Homeಫ್ಯಾಕ್ಟ್‌ಚೆಕ್Fact Check: ಹಿಂದೂಗಳ ವ್ಯಾಪಾರ ಬಹಿಷ್ಕರಿಸಿ ಎಂದು ಅಮೆರಿಕದಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿಲ್ಲ

Fact Check: ಹಿಂದೂಗಳ ವ್ಯಾಪಾರ ಬಹಿಷ್ಕರಿಸಿ ಎಂದು ಅಮೆರಿಕದಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿಲ್ಲ

- Advertisement -
- Advertisement -

ಅಮೆರಿಕದಲ್ಲಿ ಮುಸ್ಲಿಮರ ಗುಂಪೊಂದು ಹಿಂದೂಗಳ ವಿರುದ್ದ ಪ್ರತಿಭಟನೆ ನಡೆಸಿದೆ. ‘ಪ್ರವಾದಿಯನ್ನು ಉಳಿಸಿ, ಹಿಂದೂ ವ್ಯವಹಾರವನ್ನು ಬಹಿಷ್ಕರಿಸಿ, ಹಿಂದುತ್ವವನ್ನು ಯುಎಸ್‌ಎಯಿಂದ ಬಹಿಷ್ಕರಿಸಿ’ ಇತ್ಯಾದಿ ಭಿತ್ತಿ ಪತ್ರಗಳನ್ನು ಅವರು ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿದ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬಲಪಂಥೀಯ ಮಾಧ್ಯಮವಾದ ಮೇಘ್ ಅಪ್ಡೇಟ್ ಸೇರಿದಂತೆ ಹಲವಾರು ಜನ ಈ ವಿಡಿಯೋ ಹಂಚಿಕೊಂಡಿದ್ದಾರೆ.

‘ಮಹರ್ಷಿ ಜಿ ಸ್ವಾಮೀಜಿ ಮಹಾಮಂಡಲೇಶ್ವರ್’ ಎಂಬ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, “ಹಿಂದೂಗಳ ಒಡೆತನದ ವ್ಯವಹಾರಗಳನ್ನು ಬಹಿಷ್ಕರಿಸುವಂತೆ ಚಿಕಾಗೋದಲ್ಲಿ ಮುಸ್ಲಿಮರು ಹೇಗೆ ಒತ್ತಾಯಿಸುತ್ತಿದ್ದಾರೆ ಎಂಬುದನ್ನು ನೋಡಿ!” ಎಂದು ಬರೆದುಕೊಳ್ಳಲಾಗಿದೆ.

‘ಜೋಕರ್ಮಾನಿ’ ಎಂಬ ಮತ್ತೊಂದು ಎಕ್ಸ್‌ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, “ಹಿಂದೂಗಳ ಒಡೆತನದ ವ್ಯವಹಾರಗಳನ್ನು ಬಹಿಷ್ಕರಿಸುವಂತೆ ಚಿಕಾಗೋದಲ್ಲಿ ಮುಸ್ಲಿಮರು ಹೇಗೆ ಒತ್ತಾಯಿಸುತ್ತಿದ್ದಾರೆ ಎಂಬುದನ್ನು ನೋಡಿ! ನಾವೂ ಅದನ್ನೇ ಮಾಡಬೇಕು… “ಶಾಂತಿ ಪ್ರಿಯರನ್ನು” ಬಹಿಷ್ಕರಿಸಬೇಕು” ಎಂದು ಬರೆದುಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್‌ : ವೈರಲ್ ವಿಡಿಯೋದ ಸತ್ಯಾಸತ್ಯತೆ ಪರಿಶೀಲನೆ ನಡೆಸಲು ನಾವು ಕೀ ವರ್ಡ್‌ಗಳನ್ನು ಬಳಸಿ ಗೂಗಲ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ಹಿಂದೂಗಳೊಂದಿಗೆ ವ್ಯಾಪಾರ ಬಹಿಷ್ಕರಿಸಿ ಎಂದು ಮುಸ್ಲಿಮರು ಪ್ರತಿಭಟಿಸಿದ ಯಾವುದೇ ವರದಿಗಳು ಕಂಡು ಬಂದಿಲ್ಲ.

