮಾಡಿದ ಬಹು ಆರೋಪಗಳಲ್ಲಿ ಒಂದಾದ ‘ಮುಸ್ಲಿಂ ಸಮುದಾಯದ ಧಾರ್ಮಿಕ ವಿದ್ವಾಂಸರು ಆಹಾರ ಸಾಮಗ್ರಿಗಳ ತಯಾರಿಕೆಯಲ್ಲಿ ಹಲಾಲ್ ಅನ್ನು ಪ್ರಮಾಣೀಕರಿಸಲು ಲಾಲಾರಸವು(ಉಗುಳು) ಅವಶ್ಯಕ ಅಂಶವಾಗಿದೆ ಎಂದು ಸಾರ್ವಜನಿಕವಾಗಿ ಘೋಷಿಸುತ್ತಿದ್ದಾರೆ. ಧಾರ್ಮಿಕ ವಿದ್ವಾಂಸರು ಪವಿತ್ರ ಗ್ರಂಥಗಳಲ್ಲಿ ಮಾನ್ಯವಾದ ವ್ಯಾಖ್ಯಾನಗಳನ್ನು ಅರ್ಥೈಸುವ ಮೂಲಕ ಮೇಲಿನ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಅಂದರೆ ಕಲ್ಪಿತ ಆರೋಪವನ್ನು ಮಾಡಲಾಗಿದೆ. ಈ ಬಗ್ಗೆ ತಿರುವಾಂಕೂರು ದೇವಸ್ವಂ ಮಂಡಳಿ ಪ್ರತಿಕ್ರಿಯೆ ಸಲ್ಲಿಸಿದೆ. ಅವರ ಪ್ರತಿಕ್ರಿಯೆಯಲ್ಲಿ, ಕೋವಿಡ್-19 ಪ್ರೋಟೋಕಾಲ್‌ನಿಂದಾಗಿ 2019-20ನೇ ವರ್ಷಕ್ಕೆ ಹೆಚ್ಚಿನ ಪ್ರಮಾಣದ ಬೆಲ್ಲವು ಬಳಸದೆ ಉಳಿದಿದೆ. ಆದ್ದರಿಂದ ಮಂಡಳಿಯು ಈ ಉಳಿದ ಬೆಲ್ಲವನ್ನು M/s ಸದರ್ನ್ ಆಗ್ರೋ ಟೆಕ್ ಪ್ರೈವೇಟ್‌ ಲಿಮಿಟೆಡ್, ತ್ರಿಶೂರ್‌ಗೆ ನೀಡಿದೆ ಎಂದು ಮಂಡಳಿಯು ಹೇಳಿದೆ. ಆದರೆ 2020-21ನೇ ಸಾಲಿಗೆ ಬೆಲ್ಲ ಪೂರೈಕೆಯ ಗುತ್ತಿಗೆಯನ್ನು M/s S.P.Sugar and Agro Pvt. lmt, ಮಹಾರಾಷ್ಟ್ರಕ್ಕೆ ನೀಡಲಾಗಿದ್ದು, ಅವರು ಏಪ್ರಿಲ್ 2021 ರಿಂದ ಪೂರೈಕೆಯನ್ನು ಪ್ರಾರಂಭಿಸಿದ್ದಾರೆ. ಅಂದಿನಿಂದ ಆ ಬೆಲ್ಲವನ್ನು ಬಳಸಲಾಗುತ್ತಿದೆ.

ಹಲಾಲ್‌ನ ಪ್ರಶ್ನೆಗೆ, ‘ಬೆಲ್ಲದ ಪ್ಯಾಕೇಜಿಂಗ್‌ನಲ್ಲಿ ಇಂಗ್ಲಿಷ್‌ನಲ್ಲಿ “permissible” ಎಂದು ಅನುವಾದಿಸುವ ಅರೇಬಿಕ್ ಪದವಾದ ಹಲಾಲ್ ಎಂಬ ಪದವನ್ನು ಉಲ್ಲೇಖಿಸಲಾಗಿದೆ ಎಂದು TDB ವಿವರಿಸಿದೆ. ಈ ಸರಕುಗಳನ್ನು ಪಡೆದ ಕಂಪನಿಯು ಅರಬ್ ದೇಶಗಳಿಗೆ ಬೆಲ್ಲವನ್ನು ರಫ್ತು ಮಾಡಿದೆ. ಅಲ್ಲಿನ ನಿಯಮಗಳು ಇಸ್ಲಾಮಿಕ್ ನಿಯಮಗಳನ್ನು ಅನುಸರಿಸುವುದರಿಂದಾಗಿ, ಹಲಾಲ್ ಆಹಾರಗಳ ಮಾರಾಟವನ್ನು ಕಡ್ಡಾಯಗೊಳಿಸುತ್ತವೆ ಎಂದು ನ್ಯೂಸ್ 18 ವರದಿ ಮಾಡಿದೆ.

