Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

- Advertisement -
- Advertisement -

ತಮಿಳುನಾಡಿನ ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ, ಆಹಾರದ ಮೇಲೆ ಉಗುಳುವುದು ಹಲಾಲ್ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತದೆ ಎಂದು ಮುಸ್ಲಿಮರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎಂದು ಹೇಳುವ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಪೋಸ್ಟ್ ಕಾರ್ಡ್ ಎಂಬ ಫೇಕ್ ಸುದ್ದಿಗಳನ್ನು ಪ್ರಸಾರ ಮಾಡುವ ಮತ್ತು ಅದಕ್ಕಾಗಿ ಬಂಧನವಾಗಿದ್ದ ಮಹೇಶ್ ವಿಕ್ರಮ್ ಹೆಗ್ಡೆ ಇದನ್ನು ಟ್ವೀಟ್ ಮಾಡಿದ್ದಾರೆ. ಅದು ನಿಜವೇ ಎಂಬುದನ್ನು ಪರಿಶೀಲಿಸೋಣ.

ಈ ಹಿಂದೆ ನವೆಂಬರ್ 2021 ರಲ್ಲಿ, ತಮಿಳುನಾಡಿನ ಇಂದು ಮಕ್ಕಳ್ ಕಚ್ಚಿ ಟ್ವೀಟ್ ಮೂಲಕ ಅದೇ ರೀತಿಯ ಹೇಳಿಕೆಯನ್ನು ಪೋಸ್ಟ್‌ ಮಾಡಿದ್ದರು. ಆ ನಂತರ, ಈ ಹೇಳಿಕೆ ವೈರಲ್ ಆಗುತ್ತಿದೆ.

ಈಕುರಿತು ಹುಡುಕಿದಾಗ, ಪ್ರಕರಣದ ವಿಚಾರಣೆ ನಡೆಯುತ್ತಿರುವುದು ತಮಿಳುನಾಡು ನ್ಯಾಯಾಲಯದಲ್ಲಿ ಅಲ್ಲ. ಬದಲಾಗಿ, ಕೇರಳ ಹೈಕೋರ್ಟ್‌ನಲ್ಲಿ ಎಂದು ಕಂಡುಬಂದಿದೆ. ಇದರಲ್ಲಿ ಶಬರಿಮಲೆ ಕ್ರಿಯಾ ಸಮಿತಿಯ ಪ್ರಧಾನ ಸಂಚಾಲಕ ಎಸ್‌ಜೆಆರ್ ಕುಮಾರ್ ಸಲ್ಲಿಸಿದ ಮನವಿಯಲ್ಲಿ ಅರ್ಜಿದಾರರು, ಶಬರಿಮಲೆ ದೇವಸ್ಥಾನವನ್ನು ನಿರ್ವಹಿಸುತ್ತಿರುವ ಟ್ರಾವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ)ಯು ದೇವಸ್ಥಾನದಲ್ಲಿ ನೈವೇದ್ಯಂ ಮತ್ತು ಪ್ರಸಾದವನ್ನು ತಯಾರಿಸಲು ಹಲಾಲ್ ದೃಢಪಡಿಸಿರುವ ಹಾಳಾದ ಬೆಲ್ಲವನ್ನು ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.

