Homeಫ್ಯಾಕ್ಟ್‌ಚೆಕ್Fact Check: ಹಿಂದೂಗಳ ವ್ಯಾಪಾರ ಬಹಿಷ್ಕರಿಸಿ ಎಂದು ಅಮೆರಿಕದಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿಲ್ಲ

Fact Check: ಹಿಂದೂಗಳ ವ್ಯಾಪಾರ ಬಹಿಷ್ಕರಿಸಿ ಎಂದು ಅಮೆರಿಕದಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿಲ್ಲ

- Advertisement -
- Advertisement -

ಅಮೆರಿಕದಲ್ಲಿ ಮುಸ್ಲಿಮರ ಗುಂಪೊಂದು ಹಿಂದೂಗಳ ವಿರುದ್ದ ಪ್ರತಿಭಟನೆ ನಡೆಸಿದೆ. ‘ಪ್ರವಾದಿಯನ್ನು ಉಳಿಸಿ, ಹಿಂದೂ ವ್ಯವಹಾರವನ್ನು ಬಹಿಷ್ಕರಿಸಿ, ಹಿಂದುತ್ವವನ್ನು ಯುಎಸ್‌ಎಯಿಂದ ಬಹಿಷ್ಕರಿಸಿ’ ಇತ್ಯಾದಿ ಭಿತ್ತಿ ಪತ್ರಗಳನ್ನು ಅವರು ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿದ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬಲಪಂಥೀಯ ಮಾಧ್ಯಮವಾದ ಮೇಘ್ ಅಪ್ಡೇಟ್ ಸೇರಿದಂತೆ ಹಲವಾರು ಜನ ಈ ವಿಡಿಯೋ ಹಂಚಿಕೊಂಡಿದ್ದಾರೆ.

‘ಮಹರ್ಷಿ ಜಿ ಸ್ವಾಮೀಜಿ ಮಹಾಮಂಡಲೇಶ್ವರ್’ ಎಂಬ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, “ಹಿಂದೂಗಳ ಒಡೆತನದ ವ್ಯವಹಾರಗಳನ್ನು ಬಹಿಷ್ಕರಿಸುವಂತೆ ಚಿಕಾಗೋದಲ್ಲಿ ಮುಸ್ಲಿಮರು ಹೇಗೆ ಒತ್ತಾಯಿಸುತ್ತಿದ್ದಾರೆ ಎಂಬುದನ್ನು ನೋಡಿ!” ಎಂದು ಬರೆದುಕೊಳ್ಳಲಾಗಿದೆ.

‘ಜೋಕರ್ಮಾನಿ’ ಎಂಬ ಮತ್ತೊಂದು ಎಕ್ಸ್‌ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, “ಹಿಂದೂಗಳ ಒಡೆತನದ ವ್ಯವಹಾರಗಳನ್ನು ಬಹಿಷ್ಕರಿಸುವಂತೆ ಚಿಕಾಗೋದಲ್ಲಿ ಮುಸ್ಲಿಮರು ಹೇಗೆ ಒತ್ತಾಯಿಸುತ್ತಿದ್ದಾರೆ ಎಂಬುದನ್ನು ನೋಡಿ! ನಾವೂ ಅದನ್ನೇ ಮಾಡಬೇಕು… “ಶಾಂತಿ ಪ್ರಿಯರನ್ನು” ಬಹಿಷ್ಕರಿಸಬೇಕು” ಎಂದು ಬರೆದುಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್‌ : ವೈರಲ್ ವಿಡಿಯೋದ ಸತ್ಯಾಸತ್ಯತೆ ಪರಿಶೀಲನೆ ನಡೆಸಲು ನಾವು ಕೀ ವರ್ಡ್‌ಗಳನ್ನು ಬಳಸಿ ಗೂಗಲ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ಹಿಂದೂಗಳೊಂದಿಗೆ ವ್ಯಾಪಾರ ಬಹಿಷ್ಕರಿಸಿ ಎಂದು ಮುಸ್ಲಿಮರು ಪ್ರತಿಭಟಿಸಿದ ಯಾವುದೇ ವರದಿಗಳು ಕಂಡು ಬಂದಿಲ್ಲ.