ಅರ್ಜಿದಾರರು ಹಲಾಲ್ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾಕ್ಷಿ ಸಮೇತ ವಿವರಿಸಲು ವಿಫಲವಾದ ಹಿನ್ನೆಲೆಯಲ್ಲಿ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಾಲಯವು ‘ಹಲಾಲ್ ಉತ್ಪನ್ನಗಳ ಬಳಕೆಯನ್ನು ಪ್ರಶ್ನಿಸುವ ಅರ್ಜಿಯನ್ನು ಸಲ್ಲಿಸುವ ಮೊದಲು, ಎಂದು ಅಭಿಪ್ರಾಯಪಟ್ಟಿದೆ. ಸುಮ್ಮನೆ ನಿರಾಧಾರ ಆರೋಪ ಮಾಡುವುದು ಥರವಲ್ಲ ಎಂದು ತಾಕೀತು ಮಾಡಿದೆ.

ಹಲಾಲ್ ಪರಿಕಲ್ಪನೆಯು ಕೆಲವು ವಿಷಯಗಳನ್ನು ನಿಷೇಧಿಸಲಾಗಿದೆ ಎಂದು ಮಾತ್ರ ಹೇಳುತ್ತದೆ; ಉಳಿದಂತೆ ಎಲ್ಲಾ ಇತರ ವಿಷಯಗಳು ಹಲಾಲ್‌ಗೆ ಒಳಪಟ್ಟಿವೆ ಎಂದು ಸೂಚಿಸಲಾಗುತ್ತದೆ. ಈ ಪ್ರಮಾಣೀಕರಣವು (ಹಲಾಲ್‌) ಆ ನಿಷೇಧಿತ ವಸ್ತುಗಳನ್ನು ನಿರ್ದಿಷ್ಟ ಉತ್ಪನ್ನದಲ್ಲಿ ಸೇರಿಸಲಾಗಿಲ್ಲ ಎಂಬುದನ್ನು ಮಾತ್ರ ಖಾತ್ರಿಪಡಿಸುತ್ತವೆ. ಯುಕೆಯಂತಹ ಇತರ ದೇಶಗಳಲ್ಲಿ ಇದು ಜಾರಿಯಲ್ಲಿದೆ. ಅಲ್ಲದೆ, ಕೆಲವು ಸುಪ್ರೀಂ ಕೋರ್ಟ್ ತೀರ್ಪುಗಳು ಕೂಡ ಅದರ ಬಗ್ಗೆ ಉಲ್ಲೇಖಿಸಿವೆ.

ಇದಲ್ಲದೆ, ಪ್ರಕರಣದ ವಿಚಾರಣೆಯ ಪ್ರಕ್ರಿಯೆಯ ಅವಧಿಯಲ್ಲಿ, ವೈರಲ್ ಪೋಸ್ಟ್‌ನಲ್ಲಿ ಮಾಡಿದ ಹೇಳಿಕೆಗೆ ವಿರುದ್ಧವಾಗಿ ಯಾವುದೇ ಮುಸ್ಲಿಂ ಸಂಘಟನೆ ಅಥವಾ ಯಾವುದೇ ಮುಸ್ಲಿಂ ವ್ಯಕ್ತಿಯನ್ನು ಪ್ರತಿವಾದಿಯನ್ನಾಗಿ ಮಾಡಲಾಗಿಲ್ಲ ಎಂದು ನಮೂದಿಸುವುದು ಗಮನಾರ್ಹವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಂ ಸಮುದಾಯವು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ.


ಇದನ್ನೂ ಓದಿ: ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...