ಹಲಾಲ್ಅನ್ನು ದೃಢಪಡಿಸುವ ಉತ್ಪನ್ನಗಳ ಬಳಕೆಯ ವಿರುದ್ಧ ಅರ್ಜಿದಾರರು ಮಾಡಿದ ಬಹು ಆರೋಪಗಳಲ್ಲಿ ಒಂದಾದ ‘ಮುಸ್ಲಿಂ ಸಮುದಾಯದ ಧಾರ್ಮಿಕ ವಿದ್ವಾಂಸರು ಆಹಾರ ಸಾಮಗ್ರಿಗಳ ತಯಾರಿಕೆಯಲ್ಲಿ ಹಲಾಲ್ ಅನ್ನು ಪ್ರಮಾಣೀಕರಿಸಲು ಲಾಲಾರಸವು(ಉಗುಳು) ಅವಶ್ಯಕ ಅಂಶವಾಗಿದೆ ಎಂದು ಸಾರ್ವಜನಿಕವಾಗಿ ಘೋಷಿಸುತ್ತಿದ್ದಾರೆ. ಧಾರ್ಮಿಕ ವಿದ್ವಾಂಸರು ಪವಿತ್ರ ಗ್ರಂಥಗಳಲ್ಲಿ ಮಾನ್ಯವಾದ ವ್ಯಾಖ್ಯಾನಗಳನ್ನು ಅರ್ಥೈಸುವ ಮೂಲಕ ಮೇಲಿನ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಅಂದರೆ ಕಲ್ಪಿತ ಆರೋಪವನ್ನು ಮಾಡಲಾಗಿದೆ. ಈ ಬಗ್ಗೆ ತಿರುವಾಂಕೂರು ದೇವಸ್ವಂ ಮಂಡಳಿ ಪ್ರತಿಕ್ರಿಯೆ ಸಲ್ಲಿಸಿದೆ. ಅವರ ಪ್ರತಿಕ್ರಿಯೆಯಲ್ಲಿ, ಕೋವಿಡ್-19 ಪ್ರೋಟೋಕಾಲ್‌ನಿಂದಾಗಿ 2019-20ನೇ ವರ್ಷಕ್ಕೆ ಹೆಚ್ಚಿನ ಪ್ರಮಾಣದ ಬೆಲ್ಲವು ಬಳಸದೆ ಉಳಿದಿದೆ. ಆದ್ದರಿಂದ ಮಂಡಳಿಯು ಈ ಉಳಿದ ಬೆಲ್ಲವನ್ನು M/s ಸದರ್ನ್ ಆಗ್ರೋ ಟೆಕ್ ಪ್ರೈವೇಟ್‌ ಲಿಮಿಟೆಡ್, ತ್ರಿಶೂರ್‌ಗೆ ನೀಡಿದೆ ಎಂದು ಮಂಡಳಿಯು ಹೇಳಿದೆ. ಆದರೆ 2020-21ನೇ ಸಾಲಿಗೆ ಬೆಲ್ಲ ಪೂರೈಕೆಯ ಗುತ್ತಿಗೆಯನ್ನು M/s S.P.Sugar and Agro Pvt. lmt, ಮಹಾರಾಷ್ಟ್ರಕ್ಕೆ ನೀಡಲಾಗಿದ್ದು, ಅವರು ಏಪ್ರಿಲ್ 2021 ರಿಂದ ಪೂರೈಕೆಯನ್ನು ಪ್ರಾರಂಭಿಸಿದ್ದಾರೆ. ಅಂದಿನಿಂದ ಆ ಬೆಲ್ಲವನ್ನು ಬಳಸಲಾಗುತ್ತಿದೆ.

ಹಲಾಲ್‌ನ ಪ್ರಶ್ನೆಗೆ, ‘ಬೆಲ್ಲದ ಪ್ಯಾಕೇಜಿಂಗ್‌ನಲ್ಲಿ ಇಂಗ್ಲಿಷ್‌ನಲ್ಲಿ “permissible” ಎಂದು ಅನುವಾದಿಸುವ ಅರೇಬಿಕ್ ಪದವಾದ ಹಲಾಲ್ ಎಂಬ ಪದವನ್ನು ಉಲ್ಲೇಖಿಸಲಾಗಿದೆ ಎಂದು TDB ವಿವರಿಸಿದೆ. ಈ ಸರಕುಗಳನ್ನು ಪಡೆದ ಕಂಪನಿಯು ಅರಬ್ ದೇಶಗಳಿಗೆ ಬೆಲ್ಲವನ್ನು ರಫ್ತು ಮಾಡಿದೆ. ಅಲ್ಲಿನ ನಿಯಮಗಳು ಇಸ್ಲಾಮಿಕ್ ನಿಯಮಗಳನ್ನು ಅನುಸರಿಸುವುದರಿಂದಾಗಿ, ಹಲಾಲ್ ಆಹಾರಗಳ ಮಾರಾಟವನ್ನು ಕಡ್ಡಾಯಗೊಳಿಸುತ್ತವೆ ಎಂದು ನ್ಯೂಸ್ 18 ವರದಿ ಮಾಡಿದೆ.