ನಾವು ಇನ್ನಷ್ಟು ಹುಡುಕಾಡಿದಾಗ ಕೆಲವೊಂದು ಪತ್ರಿಕಾ ವರದಿಗಳು ನಮಗೆ ದೊರೆತಿವೆ. ‘ಮುಸ್ಲಿಂ ಮಿರರ್ ಡಾಟ್ ಕಾಂ’ (muslimmirror.com)ಎಂಬ ವೆಬ್‌ಸೈಟ್ 19 ಜೂನ್ 2022ರಂದು ‘Protest held outside Indian consulate in Chicago over remarks on Prophet Muhammad’ಎಂಬ ಶೀರ್ಷಿಕೆಯಲ್ಲಿ ಸುದ್ದಿಯೊಂದನ್ನು ಪ್ರಕಟಿಸಿದ್ದು, ವರದಿಯಲ್ಲಿ “ಭಾರತದ ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರು ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವುದನ್ನು ವಿರೋಧಿಸಿ ಅಮೆರಿಕದ ಚಿಕಾಗೋದಲ್ಲಿರುವ ಭಾರತೀಯ ರಾಯಭಾರ ಕಚೇರಿ ಹೊರಗೆ ಮುಸ್ಲಿಂ ಗುಂಪುಗಳು ಪ್ರತಿಭಟನೆ ನಡೆಸಿದವು. ಭಾರತದಲ್ಲಿ ಇಸ್ಲಾಂ ಮತ್ತು ಮುಸ್ಲಿಮರ ಮೇಲಿನ ದಾಳಿಯಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು” ಎಂದು ಹೇಳಲಾಗಿದೆ.

ವರದಿಯಲ್ಲಿ ಹೇಳಲಾದ ವಿಷಯ ಗಮನಿಸಿದಾಗ, ಇದು ಪ್ರವಾದಿ ಮೊಹಮ್ಮದರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿಯ ಮಾಜಿ ವಕ್ತಾರೆಯಾದ ನೂಪುರ್ ಶರ್ಮಾ ವಿರುದ್ಧ ಜೂನ್ 2022 ರಲ್ಲಿ ಚಿಕಾಗೋದಲ್ಲಿ ಭಾರತೀಯ ರಾಯಭಾರ ಕಚೇರಿ ಹೊರಗೆ ನಡೆಸಿದ ಪ್ರತಿಭಟನೆಯಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ, ಇದು ಹಿಂದೂಗಳ ವ್ಯವಹಾರ ಬಹಿಷ್ಕರಿಸಿ ಎಂದು ಮಾಡಿದ ಪ್ರತಿಭಟನೆ ಅಲ್ಲ.

ಸುದ್ದಿಯ ಲಿಂಕ್ ಇಲ್ಲಿದೆ 

ಮತ್ತೊಂದು ಪ್ರಮುಖ ಅಂಶವೆಂದರೆ, ಮುಸ್ಲಿಂ ಮಿರರ್ ವೆಬ್‌ಸೈಟ್ ಪ್ರಕಟಿಸಿದ ಸುದ್ದಿಯಲ್ಲಿರುವ ಫೋಟೊದಲ್ಲಿ ಭಿತ್ತಿ ಪತ್ರ ಹಿಡಿದ ವ್ಯಕ್ತಿಯೊಬ್ಬರನ್ನು ಕಾಣಬಹುದು. ಇದೇ ವ್ಯಕ್ತಿ ವೈರಲ್ ವಿಡಿಯೋದಲ್ಲೂ ಇದ್ದಾರೆ. ಹಾಗಾಗಿ, ವೈರಲ್ ವಿಡಿಯೋ ಮುಸ್ಲಿಂ ಮಿರರ್ ವೆಬ್‌ಸೈಟ್‌ ಪ್ರಕಟಿಸಿದ ಸುದ್ದಿಗೆ ಸಂಬಂಧಿಸಿದ್ದು ಎಂಬುವುದು ಖಚಿತವಾಗಿದೆ.

ಇದನ್ನೂ ಓದಿ : Fact Check: ಕಾಂಗ್ರೆಸ್ ಜಾತಿ, ಧರ್ಮದ ಆಧಾರದಲ್ಲಿ ಜನರನ್ನು ವಿಭಜಿಸುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ರಾ!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...