ನಾವು ಇನ್ನಷ್ಟು ಹುಡುಕಾಡಿದಾಗ ಕೆಲವೊಂದು ಪತ್ರಿಕಾ ವರದಿಗಳು ನಮಗೆ ದೊರೆತಿವೆ. ‘ಮುಸ್ಲಿಂ ಮಿರರ್ ಡಾಟ್ ಕಾಂ’ (muslimmirror.com)ಎಂಬ ವೆಬ್‌ಸೈಟ್ 19 ಜೂನ್ 2022ರಂದು ‘Protest held outside Indian consulate in Chicago over remarks on Prophet Muhammad’ಎಂಬ ಶೀರ್ಷಿಕೆಯಲ್ಲಿ ಸುದ್ದಿಯೊಂದನ್ನು ಪ್ರಕಟಿಸಿದ್ದು, ವರದಿಯಲ್ಲಿ “ಭಾರತದ ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರು ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವುದನ್ನು ವಿರೋಧಿಸಿ ಅಮೆರಿಕದ ಚಿಕಾಗೋದಲ್ಲಿರುವ ಭಾರತೀಯ ರಾಯಭಾರ ಕಚೇರಿ ಹೊರಗೆ ಮುಸ್ಲಿಂ ಗುಂಪುಗಳು ಪ್ರತಿಭಟನೆ ನಡೆಸಿದವು. ಭಾರತದಲ್ಲಿ ಇಸ್ಲಾಂ ಮತ್ತು ಮುಸ್ಲಿಮರ ಮೇಲಿನ ದಾಳಿಯಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು” ಎಂದು ಹೇಳಲಾಗಿದೆ.

ವರದಿಯಲ್ಲಿ ಹೇಳಲಾದ ವಿಷಯ ಗಮನಿಸಿದಾಗ, ಇದು ಪ್ರವಾದಿ ಮೊಹಮ್ಮದರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿಯ ಮಾಜಿ ವಕ್ತಾರೆಯಾದ ನೂಪುರ್ ಶರ್ಮಾ ವಿರುದ್ಧ ಜೂನ್ 2022 ರಲ್ಲಿ ಚಿಕಾಗೋದಲ್ಲಿ ಭಾರತೀಯ ರಾಯಭಾರ ಕಚೇರಿ ಹೊರಗೆ ನಡೆಸಿದ ಪ್ರತಿಭಟನೆಯಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ, ಇದು ಹಿಂದೂಗಳ ವ್ಯವಹಾರ ಬಹಿಷ್ಕರಿಸಿ ಎಂದು ಮಾಡಿದ ಪ್ರತಿಭಟನೆ ಅಲ್ಲ.

ಸುದ್ದಿಯ ಲಿಂಕ್ ಇಲ್ಲಿದೆ 

ಮತ್ತೊಂದು ಪ್ರಮುಖ ಅಂಶವೆಂದರೆ, ಮುಸ್ಲಿಂ ಮಿರರ್ ವೆಬ್‌ಸೈಟ್ ಪ್ರಕಟಿಸಿದ ಸುದ್ದಿಯಲ್ಲಿರುವ ಫೋಟೊದಲ್ಲಿ ಭಿತ್ತಿ ಪತ್ರ ಹಿಡಿದ ವ್ಯಕ್ತಿಯೊಬ್ಬರನ್ನು ಕಾಣಬಹುದು. ಇದೇ ವ್ಯಕ್ತಿ ವೈರಲ್ ವಿಡಿಯೋದಲ್ಲೂ ಇದ್ದಾರೆ. ಹಾಗಾಗಿ, ವೈರಲ್ ವಿಡಿಯೋ ಮುಸ್ಲಿಂ ಮಿರರ್ ವೆಬ್‌ಸೈಟ್‌ ಪ್ರಕಟಿಸಿದ ಸುದ್ದಿಗೆ ಸಂಬಂಧಿಸಿದ್ದು ಎಂಬುವುದು ಖಚಿತವಾಗಿದೆ.

ಇದನ್ನೂ ಓದಿ : Fact Check: ಕಾಂಗ್ರೆಸ್ ಜಾತಿ, ಧರ್ಮದ ಆಧಾರದಲ್ಲಿ ಜನರನ್ನು ವಿಭಜಿಸುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ರಾ!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...