ಅರ್ಜಿದಾರರು ಹಲಾಲ್ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾಕ್ಷಿ ಸಮೇತ ವಿವರಿಸಲು ವಿಫಲವಾದ ಹಿನ್ನೆಲೆಯಲ್ಲಿ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಾಲಯವು ‘ಹಲಾಲ್ ಉತ್ಪನ್ನಗಳ ಬಳಕೆಯನ್ನು ಪ್ರಶ್ನಿಸುವ ಅರ್ಜಿಯನ್ನು ಸಲ್ಲಿಸುವ ಮೊದಲು, ಎಂದು ಅಭಿಪ್ರಾಯಪಟ್ಟಿದೆ. ಸುಮ್ಮನೆ ನಿರಾಧಾರ ಆರೋಪ ಮಾಡುವುದು ಥರವಲ್ಲ ಎಂದು ತಾಕೀತು ಮಾಡಿದೆ.

ಹಲಾಲ್ ಪರಿಕಲ್ಪನೆಯು ಕೆಲವು ವಿಷಯಗಳನ್ನು ನಿಷೇಧಿಸಲಾಗಿದೆ ಎಂದು ಮಾತ್ರ ಹೇಳುತ್ತದೆ; ಉಳಿದಂತೆ ಎಲ್ಲಾ ಇತರ ವಿಷಯಗಳು ಹಲಾಲ್‌ಗೆ ಒಳಪಟ್ಟಿವೆ ಎಂದು ಸೂಚಿಸಲಾಗುತ್ತದೆ. ಈ ಪ್ರಮಾಣೀಕರಣವು (ಹಲಾಲ್‌) ಆ ನಿಷೇಧಿತ ವಸ್ತುಗಳನ್ನು ನಿರ್ದಿಷ್ಟ ಉತ್ಪನ್ನದಲ್ಲಿ ಸೇರಿಸಲಾಗಿಲ್ಲ ಎಂಬುದನ್ನು ಮಾತ್ರ ಖಾತ್ರಿಪಡಿಸುತ್ತವೆ. ಯುಕೆಯಂತಹ ಇತರ ದೇಶಗಳಲ್ಲಿ ಇದು ಜಾರಿಯಲ್ಲಿದೆ. ಅಲ್ಲದೆ, ಕೆಲವು ಸುಪ್ರೀಂ ಕೋರ್ಟ್ ತೀರ್ಪುಗಳು ಕೂಡ ಅದರ ಬಗ್ಗೆ ಉಲ್ಲೇಖಿಸಿವೆ.

ಇದಲ್ಲದೆ, ಪ್ರಕರಣದ ವಿಚಾರಣೆಯ ಪ್ರಕ್ರಿಯೆಯ ಅವಧಿಯಲ್ಲಿ, ವೈರಲ್ ಪೋಸ್ಟ್‌ನಲ್ಲಿ ಮಾಡಿದ ಹೇಳಿಕೆಗೆ ವಿರುದ್ಧವಾಗಿ ಯಾವುದೇ ಮುಸ್ಲಿಂ ಸಂಘಟನೆ ಅಥವಾ ಯಾವುದೇ ಮುಸ್ಲಿಂ ವ್ಯಕ್ತಿಯನ್ನು ಪ್ರತಿವಾದಿಯನ್ನಾಗಿ ಮಾಡಲಾಗಿಲ್ಲ ಎಂದು ನಮೂದಿಸುವುದು ಗಮನಾರ್ಹವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಂ ಸಮುದಾಯವು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ.


ಇದನ್ನೂ ಓದಿ: ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...